ಶಿವಮೊಗ್ಗ: ಲಾಕ್ಡೌನ್ನಿಂದಾಗಿ, ಅನೇಕ ಮದುವೆ ಕಾರ್ಯಕ್ರಮಗಳು ಮುಂದೂಡಿಕೆಯಾಗಿವೆ. ಇದೀಗ ಶಾಸಕ ಕುಮಾರ ಬಂಗಾರಪ್ಪ ಅವರ ಪುತ್ರಿಯ ವಿವಾಹ ಮುಂದೂಡಲಾಗಿದೆ ಎನ್ನಲಾಗಿದೆ. ಕುಮಾರ್ ಬಂಗಾರಪ್ಪ ಅವರ ಪುತ್ರಿ ಲಾವಣ್ಯಳಿಗೆ ಹೈದರಾಬಾದ್ ಮೂಲದ ಡಾ.ವಿಕ್ರಮಾದಿತ್ಯ ಅಥೆಲಿ ಅವರೊಂದಿಗೆ ವಿವಾಹ ನಿಶ್ಚಯವಾಗಿತ್ತು. ಮೇ 30ಕ್ಕೆ ವಿವಾಹ ನಡೆಯಬೇಕಿತ್ತು. ಅದೇ ದಿನ ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಯನ್ನೂ ಇಟ್ಟುಕೊಳ್ಳಲಾಗಿತ್ತು. ಹಾಗೆಯೇ, ಜೂನ್ 4ಕ್ಕೆ ಸೊರಬದ ಎಸ್ ಬಂಗಾರಪ್ಪ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಸುವುದಾಗಿ ಹೇಳಲಾ ಗಿತ್ತು. ಮದುವೆ ಆಮಂತ್ರಣ ಪತ್ರಿಕೆ […]