ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Heart Attack Deaths: ಹೃದಯಾಘಾತದಿಂದ ಹೆಚ್ಚಾದ ಸಾವು; ನಮ್ಮ ಲಸಿಕೆ ಸೇಫ್ ಎಂದ ಕೋವಿಶೀಲ್ಡ್ ತಯಾರಕರು

ಹೃದಯಾಘಾತ ಹೆಚ್ಚಳಕ್ಕೆ ಕೊರೊನಾ ಲಸಿಕೆ ಕಾರಣವೇ? ಇಲ್ಲಿದೆ ಉತ್ತರ

ಇತ್ತೀಚೆಗೆ ಹೃದಯಾಘಾತದಿಂದ ಸಾವುಗಳು ಹೆಚ್ಚಾಗುತ್ತಿದ್ದು, ಕೋವಿಡ್ ಲಸಿಕೆ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಭಾರತದಲ್ಲಿ ಕೋವಿಡ್-19 ವೇಳೆ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸಿ ವಿತರಿಸಿದ ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಹೃದಯಾಘಾತದಿಂದ ಉಂಟಾಗುವ ಮರಣಗಳಿಗೂ, ನಮ್ಮ ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ.

Self Harming: ಪ್ರೀತಿಸುತ್ತಿದ್ದಾಕೆಯೊಂದಿಗೆ ಮದುವೆಯಾದ ದಿನವೇ ಆತ್ಮಹತ್ಯೆಗೆ ಶರಣಾದ ನವವಿವಾಹಿತ; ಈ ದುರಂತ ಸಾವಿಗೆ ಕಾರಣವಾಗಿದ್ದೇನು?

ಪ್ರೀತಿಸುತ್ತಿದ್ದಾಕೆಯೊಂದಿಗೆ ಮದುವೆಯಾದ ದಿನವೇ ಆತ್ಮಹತ್ಯೆಗೆ ಶರಣಾದ ಯುವಕ

Kolar News: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಮದುವೆಯಾದ ಯುವಕ ಅದೇ ದಿನ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದಲ್ಲಿ ನಡೆದಿದೆ. ಮದುವೆಯಾಗಲು ಸ್ವಲ್ಪ ದಿನಗಳ ಕಾಲಾವಕಾಶ ಕೋರಿದ್ದ ಆತನ್ನು ಬಲವಂತವಾಗಿ ಮದುವೆ ಮಾಡಿಸಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.

PM Narendra Modi: ಪ್ರಧಾನಿ ಮೋದಿಯಿಂದ ಘಾನಾ ಅಧ್ಯಕ್ಷರಿಗೆ ಬೀದರ್‌ನ ಬಿದ್ರಿವೇರ್‌ ಹೂದಾನಿ ಉಡುಗೊರೆ

ಪ್ರಧಾನಿ ಮೋದಿಯಿಂದ ಘಾನಾ ಅಧ್ಯಕ್ಷರಿಗೆ ಬಿದ್ರಿವೇರ್‌ ಹೂದಾನಿ ಉಡುಗೊರೆ

PM Narendra Modi: ವಿದೇಶ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಘಾನಾ ಅಧ್ಯಕ್ಷರಿಗೆ ಬೀದರ್‌ನಲ್ಲಿ ಸಿದ್ಧವಾದ ʼಬಿದ್ರಿವೇರ್‌ ಹೂದಾನಿʼಯನ್ನೇ ಉಡುಗೊರೆಯಾಗಿ ನೀಡಿದ್ದು ವಿಶೇಷ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಬೀದರ್‌ನಿಂದ ತರಿಸಿಕೊಂಡಿದ್ದ ಈ 'ಬಿದ್ರಿವೇರ್ ಹೂದಾನಿ' ಕಪ್ಪು ವರ್ಣರಂಜಿತವಾಗಿದ್ದು, ಬೆಳ್ಳಿಯ ಕುಸುರಿ ಕೂಡ ಹೊಂದಿದ್ದು, ಭಾರತದ ಪ್ರಸಿದ್ಧ ಲೋಹದ ಕರಕುಶಲತೆಯನ್ನು ಪ್ರದರ್ಶಿಸುತ್ತದೆ.

S\O Muthanna Movie: ಪ್ರಣಂ ದೇವರಾಜ್ ಈಗ ಮುತ್ತಣ್ಣನ ಮಗ; ʼS\O ಮುತ್ತಣ್ಣʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

ಪ್ರಣಂ ದೇವರಾಜ್ ನಟನೆಯ ʼS\O ಮುತ್ತಣ್ಣʼ ಚಿತ್ರ ಆ. 22ಕ್ಕೆ ರಿಲೀಸ್‌

Pranam Devaraj: ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ ʼS\O ಮುತ್ತಣ್ಣʼ ಚಿತ್ರ ಆಗಸ್ಟ್ 22ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅಪ್ಪ-ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ತಂದೆ - ಮಗನಾಗಿ ಅಭಿನಯಿಸಿದ್ದಾರೆ. ನಾಯಕಿಯಾಗಿ ʼದಿಯಾʼ ಖ್ಯಾತಿಯ ಖುಷಿ ರವಿ ನಟಿಸಿದ್ದಾರೆ.

People’s Education Society: ಬರೋಬ್ಬರಿ 110 ಕೋಟಿ ರೂ.ಗೆ ಬೆಂಗಳೂರಿನಲ್ಲಿ 2 ಮನೆ ಖರೀದಿಸಿದ ಪಿಇಎಸ್‌

110 ಕೋಟಿ ರೂ.ಗೆ ಬೆಂಗಳೂರಿನಲ್ಲಿ 2 ಮನೆ ಖರೀದಿಸಿದ ಪಿಇಎಸ್‌

Bengaluru Real Estate: ಪ್ರತಿಷ್ಠಿತ ವಿದ್ಯಾಸಂಸ್ಥೆ ಪೀಪಲ್ಸ್‌ ಎಜ್ಯುಕೇಷನ್‌ ಸೊಸೈಟಿ ಬೆಂಗಳೂರಿನ ಸದಾಶಿವ ನಗರದಲ್ಲಿ ಬರೋಬ್ಬರಿ 110 ಕೋಟಿ ರೂ.ಗೆ 2 ಸ್ವತಂತ್ರ ಮನೆಗಳನ್ನು ಖರೀದಿಸಿದೆ. ಪಿಇಎಸ್‌ ವಿಶ್ವವಿದ್ಯಾಲಯವನ್ನು ನಡೆಸುತ್ತಿರುವ ಪೀಪಲ್ಸ್ ಎಜುಕೇಶನ್ ಸೊಸೈಟಿ ಸದಾಶಿವ ನಗರ ಪ್ರದೇಶದಲ್ಲಿ ಈ ಮನೆಗಳನ್ನು 2025ರ ಜ. 22 ಮತ್ತು ಏ. 1ರಂದು ಖರೀದಿಸಿದೆ.

Gubbi (Tumkur) News: ಗುಬ್ಬಿಯಲ್ಲಿ ಜು.7ರಂದು ಶ್ರೀ ಪಾಂಡುರಂಗಸ್ವಾಮಿ ದಿಂಡಿ ಉತ್ಸವ: ಭಾವಸಾರ ಕ್ಷತ್ರಿಯರಿಂದ ಅದ್ದೂರಿ ಮೆರವಣಿಗೆ

ಗುಬ್ಬಿಯಲ್ಲಿ ಜು.7ರಂದು ಶ್ರೀ ಪಾಂಡುರಂಗಸ್ವಾಮಿ ದಿಂಡಿ ಉತ್ಸವ

ಜು.6 ರ ಸಂಜೆ 5 ಗಂಟೆಗೆ ಶ್ರೀ ಜ್ಞಾನೇಶ್ವರಿ ಪಾರಾಯಣ ಮತ್ತು ಭಜನೆ ಕೀರ್ತನೆ ನಡೆದು ಮಹಾ ಮಂಗಳಾರತಿ ನಡೆಯಲಿದೆ. ಭಾವಸಾರ ಕ್ಷತ್ರಿಯ ಸಮಾಜದ ರಾಜ್ಯ ಘಟಕದ ಡಾ.ಸೂರ್ಯ ನಾರಾ ಯಣರಾವ್, ಗುರುಪ್ರಸಾದ್ ಪಿಸ್ಸೆ ಹಾಗೂ ಸತ್ಯನಾರಾಯಣ್ ಅವರಿಗೆ ಸನ್ಮಾನ ಸಮಾರಂಭ ಆಯೋಜಿಸ ಲಾಗಿದೆ

Temple Robbery: ಮೈಸೂರು ಚಾಮುಂಡೇಶ್ವರಿ ದೇವಾಲಯದಿಂದ ತಾಳಿ ಕಳವು; ಖದೀಮನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಮೈಸೂರು ಚಾಮುಂಡೇಶ್ವರಿ ದೇವಾಲಯದಿಂದ ತಾಳಿ ಕಳವು

Mysore News: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇತ್ತೀಚೆಗೆ ಕಳವು ಪ್ರಕರಣ ಹೆಚ್ಚಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿದೆ. ಗಾಯತ್ರಿಪುರಂನಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ವ್ಯಕ್ತಿಯೊಬ್ಬ ಗರ್ಭಗುಡಿಗೆ ನುಗ್ಗಿ ಮಾಂಗಲ್ಯ ಸರ ಕಳವು ಮಾಡಿದ್ದಾನೆ. ಈ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Chikkaballapur News: ನವ ಓದುವಿನಂತೆ ಸಿಂಗಾರಗೊಂಡ ನಂದಿ ಗ್ರಾಮ, ಬೆಟ್ಟದ ಮೇಲೆ ಅಧಿಕಾರಿಗಳ ಕಲರವ

ಭರ್ಜರಿ ಬಾಡೂಟಕ್ಕೆ ಮನಸೋತ ಸಚಿವ ಸಂಪುಟ ಸಭೆ

ಮುಖ್ಯಮಂತ್ರಿಯ ಭೇಟಿಯ ಹಿನ್ನೆಲೆಯಲ್ಲಿ ಪೋಲಿಸ್ ಬಿಗಿ ಬಂದೋಬಸ್ ಏರ್ಪಡಿಸಲಾಗಿತ್ತು. ದೇವಾ ಲಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಗೌರವ ವಂದನೆ  ಸಲ್ಲಿಸಿ ಸ್ವಾಗತ ಕೋರಲಾಯಿತು. ಭೋಗ ನಂದೀಶ್ವರ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿದ್ದು ಮುಖ್ಯಮಂತ್ರಿಗಳು ದೇವರ ದರ್ಶನ ಪಡೆದು ಪುನೀತರಾದರು.

‌Viral Video: ಕೆಫೆಯಲ್ಲಿ ಪುಂಡ ದಾಂಧಲೆ; ಸಿಬ್ಬಂದಿ ಮೇಲೆ ಡೆಡ್ಲಿ ಅಟ್ಯಾಕ್‌; ರಾಜ್ಯ ರಾಜಧಾನಿಯಲ್ಲೊಂದು ಬೆಚ್ಚಿ ಬೀಳಿಸೋ ಘಟನೆ!

ಕಾಫಿ ಶಾಪ್‌ನಲ್ಲಿ ಭೀಕರ ಹೊಡೆದಾಟ; ಶಾಕಿಂಗ್‌ ವಿಡಿಯೊ ವೈರಲ್‌!

ಕಾಫಿ ನೀಡಲು ನಿರಾಕರಿಸಿದ ಕಾರಣ ಇತ್ತೀಚೆಗೆ ಪುರುಷರ ಗುಂಪೊಂದು ʼನಮ್ಮ ಫಿಲ್ಟರ್ ಕಾಫಿʼ ಔಟ್ಲೆಟ್‍ನ ಸಿಬ್ಬಂದಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದೆ. ಕೆಫೆಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ದೃಶ್ಯ ಸೆರೆಯಾಗಿ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್(Viral Video) ಆಗಿದೆ.

D.K.Suresh: ಮುಂದೊಂದು ದಿನ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್

ಡಿ.ಕೆ.ಶಿವಕುಮಾರ್ ಸಿಎಂ ಆಗುವ ಭರವಸೆ ಇದೆ: ಡಿ.ಕೆ.ಸುರೇಶ್

D.K.Shivakumar: ʼʼಡಿ.ಕೆ.ಶಿವಕುಮಾರ್ ಮುಂದೊಂದು ದಿನ ಸಿಎಂ ಆಗುತ್ತಾರೆ ಎನ್ನುವ ಭರವಸೆ ಇದೆ. ಅವರು ಪಕ್ಷಕ್ಕೆ ಬಹಳ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಕೆಲವು ಭಾಗದ ಜನರು ವಿಶ್ವಾಸ ಇಟ್ಟು ಶಿವಕುಮಾರ್ ಅವರಿಗೆ ಒಂದು ಬಾರಿ ಅವಕಾಶ ಸಿಗಲಿ ಎಂದು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆ. ಆದರೆ ಈಗ ಸಿಎಂ ಸೀಟು ಖಾಲಿ ಇಲ್ಲ” ಎಂದು ಡಿ.ಕೆ.ಸುರೇಶ್‌ ತಿಳಿಸಿದರು.

DK Shivakumar: ಕಾಂಗ್ರೆಸ್ ಸರ್ಕಾರದಿಂದ ಆಶಾಕಿರಣ ಯೋಜನೆ ಮೂಲಕ ʼದೃಷ್ಟಿ ಗ್ಯಾರಂಟಿʼ: ಡಿ.ಕೆ.ಶಿವಕುಮಾರ್‌

ಕಾಂಗ್ರೆಸ್ ಸರ್ಕಾರದಿಂದ ಆಶಾಕಿರಣ ಯೋಜನೆ ಮೂಲಕ ʼದೃಷ್ಟಿ ಗ್ಯಾರಂಟಿʼ: ಡಿಕೆಶಿ

DK Shivakumar: ಹಿಂದಿನಿಂದಲೂ ದೇಶ ಹಾಗೂ ರಾಜ್ಯದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಗೆ ಬುನಾದಿ ಹಾಕಿದ್ದು ಕಾಂಗ್ರೆಸ್ ಸರ್ಕಾರ. ಕರ್ನಾಟಕದಲ್ಲಿ 70 ವೈದ್ಯಕೀಯ ಕಾಲೇಜುಗಳಿವೆ. ಅತ್ಯಂತ ಹೆಚ್ಚು ವೈದ್ಯರನ್ನು ತಯಾರು ಮಾಡುತ್ತಿರುವ ಪಟ್ಟಿಯಲ್ಲಿ ಕರ್ನಾಟಕವಿದ್ದು. ಇಲ್ಲಿ ಕಲಿತವರು ಹೊರ ದೇಶಗಳಿಗೆ ತೆರಳಿ ದೇಶಕ್ಕೆ ಉತ್ತಮ ಹೆಸರು ತರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Chikkaballapur News: ಮುಖ್ಯಮಂತ್ರಿಗಳಿಗೆ ಗಂಟೆಗಟ್ಟಲೆ ಕಾದ ಮಾಧ್ಯಮ ಮಿತ್ರರು

ಮುಖ್ಯಮಂತ್ರಿಗಳಿಗೆ ಗಂಟೆಗಟ್ಟಲೆ ಕಾದ ಮಾಧ್ಯಮ ಮಿತ್ರರು

ಎರಡು ಮೂರು ಬಾರಿ ಪೊಲೀಸ್ ಅಧಿಕಾರಿಗಳು ಬಂದು ಈಗ ಬರುತ್ತಾರೆ ಆಗ ಬರುತ್ತಾರೆ ಎಂದಿದ್ದೆ ಬಂತು. ಆದರೆ ಮುಖ್ಯಮಂತ್ರಿಗಳು ಬರಲೇ ಇಲ್ಲ. ನಂದಿ ಬೆಟ್ಟದ ಸಂಪುಟ ಸಭೆಯಲ್ಲಿ ಏನೆಲ್ಲ ಚರ್ಚೆಯಾಯಿತು ಎಂಬ ಸಂಗತಿಗಳನ್ನು ತಿಳಿಯಲು ಜಾತಕ ಪಕ್ಷಿಗಳಂತೆ ಸುದ್ದಿ ಮಾಧ್ಯಮದ ಮಿತ್ರರು ಮುಖ್ಯಮಂತ್ರಿಗಳಿಗೆ ಕಾದಂತೆ ಮೊಬೈಲ್ ಕ್ಯಾಮೆರಾಗಳು ಸಹ ಕಾದವು

ರಸ್ತೆ ಅಪಘಾತಕ್ಕೆ ಮಗ ಬಲಿ; ಸುದ್ದಿ ತಿಳಿದು ಹೃದಯಾಘಾತದಿಂದ ತಾಯಿ ಸಾವು

ರಸ್ತೆ ಅಪಘಾತಕ್ಕೆ ಮಗ ಬಲಿ; ಸುದ್ದಿ ತಿಳಿದು ಹೃದಯಾಘಾತದಿಂದ ತಾಯಿ ಸಾವು

Road Accident: ಅಪಘಾತದಲ್ಲಿ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ತಾಯಿ ಕೂಡ ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀಕಾಂತ್ ಜೋಶಿ ಅಲಿಯಾಸ್​​ ಕಾಂತರಾಜು (45) ಮತ್ತು ತಾಯಿ ಶಾರದಾಬಾಯಿ (86) ಮೃತರು.

ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಅವರಿಗೆ ಬಸವಚೇತನ ಪ್ರಶಸ್ತಿ

ಇಂಗ್ಲೀಷ್ ಶಿಕ್ಷಕ ಸಂತೋಷ ಅವರಿಗೆ ಬಸವಚೇತನ ಪ್ರಶಸ್ತಿ

ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯ ಇಂಗ್ಲೀಷ್ ಶಿಕ್ಷಕ ಸಂತೋಷ ಅವರು ರಾಜ್ಯ ಮಟ್ಟದ ಬಸವಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅಮ್ಮ ಫೌಂಡೇಶನ ವತಿಯಿಂದ ಜು,6ರಂದು ವಿಜಯಪೂರ ಕಂದಗಲ ಹನುಮಂತರಾಯ ರಂಗ ಮಂದಿರದಲ್ಲಿ ಜರುಗಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

N Ravikumar: ಸಿಎಸ್‌ ಕುರಿತು ಅವಹೇಳನ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಸಭಾಪತಿಗೆ ದೂರು

ಸಿಎಸ್‌ ಕುರಿತು ಅವಹೇಳನ: ಎಂಎಲ್‌ಸಿ ರವಿಕುಮಾರ್‌ ವಿರುದ್ಧ ಸಭಾಪತಿಗೆ ದೂರು

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ ನೇತೃತ್ವದ ನಿಯೋಗ ಸಭಾಪತಿಗಳನ್ನು ಭೇಟಿಯಾಗಿ ಮನವಿ ನೀಡಿದೆ. ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಇತ್ತೀಚೆಗೆ ಕಲ್ಬುರ್ಗಿಯ ಜಿಲ್ಲಾಧಿಕಾರಿ ಫೌಜಿಯಾ ತರುನ್ನಂ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಸರ್ಕಾರದ ಸಿಎಸ್ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕಾಂಗ್ರೆಸ್ ತೀವ್ರ ಅಕ್ರೋಶ ವ್ಯಕ್ತಪಡಿಸಿದೆ.

Vijayapur (Indi) News: ಮಗುವಿನ ಆರೋಗ್ಯ ಪಾಲನೆಯಲ್ಲಿ ತಾಯಿ ಪಾತ್ರ ಮುಖ್ಯ: ಡಾ.ವಿಫುಲ ಕೋಳೆಕರ್

ಮಗುವಿನ ಆರೋಗ್ಯ ಪಾಲನೆಯಲ್ಲಿ ತಾಯಿ ಪಾತ್ರ ಮುಖ್ಯ

ವೈದ್ಯರನ್ನು ದೇವರ ನಂತರದ ಸ್ಥಾನದಲ್ಲಿ ಪರಿಗಣಿಸಲಾಗುತ್ತದೆ ಎಂದರು. ಭಾರತದಲ್ಲಿ ಪ್ರತಿ ವರ್ಷ ಜು.1ರಂದು ಅವರ ಕೊಡುಗೆ ಮತ್ತು ಉದಾತ್ತ ಕೆಲಸವನ್ನು ಗೌರವಿಸಲು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ. ಮುಖ್ಯ ಗುರು ಯಾಸೀಕ ತುರ್ಕಿಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.

Capital City Movie: ರಾಜೀವ್ ರೆಡ್ಡಿ ನಟನೆಯ ‘ಕ್ಯಾಪಿಟಲ್ ಸಿಟಿ’ ಚಿತ್ರ ಈ ವಾರ ತೆರೆಗೆ

ರಾಜೀವ್ ರೆಡ್ಡಿ ನಟನೆಯ ‘ಕ್ಯಾಪಿಟಲ್ ಸಿಟಿ’ ಚಿತ್ರ ಈ ವಾರ ತೆರೆಗೆ

Capital City Movie: ʼಮಸ್ತ್ ಮಜಾ ಮಾಡಿʼ, ʼನಂದʼ ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್. ಅನಂತರಾಜು ನಿರ್ದೇಶನದ ಹಾಗೂ ʼಜಿಂದಗಿʼ ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ ʼಕ್ಯಾಪಿಟಲ್ ಸಿಟಿʼ ಚಿತ್ರ‌ ಇದೇ ಜುಲೈ 4ರಂದು ಬಿಡುಗಡೆಯಾಗುತ್ತಿದೆ.

Accident at Chikkanayakanahalli: ಬಸ್ ಪಲ್ಟಿಯಾಗಿ ಹಲವರಿಗೆ ಗಾಯ

ಬಸ್ ಪಲ್ಟಿಯಾಗಿ ಹಲವರಿಗೆ ಗಾಯ

ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳಿಯರು ನೆರವಿಗೆ ಧಾವಿಸಿದ್ದು, ಗಾಯಗೊಂಡವರನ್ನು ರಸ್ತೆ ಯಲ್ಲಿ ಹಾದುಹೋಗುತ್ತಿದ್ದ ವಾಹನಗಳ ಮೂಲಕ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಕೆಲವೇ ಕ್ಷಣಗಳಲ್ಲಿ ಅಂಬುಲೆನ್ಸ್ಗಳು ಕೂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ ಕಾರ್ಯ ನಡೆಸಿದವು.

Chikkanayakanahalli News: ನವೋದಯ ಪದವಿ ಕಾಲೇಜಿನಲ್ಲಿ ಸಮಾರೋಪ ಸಮಾರಂಭ: ವಿದ್ಯಾರ್ಥಿಗಳ ಬೆಳವಣಿಗೆಗೆ ಜ್ಞಾನ ಅಗತ್ಯ - ಶ್ರೀ ಬಿ.ಕೆ. ಚಂದ್ರಶೇಖರ್

ನವೋದಯ ಪದವಿ ಕಾಲೇಜಿನಲ್ಲಿ ಸಮಾರೋಪ ಸಮಾರಂಭ

ತಮ್ಮ ಓದುತ್ತಿರುವ ವಿಭಾಗದ ಬಗ್ಗೆ ಯಾರೂ ಕೀಳರಿಮೆ ಬೆಳೆಸಿಕೊಳ್ಳದೆ, ತಮ್ಮ ಕಾರ್ಯಕ್ಷೇತ್ರದಲ್ಲಿ ಶ್ರಮ ಮತ್ತು ಏಕಾಗ್ರತೆಯಿಂದ ಮುಂದುವರೆಯಬೇಕು ಎಂದು ಶ್ರೀ ಚಂದ್ರಶೇಖರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ವಿದ್ಯಾರ್ಥಿಗಳು ಸದಾ ಹೊಸ ಆಲೋಚನೆಗಳನ್ನು ರೂಢಿಸಿಕೊಂಡರೆ, ಭವಿಷ್ಯದಲ್ಲಿ ಉತ್ತಮ ಗುರಿ ತಲುಪಲು ಸಾಧ್ಯ

Laxmi Hebbalkar: ಎಂಎಲ್‌ಸಿ ರವಿಕುಮಾರ್ ಹೇಳಿಕೆ ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ: ಲಕ್ಷ್ಮೀ ಹೆಬ್ಬಾಳ್ಕರ್

ಎಂಎಲ್‌ಸಿ ರವಿಕುಮಾರ್ ಕೂಡಲೇ ಕ್ಷಮೆಯಾಚಿಸಬೇಕು: ಹೆಬ್ಬಾಳ್ಕರ್ ಆಗ್ರಹ

Laxmi Hebbalkar: ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್‌ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿ ಕುಮಾರ್ ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Pendrive Movie: ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ʼಪೆನ್‌ಡ್ರೈವ್ʼ ಚಿತ್ರ ಜು.4ಕ್ಕೆ ರಿಲೀಸ್‌

ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ʼಪೆನ್‌ಡ್ರೈವ್ʼ ಚಿತ್ರ ಜು.4ಕ್ಕೆ ರಿಲೀಸ್‌

Pendrive Movie: ಖ್ಯಾತ ನಿರ್ದೇಶಕ ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ ಕನಸಿನ ರಾಣಿ ಮಾಲಾಶ್ರೀ, ʼಬಿಗ್ ಬಾಸ್ʼ ಖ್ಯಾತಿಯ ತನಿಷಾ ಕುಪ್ಪಂಡ ಮತ್ತು ಕಿಶನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ʼಪೆನ್‌ಡ್ರೈವ್ʼ ಚಿತ್ರ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

Assault case: ಒಳಮೀಸಲಾತಿ ಸಮೀಕ್ಷೆ ವೇಳೆ ನಾಗರಿಕರಿಗೆ ಹಲ್ಲೆ, ಬಿಬಿಎಂಪಿ ಸಿಬ್ಬಂದಿ ಅಮಾನತು

ಒಳಮೀಸಲಾತಿ ಸಮೀಕ್ಷೆ ವೇಳೆ ನಾಗರಿಕರಿಗೆ ಹಲ್ಲೆ, ಬಿಬಿಎಂಪಿ ಸಿಬ್ಬಂದಿ ಅಮಾನತು

Assault Case: ಕಾಟಾಚಾರಕ್ಕೆ ಸಮೀಕ್ಷೆ ನಡೆಸಿದಂತೆ ನಟಿಸಿದ, ಹಾಗೂ ಸಮೀಕ್ಷೆ ನಡೆಸದೆ ಮನೆಬಾಗಿಲಿಗೆ ಚೀಟಿ ಅಂಟಿಸಿ ನಡೆದ, ಪ್ರಶ್ನಿಸಿದ್ದಕ್ಕೆ ಕಿರಿಕ್‌ ಮಾಡಿದ ಮೂವರು ಸಿಬ್ಬಂದಿಗಳು ಅಮಾನತುಗೊಂಡಿದ್ದಾರೆ. ವಿವಿಧ ವಾರ್ಡ್ ಗಳ ಮೂವರು ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ.

Vishnuvardhan: ತಮಿಳು ಯುಟ್ಯೂಬರ್‌ನಿಂದ ಸಾಹಸಸಿಂಹ ವಿಷ್ಣು ಗೇಲಿ, ಕನ್ನಡಿಗರ ಆಕ್ರೋಶ

ತಮಿಳು ಯುಟ್ಯೂಬರ್‌ನಿಂದ ಸಾಹಸಸಿಂಹ ವಿಷ್ಣು ಗೇಲಿ, ಕನ್ನಡಿಗರ ಆಕ್ರೋಶ

Vishnuvardhan: ʼಕೋಟಿಗೊಬ್ಬʼ ಚಿತ್ರದಲ್ಲಿ ನಟ ವಿಷ್ಣುವರ್ಧನ್ ಅಭಿನಯವನ್ನು ತಮಿಳಿನ ಯೂಟ್ಯೂಬರ್ ಹೀಯಾಳಿಸಿದ್ದಾನೆ. ಈ ಸಿನಿಮಾದಲ್ಲಿ ಕಾಲಿನಿಂದ ವಿಲನ್‌ನನ್ನು ಹಗ್ಗದಿಂದ ಕಟ್ಟಿ ಹಾಕುವ ದೃಶ್ಯ ಮತ್ತು ಸಿಂಹ ವಿಷ್ಣು ರೂಪ ಪಡೆಯುವ ಗ್ರಾಫಿಕ್ಸ್ ಅನ್ನು ಈತ ಟೀಕಿಸಿದ್ದಾನೆ.

Fire Accident: ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ, ಬೆಂಗಳೂರಿನಲ್ಲಿ ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ, ಬೆಂಗಳೂರಿನಲ್ಲಿ ತಪ್ಪಿದ ಭಾರಿ ಅನಾಹುತ

Fire Accident: ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಉದಯಪುರ ಎಕ್ಸ್‌ಪ್ರೆಸ್ ರೈಲಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಬೆಂಗಳೂರಿಗೆ ಈ ಎಕ್ಸ್‌ಪ್ರೆಸ್ ರೈಲು ತೆರಳುತ್ತಿತ್ತು. ಸದ್ಯ ಭಾರಿ ಅನಾಹುತ ತಪ್ಪಿದೆ.‌