ಕಲಬುರ್ಗಿ: ಗಣಿಗಾರಿಕೆ ಉದ್ಯಮಿಗಳ ಮತ್ತು ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ, ರಾಜ್ಯದ ಐದು ಕಡೆ ‘ಗಣಿ ಅದಾಲತ್’ ನಡೆಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ಆರ್.ನಿರಾಣಿ ಹೇಳಿದರು. ‘ಏ.30ರಂದು ಬೆಂಗಳೂರಿನ ಅರಮನೆ ಮೈದಾನ, ಮೇ 15ರಂದು ಮೈಸೂರು, ಮೇ 29ಕ್ಕೆ ಬೆಳಗಾವಿ, ಜೂನ್ 11ಕ್ಕೆ ಕಲಬುರ್ಗಿ ಹಾಗೂ ಜೂನ್ 25ಕ್ಕೆ ಮಂಗಳೂರಿನಲ್ಲಿ ಈ ಅದಾಲತ್ ನಡೆಯಲಿದೆ’. ಗಣಿಗಾರಿಕೆಗೆ ಅನುಮತಿ ನೀಡಲು ಉದ್ಯಮಿಗಳಿಗೆ ಅಲೆದಾಟ ತಪ್ಪಿಸಲು ಮುಂದಿನ ತಿಂಗಳಿನಿಂದ ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಹೇಳಿದರು. […]