ಆರಂಭದಲ್ಲೇ ವಿವಾದದ ಕಿಡಿ ಹೊತ್ತಿಸಿದ ಜಮೀರ್
ಪಾಕ್ ಪರ ಘೋಷಣೆ ಕೂಗಿದರೂ ಸುಮ್ಮನಿದ್ರಿ. ಧ್ವಜಾರೋಹಣಕ್ಕೆ ಒಬ್ಬ ಸಚಿವ ಹೋಗಲ್ಲ ಅಂದ್ರೂ ಸುಮ್ಮನೆ ಇರುತ್ತೀರಾ? ಎಂದು ಸಚಿವ ಜಮೀರ್ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದರು. ಸಚಿವ ಜಮೀರ್ ಪರ ಡಿಸಿಎಂ ಜಿ.ಪರಮೇಶ್ವರ್ ಸ್ಪಷ್ಟನೆಗೆ ಪ್ರಯತ್ನಿಸುತ್ತಾ, ಸಚಿವ ಜಮೀರ್ ಮನವಿ ಕೊಟ್ಟಿರುವುದು ಬೇರೆ ಜಿಲ್ಲಾ ಉಸ್ತುವಾರಿ ಕೊಡಿ ಅಂತ. ಇದರಲ್ಲಿ ಬೇರೇನು ಇಲ್ಲ ಎಂದು ಸಮರ್ಥಿಸಿ ಕೊಂಡರು. ಇದಕ್ಕೆ ಆಕ್ಷೇಪಿಸಿದ ಸುನಿಲ್ ಕುಮಾರ್, ನೀವು ಸುಮ್ಮನೆ ಸಮರ್ಥನೆ ಮಾಡಬೇಡಿ. ರಾಷ್ಟ್ರ ಧ್ವಜ ಹಾರಿಸಲು ಸಮಯ ಇಲ್ಲ ಅಂದರೆ ಹೇಗೆ? ಎಂದು ಪ್ರಶ್ನಿಸಿದರು.