ಶ್ರೀನಗರ: ಭಾರತದ ವಿರುದ್ಧ ಪಾಕ್ ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಾಚರಣೆ(ಟಿ20 ವಿಶ್ವಕಪ್ ಸರಣಿಯ ಕ್ರಿಕೆಟ್ ಪಂದ್ಯ) ಯಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ ಯುಎಪಿಎ ಜಾರಿಗೊಳಿಸಲಾಗಿದೆ. ಪ್ರಕರಣಗಳು ಶ್ರೀನಗರದಲ್ಲಿ ಯುಎಪಿಎ ಅಡಿ ದಾಖಲಾಗಿದ್ದು, ಕರಣ್ ನಗರ ಹಾಗೂ ಎಸ್ ಕೆಐಎಂಎಸ್ ಸೌರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸ ಲಾಗಿದೆ. ಕಣಿವೆಯಲ್ಲಿ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿವೆ. ಪಾಕಿಸ್ತಾನ ಗೆಲ್ಲುತ್ತಿದ್ದಂತೆಯೇ ಕಾಶ್ಮೀರದ […]