ಉಡುಪಿ: ಜಿಲ್ಲೆಯ ಪ್ರವಾಸಿ ತಾಣವಾಗಿ ಬೆಳೆಯುತ್ತಿದ್ದ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಗರಣ ಪ್ರಕರಣದಲ್ಲಿ ಮೊದಲ ತಲೆದಂಡವಾಗಿದೆ. ನಕಲಿ ಪರಶುರಾಮನ ಮೂರ್ತಿ ಸ್ಥಾಪನೆ ಆರೋಪದ ತನಿಖೆ ಹಿನ್ನೆಲೆಯಲ್ಲಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು ಮಾಡಲಾಗಿದೆ. ಕಳೆದ ಬಿಜೆಪಿ ಸರಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ನೇತೃತ್ವದಲ್ಲಿ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮನ ಥೀಂ ಪಾರ್ಕ್ ನಿರ್ಮಾಣವಾಗಿತ್ತು. ಚುನಾವಣಾ ಪೂರ್ವದಲ್ಲಿ ಅಂದಿನ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನೂತನ […]