Friday, 18th October 2024

ಫೆ.26-28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಹಾವೇರಿಯಲ್ಲಿ ಮುಂದಿನ ವರ್ಷ ಫೆ.26ರಿಂದ ಫೆ.28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ. ‘ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ ಕಾಣುತ್ತಿದೆ. ಹೀಗಾಗಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಿ, ಅಕ್ಷರ ಜಾತ್ರೆ ನಡೆಸಲು ಅನುವು ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಬೇಕು’ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕಾರ್ಯಕಾರಿ ಸಮಿತಿ ಸಭೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿತು. […]

ಮುಂದೆ ಓದಿ