ಗೌರಿಬಿದನೂರು : ಪಟ್ಟಣದ ಮುನೇಶ್ವರ ಬಡಾವಣೆಯ ತೀರ್ಥ ಶಾಲೆಯಲ್ಲಿ ಭಾರತದ ಹಾಕಿ ಮಾಂತ್ರಿಕ, ದಂತಕತೆ,ಪದ್ಮ ವಿಭೂಷಣ ಮೇಜರ್ ಧ್ಯಾನ್ ಚಂದ್ ರವರ ೧೧೯ ನೇ ಜಯಂತಿಯನ್ನು ಅವರ ಕ್ರೀಡಾ ಜೀವನದ ಕೊಡುಗೆಯನ್ನು ಸ್ಮರಿಸಲು ಮತ್ತು ಸಾಧನೆಗೆ ಗೌರವ ಸಲ್ಲಿಸಲು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು. ಶಾಲಾ ಮಕ್ಕಳಿಗೆ ಹೊರಾಂಗಣ ಮೈದಾನದಲ್ಲಿ ಆಟೋಟ ಗಳನ್ನು ಏರ್ಪಡಿಸಲಾಗಿತ್ತು. ತದನಂತರ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ಗೌರವ ಸಲ್ಲಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಡಾ. ಕೆ.ವಿ.ಪ್ರಕಾಶ್ ಮಾತನಾಡಿ, ಮೇಜರ್ […]