Thursday, 19th September 2024

ಕೃಷಿ ಕಾನೂನುಗಳಿಗೂ ತನಗೂ ಸಂಬಂಧವಿಲ್ಲ: ರಿಲಾಯನ್ಸ್ ಇಂಡಸ್ಟ್ರೀಸ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳ ಫಲಾನುಭವಿ ಎಂಬ ಆರೋಪಕ್ಕೆ ಗುರಿಯಾಗಿರುವ ರಿಲಯನ್ಸ್ ಇಂಡಸ್ಟ್ರೀಸ್, ಈ ವಿಚಾರಕ್ಕೂ ತನಗೂ ಏನೂ ಸಂಬಂಧವಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದೆ. ಈ ಸಂಬಂಧ ಬಿಲಿಯನೇರ್ ಮುಖೇಶ್ ಅಂಬಾನಿಯ ಸಂಸ್ಥೆ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್(ಆರ್ಜೆಐಎಲ್) ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, “ದೇಶದಲ್ಲಿ ಪ್ರಸ್ತುತ ಚರ್ಚೆಯಾಗುತ್ತಿರುವ ಮೂರು ಕೃಷಿ ಕಾನೂನುಗಳಿಗೂ ರಿಲಯನ್ಸ್ ಗೂ ಯಾವುದೇ ಸಂಬಂಧವಿಲ್ಲ, ಮತ್ತು ಆ ಕಾನೂನಿನಿಂದ ಯಾವುದೇ ರೀತಿಯ ಪ್ರಯೋಜನೆ ಪಡೆಯುತ್ತಿಲ್ಲ” ಎಂದು ಪ್ರಕಟಣೆಯಲ್ಲಿ ತಿಳಿಸಿದೆ. […]

ಮುಂದೆ ಓದಿ