ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Karnataka Rains: ಯೆಲ್ಲೋ ಅಲರ್ಟ್; ರಾಜ್ಯದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

ಕರ್ನಾಟಕದಲ್ಲಿ ಮುಂದಿನ 4 ದಿನ ಅಬ್ಬರಿಸಲಿದೆ ಮಳೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 20°C ಇರುವ ಸಾಧ್ಯತೆ ಇದೆ.

Viral Video: ರಾಜ್ಯ ರಾಜಧಾನಿಯಲ್ಲಿ ಆಘಾತಕಾರಿ ಘಟನೆ! ಜೊಮ್ಯಾಟೊ ಡೆಲಿವರಿ ಬಾಯ್ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೊ ನೋಡಿ

ಜೊಮ್ಯಾಟೊ ಡೆಲಿವರಿ ಬಾಯ್ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೊ ನೋಡಿ

Zomato Delivery Agent Thrashed: ಆಹಾರ ತಡವಾಗಿ ತಲುಪಿಸಿದ್ದಕ್ಕೆ ಕೋಪಗೊಂಡ ಇಬ್ಬರು ಪುರುಷರು ಝೊಮ್ಯಾಟೊ ಡೆಲಿವರಿ ಬಾಯ್ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Caste Census: ಯಾವುದೇ ಕಾರಣಕ್ಕೂ ʼಜಾತಿ ಸಮೀಕ್ಷೆʼ ಮುಂದೂಡಲ್ಲ ಎಂದ ಸಿಎಂ

ಯಾವುದೇ ಕಾರಣಕ್ಕೂ ʼಜಾತಿ ಸಮೀಕ್ಷೆʼ ಮುಂದೂಡಲ್ಲ ಎಂದ ಸಿಎಂ

CM Siddaramaiah: ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ವಾರ್ತಾಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಜಾತಿ ಸಮೀಕ್ಷೆ ವಿಚಾರದಲ್ಲಿ ಬಿಜೆಪಿಯವರು ಈ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Media Awards: ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ: ಸಿಎಂ ಸಲಹೆ

ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ

CM Siddaramaiah: ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 2024ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದರು.

MB Patil: ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 270.83 ಕೋಟಿ ರೂ. ಕೊಡಲು ಸಚಿವ ಸಂಪುಟ ಒಪ್ಪಿಗೆ- ಎಂ.ಬಿ.ಪಾಟೀಲ್

ವಿಜಯಪುರ ವಿಮಾನನಿಲ್ದಾಣಕ್ಕೆ ಹೆಚ್ಚುವರಿ ₹270 ಕೋಟಿ ಕೊಡಲು ಒಪ್ಪಿಗೆ

MB Patil: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Stabbing Case: ಬೆಂಗಳೂರಿನ ಪಿಜಿಯಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಚಾಕು ಇರಿದ ಯುವಕ!

ಪಿಜಿಯಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಚಾಕು ಇರಿದ ಯುವಕ!

Bengaluru News: ಆಗಸ್ಟ್ 29ರಂದು ಮುಂಜಾನೆ 3 ಗಂಟೆ ಸುಮಾರಿಗೆ ಯುವತಿ ಪಿಜಿಯಲ್ಲಿ ನಿದ್ದೆ ಮಾಡುತ್ತಿದ್ದ ವೇಳೆ ಆರೋಪಿ, ಆಕೆಯ ಕೋಣೆಗೆ ನುಗ್ಗಿ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಇದಕ್ಕೆ ಆಕೆ ಪ್ರತಿರೋಧಿಸಿದಾಗ ಬೆನ್ನಿಗೆ ಚಾಕುವಿನಿಂದ ಇರಿದು ಹಲ್ಲೆ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಸದ್ಯ ಈ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Kota Srinivasa Poojary: ಹಿಂದೂಗಳಲ್ಲಿ ದೊಡ್ಡ ಗೊಂದಲ ಸೃಷ್ಟಿಸಲು ಹೊರಟಿದೆ ಕಾಂಗ್ರೆಸ್ ಸರ್ಕಾರ: ಕೋಟ ಶ್ರೀನಿವಾಸ ಪೂಜಾರಿ

ಹಿಂದೂಗಳಲ್ಲಿ ದೊಡ್ಡ ಗೊಂದಲ ಸೃಷ್ಟಿ- ಕೋಟ ಶ್ರೀನಿವಾಸ ಪೂಜಾರಿ

Kota srinivasa Poojary: ಜಾತಿ ಸಮೀಕ್ಷೆಯ ವೇಳೆ ವಿವಿಧ ಕ್ರಿಶ್ಚಿಯನ್ ಜಾತಿಗಳನ್ನು ಸೇರಿಸಿ ಹಿಂದೂಗಳಲ್ಲಿ ದೊಡ್ಡ ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ ಎಂದು ಮಾಜಿ ಸಚಿವ ಮತ್ತು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bengaluru Roads: ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ; ಡಿಕೆಶಿ ವಿರುದ್ಧ ಜೆಡಿಎಸ್‌ ಕಿಡಿ

ಮೊದಲು ರಸ್ತೆ ಗುಂಡಿ ಮುಚ್ಚಿ ಮಾನ ಕಾಪಾಡಿಕೊಳ್ಳಿ; ಜೆಡಿಎಸ್‌ ಕಿಡಿ

Bengaluru Roads: ಬೆಂಗಳೂರಿನ ಮೂಲಸೌಕರ್ಯದ ಬಗ್ಗೆ ಉದ್ಯಮಿಗಳು ಕಳವಳಗೊಂಡಾಗ ಅವರಿಗೆ ಕೇಂದ್ರ ಸಚಿವರಾದ ಎಚ್‌.ಡಿ.ಕುಮಾರಸ್ವಾಮಿ ಅವರು ನೈತಿಕ ಸ್ಥೈರ್ಯ ತುಂಬಿದ್ದಾರೆ. ಅದರಲ್ಲಿ ತಪ್ಪೇನಿದೆ? ರಸ್ತೆಗಳ ನಿರ್ವಹಣೆ ನಿಮ್ಮ ಕೈಯಲ್ಲಿ ಆಗಲಿಲ್ಲ ಎಂದರೆ, ಬೆಂಗಳೂರು ಉಸ್ತುವಾರಿ ಬಿಡಿ. ಟ್ವಿಟ್ಟರ್ ಗಿಟ್ಟರ್ ಎಂದು ನಾಲಿಗೆ ಜಾರಬೇಡಿ ಎಂದು ಜೆಡಿಎಸ್‌ ಕಿಡಿಕಾರಿದೆ.

Banu Mushtaq: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ವಿರೋಧಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲೂ ವಜಾ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌: ಸೈ ಎಂದ ಸುಪ್ರೀಂ ಕೋರ್ಟ್‌

Mysuru Dasara: ಇಂದು ನಡೆದ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ‌ರಾಜ್ಯ ಸರಕಾರದ ಪರ ತೀರ್ಪು ನೀಡಿದೆ. ಹೀಗಾಗಿ ಸೆಪ್ಟೆಂಬರ್ 22ರಂದು ಬಾನು ಮುಷ್ತಾಕ್ ಅವರಿಂದ ಉದ್ಘಾಟನೆ ನಡೆಯುವುದು ದೃಢವಾಗಿದೆ.

Basangouda Patil Yatnal: ಸದ್ಯದಲ್ಲೇ ಬಿವೈ ವಿಜಯೇಂದ್ರ ಪದಚ್ಯುತ: ಬಸನಗೌಡ ಯತ್ನಾಳ್‌

ಸದ್ಯದಲ್ಲೇ ಬಿವೈ ವಿಜಯೇಂದ್ರ ಪದಚ್ಯುತ: ಬಸನಗೌಡ ಯತ್ನಾಳ್‌

BY Vijayendra: ಮೊನ್ನೆ ದೆಹಲಿಯಲ್ಲಿ ಯಡಿಯೂರಪ್ಪಗೆ ಮಂಗಳಾರತಿ ಮಾಡಿದ್ದಾರೆ. ಯಡಿಯೂರಪ್ಪ ಭಯದಿಂದ ಬಿಜೆಪಿ ಹೈಕಮಾಂಡ್ ಹೊರಬರುತ್ತಿದೆ. ನಾನು ಬಿಜೆಪಿ ಸೇರಲು ಬಹುತೇಕ ಶಾಸಕರು ಒಲವು ತೋರಿದ್ದಾರೆ. ಅಮಿತ್ ಶಾ ಒಬ್ಬೊಬ್ಬರನ್ನೇ ಕರೆದು ಕೇಳಿದರೆ ಎಲ್ಲರೂ ಹೇಳುತ್ತಾರೆ ಎಂದು ಯತ್ನಾಳ್‌ ಹೇಳಿದ್ದಾರೆ.

DK Shivakumar: 350 ಕಿ.ಮೀ ಉದ್ದದ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ರೂಪ ನೀಡಬೇಕಿದೆ: ಡಿಕೆಶಿ‌

350 ಕಿಮೀ ಉದ್ದದ ಕರಾವಳಿಯ ಪ್ರವಾಸೋದ್ಯಮಕ್ಕೆ ಹೊಸ ರೂಪ ನೀಡಬೇಕಿದೆ: ಡಿಕೆಶಿ‌

DK Shivakumar: ಕರ್ನಾಟಕ ಪ್ರಾಕೃತಿಕವಾಗಿ, ಸಾಂಸ್ಕೃತಿವಾಗಿ ಸದೃಢವಾಗಿದೆ. ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಸೇರಿದಂತೆ ಪ್ರತಿಯೊಂದು ಭಾಗವೂ ವೈಶಿಷ್ಟ್ಯ ಪೂರ್ಣವಾಗಿವೆ. ಪ್ರವಾಸೋದ್ಯಮ ಹಾಗೂ ಹೋಟೆಲ್ ಉದ್ಯಮದ ಮೇಲೆ ಹೂಡಿಕೆ ಮಾಡಲು ನಮ್ಮ ರಾಜ್ಯ ಪ್ರಶಸ್ತ್ಯವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Bengaluru: ಬ್ಲ್ಯಾಕ್‌ಮೇಲ್‌ ನಡೆಯಲ್ಲ: ಡಿಕೆಶಿ ಎಚ್ಚರಿಕೆಗೆ ಬ್ಲ್ಯಾಕ್‌ಬಕ್‌ ಥಂಡಾ, ಬೆಂಗಳೂರಿನಲ್ಲೇ ಇರ್ತೀವಿ ಎಂದ ಸಿಇಒ

ಬ್ಲ್ಯಾಕ್‌ಮೇಲ್‌ ನಡೆಯಲ್ಲ: ಡಿಕೆಶಿ ಎಚ್ಚರಿಕೆಗೆ ಬ್ಲ್ಯಾಕ್‌ಬಕ್‌ ಸಿಇಒ ಥಂಡಾ

blackbuck: ಹದಗೆಟ್ಟಿರುವ ರಸ್ತೆಗಳ ಪರಿಸ್ಥಿತಿ ಮತ್ತು ದೀರ್ಘ ಪ್ರಯಾಣದ ಸಮಯವನ್ನು ಉಲ್ಲೇಖಿಸಿ, ನಗರದ ಹೊರ ವರ್ತುಲ ರಸ್ತೆ (ORR) ಪ್ರದೇಶದಿಂದ ತನ್ನ ಕಚೇರಿಯನ್ನು ಸ್ಥಳಾಂತರಿಸಲು ನಿರ್ಧರಿಸಿರುವುದಾಗಿ ಬೆಂಗಳೂರು ಮೂಲದ ಲಾಜಿಸ್ಟಿಕ್ಸ್ ಸ್ಟಾರ್ಟ್ಅಪ್ ಬ್ಲ್ಯಾಕ್‌ಬಕ್ ನ ಸಿಇಒ ರಾಜೇಶ್ ಯಬಾಜಿ ನಿನ್ನೆ ಹೇಳಿದ್ದರು.

Gold Rate Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 19th Sep 2025: 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 15ರೂ ಏರಿಕೆಯಾಗಿ , 10,205 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 16ರೂ. ಏರಿಕೆಯಾಗಿ 11,133 ರೂ ಆಗಿದೆ.

Dharmasthala Case: ವಿಚಾರಣೆಗೆ ಹಾಜರಾಗದ ಮಹೇಶ್‌ ಶೆಟ್ಟಿ ತಿಮರೋಡಿ, ಮನೆ ಗೋಡೆಗೆ ನೋಟೀಸ್

ವಿಚಾರಣೆಗೆ ಹಾಜರಾಗದ ಮಹೇಶ್‌ ಶೆಟ್ಟಿ ತಿಮರೋಡಿ, ಮನೆ ಗೋಡೆಗೆ ನೋಟೀಸ್

Thimarodi: ಅಕ್ರಮವಾಗಿ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಎಸ್‌ಐಟಿ ಶೋಧದ ವೇಳೆ ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಮಾಸ್ಕ್‌ ಮ್ಯಾನ್‌ ಬುರುಡೆ ಚಿನ್ನಯ್ಯನ ಹೇಳಿಕೆ ಆಧಾರದಲ್ಲಿ ತಿಮರೋಡಿ ಮನೆಯನ್ನು ಪರಿಶೀಲಿಸಲಾಗಿತ್ತು.

Belagavi News: ನಿಯತಿ ಸಹಕಾರಿ ಸೊಸೈಟಿ ಲಿಮಿಟೆಡ್ ನ 5ನೇ ವಾರ್ಷಿಕ ಸಾಮಾನ್ಯ ಸಭೆ

ನಿಯತಿ ಸಹಕಾರಿ ಸೊಸೈಟಿ ಲಿಮಿಟೆಡ್ ನ 5ನೇ ವಾರ್ಷಿಕ ಸಾಮಾನ್ಯ ಸಭೆ

ಸಮಾಜದ ಅಧ್ಯಕ್ಷರಾದ ಡಾ.ಸೋನಾಲಿ ಸರ್ನೋಬತ್ ಅವರು ಸಮಾಜದ ಪ್ರಗತಿ, ಸಾಧನೆಗಳು ಮತ್ತು ಭವಿಷ್ಯದ ದೃಷ್ಟಿಕೋನ ಕುರಿತು ಸವಿಸ್ತಾರ ವರದಿ ಮಂಡಿಸಿದರು. ಬ್ಯಾಲೆನ್ಸ್ ಶೀಟ್ ಅನ್ನು ನರಸಿಂಹ ಜೋಶಿ ಓದಿದರು. ಲಾಭ-ನಷ್ಟ ಪತ್ರಿಕೆ ಅನ್ನು ಅನುಷಾ ಜೋಶಿ ಮಂಡಿಸಿದರು. ಸಭೆಯ ಅಧಿಸೂಚನೆ ಅನ್ನು ದೀಪಾ ಪ್ರಭು ದೇಸಾಯಿ ಓದಿದರು.

Nandini products: ನಂದಿನಿ ಗ್ರಾಹಕರಿಗೆ ಸಿಹಿ ಸುದ್ದಿ! ಮೊಸರು, ತುಪ್ಪ, ಬೆಣ್ಣೆ ಬೆಲೆ ಇಳಿಕೆ ಸಾಧ್ಯತೆ

ನಂದಿನಿ ಗ್ರಾಹಕರಿಗೆ ಸಿಹಿ ಸುದ್ದಿ! ಸದ್ಯವೇ ಮೊಸರು, ತುಪ್ಪ ಬೆಲೆ ಇಳಿಕೆ

KMF: ಜಿಎಸ್​ಟಿ (GST) ಕಡಿತಗೊಳಿಸುವ ಮೂಲಕ ಕೇಂದ್ರ ಸರ್ಕಾರ ಮಧ್ಯಮ ವರ್ಗದವರ ಹೊರೆ ಕಡಿಮೆ ಮಾಡಿದ್ದು ಇದರ ನಡುವೆಯೇ ನಂದಿನಿ ಉತ್ಪನ್ನಗಳ ಬೆಲೆ ಕೂಡ ಇಳಿಕೆಯಾಗುವ ಸಾಧ್ಯತೆ ಇದೆ. ಆಹಾರ ಉತ್ಪನ್ನಗಳ ಮೇಲಿನ GSTಯನ್ನು ಶೇ 12ರಿಂದ 5ಕ್ಕೆ ಇಳಿಕೆ ಮಾಡುವ ‌ಸಾಧ್ಯತೆ ಇದೆ.

Electricity connection: ಒಸಿ ಇಲ್ಲದಿದ್ದರೂ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ: ಸಚಿವ ಸಂಪುಟ ಇಂಗಿತ

ಒಸಿ ಇಲ್ಲದಿದ್ದರೂ ಕಟ್ಟಡಗಳಿಗೆ ವಿದ್ಯುತ್‌ ಸಂಪರ್ಕ: ಸಚಿವ ಸಂಪುಟ ಇಂಗಿತ

CM Siddaramaiah: ಈಗಾಗಲೇ ನಿರ್ಮಾಣವಾಗಿರುವ ಕಟ್ಟಡಗಳಿಗೆ ಒಸಿ ಇಲ್ಲದಿದ್ದರೂ ವಿದ್ಯುತ್ ಸಂಪರ್ಕ ನೀಡಲು ಒಂದು ಬಾರಿಗೆ ಅನ್ವಯಿಸುವಂತೆ ನಿಯಮಗಳನ್ನು ಸಡಲಿಸುವ ಕುರಿತು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಯಾವುದೇ ನಿರ್ಧಾರ ಮಾಡದೆ ವಿಷಯವನ್ನು ಮುಂದಿನ ಸಂಪುಟಕ್ಕೆ ಮುಂದೂಡಲಾಗಿದೆ.

Caste Census: ಹೊಸ ʼಕ್ರಿಶ್ಚಿಯನ್‌ʼ ಜಾತಿಗಳನ್ನು ಗಣತಿ ಪಟ್ಟಿಯಿಂದ ತೆಗೆಯಲು ಮುಂದಾದ ಸಿಎಂ, ಇಂದು ಕ್ಯಾಬಿನೆಟ್‌ ಸಭೆ

ಗಣತಿ ಪಟ್ಟಿಯಲ್ಲಿ ʼಕ್ರಿಶ್ಚಿಯನ್‌ʼ ಜಾತಿಗಳ ಸೇರ್ಪಡೆಗೆ ವಿರೋಧ, ಇಂದು ಸಭೆ

CM Siddaramaiah: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ಧಪಡಿಸಲಾದ ಜಾತಿ ಪಟ್ಟಿಯಲ್ಲಿ ಹಿಂದೂ ಜಾತಿಗಳ ಹೆಸರಿನ ಮುಂದೆ ಕ್ರಿಶ್ಚಿಯನ್ ಪದ ಸೇರ್ಪಡೆ, 331 ಹೊಸ ಜಾತಿಗಳನ್ನು ಉಲ್ಲೇಖಿಸಿರುವ ಬಗ್ಗೆ ಹಲವು ಸಚಿವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸಿಎಂ ಈ ಬಗ್ಗೆ ನಿರ್ಣಯ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

Banu Mushtaq: ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಇಂದು ಸುಪ್ರೀಂ ಕೋರ್ಟ್‌ ವಿಚಾರಣೆ

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಇಂದು ಸುಪ್ರೀಂ ಕೋರ್ಟ್‌ ವಿಚಾರಣೆ

Supreme court: ಸೆ.22ರಂದು ನವರಾತ್ರಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆ ನಡೆಸಬೇಕೆಂದು ಅರ್ಜಿದಾರರ ಪರ ವಕೀಲರು ಸಿಜೆಐ ಬಿ.ಆರ್.ಗವಾಯಿ ನೇತೃತ್ವದ ಪೀಠದ ಮುಂದೆ ಮನವಿ ಮಾಡಿದರು. ಶುಕ್ರವಾರ ಮೇಲ್ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

Shidlaghatta News: ವಿಶ್ವದ ಮೊದಲ ಎಂಜಿನಿಯರ್ ಸಮುದಾಯ ಎಂದರೆ ವಿಶ್ವಕರ್ಮರಾಗಿದ್ದಾರೆ ಎಂದು ಶಾಸಕ ಬಿ.ಎನ್ ರವಿಕುಮಾರ್

ವಿಶ್ವದ ಮೊದಲ ಎಂಜಿನಿಯರ್ ಸಮುದಾಯ ಎಂದರೆ ವಿಶ್ವಕರ್ಮರಾಗಿದ್ದಾರೆ

ವಾಸ್ತುಶಿಲ್ಪ, ಶಿಲ್ಪಕಲೆ, ಲೋಹದ ಕೆಲಸ ಮತ್ತು ಮರಗೆಲಸದಂತಹ ಕರಕುಶಲ ಕಲೆಗಳಲ್ಲಿ ಇವರ ನೈಪುಣ್ಯವು ನಮ್ಮ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದೆ. ನಮ್ಮ ದೇವಾಲಯಗಳು, ಸ್ಮಾರಕಗಳು ಮತ್ತು ದೈನಂದಿನ ಜೀವನದಲ್ಲಿ ಬಳಸುವ ವಸ್ತುಗಳ ಹಿಂದಿನ ಸೌಂದರ್ಯ ಮತ್ತು ಶಕ್ತಿ ವಿಶ್ವಕರ್ಮ ಸಮುದಾಯದವರ ಕೈಚಳಕದ ಪರಿಣಾಮವಾಗಿದೆ

Gudibande News: ಸರಳ ಹಾಗೂ ಅರ್ಥಪೂರ್ಣವಾಗಿ ವಿಶ್ವಕರ್ಮರ ಜಯಂತಿ ಆಚರಣೆ

ಸರಳ ಹಾಗೂ ಅರ್ಥಪೂರ್ಣವಾಗಿ ವಿಶ್ವಕರ್ಮರ ಜಯಂತಿ ಆಚರಣೆ

ಋಗ್ವೇದ ಹಾಗೂ ಪುರಾಣಗಳಲ್ಲಿ ವಿಶ್ವಕರ್ಮರನ್ನು ಸರ್ವಶಕ್ತಿಶಾಲಿ ಕರ್ತೃ ಹಾಗೂ ಶ್ರೇಷ್ಠ ವಾಸ್ತುಶಿಲ್ಪಿ ಯಾಗಿ ವರ್ಣಿಸಲಾಗಿದೆ. ಲಂಕಾ, ದ್ವಾರಕಾ, ಇಂದ್ರಪ್ರಸ್ಥದಂತಹ ಮಹಾನಗರಗಳನ್ನು ನಿರ್ಮಿಸಿದವರು ವಿಶ್ವಕರ್ಮ. ಮನೆ-ಮಂದಿರಗಳ ನಿರ್ಮಾಣದಿಂದ ಹಿಡಿದು ಪ್ರತಿಯೊಂದು ಕಲೆಯಲ್ಲೂ ವಿಶ್ವ ಕರ್ಮ ಸಮಾಜದ ಅಪ್ರತಿಮ ಕೊಡುಗೆಯಿದೆ. ಪಠ್ಯ-ಪುಸ್ತಕ ಓದದೆ, ಬೇರೆಯವರಿಂದ ತಂತ್ರಜ್ಞಾನ ಕಲಿಯದೆ ಕುಶಲಕರ್ಮಿಗಳಾಗಿರುವ ವಿಶ್ವಕರ್ಮ ಸಮಾಜ ಜಗತ್ತಿನಲ್ಲಿ ಹೊಸ ಶಕ್ತಿಯನ್ನೇ ಹುಟ್ಟು ಹಾಕಿದೆ.

ಬಿಗ್ ಬಿಲಿಯನ್ ಡೇ 2025ಗೆ ಮುಂಚಿತವಾಗಿ ಉದ್ಯಮದಲ್ಲಿ ಇದೇ ಮೊದಲ ಬಾರಿಗೆ ವೀಸಾ ನಿರಾಕರಣೆ ಕವರ್ ಅನ್ನು ಘೋಷಿಸಿದ ಕ್ಲಿಯರ್‌ಟ್ರಿಪ್

ಮೊದಲ ಬಾರಿಗೆ ವೀಸಾ ನಿರಾಕರಣೆ ಕವರ್ ಅನ್ನು ಘೋಷಿಸಿದ ಕ್ಲಿಯರ್‌ಟ್ರಿಪ್

ಕ್ಲಿಯರ್‌ಟ್ರಿಪ್ ಬಿಗ್ ಬಿಲಿಯನ್ ಡೇಯನ್ನು ಹಲವಾರು ಭಾರಿ ಆಫರ್‌ ಗಳೊಂದಿಗೆ ಆಚರಿಸುತ್ತಿದೆ. ಫ್ಲಾಶ್ ಸೇಲ್‌ ಗಳ ಸಮಯದಲ್ಲಿ, ದೇಶೀಯ ವಿಮಾನಗಳ ಟಿಕೆಟ್ ಗಳು ಕೇವಲ ₹999* ರಿಂದ ಪ್ರಾರಂಭವಾಗು ತ್ತವೆ ಮತ್ತು ಅಂತಾರಾಷ್ಟ್ರೀಯ ವಿಮಾನಗಳಿಗೆ 20% ರಿಯಾಯಿತಿ* ಲಭ್ಯವಿದೆ. ಜೊತೆಗೆ, ಕ್ಲಿಯರ್‌ಟ್ರಿಪ್ ತನ್ನ ಹೋಟೆಲ್ ವಿಭಾಗವನ್ನು 20,000ರಿಂದ 80,000+ ಹೋಟೆಲ್ ಗಳಿಗೆ ಗಣನೀಯವಾಗಿ ವಿಸ್ತರಿಸಿದೆ.

Chalavadi Narayanaswamy: ಎಡಪಂಥೀಯರ ವಿಚಾರ ಜನರ ಮೇಲೆ ಹೇರುವ ಕಾಂಗ್ರೆಸ್ ಆಡಳಿತ: ಛಲವಾದಿ ನಾರಾಯಣಸ್ವಾಮಿ

ಎಡಪಂಥೀಯರ ವಿಚಾರ ಜನರ ಮೇಲೆ ಹೇರುವ ಕಾಂಗ್ರೆಸ್: ಛಲವಾದಿ

Chalavadi Narayanaswamy: ಸಮೀಕ್ಷೆಗೂ ಜನಗಣತಿಗೂ ವ್ಯತ್ಯಾಸವಿದೆ. ಜನಗಣತಿಯನ್ನು ರಾಜ್ಯ ಸರ್ಕಾರ ಮಾಡಲು ಸಾಧ್ಯವಿಲ್ಲ; ಅದೇನಿದ್ದರೂ ಕೇಂದ್ರ ಸರ್ಕಾರ ಮಾಡಬೇಕು. ಈ ಸಮೀಕ್ಷೆ ಹೆಸರಿನಲ್ಲಿ ಇವರು ಜನಗಣತಿ ಮಾಡಲು ಮುಂದಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

Election Commission: ಆನ್‌ಲೈನ್‌ನಲ್ಲಿ ಮತದಾರರ ಹೆಸರು ಡಿಲೀಟ್‌ ಮಾಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ಆರೋಪ ತಿರಸ್ಕರಿಸಿದ ಚುನಾವಣಾ ಆಯೋಗ

ರಾಹುಲ್ ಗಾಂಧಿಗೆ ಮತ್ತೆ ಬಿಸಿ ಮುಟ್ಟಿಸಿದ ಎಲೆಕ್ಷನ್ ಕಮಿಷನ್

ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ ಮತದಾರರ ಹೆಸರನ್ನು ಅಳಿಸುವ ಅವಕಾಶವಿಲ್ಲ ಎಂದು ಭಾರತದ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಆ ಮೂಲಕ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿದ ಆರೋಪವನ್ನು ತಳ್ಳಿ ಹಾಕಿದೆ.

Loading...