ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವವು ಇಂದಿನಿಂದ ಆರಂಭಗೊಳ್ಳಲಿದೆ. ನ.15ರವರೆಗೆ ನಡೆಯಲಿದ್ದು, ಪ್ರಥಮ ಮತ್ತು ಅಂತಿಮ ದಿನದಂದು ಸಾರ್ವಜನಿಕರ ಪ್ರವೇಶ ಇರುವುದಿಲ್ಲ. ಉಳಿದ ದಿನದಲ್ಲಿ ದಿನದ 24 ಗಂಟೆಯೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ನ.2ರ ಮಧ್ಯಾಹ್ನ 12ಕ್ಕೆ ದೇವಾಲಯದ ಬಾಗಿಲು ತೆರೆಯಲಿದ್ದು, ಆದಿ ಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಾಜಿ ಪಿಎಂ ಹೆಚ್ ಡಿ ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ, ಪ್ರವಾಸೋ ದ್ಯಮ ಸಚಿವ ಹೆಚ್.ಕೆ ಪಾಟೀಲ್, ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿರಲಿದ್ದಾರೆ. […]