Saturday, 21st September 2024

ಶ್ರೀ ವೆಂಕಟೇಶ್ವರನ ದರ್ಶನ ಪಡೆದ ರಾಷ್ಟ್ರಪತಿ ಕೋವಿಂದ್

ತಿರುಪತಿ: ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಮಂಗಳವಾರ ತಿರುಪತಿಗೆ ಭೇಟಿ ನೀಡಿದ್ದು, ಶ್ರೀ ವೆಂಕಟೇಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ರಾಮನಾಥ್ ಕೋವಿಂದ್ ರೆನಿಗುಂಟಾ ವಿಮಾನ ನಿಲ್ದಾಣಕ್ಕೆ ತಲುಪಿದಾಗ ಅವರನ್ನು ರಾಜ್ಯಪಾಲ ಬಿಸ್ವಾಭೂಷಣ್ ಮತ್ತು ಸಿಎಂ ಜಗನ್​ಮೋಹನ್​ ರೆಡ್ಡಿ ಸ್ವಾಗತಿಸಿದರು. ಮಧ್ಯಾಹ್ನ ತಿರುಮಲ ಪದ್ಮಾವತಿ ಅತಿಥಿ ಗೃಹಕ್ಕೆ ತಲುಪಿದ್ದು, ವರಹಸ್ವಾಮಿಯ ದರ್ಶನ ಮಾಡಿದರು. ನಂತರ ವೆಂಕಟೇಶ್ವರನ ದರ್ಶನ ಪಡೆದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ರೆನಿಗುಂಟಾ ವಿಮಾನ ನಿಲ್ದಾಣಕ್ಕೆ ತೆರಳಿ ಚೆನ್ನೈಗೆ ತೆರಳಲಿದ್ದಾರೆ.

ಮುಂದೆ ಓದಿ