ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Narendra Modi Udupi visit: ಜನಸಂಘ, ಪುರಂದರ, ಕನಕದಾಸರ ನೆನೆದ ಮೋದಿ, ನವ ಸಂಕಲ್ಪಗಳ ಪಾಲನೆಗೆ ಕರೆ

ಜನಸಂಘ, ಪುರಂದರ, ಕನಕದಾಸರ ನೆನೆದ ಮೋದಿ, ನವ ಸಂಕಲ್ಪ ಪಾಲನೆಗೆ ಕರೆ

Narendra Modi Udupi visit: ಕನ್ನಡದಲ್ಲೇ ಭಾಷಣ ಆರಂಭಿಸಿದ ಪಿಎಂ ನರೇಂದ್ರ ಮೋದಿ, ʼಇಂದು ನನಗೆ ಉಡುಪಿ ಶ್ರೀಕೃಷ್ಣ ಮತ್ತು ಮಧ್ವಾಚಾರ್ಯರ ಆಶೀರ್ವಾದ ಸಿಕ್ಕಿದೆ. ಉಡುಪಿ ಮಠದಲ್ಲಿ ಲಕ್ಷ ಕಂಠ ಗೀತಾ ಪಠಣ ನಡೆದಿದೆ. ಇದರಲ್ಲಿ ಭಾಗಿಯಾಗಿದ್ದು ನನ್ನ ಪರಮ ಸೌಭಾಗ್ಯ. ಉಡುಪಿಗೆ ಬರುವುದೆಂದರೆ ನನಗೆ ಬಹಳ ಸಂತಸದ ವಿಚಾರʼ ಎಂದು ನುಡಿದರು. ಪುತ್ತಿಗೆ ಶ್ರೀಗಳಿಂದ ʼಭಾರತ ಭಾಗ್ಯ ವಿಧಾತʼ ಬಿರುದನ್ನು ಅವರು ಸ್ವೀಕರಿಸಿದರು.

Narendra Modi Udupi Visit: ಉಡುಪಿಯಲ್ಲಿ ಪ್ರಧಾನಿ ಮೋದಿಗೆ ʼಭಾರತ ಭಾಗ್ಯ ವಿಧಾತʼ ಬಿರುದು ಸಲ್ಲಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿಗೆ ʼಭಾರತ ಭಾಗ್ಯ ವಿಧಾತʼ ಬಿರುದು ಸಲ್ಲಿಕೆ

Narendra Modi Udupi Visit: ಮೋದಿಯವರ ಕೈಗೆ ಕಂಕಣವನ್ನು ಕಟ್ಟಿ, ಶ್ರೀಕೃಷ್ಣ ದೇವರ ಚಿತ್ರವನ್ನು ನೀಡಿ ರಾಷ್ಟ್ರ ರಕ್ಷಣೆಯ ದೀಕ್ಷೆಯನ್ನು ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ನೀಡಿದರು. ವಿಶಿಷ್ಟವಾಗಿ ಅಲಂಕೃತವಾದ ನವಿಲುಗರಿ ಇರುವ ಕಿರೀಟವನ್ನು ಮೋದಿಯವರಿಗೆ ಶ್ರೀಪಾದರು ಧರಿಸಿ, ಬಿರುದನ್ನು ನೀಡಿದರು. ʼನರೇಂದ್ರ ಎಂದರೆ ಅರ್ಜುನ ಎಂದರ್ಥ. ಶ್ರೀ ಕೃಷ್ಣನ ಬಳಿ ಪ್ರಧಾನಿ ಮೋದಿ ಅರ್ಜುನನಾಗಿ ಬಂದಿದ್ದಾರೆʼ ಎಂದು ಶ್ರೀಗಳು ಶ್ಲಾಘಿಸಿದರು.

Shidlaghatta News: ಅಮೃತ ಸರೋವರ ದಂಡೆಯ ಮೇಲೆ ಸಂವಿಧಾನ ದಿನಾಚರಣೆ

ಅಮೃತ ಸರೋವರ ದಂಡೆಯ ಮೇಲೆ ಸಂವಿಧಾನ ದಿನಾಚರಣೆ

ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲು ಅವರು ಸಂವಿಧಾನದ ಕರಡು ರಚನಾ ಸಮಿತಿಯ ಪ್ರಮುಖ ಸದಸ್ಯರಾಗಿದ್ದರು, ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪಾತ್ರ ಮಹತ್ವ ದ್ದಾಗಿದೆ. ಭಾರತ ಸಂವಿಧಾನದ ಆಚಾರ ವಿಚಾರಗಳು ಮತ್ತು ರಾಜ ತತ್ವಗಳನ್ನು ಅನುಸರಿಸುವ ಜೊತೆಗೆ ಪ್ರತಿಯೊಬ್ಬರಿಗೂ ಸಮಾನ ಶಿಕ್ಷಣ, ಹಕ್ಕುಗಳ ಬಗ್ಗೆ ಎಲ್ಲರಿಗೂ ಜಾಗೃತಿ ಮೂಡಿಸಬೇಕು

Gudibande News: ಕಾಯಕ ಗ್ರಾಮ ಯೋಜನೆಯಡಿ ಎಲ್ಲೋಡು ಗ್ರಾ.ಪಂ. ದತ್ತು : ಸಿಇಒ ನವೀನ್ ಭಟ್

ಕಾಯಕ ಗ್ರಾಮ ಯೋಜನೆಯಡಿ ಎಲ್ಲೋಡು ಗ್ರಾ.ಪಂ. ದತ್ತು

ಗ್ರಾಮ ಪಂಚಾಯಿತಿ ಕಾರ್ಯ ಕ್ಷಮತೆ ಹೆಚ್ಚಿಸಲು ಮತ್ತು ಗ್ರಾಮಗಳ ಜನರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ಕಾಯಕ ಗ್ರಾಮ ಯೋಜನೆಯನ್ನು ಜಾರಿಗೊಳಿಸಿದೆ. ಹಿಂದುಳಿದ ಗ್ರಾಮ ಪಂಚಾಯತ್ ಗಳಿಗೆ ಚುರುಕು ಮುಟ್ಟಿಸಲು ಮತ್ತು ಅವುಗಳ ಅಭಿವೃದ್ಧಿಗೆ ವೇಗ ನೀಡಲು ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಯೋಜನೆಯನ್ನು ರೂಪಿಸಿದೆ. ಕಾಯಕದಿಂದಲೇ ಸಕಲವನ್ನೂ ಸಾಧಿಸಬಹುದು.

Gudibande News: ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹ ಅತ್ಯಗತ್ಯ: ಬಾಲಾಜಿ

ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹ ಅತ್ಯಗತ್ಯ: ಬಾಲಾಜಿ

ಪೋಷಕರು ಹಾಗೂ ಶಿಕ್ಷಕರು ಇಂತಹ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳನ್ನು ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು. ಅವರ ಅಭಿರುಚಿಯ ತಕ್ಕಂತೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕೆಂದು. ಮಕ್ಕಳೂ ಸಹ ಸೋಲು ಗೆಲುವು ಎಂಬ ಮನೋಭಾವ ಬಿಟ್ಟು ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು, ತಮ್ಮಲ್ಲಿರುವ ಪ್ರತಿಭೆಯನ್ನು ಹೊರ ತರಬೇಕು

Narendra Modi Udupi Visit: ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್‌ ಶೋ

ಉಡುಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್‌ ಶೋ

Narendra Modi Udupi Visit: ಉಡುಪಿಯಲ್ಲಿ ಸಾವಿರಾರು ಜನ ರಸ್ತೆಯ ಇಕ್ಕೆಲಗಳನ್ನೂ ನೆರೆದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಣ್ತುಂಬಿಕೊಂಡರು. ಅಭಿಮಾನಿಗಳು ಅವರ ಮೇಲೆ ಹೂಮಳೆಗರೆದರು. ಕರಾವಳಿಯ ಕಲೆಯಾದ ಯಕ್ಷಗಾನ ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕುಂಭಮೇಳದೊಂದಿಗೆ ಅವರನ್ನು ಜನತೆ ಸ್ವಾಗತಿಸಿದರು.

ದಿತ್ವಾ ಚಂಡಮಾರುತ: ನವೆಂಬರ್ 30ರಿಂದ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಶೀಘ್ರದಲ್ಲೇ ಕರ್ನಾಟಕಕ್ಕೆ ಅಪ್ಪಳಿಸಲಿದೆ ದಿತ್ವಾ ಚಂಡಮಾರುತ

ರಾಜ್ಯಕ್ಕೆ ದಿತ್ವಾ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಿತ್ವಾ ಚಂಡಮಾರುತದಿಂದಾಗಿ ರಾಜ್ಯದಲ್ಲಿ ನವೆಂಬರ್ 30ರಿಂದ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಬೀಸುತ್ತಿರುವ ಈ ಚಂಡಮಾರುತ ತಮಿಳುನಾಡು, ತೆಲಂಗಾಣ, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಪರಿಣಾಮ ಬೀರಲಿದೆ.

ಪರಿಸರ ಜಾಗೃತಿಗೆ ಬದ್ಧತೆ: ಸುಭಾನ್ ಸೇವೆಗೆ ಜಿಲ್ಲಾ ಆಟೋ ಯೂನಿಯನ್ ವತಿಯಿಂದ ಗೌರವ

ಸುಭಾನ್ ಸೇವೆಗೆ ಜಿಲ್ಲಾ ಆಟೋ ಯೂನಿಯನ್ ವತಿಯಿಂದ ಗೌರವ

ಇನ್ನೂ ಸುಭಾನ್ ಅವರು ಕಳೆದ ಹಲವಾರು ವರ್ಷಗಳಿಂದ ಪರಿಸರ ಜಾಗೃತಿ ಅಭಿಯಾನ,ಗಿಡ–ಮರ ನೆಡುವ ಕಾರ್ಯ ಹಾಗೂ ಸಾಮಾಜಿಕ ಸೇವೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದು ಇದರ ಮೂಲಕ ಸ್ಥಳೀಯವಾಗಿ ವಿಶಿಷ್ಟ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರು ನಗರದಲ್ಲಿ ನಡೆದ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದಲ್ಲಿ  ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಂದ ಸುಭಾನ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು

PM Modi Udupi Visit Live: ವೋಕಲ್‌ ಫಾರ್‌ ಲೋಕಲ್‌ ಮಂತ್ರ ಪಠಿಸಿದ ಪ್ರಧಾನಿ ಮೋದಿ

PM Modi Live: ಕೃಷ್ಣನೂರಿನಲ್ಲಿ ನಮೋ ನಮಃ!

ಪ್ರಧಾನಿ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠ ಭೇಟಿ ಲೈವ್​: ಪ್ರಧಾನಿ ನರೇಂದ್ರ ಮೋದಿ ಇಂದು ಕೃಷ್ಣ ನಗರಿ ಉಡುಪಿಗೆ ಆಗಮಿಸಿದ್ದು, ಸುಮಾರು ಎರಡು ಕಿ.ಮೀ ರೋಡ್‌ ಶೋ ಬಳಿಕ ಶ್ರೀ ಕೃಷ್ಣ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಅಲ್ಲಿ ಸ್ವರ್ಣ ಖಚಿತ ಕನಕನ ಕಿಂಡಿಯನ್ನು ಉದ್ಘಾಟಿಸಿದ್ದಾರೆ. ಬಳಿಕ ಆ ಕನಕನ ಕಿಂಡಿ ಮೂಲಕ ದೇವರ ದರ್ಶನ ಪಡೆದಿದ್ದಾರೆ. ನಂತರ ಇದೀಗ ವೇದಿಕೆ ಕಾರ್ಯಕ್ರಮದಲ್ಲಿ ಭಗವದ್ಗೀತೆಯ ಶ್ಲೋಕಗಳನ್ನು ಪಠಿಸಿದ್ದಾರೆ.

Gold Robbery Case: ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ ಇಬ್ಬರು ಪಿಎಸ್‌ಐಗಳು ಸೇವೆಯಿಂದ ವಜಾ

ಚಿನ್ನದ ವ್ಯಾಪಾರಿಯ ದರೋಡೆ ಮಾಡಿದ ಇಬ್ಬರು ಪಿಎಸ್‌ಐಗಳು ಸೇವೆಯಿಂದ ವಜಾ

Davanagere Robbery Case: A1 ಆರೋಪಿ ಪಿಎಸ್ಐ ಹಾವೇರಿಯ ಹಂಸಭಾವಿ ಪೊಲೀಸ್ ಠಾಣೆಯ ಪ್ರೋಬೇಷನರಿ ಪಿಎಸ್ ಐ ಮಾಳಪ್ಪ ಯಲ್ಲಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ಶಿವಮೊಗ್ಗದ ಸಾಗರ ಟೌನ್ ಪೊಲೀಸ್ ಠಾಣೆಗೆ ಅದೇಶದಲ್ಲಿದ್ದ ಪಿಎಸ್ಐ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

DK Shivakumar: ದಿಡೀರ್‌ ಮುಂಬಯಿಯಲ್ಲಿ ಡಿಕೆ ಶಿವಕುಮಾರ್‌; ದಿಲ್ಲಿ ಭೇಟಿ ಇಲ್ಲ

ದಿಡೀರ್‌ ಮುಂಬಯಿಯಲ್ಲಿ ಡಿಕೆ ಶಿವಕುಮಾರ್‌; ದಿಲ್ಲಿ ಭೇಟಿ ಇಲ್ಲ

ದೆಹಲಿ ಪ್ರವಾಸ ಇಲ್ಲ ಎಂದರೂ, ಡಿಕೆ ಶಿವಕುಮಾರ್‌ (DK Shivakumar) ಗುರುವಾರ ಸಂಜೆ ಮಹಾರಾಷ್ಟ್ರದ ಮುಂಬೈಗೆ ಪ್ರಯಾಣ ಬೆಳೆಸಿದರು. ಇದೊಂದು ಖಾಸಗಿ ಕಾರ್ಯಕ್ರಮವಾಗಿದ್ದು, ಅದರಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಸಂಜೆ ಹೋಗಿ ರಾತ್ರಿಯೇ ವಾಪಸ್ ಬೆಂಗಳೂರಿಗೆ ಮರಳಲಿದ್ದೇನೆ ಎಂದು ಮಾಹಿತಿ ನೀಡಿದರು. ಈ ದಿಢೀರ್ ಮುಂಬೈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

PM Narendra Modi: ಇಂದು ಗೋಕರ್ಣ ಪರ್ತಗಾಳಿ ಮಠಕ್ಕೂ ನಮೋ ಆಗಮನ, 77 ಅಡಿ ಎತ್ತರದ ಶ್ರೀರಾಮನ ಮೂರ್ತಿ ಅನಾವರಣ

ಇಂದು ಗೋಕರ್ಣ ಪರ್ತಗಾಳಿ ಮಠಕ್ಕೂ ನಮೋ, ಶ್ರೀರಾಮ ಮೂರ್ತಿ ಅನಾವರಣ

PM Narendra Modi: 77 ಅಡಿಯ ಶ್ರೀರಾಮನ ಬೃಹತ್ ವಿಗ್ರಹವನ್ನು ಇಲ್ಲಿ ಸ್ಥಾಪಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ಅನಾವರಣ ಮಾಡಲಿದ್ದಾರೆ. ಗೋವಾ ರಾಜ್ಯದ ಕಾಣಕೋಣದಲ್ಲಿ‌ರುವ ಪುಣ್ಯ ಕ್ಷೇತ್ರ, ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಅತ್ಯಂತ ಪೂಜ್ಯವಾದ (Gokarn Parthagali Math) ಈ ಮಠಕ್ಕೆ 550 ವರ್ಷಗಳ ಇತಿಹಾಸವಿದೆ.

PM Narendra Modi: ಇಂದು ಉಡುಪಿಗೆ ಮೋದಿ 40 ನಿಮಿಷ ಮೊದಲೇ ಆಗಮನ, ಅರ್ಧ ಗಂಟೆ ರೋಡ್‌ ಶೋ

ಇಂದು ಉಡುಪಿಗೆ ಮೋದಿ 40 ನಿಮಿಷ ಮೊದಲೇ ಆಗಮನ, ಅರ್ಧ ಗಂಟೆ ರೋಡ್‌ ಶೋ

PM Modi in Udupi: ಬೆಳಗ್ಗೆ 11 ಗಂಟೆಯಿಂದ 11.30ರವರೆಗೆ ರೋಡ್ ಶೋನಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಬನ್ನಂಜೆಯಿಂದ ಕಲ್ಸಂಕ ತನಕ ಕಾರಿನಲ್ಲಿ ಜನರತ್ತ ಕೈ ಬೀಸುತ್ತಾ ಮೋದಿ ರೋಡ್ ಶೋ ನಡೆಸಲಿದ್ದಾರೆ. ಆ ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ, ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಉಡುಪಿಯಿಂದ ಪ್ರಧಾನಿ ಮೋದಿ ತೆರಳಲಿದ್ದಾರೆ.

Karnataka Weather: ಕಡಿಮೆಯಾಯ್ತು ಹಿಂಗಾರು ಮಳೆ ಅಬ್ಬರ; ಹೆಚ್ಚಾಯ್ತು ಉಷ್ಣಾಂಶ

ರಾಜ್ಯಾದ್ಯಂತ ಕಡಿಮೆಯಾಯ್ತು ಹಿಂಗಾರು ಮಳೆ ಅಬ್ಬರ

ಕರ್ನಾಟಕ ಹವಾಮಾನ ವರದಿ: ಶುಕ್ರವಾರ ರಾಜ್ಯಾದ್ಯಂತ ಮಳೆ ಬರುವ ಸಾಧ್ಯತೆ ತೀರಾ ಕಡಿಮೆ. ಇನ್ನು ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯ ಹಜ್ ಸಮಿತಿ ನಿಯಮಾವಳಿ-2025 ಜಾರಿಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಹಜ್ ಸಮಿತಿ ನಿಯಮಾವಳಿ-2025 ಜಾರಿಗೆ ಸಚಿವ ಸಂಪುಟ ಅನುಮೋದನೆ

Cabinet Meeting: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ (ನವೆಂಬರ್‌ 27) ಸಚಿವ ಸಂಪುಟ ಸಭೆ ನಡೆಯಿತು. ಕರ್ನಾಟಕ ರಾಜ್ಯ ಹಜ್ ಸಮಿತಿ ನಿಯಮಾವಳಿ 2025 ಅನ್ನು ಜಾರಿಗೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ನಾಳೆ ಉಡುಪಿಗೆ ನರೇಂದ್ರ ಮೋದಿ ಭೇಟಿ; ಕನ್ನಡದಲ್ಲೇ ಪೋಸ್ಟ್‌ ಹಂಚಿಕೊಂಡ ಪ್ರಧಾನಿ

ನಾಳೆ ಉಡುಪಿಗೆ ನರೇಂದ್ರ ಮೋದಿ ಭೇಟಿ; ಕನ್ನಡದಲ್ಲೇ ಸಂತಸ ಹಂಚಿಕೊಂಡ ಪ್ರಧಾನಿ

Laksha Kantha Gita Parayana: ಶುಕ್ರವಾರ (ನವೆಂಬರ್‌ 28) ಉಡುಪಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಮೋದಿ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ದೇವರ ದರ್ಶನ ಹಾಗೂ ರೋಡ್‌ ಶೋ ಮಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಕನ್ನಡದಲ್ಲೇ ಪೋಸ್ಟ್‌ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

K Ratnaprabha: ಉಬುಂಟು ಸಂಸ್ಥಾಪಕಿ ಕೆ. ರತ್ನಪ್ರಭಾಗೆ ಜಾಗತಿಕ ನಾಯಕತ್ವ ಗೌರವ

ಉಬುಂಟು ಸಂಸ್ಥಾಪಕಿ ರತ್ನಪ್ರಭಾಗೆ ಜಾಗತಿಕ ನಾಯಕತ್ವ ಗೌರವ

ಉಬುಂಟು ಒಕ್ಕೂಟದ ಅಧ್ಯಕ್ಷೆ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರಿಗೆ ಇತ್ತೀಚೆಗೆ ಮಲೇಷ್ಯಾದಲ್ಲಿ ನಡೆದ ಯುಎನ್ ಎಕನಾಮಿಕ್ ಶೃಂಗಸಭೆಯಲ್ಲಿ ಬ್ರಿಕ್ಸ್-ಆಸಿಯಾನ್ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪ್ರತಿಷ್ಠಿತ 'ಟುನ್ ಡಾ. ಮಹಾತಿರ್ ಮೊಹಮ್ಮದ್ ಗುಡ್ ಗ್ಲೋಬಲ್ ಎಕ್ಸೆಂಪ್ಲರಿ ಲೀಡರ್‌ಶಿಪ್ ಅವಾರ್ಡ್' ನೀಡಿ ಗೌರವಿಸಲಾಗಿದೆ.

ಕೊಲ್ಲೂರಿನಲ್ಲಿ ಧಾರ್ಮಿಕ ಪೂಜಾ ಪದ್ಧತಿಯನ್ನು ಸ್ಥಾಪಿಸಿದವರು ರಾಮಚಂದ್ರಾಪುರ ಮಠದ 33ನೇ ಜಗದ್ಗುರುಗಳು: ರಾಮಚಂದ್ರಾಪುರ ಶ್ರೀ

ಶ್ರೀ ರಾಮಚಂದ್ರಾಪುರ ಮಠದ 33ನೇ ಪೀಠಾಧಿಪತಿಗಳ ಸಂಸ್ಮರಣೆ ಕಾರ್ಯಕ್ರಮ

Sri Raghaveshwara Bharathi Swamiji: ಬೆಂಗಳೂರಿನ ಗಿರಿನಗರದ ಶಾಖಾ ಮಠದಲ್ಲಿ ನಡೆದ 33ನೇ ಪೀಠಾಧಿಪತಿಗಳ ಸಂಸ್ಮರಣ ಕಾರ್ಯಕ್ರಮದಲ್ಲಿ ಶ್ರೀರಾಮಚಂದ್ರಾಪುರ ಮಠದ 36ನೇ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

CM Siddaramaiah: ʼಶಾಲೆಯ ಅಂಗಳದಲ್ಲಿ ತಾರಾಲಯʼ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ʼಶಾಲೆಯ ಅಂಗಳದಲ್ಲಿ ತಾರಾಲಯʼ ಯೋಜನೆಗೆ ಸಿಎಂ ಚಾಲನೆ

Digital Mobile Planetarium Project: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಯೋಜನೆ ಈಗಾಗಲೇ 17 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಲುಪಿದ್ದು, ಈ ಸಾಧನೆ ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಡಿ.ಕೆ. ಶಿವಕುಮಾರ್‌ಗೆ ಸಿದ್ದರಾಮಯ್ಯ ʼಪವರ್‌ʼ ಫುಲ್‌ ಡಿಚ್ಚಿ?; ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದೇನು?

ಡಿ.ಕೆ. ಶಿವಕುಮಾರ್‌ಗೆ ತಿರುಗೇಟು ಕೊಟ್ರಾ ಸಿದ್ದರಾಮಯ್ಯ?

Karnataka CM Row: ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್​ ನಡುವಿನ ಕುರ್ಚಿ ಕಾಳಗ ತಾರಕಕ್ಕೇರಿದೆ. ಸಿಎಂ ಪಟ್ಟಕ್ಕಾಗಿ ಇಬ್ಬರು ನಾಯಕರ ಬಣ ಪೈಪೋಟಿ ನಡೆಸುತ್ತಿದೆ. ಈ ಮಧ್ಯೆ ಡಿಕೆಶಿ ಮತ್ತು ಸಿದ್ದರಾಮಯ್ಯ ಎಕ್ಸ್‌ ಪೋಸ್ಟ್‌ ಮೂಲಕ ಪರಸ್ಪರ ಟೀಕಿಸುತ್ತಿದ್ದಾರಾ ಎನ್ನುವ ಅನುಮಾನ ಮೂಡ ತೊಡಗಿದೆ. ಆ ಕುರಿತಾದ ವಿವರ ಇಲ್ಲಿದೆ.

ಭಾರತ ಎದುರಿಸುತ್ತಿರುವ 3 ಸಾವಿರಕ್ಕೂ ಹೆಚ್ಚು ಸೈಬರ್ ದಾಳಿಗಳ ಎದುರಿಸಲು ಸೈಬರ್ ಭದ್ರತೆ ಮತ್ತು ಡೇಟಾ-ಗೌಪ್ಯತೆ ನಾಯಕತ್ವದ ನಡುವಿನ ಆಳವಾದ ಸಹಯೋಗ

ಸೈಬರ್ ಭದ್ರತೆ ಮತ್ತು ಡೇಟಾ-ಗೌಪ್ಯತೆ ನಾಯಕತ್ವದ ನಡುವಿನ ಆಳವಾದ ಸಹಯೋಗ

ಏಪ್ರಿಲ್ 23-24, 2026 ರಂದು ಮುಂಬೈನ ಬಾಂಬೆ ಪ್ರದರ್ಶನ ಕೇಂದ್ರದಲ್ಲಿ ನಿಗದಿಯಾಗಿರುವ ಸೈಬರ್ಸೆಕ್ ಇಂಡಿಯಾ ಎಕ್ಸ್ಪೋ 2026, ಪ್ರಮುಖ ಸರ್ಕಾರಿ ಸಂಸ್ಥೆಗಳು, ರಕ್ಷಣಾ ಕಾರ್ಯಕ್ರಮಗಳು, ಜಾಗತಿಕ ತಂತ್ರಜ್ಞಾನ ದೈತ್ಯರು, ಸಲಹಾ ಶಕ್ತಿ ಕೇಂದ್ರಗಳು, ನೀತಿ ಚಿಂತಕರ ಟ್ಯಾಂಕ್ಗಳು ಮತ್ತು ವಲಯಗಳಾದ್ಯಂತದ ಪ್ರಮುಖ ಉದ್ಯಮಗಳಿಂದ ಉನ್ನತ ಮಟ್ಟದ ಭಾಗವಹಿಸುವವರನ್ನು ಆಕರ್ಷಿಸುತ್ತದೆ.

MB Patil: ಪ್ರಾಕ್ಸ್ಏರ್ ಇಂಡಿಯಾದಿಂದ ರಾಜ್ಯದಲ್ಲಿ 210 ಕೋಟಿ ರೂ. ಹೂಡಿಕೆ: ಎಂ.ಬಿ. ಪಾಟೀಲ್‌

ಪ್ರಾಕ್ಸ್ಏರ್ ಇಂಡಿಯಾದಿಂದ ರಾಜ್ಯದಲ್ಲಿ 210 ಕೋಟಿ ರೂ. ಹೂಡಿಕೆ: ಎಂಬಿಪಿ

Invest Karnataka: ರಾಜ್ಯದಲ್ಲಿ ಹೂಡಿಕೆ ಆಕರ್ಷಣೆಗಾಗಿ ಅಧಿಕೃತ ನಿಯೋಗದೊಂದಿಗೆ ಲಂಡನ್ ಪ್ರವಾಸ ಕೈಗೊಂಡಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌, ಪ್ರಾಕ್ಸ್ಏರ್ ಇಂಡಿಯಾ ಈ ಹಣಕಾಸು ವರ್ಷದಿಂದಲೇ ತನ್ನ ಈ ಹೂಡಿಕೆ ಆರಂಭಿಸಲಿದೆ. ಸರ್ಕಾರ ಕೂಡ ಭೂಮಿ, ಏಕಗವಾಕ್ಷಿ ಅನುಮೋದನೆಗಳು ಮತ್ತು ಮೂಲಸೌಕರ್ಯಗಳನ್ನು ತ್ವರಿತವಾಗಿ ಪೂರೈಸಲಿದೆ ಎಂದು ತಿಳಿಸಿದ್ದಾರೆ.

ಹೈಕಮಾಂಡ್ ಕರೆದರೆ ಸಿದ್ದರಾಮಯ್ಯ ಜತೆ ದೆಹಲಿಗೆ ಹೋಗುತ್ತೇನೆ: ಡಿ.ಕೆ. ಶಿವಕುಮಾರ್

ಹೈಕಮಾಂಡ್ ಕರೆದರೆ ಸಿದ್ದರಾಮಯ್ಯ ಜತೆ ದೆಹಲಿಗೆ ಹೋಗುತ್ತೇನೆ: ಡಿಕೆಶಿ

DK Shivakumar: ʼʼಹೈಕಮಾಂಡ್ ನಾಯಕರು ದೆಹಲಿಗೆ ಕರೆದರೆ ಹೋಗುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼʼಹೈಕಮಾಂಡ್ ನನ್ನನ್ನು ಹಾಗೂ ಮುಖ್ಯಮಂತ್ರಿಯನ್ನು ಕರೆದರೆ ನಾವು ಮಾತನಾಡಿಕೊಂಡು ದೆಹಲಿಗೆ ಹೋಗುತ್ತೇವೆ” ಎಂದರು.

ಕೊಟ್ಟ ಮಾತು ಉಳಿಸಿಕೊಳ್ಳದೆ ಇರುವುದು ಮಹಾ ದ್ರೋಹ: ಡಿ.ಕೆ. ಶಿವಕುಮಾರ್‌ ಹೆಸರು ಉಲ್ಲೇಖಿಸಿ ಜೆಡಿಎಸ್‌ ಹೀಗೆ ಹೇಳಿದ್ದೇಕೆ?

ಡಿ.ಕೆ. ಶಿವಕುಮಾರ್‌ ವಿರುದ್ಧ ಜೆಡಿಎಸ್‌ ವ್ಯಂಗ್ಯ

JDS: ಡಿ.ಕೆ. ಶಿವಕುಮಾರ್‌ ಅವರನ್ನು ಅಣಕಿಸಿ ಜೆಡಿಎಸ್‌ ಎಕ್ಸ್‌ನಲ್ಲಿ ಪೋಸ್ಟ್‌ ಶೇರ್‌ ಮಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎನ್ನುವ ಅವರ ಮಾತನ್ನೇ ಉಲ್ಲೇಖಿಸಿ ಅವರನ್ನು ವ್ಯಂಗ್ಯವಾಡಿದೆ. ಕೊಟ್ಟ ಮಾತು ಉಳಿಸಿಕೊಳ್ಳದೆ ಇರುವುದು ಮಾಹಾ ದ್ರೋಹ! ಅಲ್ಲವೇ ಡಿ.ಕೆ. ಶಿವಕುಮಾರ್‌? ಎಂದು ಪ್ರಶ್ನಿಸಿದೆ.

Loading...