ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿ ಗೌತಮ್ ನವಲಖಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರ ನಿಗದಿ ಮಾಡಿದೆ. ಫೆ.8 ರಂದು ಬಾಂಬೆ ಹೈಕೋರ್ಟ್, ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಫೆ.19 ರಂದು ನವಲಖಾ, ಕೋರ್ಟ್ ಮೊರೆ ಹೋಗಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಯು.ಯು ಲಲಿತ, ಇಂದಿರಾ ಬ್ಯಾನರ್ಜಿ ಮತ್ತು ಕೆ.ಎಂ ಜೋಸೆಫ್ ಅವರ ಪೀಠವು ನವಲಖಾ ಅವರ ಅರ್ಜಿ ವಿಚಾರಣೆಯನ್ನು ಮಾರ್ಚ್ 3 ರಂದು ನಡೆಸುವುದಾಗಿ ಹೇಳಿದೆ. ಎಲ್ಗಾರ್ ಪರಿಷದ್-ಮಾವೊ ನಡುವೆ ಸಂಪರ್ಕ ಇದೆ […]