ಬೆಂಗಳೂರು: ನಗರದ ವಿವಿಧ ದೇವಾಲಯಗಳಲ್ಲಿ ನಡೆಯುವ ವಾರ್ಷಿಕ ಜಾತ್ರೆ/ರಥೋತ್ಸವದ ಪ್ರಯುಕ್ತ, ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಪೂರ್ವ ವಲಯದ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ಏಪ್ರಿಲ್ ಹದಿನಾಲ್ಕರ ವರೆಗೆ ಬ್ರೇಕ್ ಹಾಕಲಾಗಿದೆ. ಹಲಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೋದಂಡರಾಮಲಿಂಗೇಶ್ವರ ಸ್ವಾಮಿ ಮತ್ತು ವಿವಿಧ ದೇವರ ಪಲ್ಲಕ್ಕಿ ಉತ್ಸವದ ಕಾರಣಕ್ಕಾಗಿ, ಏಪ್ರಿಲ್ ಹನ್ನೆರಡು ಸಾಯಂಕಾಲ ಆರರ ವರೆಗೆ ಮದ್ಯ ಮಾರಾಟ ವಿರುವುದಿಲ್ಲ. […]