ಉಡುಪಿ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯೊಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿರೋದು ಗಂಭೀರ ವಿಚಾರ. ನನಗೆ ಮಾಧ್ಯಮದವರು ಹಾಗೂ ಸ್ನೇಹಿತರುಗಳು ಎರಡು ಮೂರು ತಿಂಗಳ ಹಿಂದೆಯೇ ನೀಡಿದ್ದ ಮಾಹಿತಿಯನ್ನು ಜನರ ಮುಂದೆ ಇಟ್ಟಿದ್ದೇನೆ. ನಾನು ಯಾರ ಹೆಸರನ್ನೂ ಹೇಳಿಲ್ಲ. ಆದರೆ ಅವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಳ್ಳು ತ್ತಿರೋದೇಕೆ?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಭಾನುವಾರ ಗೋಪಾಲ ಪೂಜಾರಿ ಅವರ ನಿವಾಸ ಹಾಗೂ ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ನನ್ನ ಬಳಿ ಸಾಕ್ಷಿ ಇದೆ. ನಾನು […]