Friday, 20th September 2024

ವೈಎಸ್ ಜಗನ್‌ಮೋಹನ ರೆಡ್ಡಿ ಸಹೋದರಿ ಆಸ್ಪತ್ರೆಗೆ ದಾಖಲು

ಹೈದರಾಬಾದ್: ವೈಎಸ್‌ಆರ್ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ಅಧ್ಯಕ್ಷೆ ಮತ್ತು ಆಂಧ್ರ ಸಿಎಂ ವೈಎಸ್ ಜಗನ್‌ಮೋಹನ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅಸ್ವಸ್ಥರಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರ್ಮಿಳಾ ತೆಲಂಗಾಣ ರಾಜ್ಯಾದ್ಯಂತ ಪಾದಯಾತ್ರೆ ಮುಂದಾಗಿದ್ದರು. ಆದರೆ, ಇದಕ್ಕೆ ಕೆಸಿಆರ್‌ ಸರ್ಕಾರ ಅನುಮತಿ ನೀಡಲಿಲ್ಲ. ಇದರಿಂದ ಬೇಸರಗೊಂಡ ವೈಎಸ್‌ಆರ್‌ಟಿಪಿ ಪಕ್ಷದವರು ಹಾಗೂ ಶರ್ಮಿಳಾ ಪಕ್ಷದ ಪ್ರಧಾನ ಕಚೇರಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದರು. ಉಪವಾಸ ಸತ್ಯಾಗ್ರಹ ಕೈ ಬಿಡುವಂತೆ ಪೊಲೀಸರು ಪಕ್ಷದ ಮುಖಂಡರು ಮತ್ತು ಕಾರ್ಯ ಕರ್ತರಿಗೆ ಮನವಿ […]

ಮುಂದೆ ಓದಿ