ಹಾಸನ: ವಿದ್ಯುತ್ ಶಾಕ್ ನೀಡಿ ಆನೆ ಕೊಂದು, ದಂತ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಂಸದೆ, ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮನೇಕಾ ಗಾಂಧಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಈ ಗಂಭೀರ ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಪ್ರಜ್ವಲ್ ರೇವಣ್ಣ ಒತ್ತಡ ಹೇರಿದ್ದಾರೆ ಎಂದು ಪತ್ರದಲ್ಲಿ ಆರೋಪ ಮಾಡಿದ್ದಾರೆ. ಹಾಸನ ತಾಲ್ಲೂಕಿನ ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಮತ್ತು ತಮ್ಮಯ್ಯ ಎಂಬವರು ಅಕ್ರಮವಾಗಿ ವಿದ್ಯುತ್ ಹರಿಸಿ ಒಂಟಿ ಸಲಗವನ್ನು ಕೊಂದು, […]