ಮಣಿಪುರ: ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ವಿಷಯವಾಗಿ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯನ್ನು ಲೂಟಿ ಮಾಡಿದ್ದಾರೆ. ಅಸಮಾಧಾನಗೊಂಡ ಬಿಜೆಪಿ ಕಾರ್ಯಕರ್ತರು ಮಣಿಪುರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯ ವಿರುದ್ಧ ಘೋಷಣೆ ಕೂಗಿ, ಸಿಎಂ ಎನ್ ಬಿರೇನ್ ಸಿಂಗ್ ಹಾಗೂ ರಾಜ್ಯ ವಿಭಾಗದ ಅಧ್ಯಕ್ಷರಾದ ಶಾರದಾ ದೇವಿ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿಗಳನ್ನು, ಧ್ವಜವನ್ನು ದಹಿಸಿದ್ದಾರೆ. ಕಾರ್ಯಕರ್ತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು […]