ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chikkaballapur News: ಜುಲೈ ಮೊದಲ ವಾರ ಬೆಂಗಳೂರಿನಲ್ಲಿ ಬೃಹತ್ ಧರಣಿಗೆ ಸಜ್ಜು; ಕರಡು ನಿಯಮ ಹಿಂಪಡೆಯಲು ಸರ್ಕಾರಕ್ಕೆ ಉಪನ್ಯಾಸಕರ ಎಚ್ಚರಿಕೆ

ಪಿಯು ಉಪನ್ಯಾಸಕರನ್ನು ಪ್ರೌಢಶಾಲೆಗೆ ಸ್ಥಾನಪಲ್ಲಟ: ತೀವ್ರ ವಿರೋಧ

ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ವಿಶೇಷವಾಗಿ ನೇಮಕ ಗೊಂಡಿರುವ ಗೆಜೆಟೆಡ್ ಗ್ರೂಪ್-ಬಿ ಉಪನ್ಯಾಸಕರನ್ನು ಪ್ರೌಢಶಾಲಾ ಬೋಧನೆಗೆ ನಿಯೋಜಿಸುವುದು ಅವರ ಶೈಕ್ಷಣಿಕ ವಿಶೇಷತೆಯನ್ನು ಕುಗ್ಗಿಸುವ ಕ್ರಮವಾಗಿದೆ. ಇದು ಕೇವಲ ಉಪನ್ಯಾಸಕರ ಸೇವಾ ಸಮಸ್ಯೆಯಲ್ಲ; ಸ್ಪರ್ಧಾತ್ಮಕ ಪರೀಕ್ಷೆಗಳು, ವೃತ್ತಿ ಮಾರ್ಗದರ್ಶನ ಹಾಗೂ ವಿಷಯ ಪರಿಣಿತಿಗಾಗಿ ಅವಲಂಬಿಸಿರುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದೆ

Bale Honnuru shri: ಸಮಾಜದಲ್ಲಿ ಶ್ರಮಜೀವಿಗಳಿಗೆ ಎಂದಿಗೂ ಉನ್ನತಿ ಲಭ್ಯ : ಬಾಳೆ ಹೊನ್ನೂರು ಶ್ರೀಗಳು

ಸಮಾಜದಲ್ಲಿ ಶ್ರಮಜೀವಿಗಳಿಗೆ ಎಂದಿಗೂ ಉನ್ನತಿ ಲಭ್ಯ

ತಾಲ್ಲೂಕಿನ ನಿಟ್ಟೂರು ಹೋಬಳಿ ಬಾಗೂರು ಗೇಟ್ ಬಳಿಯ ಬಾಲಾಜಿ ಬಡಾವಣೆಯಲ್ಲಿ ಇಷ್ಟಲಿಂಗ ಪೂಜೆ, ಉಷಾ ಚಂದ್ರಶೇಖರ ದಂಪತಿಯ ಷಷ್ಠಿ ಪೂರ್ತಿ ಮತ್ತು 40ನೇ ವಿವಾಹ ವಾರ್ಷಿಕೋತ್ಸವ ಸಮಾರಂಭ ಅಂಗವಾಗಿ ನಡೆದ ಧರ್ಮ ಜಾಗೃತಿ ಕಾರ್ಯಕ್ರಮ ಸಾನಿಧ್ಯ ವಹಿಸಿ ಮಾತನಾಡಿದ ಅವರು ಬೌದ್ಧಿಕ ಬದುಕು ಪರಿಪೂರ್ಣ ಆಗಲು ಧರ್ಮಗುರುಗಳ ಆಶೀರ್ವಾದ ಪಡೆಯುವುದು ಮುಖ್ಯ

Five Guarantee Scheme: ರಾಜ್ಯದಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇಯಿಲ್ಲ : ಗ್ಯಾರೆಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಯಲುವಹಳ್ಳಿ ಎನ್ ರಮೇಶ್

ರಾಜ್ಯದಲ್ಲಿ ಪಂಚಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇಯಿಲ್ಲ

ಜಿಲ್ಲೆಯಲ್ಲಿ ಈವರೆಗೆ 5 ಗ್ಯಾರೆಂಟಿ ಯೋಜನೆಗಳನ್ನು ಶೇ.95 ರಿಂದ 98ರಷ್ಟು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗಿದೆ. ಇದರಲ್ಲಿ ಯುವನಿಧಿ ಒಂದು ತೃಪ್ತಿಕರವಾದ ಪ್ರಗತಿ ಸಾಧನೆ ಮಾಡಿಲ್ಲ. ಆದರೂ ಕೂಡ ಇಂತಹ ಯಶಸ್ವಿ ಕಾರ್ಯಕ್ರಮದ ಅನುಷ್ಠಾನದಲ್ಲಿ ಕೂಡ ಲೋಪಗಳಾಗಿರುವುದು ಕಂಡು ಬಂದಿರುವ ಹಿನ್ನೆಯಲ್ಲಿ ಪಾರದರ್ಶಕತೆ ತರಲು ನಮ್ಮ ಸರಕಾರ ಮುಂದಾಗಿದೆ

ಶಾರದಮ್ಮ ಬಿ ಅವರಿಗೆ ಪಿಹೆಚ್‌ಡಿ ಪ್ರದಾನ

ಶಾರದಮ್ಮ ಬಿ ಅವರಿಗೆ ಪಿಹೆಚ್‌ಡಿ ಪ್ರದಾ

ಶಾರದಮ್ಮ ಬಿ. ಅವರು ಹುಬ್ಬಳ್ಳಿಯ ಅಂಜುಮಾನ್ ಎ ಇಸ್ಲಾಂನ ನೆಹರು ಕಲಾ ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯದ ಅಸೋಸಿಯೇಟ್ ಪ್ರೊಪೇಸರ್ ಡಾ.ಐ.ಎಂ. ಮಕ್ಕುಬಾಯಿ ಮಾರ್ಗದರ್ಶನ ದಲ್ಲಿ ಸಿಕ್ಕಿಂನ ಆಲ್ಫೈನ್ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ "ಎ ಕ್ರಿಟಿಕಲ್ ಅನಾಲಿಸಿಸ್ ಆಫ್ ಫಿಸಿಕಲ್ ಎಜುಕೇಷನ್ಸ್ ರೋಲ್ ಇನ್ ಪ್ರೊಮೋಟಿಂಗ್ ಹೋಲಿಸ್ಟಿಕ್ ಡೆವಲಪ್‌ಮೆಂಟ್ ಆಫ್ ಸ್ಟುಡೆಂಟ್ಸ್ ಇನ್ ಸೌಥ್‌ಈಸ್ಟರ್ನ್ ಕರ್ನಾಟಕ ಎಂಬ ಸಂಶೋಧನಾ ಮಹಾಪ್ರಬಂಧವನ್ನು ಅಂಗೀಕರಿಸಿ ಪಿಹೆಚ್‌ಡಿ ಪದವಿಗೆ ಪರಿಗಣಿಸಿದೆ.

Chikkaballapur News: ಸುಭದ್ರ ದೇಶ ನಿರ್ಮಾಣದಲ್ಲಿ ತೆರಿಗೆ ಪ್ರಮುಖ ಪಾತ್ರ ವಹಿಸಲಿದೆ : ಆರ್.ರಾಮನಾಥನ್

ಸುಭದ್ರ ದೇಶ ನಿರ್ಮಾಣದಲ್ಲಿ ತೆರಿಗೆ ಪ್ರಮುಖ ಪಾತ್ರ ವಹಿಸಲಿದೆ

ಉತ್ತಮ ತೆರಿಗೆ ವ್ಯವಸ್ಥೆಯು ದೇಶದ ಭದ್ರ ಬನಾದಿಯನ್ನು ಬಲಿಷ್ಠಗೊಳಿಸುತ್ತದೆ. ಜನರು ಪ್ರಾಮಾಣಿ ಕವಾಗಿ ಸಕಾಲಕ್ಕೆ ನಿಯಮಾನುಸಾರ ತೆರಿಗೆಯನ್ನು ಪಾವತಿಸಬೇಕು. ಇದಕ್ಕೆ ಸಹಕಾರಿಯಾಗುವ ನಿಟ್ಟಿ ನಲ್ಲಿ ಇಲಾಖೆಯು ವಿವಿಧ ಹಂತ ಹಂತಗಳಲ್ಲಿ ಸಕಾರಾತ್ಮಕ ಬದಲಾವಣೆಯ ನೀತಿಗಳನ್ನು ಜಾರಿ ಗೊಳಿಸುತ್ತಿದೆ. ಇದಕ್ಕೆ ನೂತನ ಆದಾಯ ತೆರಿಗೆ ಕಾಯ್ದೆ 2025ರ ಸರಳೀಕರಣವು ನಿದರ್ಶನವಾಗಿದೆ

Surathkal News: ಪ್ರೀತಿಸುವುದಾಗಿ ನಂಬಿಸಿ ಗರ್ಭಿಣಿಯಾಗಿಸಿದ ಯುವಕ; ಡೆತ್‌ನೋಟ್‌ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಗರ್ಭಿಣಿಯಾಗಿಸಿ ವಂಚಿಸಿದ ಯುವಕ; ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಡೆತ್‌ನೋಟ್‌ನಲ್ಲಿ, ನಾನು ತಪ್ಪು ಮಾಡಿದ್ದೇನೆ. ಅಮ್ಮಾ, ನನ್ನ ತಪ್ಪನ್ನು ಮನ್ನಿಸಿ ಅಮ್ಮ. ಇನ್ನು ಬದುಕಲು ಸಾಧ್ಯವಿಲ್ಲ. ನನಗೆ ಮೋಸ ಮಾಡಿ ಅವನು ಆರಾಮಾಗಿದ್ದಾನೆ. ನನ್ನ ರೀತಿ ಯಾರದ್ದೂ ಜೀವನ ಹಾಳಾಗಬಾರದು ಎಂದು ಬಾಲಕಿ ಬರೆದಿದ್ದಾಳೆ. ಈ ಸಂಬಂಧ ಸುರತ್ಕಲ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಕೇಸ್‌ ದಾಖಲಾಗಿದೆ.

Chinthamani News: ಸೌಹಾರ್ದತೆ ಮತ್ತು ಭಾವೈಕ್ಯತೆಯ ಸಂಕೇತ: ಸಡಗರದ ಮೊಹರಂ ಆಚರಣೆ

ಸೌಹಾರ್ದತೆ ಮತ್ತು ಭಾವೈಕ್ಯತೆಯ ಸಂಕೇತ: ಸಡಗರದ ಮೊಹರಂ ಆಚರಣೆ

ಮೊಹರಂ ಹಬ್ಬವು ಇಸ್ಲಾಂ ಧರ್ಮದ ಹೊಸ ವರ್ಷದ ಆರಂಭವಾಗಿದೆ. ಹಿಂದೂ ಧರ್ಮದಲ್ಲಿ ಚಂದ್ರ ಮಾನ ಯುಗಾದಿ ಮತ್ತು ಕ್ರೈಸ್ತ ಧರ್ಮದಲ್ಲಿ ಜನವರಿ ಮೊದಲ ದಿನ ಇರುವಂತೆ, ಇಸ್ಲಾಂ ಧರ್ಮದಲ್ಲಿ ಮೊಹರಂ ತಿಂಗಳ ಮೊದಲ ದಿನವನ್ನು ಹೊಸ ವರ್ಷವಾಗಿ ಆಚರಿಸಲಾಗುತ್ತದೆ. ಅಮಾವಾಸ್ಯೆಯ ನಂತರ ಚಂದ್ರನ ದರ್ಶನವಾದ ದಿನದಿಂದಲೇ ಈ ಆಚರಣೆಗಳು ಆರಂಭ ಗೊಳ್ಳುತ್ತವೆ.

Chikkaballapur News: ಅರ್ಹ ಮತದಾರರು ಕೈಬಿಡದಂತೆ ವಿಶೇಷ ಸಮಗ್ರ ಪರಿಷ್ಕರಣೆ: ಜೂ.30ರಿಂದ ಮನೆ ಮನೆಗೆ ಗಣತಿ ನಮೂನೆ ವಿತರಣೆ : ತಹಶೀಲ್ದಾರ್ ರಶ್ಮಿ

ಅರ್ಹ ಮತದಾರರು ಕೈಬಿಡದಂತೆ ವಿಶೇಷ ಸಮಗ್ರ ಪರಿಷ್ಕರಣೆ

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 2025ರ ಮತದಾರರ ಪಟ್ಟಿಯ ಪ್ರಕಾರ ಒಟ್ಟು 2,09,268 ಮತದಾರ ರಿದ್ದು, ಈ ಪೈಕಿ, 1,99,825 ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡು ಶೇ. 95.49ರಷ್ಟು ಪ್ರಗತಿ ಸಾಧಿಸಲಾಗಿದೆ. ಮತದಾರರ ಪಟ್ಟಿಯಲ್ಲಿ ಅರ್ಹರ ಸೇರ್ಪಡೆ ಹಾಗೂ ಅನರ್ಹರ ಹೆಸರುಗಳ ತೆರವುಗಾಗಿ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಿಬ್ಬಂದಿಗೆ ತರಬೇತಿ, ದಾಖಲೆಗಳ ಮುದ್ರಣ, ಮತಗಟ್ಟೆಗಳ ಪುನರ್‌ವಿಂಗಡಣೆ ಸೇರಿದಂತೆ ವಿವಿಧ ಹಂತದ ಕಾರ್ಯಗಳು ನಡೆಯುತ್ತಿವೆ

CM DK Shivakumar: ಬಡವರಿಗೆ ನಿವೇಶನದ ಬದಲು ಮನೆ ಕಟ್ಟಿ ಕೊಡಲು ಆದ್ಯತೆ ನೀಡಿ: ಸಿಎಂ ಡಿ.ಕೆ. ಶಿವಕುಮಾರ್‌

ಬಡವರಿಗೆ ನಿವೇಶನದ ಬದಲು ಮನೆ ಕಟ್ಟಿ ಕೊಡಲು ಆದ್ಯತೆ ನೀಡಿ: ಸಿಎಂ

CM DK Shivakumar: ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ʼವಸತಿ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆʼ ಜರುಗಿತು. ಬಡವರಿಗೆ ತಲೆ ಮೇಲೊಂದು ಸೂರು ಬೇಕು. ಅವರಿಗೆ ನಿವೇಶನದ ಬದಲು ಮನೆ ಕಟ್ಟಿ ಕೊಡಲು ಆದ್ಯತೆ ನೀಡಿ ಎಂದು ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌, ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Bengaluru Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ

ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ

Bengaluru Power Cut: ಸುಬ್ರಮಣ್ಯಪುರ ಮತ್ತು ಇಸ್ರೋ ಲೇಔಟ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂನ್‌ 25ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

ವಸತಿ ಕಟ್ಟಡಗಳಿಗೆ ಒಸಿ ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಜುಲೈ 6 ಕೊನೆ ದಿನ

ಒಸಿ ವಿನಾಯಿತಿ: ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ ಅರ್ಜಿಗೆ ಜುಲೈ 6 ಗಡುವು

BESCOM: ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ (+ಶೇ. 20ರಷ್ಟು ಹೆಚ್ಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭ ಪ್ರಮಾಣಪತ್ರ (ಒಸಿ) ವಿನಾಯಿತಿ ನೀಡಲಾಗಿದ್ದು, ಜಿ+3 ಅಥವಾ ಸಿಲ್ಟ್‌ ಪಾರ್ಕಿಂಗ್‌ + 4 ಮಹಡಿಗಳಿರುವ ವಸತಿ ಕಟ್ಟಡಗಳ ಮಾಲೀಕರು ಜುಲೈ 6, 2026ರೊಳಗೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಬೆಸ್ಕಾಂ ಮನವಿ ಮಾಡಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

Cauvery River Tragedy: ಫೋಟೊ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಫೋಟೊ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಮುಳುಗಿ ಐವರ ಸಾವು

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಬುಧವಾರ ಸಂಜೆ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಇಳಿದು ಫೋಟೋಗೆ ಪೋಸ್ ನೀಡುತ್ತಿದ್ದ ವೇಳೆ ನೀರಿನ ಸೆಳೆತ ಹೆಚ್ಚಾಗಿ, ಒಬ್ಬರ ರಕ್ಷಣೆಗೆ ಮತ್ತೊಬ್ಬರು ಮುಂದಾದ ಪರಿಣಾಮ ಐವರು ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ.

Bengaluru Metro: ಮೆಟ್ರೋ ಕೈಕೊಟ್ಟಿದ್ದಕ್ಕೆ ಲಾರಿ ಹತ್ತಿದ ಪ್ರಯಾಣಿಕರು; ಥರ್ಡ್‌ ಕ್ಲಾಸ್‌ ಆಡಳಿತ ಎಂದು ತೇಜಸ್ವಿ ಸೂರ್ಯ ಕಿಡಿ

ಮೆಟ್ರೋ ಕೈಕೊಟ್ಟಿದ್ದಕ್ಕೆ ಲಾರಿ ಹತ್ತಿದ ಪ್ರಯಾಣಿಕರು! Video ವೈರಲ್‌

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಮನೆ ಸೇರಲು ಲಾರಿ, ಟ್ರಕ್‌ ಹತ್ತಿಕೊಂಡು ಹೋಗುತ್ತಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

MLA MT Krishnappa: ಬಿಡದಿ ಟೌನ್ ಶಿಪ್ ನಲ್ಲಿ ಕಾಂಗ್ರೆಸ್ ಪಾಲುದಾರಿಕೆ ಇರುವಂತಿದೆ: ಎಂ.ಟಿ.ಕೃಷ್ಣಪ್ಪ

ಬಿಡದಿ ಟೌನ್ ಶಿಪ್ ನಲ್ಲಿ ಕಾಂಗ್ರೆಸ್ ಪಾಲುದಾರಿಕೆ ಇರುವಂತಿದೆ

ಬಿಡದಿ ಬಳಿಯ ಟೌನ್ ಶಿಪ್ ಯೋಜನೆಯ ಭಾಗದ ರೈತರು ಕೇವಲ ಅರ್ಧ ಎಕರೆ ಜಮೀನನ್ನು ಹೊಂದಿದ್ದಾರೆ. ಹಸು ಕಟ್ಟಿಕೊಂಡು ಬದುಕು ನಡೆಸಿದ್ದಾರೆ. ಅಂತಹ ಸಣ್ಣ ರೈತರ ತಲೆ ಹೊಡೆ ಯುವ ಕೆಲಸ ಕಾಂಗ್ರೆಸ್ ಮಾಡಲು ಮುಂದಾಗಿದೆ ಎಂದು ಕಿಡಿಕಾರಿದ ಅವರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಬಿಡದಿ ಭಾಗದ ಯುವಕರಿಗೆ ಕೃಷಿ ಮತ್ತು ಹೈನುಗಾರಿಕೆ ಜೀವನ ಕಟ್ಟಿಕೊಂಡಿದ್ದಾರೆ.

Support Price for Mangoes: ರಾಜ್ಯದ ರೈತರಿಗೆ ಸಿಹಿ ಸುದ್ದಿ; ತಕ್ಷಣವೇ ಮಾವಿಗೆ ಬೆಂಬಲ ಬೆಲೆ ಘೋಷಿಸುವ ಭರವಸೆ ಕೊಟ್ಟ ಕೇಂದ್ರ ಕೃಷಿ ಸಚಿವ

ಮಾವಿಗೆ ಬೆಂಬಲ ಬೆಲೆ ಘೋಷಿಸುವ ಭರವಸೆ ಕೊಟ್ಟ ಕೇಂದ್ರ ಕೃಷಿ ಸಚಿವ

ಪ್ರಸಕ್ತ ಹಂಗಾಮಿನಲ್ಲಿ ರೈತರು ಎದುರಿಸುತ್ತಿರುವ ಬೆಲೆ ಕುಸಿತ ಸಂಕಷ್ಟವನ್ನು ತಗ್ಗಿಸಲು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ (ಎಂಐಎಸ್) ಮೂಲಕ ನೆರವಾಗಬೇಕು ಹಾಗೂ ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಅಡಿಯಲ್ಲಿ ಬೆಂಬಲ ಬೆಲೆ ನೀಡಬೇಕು ಎಂದು ಕೇಂದ್ರ ಕೃಷಿ ಸಚಿವರನ್ನು ಸಚಿವ ಕುಮಾರಸ್ವಾಮಿ ಅವರು ಕೋರಿದ್ದಾರೆ. ಇದಕ್ಕೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದಾರೆ.

Gubbi News: ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಜೂ.29ರಂದು ಜಾಗೃತಿ ಸಂವಾದ

ರೋಗಮುಕ್ತ ಸಮಾಜ ನಿರ್ಮಾಣಕ್ಕೆ ಜೂ.29ರಂದು ಜಾಗೃತಿ ಸಂವಾದ

ಆಹಾರ ತಜ್ಞ ಡಾ.ಖಾದರ್ ವಿದೇಶದಲ್ಲಿ ಹತ್ತಾರು ಲಕ್ಷ ವೇತನ ಪಡೆಯುವ ಅವಕಾಶ ತೊರೆದು ನಮ್ಮ ನೆಲದ ವಿಷಯುಕ್ತ ಮಣ್ಣು, ಪ್ಲಾಸ್ಟಿಕ್ ಹಾವಳಿ, ಅನಾರೋಗ್ಯಕರ ಆಹಾರ ಪದ್ಧತಿ, ವಿಷಯುಕ್ತ ಆಹಾರ ಈ ಬಗ್ಗೆ ಅಧ್ಯಯನ ನಡೆಸಿ ಉತ್ತಮ ಆರೋಗ್ಯಕ್ಕೆ ಆಹಾರ ಪದ್ಧತಿ ಹಾಗೂ ರಾಸಾಯನಿಕ ಮುಕ್ತ ಕೃಷಿ ಬಗ್ಗೆ ಜಾಗೃತಿ ಮೂಡಿಸುತ್ತಾ ಮನೆ ಮಾತಾಗಿದ್ದಾರೆ.

Puttur News: ನಾಪತ್ತೆಯಾಗಿದ್ದ ಸಾಕು ನಾಯಿ ‘ಚಿನ್ನು’ ಹುಡುಕಿಕೊಟ್ಟ ವ್ಯಕ್ತಿಗೆ 50 ಸಾವಿರ ರೂ. ಬಹುಮಾನ ನೀಡಿದ ಮಾಲೀಕ!

ಸಾಕು ನಾಯಿ 'ಚಿನ್ನು' ಹುಡುಕಿಕೊಟ್ಟ ವ್ಯಕ್ತಿಗೆ 50 ಸಾವಿರ ಬಹುಮಾನ!

ಮೂರು ವಾರಗಳ ಹಿಂದೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ನಾಯಿಯನ್ನು ಹುಡುಕಿಕೊಟ್ಟವರಿಗೆ ನಗದು ಬಹುಮಾನ ನೀಡಲಾಗುವುದು ಎಂದು ಪುತ್ತೂರಿನ ಶ್ವಾನಪ್ರೇಮಿ ಗಣೇಶ್ ಕೇರ ಅವರು ಜಾಹೀರಾತು ನೀಡಿದ್ದರು. ಇದಾದ ಬಳಿಕ ಪೋಳ್ಯ ಪರಿಸರದವರೇ ಆದ ಪುರಂದರ ಎಂಬುವವರು ಈ ನಾಯಿಯನ್ನು ಯಶಸ್ವಿಯಾಗಿ ಹುಡುಕಿಕೊಟ್ಟಿದ್ದಾರೆ. ಅವರಿಗೆ ನಾಯಿಯ ಮಾಲೀಕ 50 ಸಾವಿರ ನಗದು ಬಹುಮಾನ ನೀಡಿದ್ದಾರೆ.

Tumkur Murder Case: 30 ಲಕ್ಷ ರೂ. ವಿಮೆ ಹಣದ ಆಸೆಗಾಗಿ ತಮ್ಮನನ್ನೇ ಕೊಂದ ಪಾಪಿ ಅಣ್ಣ!

30 ಲಕ್ಷ ರೂ. ವಿಮೆ ಹಣದ ಆಸೆಗಾಗಿ ತಮ್ಮನನ್ನೇ ಕೊಂದ ಪಾಪಿ ಅಣ್ಣ!

ತುಮಕೂರು ಜಿಲ್ಲೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಮೇಶ್‌ ಎಂಬಾತನ ಕೊಲೆ ನಡೆದಿತ್ತು. ಮೊದಲಿಗೆ ಅಪಘಾತದಲ್ಲಿ ನನ್ನ ಸಹೋದರ ಮೃತಪಟ್ಟಿದ್ದಾನೆ ಎಂದು ಅಣ್ಣ ದೂರು ನೀಡಿದ್ದ. ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು, ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗದಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಸ್ಥಾಪಿಸಿ: ಸಿಎಂಗೆ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ನಿಯೋಗ ಮನವಿ

ಶಿವಮೊಗ್ಗದಲ್ಲಿ ಹೈಕೋರ್ಟ್‌ ಸಂಚಾರಿ ಪೀಠ ಸ್ಥಾಪಿಸಲು ಸಿಎಂಗೆ ಮನವಿ

BY Raghavendra: ವಿಧಾನಸೌಧದಲ್ಲಿ ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ಶಿವಮೊಗ್ಗ ಜನಪ್ರತಿನಿಧಿಗಳು ಹಾಗೂ ವಕೀಲರ ನಿಯೋಗವು, ಶಿವಮೊಗ್ಗದಲ್ಲಿ ಉಚ್ಚ ನ್ಯಾಯಾಲಯದ ಸರ್ಕ್ಯೂಟ್ (ಸಂಚಾರಿ) ಪೀಠ ಸ್ಥಾಪಿಸುವ ಕುರಿತು ಮನವಿ ಸಲ್ಲಿಸಲಾಯಿತು.

ನನ್ನ ಹೆಸರಿನಲ್ಲಿರುವುದು 32 ಎಕರೆ ಜಮೀನು ಮಾತ್ರ, 100 ಎಕರೆ ಅಲ್ಲ: ಸಚಿವ ಎಂ.ಬಿ.ಪಾಟೀಲ್‌ಗೆ ಅನಿತಾ ಕುಮಾರಸ್ವಾಮಿ ತಿರುಗೇಟು

ನನ್ನ ಹೆಸರಿನಲ್ಲಿರುವುದು 32 ಎಕರೆ ಜಮೀನು ಮಾತ್ರ: ಅನಿತಾ ಕುಮಾರಸ್ವಾಮಿ

Anitha Kumaraswamy: ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಸೇರಿದ ಸುಮಾರು 100 ಎಕರೆ ಜಮೀನು, ಬಿಡದಿ ಟೌನ್‌ಶಿಪ್‌ ವ್ಯಾಪ್ತಿಯಲ್ಲಿ ಬರುತ್ತದೆ. ಈಗ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ನಾಟಕ ಎಂದು ಎಂ.ಬಿ.ಪಾಟೀಲ್ ಟೀಕಿಸಿದ್ದರು. ಇದಕ್ಕೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಸ್ಟಾರ್ಟ್‌ಅಪ್‌ ಆರಂಭಿಸಲು 15 ವರ್ಷಗಳ ಬಳಿಕ ಅಮೆರಿಕದಿಂದ ಬೆಂಗಳೂರಿಗೆ ಮರಳಿದ ದಂಪತಿ

H-1B ಅನಿಶ್ಚಿತತೆಗೆ ಬೇಸತ್ತು ಬೆಂಗಳೂರು ವಾಪಸಾದ ದಂಪತಿ

Bengaluru News: 15 ವರ್ಷಗಳ ಕಾಲ ಅಮೆರಿಕದಲ್ಲಿ ವಾಸಿಸಿದ್ದ ಬೆಂಗಳೂರು ಮೂಲದ ಕಾರ್ತಿಕ್ ಮತ್ತು ಆಸ್ಥಾ ದಂಪತಿ ಗ್ರೀನ್ ಕಾರ್ಡ್ ವಿಳಂಬ, H-1B ವೀಸಾ ಅನಿಶ್ಚಿತತೆಯಿಂದ ಬೇಸತ್ತು ಭಾರತಕ್ಕೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಬೆಳೆಯುತ್ತಿರುವ ಸ್ಟಾರ್ಟ್‌ಅಪ್ ಅವಕಾಶಗಳ ಹಿನ್ನೆಲೆಯಲ್ಲಿ ತಮ್ಮದೇ ಉದ್ಯಮ ಆರಂಭಿಸಲಿದ್ದಾರೆ.

"ತಾಯಿ ನನ್ನನ್ನು ಕಂಟ್ರೋಲ್‌ ಮಾಡುತ್ತಿದ್ದಳು"; ಕುಟುಂಬಸ್ಥರ ಕೊಲೆ ಬಗ್ಗೆ ಹಂತಕಿ ಶ್ವೇತಾ ಹೇಳಿದ್ದೇನು?

ಕುಟುಂಬಸ್ಥರ ಕೊಲೆ ಬಗ್ಗೆ ಹಂತಕಿ ಶ್ವೇತಾ ಹೇಳಿದ್ದೇನು?

ಕೆ.ಆರ್. ಪುರಂನ ಶೀಗೆಹಳ್ಳಿಯ ಸಾಯಿ ಗ್ರೀನ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಶ್ವೇತಾಳನ್ನು ತಮಿಳುನಾಡಿನ ಪುದುಚೆರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆಕೆಯ ವಿಚಾರಣೆ ನಡೆಸಲಾಗುತ್ತಿದ್ದು, ಆಕೆ ಕೊಲೆ ಬಗ್ಗೆ ಹಲವು ಹೇಳಿಕೆಯನ್ನು ನೀಡಿದ್ದಾಳೆ. ಕೊಲೆಯ ನಂತರ ಶ್ವೇತಾ ಮತ್ತು ಆಕೆಯ ಬಾಯ್‌ಫ್ರೆಂಡ್ ಕೆನತ್ ಪ್ರತ್ಯೇಕವಾಗಿ ಹೋಗಿದ್ದರು.

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೂ ವಿಜೃಂಭಣೆಯಿಂದ ಆಚರಿಸಬೇಕು: ಡಾ. ಎಸ್. ಸಂಗಮೇಶ್

ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವಿಧಾನಸೌಧ ಮುಂಭಾಗದಲ್ಲೂ ಆಚರಿಸಬೇಕು

ಬೆಂಗಳೂರು ನಗರ ನಿರ್ಮಾತೃ, ದೂರದೃಷ್ಟಿಯ ಆಡಳಿತಗಾರ ಹಾಗೂ ಕನ್ನಡ ನಾಡಿನ ಹೆಮ್ಮೆಯ ಪ್ರತೀಕವಾಗಿರುವ ನಾಡಪ್ರಭು ಕೆಂಪೇಗೌಡರ ಕೊಡುಗೆಗಳನ್ನು ಮುಂದಿನ ಯುವ ಪೀಳಿಗೆಗೆ ಪರಿಚಯಿ ಸುವುದು ಸರ್ಕಾರದ ಕರ್ತವ್ಯವಾಗಿದೆ. ಅವರ ಆದರ್ಶಗಳು, ಆಡಳಿತ ದಕ್ಷತೆ ಹಾಗೂ ಅಭಿವೃದ್ಧಿ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಅವರ ಸ್ಮರಣಾರ್ಥ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ವಿಧಾನಸೌಧ ಮುಂಭಾಗದಲ್ಲಿ ಆಯೋಜಿಸಬೇಕು

Tumkur News: ಜಿಲ್ಲೆಯಲ್ಲಿ ಉಪಶಮನ ಆರೈಕೆ ಬೆಂಬಲಿಸಲು ತುಮಕೂರು ಜಿಲ್ಲಾಡಳಿತ ಮತ್ತು NIRAM ಸಹಯೋಗ

ಜಿಲ್ಲೆಯಲ್ಲಿ ಉಪಶಮನ ಆರೈಕೆ ಬೆಂಬಲಿಸಲು ಸಹಯೋಗ

ಸಾರ್ವಜನಿಕ ಆರೋಗ್ಯ ಮತ್ತು ಉಪಶಮನ ಆರೈಕೆಯಲ್ಲಿ ಜಾಗತಿಕವಾಗಿ ಗುರುತಿಸಲ್ಪಟ್ಟ ನಾಯಕ ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದೊಂದಿಗೆ ಕೇಂದ್ರವು ತಾಂತ್ರಿಕ ಪಾಲುದಾರಿಕೆಯನ್ನು ಹೊಂದಿದೆ. ಪ್ಯಾಲಿಯೇಟಿವ್ ಕೇರ್ ಎನ್ನುವುದು ಗಂಭೀರ, ದೀರ್ಘಕಾಲದ ಅಥವಾ ಮಾರಕ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ರೋಗಲಕ್ಷಣದ ಪರಿಹಾರ, ಸೌಕರ್ಯ ಮತ್ತು ಬೆಂಬಲವನ್ನು ಒದಗಿಸಲು ಪ್ರಯತ್ನಿಸುವ ವಿಶೇಷ ಮತ್ತು ಸಮಗ್ರ ಆರೈಕೆಯ ರೂಪವಾಗಿದೆ.

Loading...