ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Basavaraj Bommai: ಬ್ರೇಕ್‌ಫಾಸ್ಟ್ ಮಾಡುತ್ತಾ ಸಿಎಂ, ಡಿಸಿಎಂ ಕಾಲಹರಣ: ಬೊಮ್ಮಾಯಿ ಕಿಡಿ

ಬ್ರೇಕ್‌ಫಾಸ್ಟ್ ಮಾಡುತ್ತಾ ಸಿಎಂ, ಡಿಸಿಎಂ ಕಾಲಹರಣ: ಬೊಮ್ಮಾಯಿ ಕಿಡಿ

ಸಿಎಂ, ಡಿಸಿಎಂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದರೆ ರಾಜ್ಯದ ಜನರ ಶ್ರೇಯೋಭಿವೃದ್ದಿ ಯಾರು ಮಾಡುತ್ತಾರೆ ಎನ್ನುವುದು ನಮ್ಮ ಕಾಳಜಿ. ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಚೆಯಾಗಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದಿನಾ ಕೆಮ್ಮಿನ ಸಿರಪ್ ಜತೆಗೆ ಡೋಲೋ 650 ಟ್ಯಾಬ್ಲೆಟ್‌...ಬೆಂಗಳೂರಿನ ಕೋಲ್ಡ್ ವೆದರ್ ಬಗ್ಗೆ ವಿಡಿಯೊ ಶೇರ್ ಮಾಡಿದ ಯುವಕ

ಬೆಂಗಳೂರಿನ ಚಳಿ ಹೇಗಿದೆ ಗೊತ್ತಾ? ಅನುಭವ ಬಿಚ್ಚಿಟ್ಟ ಯುವಕ

ಬೆಂಗಳೂರಿನ ಚಳಿಯ ವಾತಾವರಣದ ಬಗ್ಗೆ ಪೂರವ್ ಎನ್ನುವ ಹೆಸರಿನ ಯುವಕ ತನ್ನ ಇನ್ ಸ್ಟಾಗ್ರಾಂ ಖಾತೆಯಲ್ಲಿ ಫನ್ನಿ ವಿಡಿಯೊ ಒಂದನ್ನು ಹಂಚಿಕೊಂಡಿದ್ದಾನೆ. ಬೆಂಗಳೂರಿನ ಹವಾಮಾನದಿಂದ ವಿಪರೀತ ಚಳಿಯಾಗುತ್ತಿದ್ದು, ಇದರ ಮಧ್ಯೆಯೇ ಜೀವನ ಸಾಗಿಸಬೇಕು...ನಿತ್ಯ ಕೆಲಸಕ್ಕೂ ರೆಡಿಯಾಗಬೇಕು ಎಂದು ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾನೆ.

R V Devaraj: ಆರ್.ವಿ. ದೇವರಾಜ್ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ: ಸಿಎಂ ಸಂತಾಪ

R V Devaraj: ಆರ್.ವಿ. ದೇವರಾಜ್ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ: ಸಿಎಂ

ದೇವರಾಜು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಅಗಲಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಕುಟುಂಬವರ್ಗ ಹಾಗೂ ಅಭಿಮಾನಿ ಬಳಗಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Anganwadi Workers Protest: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಂದ ಅನಿರ್ದಿಷ್ಟಾವಧಿ ಮುಷ್ಕರ

ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಕಾರ್ಯಕರ್ತೆಯರಿಂದ ಧರಣಿ

ಅಂಗನವಾಡಿ ಮತ್ತು ಮಧ್ಯಾಹ್ನದ ಬಿಸಿಯೂಟ ಕಾರ್ಯಕರ್ತೆಯರು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ವೇತನ ಹೆಚ್ಚಳ, ಉದ್ಯೋಗ ಭದ್ರತೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡುವಂತೆ ಸರ್ಕಾರದ ಬಳಿ ಬೇಡಿಕೆಯಿಟ್ಟಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ.

CM-DCM Breakfast Meeting: ನಾನು ಹಾಗೂ ಡಿ.ಕೆ.ಶಿವಕುಮಾರ್‌ ಸಹೋದರರು, ಭಿನ್ನಾಭಿಪ್ರಾಯಗಳಿಲ್ಲ: ಸಿಎಂ ಸಿದ್ದರಾಮಯ್ಯ

ನಾನು ಹಾಗೂ ಡಿ.ಕೆ.ಶಿವಕುಮಾರ್‌ ಸಹೋದರರು: ಸಿಎಂ ಸಿದ್ದರಾಮಯ್ಯ

CM Siddaramaiah: ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿ ನೀಡಿದ್ದೆ. ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ. ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

BS Yediyurappa: ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ತಂದ ಬಿಎಸ್ ಯಡಿಯೂರಪ್ಪ

ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ತಂದ ಯಡಿಯೂರಪ್ಪ

ಪೋಕ್ಸೋ ಪ್ರಕರಣದಲ್ಲಿ (POCSO case) ಹೈಕೋರ್ಟ್ ಆದೇಶದ ಪ್ರಕಾರ ಇಂದು ಖುದ್ದು ಕೋರ್ಟ್​ಗೆ ಹಾಜರಾಗಬೇಕಿದ್ದ ಬಿಎಸ್‌ ಯಡಿಯೂರಪ್ಪ, ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದರು. ಯಡಿಯೂರಪ್ಪ ಪರ ಹಿರಿಯ ವಕೀಲ ಸಿದ್ದಾರ್ಥ ಲೂಥ್ರಾ ವಾದಿಸಿದ್ದರು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಪೀಠ, ಪ್ರಕರಣದ ವಿಚಾರಣೆಗೆ ತಡೆ ನೀಡಿದೆ.

BS Yediyurappa: ತಮ್ಮ ವಿರುದ್ಧ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಎಸ್ ಯಡಿಯೂರಪ್ಪ ಸುಪ್ರೀಂ ಕೋರ್ಟ್‌ಗೆ

ತಮ್ಮ ವಿರುದ್ಧ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಬಿಎಸ್‌ವೈ ಸುಪ್ರೀಂ ಕೋರ್ಟ್‌ಗೆ

ತಮ್ಮ ಮೇಲಿನ ಸಮನ್ಸ್ ರದ್ದು ಮಾಡುವಂತೆ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಹಾಗೂ ಇತರ ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್,​ ಯಡಿಯೂರಪ್ಪ ಅವರ ಅರ್ಜಿ ವಜಾಗೊಳಿಸಿತ್ತು. ಇಂದೇ ಪೀಠದ ಮುಂದೆ ಹಾಜರಾಗುವಂತೆ ಆದೇಶಿಸಿತ್ತು. ಇದೀಗ ಆರೋಪಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

Chikkaballapur Crime: ಬಾಡಿಗೆ ಮನೆಯಲ್ಲಿ ಇದ್ದ ದಂಪತಿ ಶವವಾಗಿ ಪತ್ತೆ

Chikkaballapur Crime: ಬಾಡಿಗೆ ಮನೆಯಲ್ಲಿ ಇದ್ದ ದಂಪತಿ ಶವವಾಗಿ ಪತ್ತೆ

ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಂಗಾಲಹಳ್ಳಿ ಮೂಲದ ಅಶ್ವತ್ತಪ್ಪ (65) ಹಾಗೂ ಅವರ ಪತ್ನಿ ಹನುಮಕ್ಕ (55) ಅವರು, ಪೂಲಂಪಲ್ಲಿ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ಶವವಾಗಿ ಪತ್ತೆಯಾಗಿ ದ್ದಾರೆ. ದಂಪತಿಗಳಿಬ್ಬರು ಕಳೆದ ಒಂದು ವರ್ಷದಿಂದ ಪೂಲಂಪಲ್ಲಿ ಗ್ರಾಮ ದಲ್ಲಿ ಬಾಡಿಗೆ ಮನೆ ಮಾಡಿ ಕೊಂಡು ಜೀವನ ಮಾಡುತ್ತಿದ್ದರು.

CM- DCM Meeting: ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಬ್ರೇಕ್‌ಫಾಸ್ಟ್‌ ಬಳಿಕ ಸಿಎಂ ಸಿದ್ದರಾಮಯ್ಯ- ಡಿಕೆ ಶಿವಕುಮಾರ್ ಜಂಟಿ ಹೇಳಿಕೆ

ನಾವು ಒಗ್ಗಟ್ಟಾಗಿದ್ದೇವೆ, ನಮ್ಮದು ಒಂದೇ ಧ್ವನಿ: ಸಿಎಂ, ಡಿಸಿಎಂ ಜಂಟಿ ನುಡಿ

ನಮ್ಮ ನಡುವೆ ಭಿನ್ನಾಭಿಪ್ರಾಯ ಇರಲಿಲ್ಲ. ನಾವು ಒಗ್ಗಟ್ಟಾಗಿ ಸರಕಾರ ಮುನ್ನಡೆಸಲಿದ್ದೇವೆ. ನಮ್ಮ ಎಲ್ಲ ಶಾಸಕರೂ ಒಗ್ಗಟ್ಟಾಗಿದ್ದಾರೆ. ಅಭಿಪ್ರಾಯ ವ್ಯಕ್ತಪಡಿಸಿದ ಕೂಡಲೇ ಭಿನ್ನಾಭಿಪ್ರಾಯ ಎಂದರ್ಥವಲ್ಲ. 2028ಕ್ಕೂ ನಾವು ಒಟ್ಟಿಗೇ ಕೆಲಸ ಮಾಡುತ್ತೇವೆ. ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ. ನಾವು ಯಾವಾಗಲೂ ಬ್ರದರ್ಸೇ. ನಮ್ಮದು ಒಂದೇ ವಿಚಾರ- ಸಿದ್ಧಾಂತ ಎಂದು ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿಕೆ ನೀಡಿದರು.

ಮಂಗಳೂರಿನಿಂದ ಟೂರ್ ಆಫ್ ನೀಲಗಿರೀಸ್ ಸೈಕಲ್ ಯಾತ್ರೆ

ಮಂಗಳೂರಿನಿಂದ ಟೂರ್ ಆಫ್ ನೀಲಗಿರೀಸ್ ಸೈಕಲ್ ಯಾತ್ರೆ

ಮೂರು ಪ್ರಸಿದ್ಧ ವನ್ಯಜೀವಿ ಅಭಯಾರಣ್ಯಗಳು ಮತ್ತು ನೀಲಗಿರಿ ಜಿಲ್ಲೆಯ ಪ್ರಾಚೀನ ಗ್ರಾಮಾಂತರ ವನ್ನು ಒಳಗೊಂಡಂತೆ ನೀಲಗಿರಿ ಜೀವಗೋಳದ ಮೂಲಕ ಸೈಕ್ಲಿಂಗ್ ಮಾಡುವ ರೋಮಾಂಚನವು ಪ್ರವಾಸದ ಪ್ರಮುಖ ಅಂಶವಾಗಿದೆ. ಈ ಯಾತ್ರೆ ಭಾರತವನ್ನು ಜಾಗತಿಕ ಸೈಕ್ಲಿಂಗ್ ನಕ್ಷೆಯಲ್ಲಿ ಇರಿಸಿದ್ದು, ಭಾರತದ ಅತಿದೊಡ್ಡ ಮತ್ತು ಅತ್ಯಂತ ಪ್ರೀತಿಯ ಸೈಕಲ್ ಪ್ರವಾಸವಾಗಿ ಹೊರ ಹೊಮ್ಮಿದೆ

CM- DCM Meeting: ಇಡ್ಲಿ-ನಾಟಿಕೋಳಿ ಸಾರು ಸವಿದ ಸಿದ್ದರಾಮಯ್ಯ; ಸಿಎಂ-ಡಿಸಿಎಂ ಸಭೆಯ Exclusive​  ಫೋಟೋಸ್‌ ಇಲ್ಲಿವೆ

ಇಡ್ಲಿ-ನಾಟಿಕೋಳಿ ಸಾರು ಸವಿದ ಸಿದ್ದರಾಮಯ್ಯ; ಫೋಟೋ ನೋಡಿ

Siddaramaiah - DK Shivakumar: ಅಧಿಕಾರ ಹಂಚಿಕೆ ಚರ್ಚೆ ನಡುವೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಇಂದು ಮತ್ತೆ ಭೇಟಿಯಾಗಿದ್ದಾರೆ. ಉಪಹಾರ ಸವಿಯಲು ಡಿಸಿಎಂ ಡಿಕೆ ಶಿವಕುಮಾರ್‌ ನಿವಾಸಕ್ಕೆ ಸಿಎಂ ಆಗಮಿಸಿದ್ದು, ಡಿಕೆ ಸುರೇಶ್‌ ಹಾಗೂ ಶಿವಕುಮಾರ್‌ ಆತ್ಮೀಯವಾಗಿ ಅವರನ್ನು ಬರಮಾಡಿಕೊಂಡರು

Chikkaballapur News: ಎಚ್.ಐ.ವಿ ಸೋಂಕು ಹರಡುವಿಕೆ ತಡೆಗಟ್ಟಲು ಜಾಗೃತಿ ಮೂಡಿಸಿ: ನ್ಯಾ.ಟಿ.ಪಿ.ರಾಮಲಿಂಗೇಗೌಡ

ಎಚ್.ಐ.ವಿ ಸೋಂಕು ಹರಡುವಿಕೆ ತಡೆಗಟ್ಟಲು ಜಾಗೃತಿ ಮೂಡಿಸಿ

ಆರೋಗ್ಯವೇ ಭಾಗ್ಯ ಎಂದು ಕರೆಯಲಾಗುತ್ತದೆ. ಏಕೆಂದರೆ, ಆರೋಗ್ಯವಿದ್ದರೆ ಏನನ್ನಾದರೂ ಸಾಧಿಸ ಬಹುದು. ಆರೋಗ್ಯವಿಲ್ಲದಿದ್ದರೆ ಏನೇ ಸಾಧಿಸಿದರು ಪ್ರಯೋಜನವಿಲ್ಲ ಅದ್ದರಿಂದ ಸಮಾಜದಲ್ಲಿ ಪ್ರತಿಯೊಬ್ಬರ ಆರೋಗ್ಯವನ್ನು ಕಾಪಾಡುವುದು ಆಡಳಿತಾಂಗದ ಮುಖ್ಯ ಕಾರ್ಯವಾಗಿರುತ್ತದೆ. ಅದ್ದ ರಿಂದ ವಿಶ್ವ ಏಡ್ಸ್ ದಿನಾಚರಣೆಯ ಅಂಗವಾಗಿ ಜಾಗೃತಿ ಮೂಡಿಸುವ ಕೆಲಸವನ್ನು ಪ್ರತಿ ವರ್ಷ ವಿಶ್ವಾ ದ್ಯಂತ ಮಾಡಲಾಗುತ್ತದೆ

RV Devraj passes Away: ನಾಳೆ ಕನಕಪುರದ ಹುಟ್ಟೂರಿನಲ್ಲಿ ಆರ್‌ವಿ ದೇವರಾಜ್‌ ಅಂತ್ಯಕ್ರಿಯೆ

ನಾಳೆ ಕನಕಪುರದ ಹುಟ್ಟೂರಿನಲ್ಲಿ ಆರ್‌ವಿ ದೇವರಾಜ್‌ ಅಂತ್ಯಕ್ರಿಯೆ

ಹುಟ್ಟುಹಬ್ಬ ಆಚರಣೆಗೂ ಮೊದಲು ದೇವರಾಜ್‌ (RV Devraj) ಅವರು ಚಾಮುಂಡಿ ತಾಯಿಯ ದರ್ಶನಕ್ಕೆಂದು ನಿನ್ನೆ (ಡಿ.1) ಮೈಸೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಅವರಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೋಮನಹಳ್ಳಿ ಎ.ಪಿ.ಎಸ್ ಪಿಯುಸಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ಕಲೆಯ ವಸ್ತು ಪ್ರದರ್ಶನ

ಎ.ಪಿ.ಎಸ್ ಪಿಯುಸಿ ಕಾಲೇಜಿನಲ್ಲಿ ವಿಜ್ಞಾನ ಹಾಗೂ ಕಲೆಯ ವಸ್ತು ಪ್ರದರ್ಶನ

ವಿದ್ಯಾರ್ಥಿಗಳು ತಯಾರಿಸಿದ ಜಲ ವಿದ್ಯುತ್, ಬ್ಲೂ ಟೂತ್ ರೋಬೋಟ್, ಆಮ್ಲ ಮಳೆ, ಅಣು ವಿದ್ಯುತ್ ಸ್ಥಾವರ, ತ್ರಯೋಮಿತಿ ಉದ್ಯಾನವನ, 3ಡಿ ಮಾದರಿ, ಗಣಿತದ ಆಟಗಳು, ಅಯೋಡಿನ್ ಪ್ರತಿಕ್ರಿಯೆ, ಭ್ರೂಣ ಬೆಳವಣಿಗೆ, ಕೈಗಾರಿಕಾ ತ್ಯಾಜ್ಯ ನಿರ್ವಹಣೆ, ಹೇಮೋ ಡಯಾಲಿಸಿಸ್, ಗ್ರಾಮೀಣ ಮತ್ತು ನಗರಾ ಭಿವೃದ್ಧಿ, ಮಧುರೈ ಮೀನಾಕ್ಷಿ ದೇವಾಲಯ, ಅಯೋಧ್ಯಾ ಶ್ರೀ ರಾಮ ಮಂದಿರ ಹೀಗೆ ಹಲವು ವೈಶಿಷ್ಟ್ಯ ಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಾಕ್ಷಿಯಾಗಿದೆ.

ವಿಶ್ವ ಏಡ್ಸ್ ದಿನಾಚರಣೆ: ಇ.ಎಸ್.ಐ.ಸಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಜಾಗೃತಿ ಕಾರ್ಯಕ್ರಮ

ಇ.ಎಸ್.ಐ.ಸಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಜಾಗೃತಿ ಕಾರ್ಯಕ್ರಮ

ರಾಜಾಜಿನಗರದ ಇ.ಎಸ್.ಐ.ಸಿ ಮೆಡಿಕಲ್ ಕಾಲೇಜು, ಪಿಜಿಐಎಂಎಸ್ಆರ್ ಮತ್ತು ಮಾದರಿ ಆಸ್ಪತ್ರೆ ಯಲ್ಲಿ ಇಂದು ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ವ್ಯಾಪಕ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. “ಹೆಚ್.ಐ.ವಿ., ಏಡ್ಸ್ ಹರಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆ–ತಡೆ ಗಳನ್ನು ಕೊನೆಗಾಣಿ ಸೋಣ.” ಎಂಬ ಧ್ಯೇಯವಾಕ್ಯದಡಿ ಜನ ಜಾಗೃತಿ ಮೂಡಿಸಲಾಯಿತು.

ಬೆಂಗಳೂರು ಮೂಲದ ಮಹಿಳಾ ಉದ್ಯಮಿಗೆ ಕ್ವಿಕ್‌ ಕಾಮರ್ಸ್‌ನಿಂದ ಬೆಂಬಲ: ಎರಡನೇ ನಿರಾಗ್‌ ಫುಡ್ಸ್‌ ಘಟಕ ತೆರೆಯಲು ಬೆಂಬಲ

ಬೆಂಗಳೂರು ಮೂಲದ ಮಹಿಳಾ ಉದ್ಯಮಿಗೆ ಕ್ವಿಕ್‌ ಕಾಮರ್ಸ್‌ನಿಂದ ಬೆಂಬಲ

ನಿರಾಗ್‌ ಫುಡ್ಸ್‌ ಅಡಿಯಲ್ಲಿ, ಮಲ್ಲಿಗೆ ಇಡ್ಲಿ, ಪೆಸರಟ್ಟು ಮತ್ತು ಅದೈ ದೋಸೆಯಂತಹ ದಕ್ಷಿಣ ಭಾರತೀ ಯ ಶ್ರೇಷ್ಠ ಉತ್ಪನ್ನಗಳನ್ನು ನೀಡಲಾಗುತ್ತದೆ. ಬೆಂಗಳೂರು ಮೂಲದ ನಿರಾಗ್ ಫುಡ್ಸ್, ಮದ್ದೂರು ವಡ ಸೇರುದಂತೆ ಹಲವು ಖಾಧ್ಯಗಳಿಗೆ ಕ್ವಿಕ್‌ ಕಾಮರ್ಸ್‌ನಲ್ಲಿಯೂ ಉತ್ತಮ ಬೇಡಿಕೆ ಕಂಡುಬರುತ್ತಿದೆ.

Karnataka Politics: ಸಿಎಂ ಸ್ವಾಗತಕ್ಕೆ ಡಿಕೆ ಶಿವಕುಮಾರ್ ಮನೆಯಲ್ಲಿ ಕಾಯ್ತಿದೆ ನಾಟಿ ಕೋಳಿ ಸಾರು!

ಸಿಎಂ ಸ್ವಾಗತಕ್ಕೆ ಡಿಕೆ ಶಿವಕುಮಾರ್ ಮನೆಯಲ್ಲಿ ಕಾಯ್ತಿದೆ ನಾಟಿ ಕೋಳಿ ಸಾರು!

Breakfast meeting: ಇಂದು ಬೆಳಗ್ಗಿನ ಉಪಾಹಾರದ ಜೊತೆಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳ ಚರ್ಚೆಯನ್ನು ಸಿಎಂ ಹಾಗೂ ಡಿಸಿಎಂ ನಡೆಸಲಿದ್ದಾರೆ. ಹೈಕಮಾಂಡ್‌ ನಾಯಕರು ಈ ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಗಮನಿಸುತ್ತಿದ್ದು, ನಿಗಾ ಇಟ್ಟಿದ್ದಾರೆ. ಅಧಿಕಾರ ಹಂಚಿಕೆಗೆ ಮುನಿಸಿಕೊಂಡಿದ್ದ ಉಭಯ ನಾಯಕರಿಂದ ಈಗ ಬ್ರೇಕ್ ಫಾಸ್ಟ್ ಪಾಲಿಟಿಕ್ಸ್ ಶುರುವಾಗಿದೆ ಎಂದು ವಿಪಕ್ಷ ನಾಯಕರು ಟೀಕಿಸುತ್ತಿದ್ದಾರೆ.

Vegetables Price: ಗಗನಕ್ಕೇರಿದ ತರಕಾರಿ ಬೆಲೆ, ರಸಂ ಮಾಡ್ತೀವಿ ಸಾಕು ಅಂತಿರೋ ಗ್ರಾಹಕರು!

ಗಗನಕ್ಕೇರಿದ ತರಕಾರಿ ಬೆಲೆ, ರಸಂ ಮಾಡ್ತೀವಿ ಸಾಕು ಅಂತಿರೋ ಗ್ರಾಹಕರು!

ಬಹುತೇಕ ತರಕಾರಿಗಳ ಬೆಲೆ (Vegetables Price) ಏರಿಕೆಯಾಗಿದೆ. ಕೆಲ ತರಕಾರಿಗಳ ಬೆಲೆ ಶತಕದ ಗಡಿ ದಾಟಿದರೆ, ನುಗ್ಗೆಕಾಯಿ ಬೆಲೆ ಐದುನೂರರ ಗಡಿ ದಾಟಿದೆ. ಕಳೆದ ಒಂದು ವಾರದಿಂದ ಚಳಿ ರಾಜಧಾನಿ ಜನರನ್ನು ಫ್ರಿಜ್‌ನಲ್ಲಿ ಇಟ್ಟಂತೆ ತಂಪಾಗಿಸಿದೆ. ಆದರೆ ಅಡುಗೆಗೆ ಬೇಕಾದ ತರಕಾರಿಗಳ ದರ ಜನರ ಜೇಬು ಸುಡುತ್ತಿದೆ. ಟೊಮೆಟೊ ಬೆಲೆಯೂ ನೂರರ ಹತ್ತಿರ ಹತ್ತಿರ ಹೋಗುತ್ತಿದೆ.

Cyclone Ditwah: ದಿತ್ವಾ ಸೈಕ್ಲೋನ್‌ ಎಫೆಕ್ಟ್‌, ಬೆಂಗಳೂರು ಕೂಲ್‌, ತಮಿಳುನಾಡು ಥರಥರ

ದಿತ್ವಾ ಸೈಕ್ಲೋನ್‌ ಎಫೆಕ್ಟ್‌, ಬೆಂಗಳೂರು ಕೂಲ್‌, ತಮಿಳುನಾಡು ಥರಥರ

ದಿತ್ವಾ ಚಂಡಮಾರುತ (Cyclone Ditwah) ಎಫೆಕ್ಟ್ ಕರ್ನಾಟಕಕ್ಕೂ ತಟ್ಟಿದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ ಇದೆ. ಬಂಗಾಳ ಉಪಸಾಗರದ ನೈರುತ್ಯ ಭಾಗದಲ್ಲಿ ದಿತ್ವಾ ಚಂಡಮಾರುತ ಚಲಿಸುತ್ತಿರುವುದರಿಂದ ಕರ್ನಾಟಕದ ದಕ್ಷಿಣ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ತೀವ್ರ ಚಳಿಯ ಅನುಭವ ಆಗಬಹುದು.

RV Devaraj passes away: ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ ಇನ್ನಿಲ್ಲ

ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ ಇನ್ನಿಲ್ಲ

ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​.ವಿ. ದೇವರಾಜ್ (RV Devaraj) ಹೃದಯಾಘಾತದಿಂದ (heart attack) ಸೋಮವಾರ ನಿಧನ ಹೊಂದಿದ್ದಾರೆ. ಚಾಮರಾಜಪೇಟೆ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಚಾಮರಾಜಪೇಟೆ ಕ್ಷೇತ್ರದ ಕ್ಷೇತ್ರ ಪುನರ್ವಿಂಗಡಣೆ ನಂತರ ಚಿಕ್ಕಪೇಟೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಬಳಿಕ 2016ರಲ್ಲಿ ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿದ್ದರು.

Karnataka Weather: ಇಂದಿನ ಹವಾಮಾನ; ಮೈಸೂರು, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಇಂದಿನ ಹವಾಮಾನ; ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ಕರ್ನಾಟಕದಲ್ಲಿ ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೋಮವಾರ ಕೂಡ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಇಂದು ಕೂಡ ಅದೇ ರೀತಿಯ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಇನ್ನು ಮುಂದಿನ 6 ದಿನ ರಾಜ್ಯದಲ್ಲಿ ಹವಾಮಾನ ಹೇಗಿರಲಿದೆ ಎಂಬ ಕುರಿತ ವರದಿ ಇಲ್ಲಿದೆ.

ಎಕ್ಕಲಕಟ್ಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ಕನ್ನ : ಸಿಸಿ ಟಿವಿಯಲ್ಲಿ ಹುಂಡಿ ಕದ್ದೊಯ್ದ ದೃಶ್ಯ ಸೆರೆ

ಎಕ್ಕಲಕಟ್ಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ಕನ್ನ

ತಾಲೂಕಿನ ಹಾಗಲವಾಡಿ ಹೋಬಳಿಯ ಎಕ್ಕಲಕಟ್ಟೆ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಾಲಯ ದಲ್ಲಿ ರಾತ್ರಿ ದೇವಸ್ಥಾನದ ಬೀಗ ಮುರಿದು ಹುಂಡಿಯಲ್ಲಿದ್ದ ಸುಮಾರು ಎರಡು ಲಕ್ಷ ಹಣವನ್ನು ಕಾಣಿಕೆ ಹುಂಡಿ ಸಮೇತ ದೋಚಿದ ಘಟನೆ ದೇವಾಲಯದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Gudibande News: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ರೈತ ವಿರೋಧಿಗಳು : ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ  ಸೂರ್ಯನಾರಾಯಣ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ರೈತ ವಿರೋಧಿಗಳು

ಇಂದು ರೈತರು ಸಂಕಷ್ಟದಲ್ಲಿದ್ದಾರೆ. ಹೆಚ್ಚಾಗಿ ಆತ್ಮಹತ್ಯೆಗಳು ನಡೆಯುತ್ತಿವೆ. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗದೇ ಸಾಲಗಾರ ರಾಗುತ್ತಿದ್ದಾರೆ. ಆದರೆ  ಸರ್ಕಾರಗಳು ಮಾತ್ರ ರೈತರ ಬೆಂಬಲಕ್ಕೆ ನಿಲ್ಲುತ್ತಿಲ್ಲ. ಚುನಾವಣೆ ಸಮಯ ದಲ್ಲಿ ಮಾತ್ರ ತಾವು ರೈತರ ಪರ ಕೆಲಸ ಮಾಡುತ್ತೇವೆ. ರೈತರಿಗೆ ಅನುಕೂಲವಾಗುವಂತಹ ಯೋಜನೆ ಗಳನ್ನು ಜಾರಿ ಮಾಡುತ್ತೇವೆ ಎಂದು ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಬಳಿಕ ಆ ಎಲ್ಲಾ ಮಾತುಗಳನ್ನು ಮರೆಯುತ್ತಾರೆ

Minister K.H. Muniyappa: ಸಿಎಂ ಮತ್ತು ಡಿಸಿಎಂ ಇಬ್ಬರೂ ಒಂದಾಗಿದ್ದಾರೆ : ಬದಲಾವಣೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ : ಸಚಿವ ಕೆ.ಹೆಚ್.ಮುನಿಯಪ್ಪ.

ಬದಲಾವಣೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಬ್ಬರೂ ಒಂದಾಗಿದ್ದು ಮುಖ್ಯ ಮಂತ್ರಿ ಬದಲಾವಣೆ ವಿಚಾರದ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಇದು ಮುಗಿದ ಅಧ್ಯಾಯ. ಇದನ್ನು ಪಕ್ಷದ ವರಿಷ್ಟರು ತೀರ್ಮಾನ ಮಾಡುತ್ತಾರೆ. ನಾನು ಇಲ್ಲಿಗೆ ಬಂದಿರುವುದು ಕರ್ನಾಟಕ ಮಾದಾರ ಮಹಾಸಭಾ ಕಾರ್ಯಕ್ರಮದ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದೇನೆ. ಇದು ರಾಜಕೀಯದ ಕಾರ್ಯಕ್ರಮವಲ್ಲ ಸಮುದಾಯದ ಕಾರ್ಯಕ್ರಮ

Loading...