ದಾವಣಗೆರೆ: ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.26 ಮತ್ತು 27ರಂದು ಬೇತೂರಿನಲ್ಲಿ ನಡೆಸಲು ನಿರ್ಧರಿಸ ಲಾಗಿದೆ. ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಜಿ.ಎಸ್. ಸುಶೀಲಾದೇವಿ ಆರ್. ರಾವ್ ಅವರನ್ನು ಆಯ್ಕೆ ಮಾಡಲಾಗಿದೆ. ಮಾರ್ಚ್ ಅಂತ್ಯದ ಒಳಗೆ ಈ ಬಾರಿಯ ಜಿಲ್ಲಾ ಸಮ್ಮೇಳನಗಳನ್ನು ಮುಗಿಸಬೇಕು ಎಂದು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಾರ್ಯಕಾರಿ ಸಮಿತಿಯಲ್ಲಿ ಸೂಚನೆ ನೀಡಲಾಗಿದೆ. ಜಿಲ್ಲೆಯ ಹಿರಿಯ ಮಹಿಳಾ ಸಾಹಿತಿ, ಲೇಖಕಿ, ಕಾದಂಬರಿಗಾರ್ತಿ, ಕಥೆಗಾರ್ತಿ ಜಿ.ಎಸ್. ಸುಶೀಲಾದೇವಿ ಆರ್.ರಾವ್ ಅವರನ್ನು […]