ಮುಂಬೈ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗಾಗಿನ ಬಹುನಿರೀಕ್ಷಿತ ವೇಳಾಪಟ್ಟಿ ಯನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಪಂದ್ಯಗಳನ್ನು ಚಿನ್ನಸ್ವಾಮಿ ಮೈದಾನದಲ್ಲಿ ನೋಡುವ ಆರ್ಸಿಬಿ ಅಭಿಮಾನಿಗಳ ಕನಸಿಗೆ ಹಿನ್ನೆಡೆಯಾಗಿದೆ. ಆರಂಭಿಕ ಹಂತದಲ್ಲಿ ಟೂರ್ನಿಯು ಮುಚ್ಚಿದ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದ್ದು, ಮುಂದಿನ ಹಂತದಲ್ಲಿ ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರೇಕ್ಷಕರಿಗೆ ಅನುಮತಿ ನೀಡಬೇಕೇ ಎಂಬುದರ ಕುರಿತು ಐಪಿಎಲ್ ಆಡಳಿತ ಮಂಡಳಿ ನಿರ್ಧರಿಸ ಲಿದೆ. ಏಪ್ರಿಲ್ 9ರಂದು ಚೆನ್ನೈಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೊಚ್ಚಲ ಕಿರೀಟವನ್ನು ಎದುರು ನೋಡುತ್ತಿರುವ ವಿರಾಟ್ ಕೊಹ್ಲಿ ಬಳಗವು, […]