Saturday, 28th September 2024

Dasara Dharma Sammelana

Dasara Dharma Sammelana: ಅಬ್ಬಿಗೇರಿಯಲ್ಲಿ ಅ. 3ರಿಂದ 12ರವರೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ದಸರಾ ಧರ್ಮ ಸಮ್ಮೇಳನ

Dasara Dharma Sammelana: ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳ 33ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನವು ಗದಗ ಜಿಲ್ಲೆ ರೋಣ ತಾಲೂಕು ಅಬ್ಬಿಗೇರಿ ಶ್ರೀ ಅನ್ನದಾನೇಶ್ವರ ಪ್ರೌಢಶಾಲೆ ಆವರಣದ ಮಾನವ ಧರ್ಮ ಮಂಟಪ- ಬೃಹತ್ ವೇದಿಕೆಯಲ್ಲಿ ಆಯೋಜನೆಗೊಂಡಿದೆ. ಕರುನಾಡಿನ ಜನಮಾನಸದ ಬೃಹತ್ ಜಾತ್ರೆ ಎಂದೇ ಖ್ಯಾತವಾದ ದಸರಾ ಧರ್ಮ ಸಮ್ಮೇಳನ ಅಕ್ಟೋಬರ್ 3ರಂದು ಆರಂಭವಾಗಿ 12 ರಂದು ಸಂಪನ್ನಗೊಳ್ಳಲಿದ್ದು, ಪ್ರತಿ ದಿನವೂ ವೈವಿಧ್ಯಮಯ ಕಾರ್ಯಕ್ರಮ, ವಿವಿಧ ರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ, ಗಣ್ಯಾತಿಗಣ್ಯರ ಭಾಷಣ, ರಾಜ್ಯದ ಹತ್ತು ಹಲವು ಕ್ಷೇತ್ರದ ತಜ್ಞರಿಂದ ಉಪನ್ಯಾಸ ಸೇರಿದಂತೆ ವರ್ಣರಂಜಿತ ಸಾಂಸ್ಕೃತಿಕ ವೈವಿಧ್ಯಗಳೂ ರಂಜಿಸಲಿವೆ. ಪ್ರತಿ ದಿನದ ಕಾರ್ಯಕ್ರಮಗಳು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಲಿವೆ.

ಮುಂದೆ ಓದಿ

gadag crime news murder case

Murder Case: ಆಸ್ತಿ ಕೇಳಿದ ಮುಸ್ಲಿಂ ತಂಗಿಯ ಇರಿದು ಕೊಂದ ಹಿಂದೂ ಅಣ್ಣ!

Murder Case: ಹಿಂದೂ ಧರ್ಮದಲ್ಲಿ ಹುಟ್ಟಿ ಬೆಳೆದ ಕಾಳಮ್ಮ ಕಳೆದ ನಾಲ್ಕು ವರ್ಷಗಳ ಹಿಂದೆ ಮುಸ್ಲಿಂ ಧರ್ಮದ ಮೆಹಬೂಬ್‌ನನ್ನು ಮದುವೆ ಮಾಡಿಕೊಂಡು ಖುರ್ಷಿದಾ ಆಗಿ ಮತಾಂತರ ಆಗಿದ್ದಳು....

ಮುಂದೆ ಓದಿ