ಧಾರವಾಡ: ಎರಡು ತಿಂಗಳೊಳಗೆ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಧಾರವಾಡ ಹೈಕೋರ್ಟ್ ಪೀಠ ಆದೇಶ ನೀಡಿದೆ. 2021 ರ ಮೇ 9 ರಂದು ನಡೆಯಬೇಕಿದ್ದ ಕಸಾಪ ಚುನಾವಣೆಯನ್ನು ಕರೋನಾ ಹೆಚ್ಚಳದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಸೋಂಕು ತಗ್ಗಿದ್ದು, ಮೂರು ಪಾಲಿಕೆ ಚುನಾವಣೆಗಳೂ ನಡೆದಿವೆ. ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶೇಖರಗೌಡ ಮಾಲಿ ಪಾಟೀಲ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ನ್ಯಾಯಾಲಯ ಈ ಸೂಚನೆ ನೀಡಿದೆ. ಒಂದೂವರೆ ತಿಂಗಳ ಹಿಂದೆಯೇ ಸರಕಾರಕ್ಕೆ ಚುನಾವಣೆ ನಡೆಸುವಂತೆ […]