ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

‌ಆರಂಭದಲ್ಲೇ ವಿವಾದದ ಕಿಡಿ ಹೊತ್ತಿಸಿದ ಜಮೀರ್

ಆರಂಭದಲ್ಲೇ ವಿವಾದದ ಕಿಡಿ ಹೊತ್ತಿಸಿದ ಜಮೀರ್

ಪಾಕ್ ಪರ ಘೋಷಣೆ ಕೂಗಿದರೂ ಸುಮ್ಮನಿದ್ರಿ. ಧ್ವಜಾರೋಹಣಕ್ಕೆ ಒಬ್ಬ ಸಚಿವ ಹೋಗಲ್ಲ ಅಂದ್ರೂ ಸುಮ್ಮನೆ ಇರುತ್ತೀರಾ? ಎಂದು ಸಚಿವ ಜಮೀರ್ ವಿರುದ್ಧ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದರು. ಸಚಿವ ಜಮೀರ್ ಪರ ಡಿಸಿಎಂ ಜಿ.ಪರಮೇಶ್ವರ್ ಸ್ಪಷ್ಟನೆಗೆ ಪ್ರಯತ್ನಿಸುತ್ತಾ, ಸಚಿವ ಜಮೀರ್ ಮನವಿ ಕೊಟ್ಟಿರುವುದು ಬೇರೆ ಜಿಲ್ಲಾ ಉಸ್ತುವಾರಿ ಕೊಡಿ ಅಂತ. ಇದರಲ್ಲಿ ಬೇರೇನು ಇಲ್ಲ ಎಂದು ಸಮರ್ಥಿಸಿ ಕೊಂಡರು. ಇದಕ್ಕೆ ಆಕ್ಷೇಪಿಸಿದ ಸುನಿಲ್ ಕುಮಾರ್, ನೀವು ಸುಮ್ಮನೆ ಸಮರ್ಥನೆ ಮಾಡಬೇಡಿ. ರಾಷ್ಟ್ರ ಧ್ವಜ ಹಾರಿಸಲು ಸಮಯ ಇಲ್ಲ ಅಂದರೆ ಹೇಗೆ? ಎಂದು ಪ್ರಶ್ನಿಸಿದರು.

ವಿಧಾನಸಭಾಧ್ಯಕ್ಷರಾಗಿ ರೋಣ ಶಾಸಕ ಜಿ.ಎಸ್.ಪಾಟೀಲ್ ಅವಿರೋಧ ಆಯ್ಕೆ, ಮೇಲ್ಮನೆ ನೂತನ ಸಭಾಪತಿಯಾಗಿ ಸಲೀಂ ಆಯ್ಕೆ

ವಿಧಾನಸಭಾಧ್ಯಕ್ಷರಾಗಿ ರೋಣ ಶಾಸಕ ಜಿ.ಎಸ್.ಪಾಟೀಲ್ ಅವಿರೋಧ ಆಯ್ಕೆ

ವಿಧಾನಸಭೆಯಲ್ಲಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಶಾಸಕರ ಗೈರಿನ ನಡುವೆಯೇ ಜಿ.ಎಸ್.ಪಾಟೀಲ್ ಅವರು ಸಭಾಧ್ಯಕ್ಷರಾಗಿ ಆಯ್ಕೆಯಾದರು. ಇನ್ನು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್‌ನ ಹಿರಿಯ ಸದಸ್ಯ ಸಲೀಂ ಅಹ್ಮದ್ ಅವರು ಬಿಜೆಪಿಯ ಪಿ.ಎಚ್.ಪೂಜಾರ್ ಅವರನ್ನು ಎಂಟು ಮತಗಳ ಅಂತರದಿಂದ ಸೋಲಿಸಿ ಮೇಲ್ಮ ನೆಯ ನೂತನ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ಸಲೀಂ ಅಹ್ಮದ್ ಪರ 38 ಮತಗಳು ಚಲಾವಣೆಯಾದರೆ, ಪೂಜಾರ್ ಪರ 30 ಮತಗಳು ಬಂದವು.

Suspected Terrorist: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

ಭಯೋತ್ಪಾದಕರ ಜತೆ ಸಂಪರ್ಕ; ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!

Bengaluru News: ‌ಪಶ್ಚಿಮ ಬಂಗಾಳದ ಉತ್ತರ ಪರಗಣ ಮೂಲದ ಶಂಕಿತ ಉಗ್ರನನ್ನು ಖಚಿತ ಮಾಹಿತಿ ಆಧರಿಸಿ ಡಿಸಿಪಿ ನಾರಾಯಣ್‌ ನೇತೃತ್ವದ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ: ರಾಘವೇಶ್ವರ ಭಾರತೀ ಶ್ರೀ

ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಹಸಿವು ಎಂಬುದು ಸಾಕ್ಷಾತ್ ಪರಮಾತ್ಮನೇ ಆಗಿದ್ದು, ಜಠರಾಗ್ನಿಯು ಪಿತ್ತರೂಪದಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಅದರ ಮೂಲ ಸ್ವರೂಪ ದೈವಿಕವಾಗಿದೆ. ಜಠರಾಗ್ನಿಯು ಜೀವಶಕ್ತಿಯ ಕೇಂದ್ರವಾಗಿದ್ದು, ಈ ಕುರಿತಾಗಿ ಶೃತಿಸ್ಮೃತಿಗಳ ಉಲ್ಲೇಖಗಳಿವೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

Ricky Kej: ಸದ್ಗುರುಗಳ ನೇತೃತ್ವದ ಸಾಯಿ ಸಿಂಫೋನಿ ಆರ್ಕೆಸ್ಟ್ರಾದೊಂದಿಗೆ ಸಹಯೋಗ ವಹಿಸುವೆ: ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ರಿಕಿ ಕೇಜ್

ಸಾಯಿ ಸಿಂಫೋನಿ ಆರ್ಕೆಸ್ಟ್ರಾದೊಂದಿಗೆ ಸಹಯೋಗ ವಹಿಸುವೆ: ರಿಕಿ ಕೇಜ್

sai symphony orchestra: ನೂರು ಕೋಟಿಗೂ ಹೆಚ್ಚು ಜನರಿರುವ ಭಾರತದಲ್ಲಿ ಒಂದೇ ಒಂದು ಸಿಂಫೋನಿ ಆರ್ಕೆಸ್ಟ್ರಾ ಇದೆ. ಅದು ಸಾಯಿ ಸಿಂಫೋನಿ ಆರ್ಕೆಸ್ಟ್ರಾ. ನಮ್ಮ ಜನರು ಇದರ ಮಹತ್ವ ಅರಿಯಬೇಕು ಎಂದು ಖ್ಯಾತ ಸಂಗೀತ ಕಲಾವಿದ ಹಾಗೂ ಹಲವು ಬಾರಿ ಗ್ರ್ಯಾಮಿ ಪ್ರಶಸ್ತಿ ಪಡೆದಿರುವ ರಿಕಿ ಕೇಜ್ ಕಿವಿಮಾತು ಹೇಳಿದ್ದಾರೆ.

ನೂತನ ಪೆಟ್ರೋಲ್ ಬಂಕ್‌ಗೆ ಭೇಟಿ ನೀಡಿ ಶುಭ ಹಾರೈಸಿದ ಗೋದಾನಿ ಹರೀಶ್ ಕೆ.ರೆಡ್ಡಿ

ನೂತನ ಪೆಟ್ರೋಲ್ ಬಂಕ್‌ಗೆ ಭೇಟಿ ನೀಡಿ ಶುಭ ಹಾರೈಸಿದ ಹರೀಶ್ ಕೆ.ರೆಡ್ಡಿ

ಹುನೆಗಲ್ ಸಮೀಪ ನೂತನವಾಗಿ ಆರಂಭಗೊಂಡಿರುವ ಪೆಟ್ರೋಲ್ ಬಂಕ್‌ಗೆ ಶ್ರೀ ಹರಿಕೃಷ್ಣ ಫೌಂಡೇಶನ್ ಅಧ್ಯಕ್ಷ ಹಾಗೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮುಖಂಡ ಗೋದಾನಿ ಹರೀಶ್ ಕೆ.ರೆಡ್ಡಿ ಅವರು ಭೇಟಿ ನೀಡಿ, ಸಂಸ್ಥೆಯ ಮಾಲೀಕರಾದ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ನಾಗೇಶ್ ಹಾಗೂ ಅವರ ಸಹೋದರ ಎಸ್.ಎ.ಟಿ. ನಾರಾಯಣಸ್ವಾಮಿ ಅವರಿಗೆ ಶುಭ ಹಾರೈಸಿದರು.

ನೈಜಿರಿಯಾದ ಕತ್ತಲಲ್ಲಿ ಕಾರಿನ ಬಾಗಿಲು ಬಡಿದ ಮಕ್ಕಳು ಇಂದು ವೈದ್ಯರು: ಸದ್ಗುರು ಶ್ರೀ ಮಧುಸೂದನ ಸಾಯಿ

ನಮ್ಮ ಸೇವೆಗೆ ದೇಶ ಅಥವಾ ಭಾಷೆಯ ಗಡಿಗಳು ಇಲ್ಲ: ಶ್ರೀ ಮಧುಸೂದನ ಸಾಯಿ

Sadguru Sri Madhusudan Sai: "ಒನ್ ವರ್ಲ್ಡ್ ಒನ್ ಫ್ಯಾಮಿಲಿ" ಎನ್ನುವುದು ನಮಗೆ ಹೊಸ ವಿಚಾರವಲ್ಲ. "ವಸುಧೈವ ಕುಟುಂಬಕಂ" ಎನ್ನುವ ನಮ್ಮ ಋಷಿಗಳ ಆಶಯವು ಅದೇ ಆಗಿದೆ. ಒಮ್ಮೆ ನಮ್ಮ ಮನಸ್ಸಿನಲ್ಲಿ ಈ ಭಾವನೆ ಬಂದುಬಿಟ್ಟರೆ ಜಗತ್ತಿನಲ್ಲಿ ಯಾರೂ ನಮಗೆ ಸಂಬಂಧಪಡದವರು ಎನ್ನಿಸುವುದಿಲ್ಲ. ಎಲ್ಲರ ಕಷ್ಟಗಳಿಗೂ ಸ್ಪಂದಿಸುವ ಮನೋಭಾವ ಬಂದುಬಿಡುತ್ತದೆ ಎಂದು "ಒನ್ ವಲ್ಡ್ ಒನ್ ಫ್ಯಾಮಿಲಿ ಮಿಷನ್" ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದ್ದಾರೆ.

Chikkaballapur News: ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಇಒ ಡಾ.ನವೀನ್ ಭಟ್

ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಿಇಒ ಡಾ.ನವೀನ್ ಭಟ್

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ನವೀನ್ ಭಟ್, ಭಾ.ಆ.ಸೇ., ಅವರು ಶುಕ್ರವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿ ಯನ್ನು ವೀಕ್ಷಿಸಿ ಪರಿಶೀಲಿಸಿದರು

Pramod Muthalik: ವಾಪಸಂದ್ರ ಮೂಲ ಮಠ ಅತಿಕ್ರಮಣ ಆರೋಪ: ತೆರವುಗೊಳಿಸಿ ಕ್ರಮಕ್ಕೆ ಪ್ರಮೋದ್ ಮುತಾಲಿಕ್ ಆಗ್ರಹ

ಅತಿಕ್ರಮಣ ಆರೋಪ: ತೆರವುಗೊಳಿಸಿ ಕ್ರಮಕ್ಕೆ ಪ್ರಮೋದ್ ಮುತಾಲಿಕ್ ಆಗ್ರಹ

ಮೂಲ ಮಠವು ಕೊಂಡಲಯ್ಯ ಹಾಗೂ ನಿಡುಮಾಮಡಯ್ಯ ಜಂಗಮಾದಿಗಳಿಗೆ ಸೇರಿದ್ದು, ಅವರ ಲಿಂಗೈಕ್ಯದ ಬಳಿಕ ಸರ್ಕಾರದ ಅಧೀನಕ್ಕೆ ಬಂದಿದ್ದು, ಮಠಕ್ಕೆ ಸಂಬಂಧಿಸಿದ ದಾಖಲೆಗಳು ಮುಜರಾಯಿ ಇಲಾಖೆಯಲ್ಲಿವೆ ಎಂದು ತಿಳಿಸಿದರು. ಆದರೆ, 2007ರ ಬಳಿಕ ಬಾಗೇಪಲ್ಲಿ ತಾಲೂಕಿನ ಗೂಳೂರು ಮಠದವರು ವಾಪಸಂದ್ರ ಜಂಗಮ ಮಠಕ್ಕೆ ಅತಿಕ್ರಮವಾಗಿ ಪ್ರವೇಶಿಸಿದ್ದಾರೆ

Gauribidanur News: ಓಂ ಶಕ್ತಿ ದೇವಾಲಯದಲ್ಲಿ ಆಷಾಢ ಅಮಾವಾಸ್ಯೆ: ಭಕ್ತಿಭಾವದಿಂದ ಅಂಬಲಿ ಕಲಶೋತ್ಸವ

ಓಂ ಶಕ್ತಿ ದೇವಾಲಯದಲ್ಲಿ ಆಷಾಢ ಅಮಾವಾಸ್ಯೆ

ಮುಂಜಾನೆಯಿಂದಲೇ ದೇವಾಲಯದಲ್ಲಿ ಹೋಮ, ಹವನ ಸೇರಿದಂತೆ ವಿವಿಧ ದೇವತಾ ಕಾರ್ಯ ಗಳು ಜರುಗಿದವು. ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ದೇವಿಗೆ ಪೂಜೆ ಸಲ್ಲಿಸಿ, ಕುಂಕುಮಾ ರ್ಚನೆ ಹಾಗೂ ದೀಪ ಬೆಳಗಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ಅಂಬಳಿ ಕಲಶೋತ್ಸವ ಭಕ್ತಿಭಾವದಿಂದ ನೆರವೇರಿತು.

Rapido Cab Service: ಕರ್ನಾಟಕದಲ್ಲಿ ಕ್ಯಾಬ್ ಸೇವೆ ನೀಡಲು ರ‍್ಯಾಪಿಡೋಗೆ ಸರ್ಕಾರದಿಂದ ಪರವಾನಗಿ

ಕರ್ನಾಟಕದಲ್ಲಿ ಕ್ಯಾಬ್ ಸೇವೆ ನೀಡಲು ರ‍್ಯಾಪಿಡೋಗೆ ಸರ್ಕಾರದಿಂದ ಪರವಾನಗಿ

ರ‍್ಯಾಪಿಡೋ ಸೇವೆಯನ್ನು ನಿರ್ವಹಿಸುವ ರೋಪೆನ್ ಟ್ರಾನ್ಸ್‌ಪೋರ್ಟೇಶನ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಹೊಸ ಪರವಾನಗಿಯಿಂದ ರಾಜ್ಯದಲ್ಲಿ ತನ್ನ ಕ್ಯಾಬ್ ಕಾರ್ಯಾಚರಣೆಗೆ ನಿಯಂತ್ರಣಾತ್ಮಕ ಸ್ಪಷ್ಟತೆ ದೊರೆತಿದೆ ಎಂದು ತಿಳಿಸಿದೆ. 2015ರಲ್ಲಿ ಆರಂಭವಾದ ರ‍್ಯಾಪಿಡೋ ಸದ್ಯ ದೇಶದ 400ಕ್ಕೂ ಹೆಚ್ಚು ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.

Chikkaballapur News: ಕಾವ್ಯಕ್ಕೆ ಸ್ವರವೇ ಜೀವ, ಸಾಹಿತ್ಯಕ್ಕೆ ಅದು ಬದುಕಿನ ದಾರಿ: ಚಿಕ್ಕಬಳ್ಳಾಪುರವನ್ನು ಸಾಂಸ್ಕೃತಿಕ ಜಿಲ್ಲೆ ಎಂದು ಘೋಷಿಸಿ ನಾಗೇಂದ್ರಬಾಬು ಆಗ್ರಹ

ಕಾವ್ಯಕ್ಕೆ ಸ್ವರವೇ ಜೀವ, ಸಾಹಿತ್ಯಕ್ಕೆ ಅದು ಬದುಕಿನ ದಾರಿ

ಮನುಷ್ಯನಿಗೆ ಮಾತು ಬರುವುದಕ್ಕೂ ಮುನ್ನ ಭಾವನೆ ಇತ್ತು. ಆ ಭಾವನೆಗೆ ಮಾತು ಸಿಕ್ಕಾಗ ಭಾಷೆ ಹುಟ್ಟಿತು. ಆ ಭಾಷೆಗೆ ಲಯ ಸಿಕ್ಕಾಗ ಕಾವ್ಯ ಹುಟ್ಟಿತು. ಕಾವ್ಯ ನಮ್ಮ ಬದುಕಿನ ಕನ್ನಡಿಯಷ್ಟೇ ಅಲ್ಲ, ಕೆಲವೊಮ್ಮೆ ಬದುಕಿಗೆ ದಾರಿದೀಪವೂ ಆಗುತ್ತದೆ ಎಂದು ಟಿ.ಎಸ್. ನಾಗೇಂದ್ರ ಬಾಬು ಹೇಳಿದರು.

Chikkaballapur News: ಹೋರಾಟದಿಂದ ಉಳಿದ ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ; ವಿದ್ಯಾರ್ಥಿಗಳಿಂದ ಪ್ರತಿಜ್ಞೆ

ಹೋರಾಟದಿಂದ ಉಳಿದ ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸರ್ಕಾರದ ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆಯಡಿ ಮುಚ್ಚುವ ಭೀತಿಯಲ್ಲಿದ್ದ ಸರ್ಕಾರಿ ಶಾಲೆಗಳನ್ನು ಸಾರ್ವಜನಿಕರು ಹಾಗೂ ಎಐಡಿಎಸ್‌ಒ ನಡೆಸಿದ ಹೋರಾಟದ ಫಲವಾಗಿ ಉಳಿಸಿಕೊಂಡಿರುವ ಹಿನ್ನೆಲೆ ಯಲ್ಲಿ, ಗೌರಿಬಿದನೂರು ಮತ್ತು ಬಾಗೇಪಲ್ಲಿ ತಾಲೂಕಿನ ವಿವಿಧ ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಯ ಅಂಗವಾಗಿ ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು

Gubbi News: ಮಾದಿಗ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ: ಕಡಬ ಶಂಕರ್

ಮಾದಿಗ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ: ಕಡಬ ಶಂಕರ್

ತಾಲೂಕಿನ ಹಲಸಿನ ನಾಗೇನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ನಾಮಫಲಕ ಅನಾವರಣಗೊಳಿಸಿ ಮಾತನಾಡಿ,  ಮೊದಲು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಉದ್ಯೋಗವಕಾಶ ಕಲ್ಪಿಸಿ ಕೊಟ್ಟಾಗ ಮಾತ್ರ ಮಾದಿಗ ಸಮುದಾಯ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು.  ಮುಖಂಡ ಅದಲಗೆರೆ ಈಶ್ವರಯ್ಯ ಮಾತನಾಡಿ ಪ್ರತಿ ಗ್ರಾಮಗಳಲ್ಲಿ ಯುವ ಸಂಘಟನೆ ಸ್ಥಾಪನೆ ಯಾಗುವುದರಿಂದ ಜನಾಂಗಕ್ಕೆ ಆಗುವ ಅನ್ಯಾಯ ತಡೆದು ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಸಹಕರಿಸಬಹುದು

Chikkaballapur News: ಮಳೆ ಕೊರತೆಯಿಂದ ಬಿತ್ತನೆ ವೈಫಲ್ಯ: ಬೆಳೆ ವಿಮೆಗೆ ರೈತರ ನೋಂದಣಿ ಹೆಚ್ಚಳ: ಜಿ.ಪ್ರಭು

ಮಳೆ ಕೊರತೆಯಿಂದ ಬಿತ್ತನೆ ವೈಫಲ್ಯ: ಬೆಳೆ ವಿಮೆಗೆ ರೈತರ ನೋಂದಣಿ ಹೆಚ್ಚಳ

ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೂನ್‌ ನಿಂದ ಆ.12ರವರೆಗೆ ಜಿಲ್ಲೆಯಲ್ಲಿ ವಾಡಿಕೆಯಂತೆ 186.9 ಮಿ.ಮೀ. ಮಳೆಯಾಗಬೇಕಾಗಿದ್ದರೂ ಕೇವಲ 114 ಮಿ.ಮೀ. ಮಳೆಯಾಗಿದೆ. ಇದರಿಂದ ಒಟ್ಟಾರೆ ಶೇ.39.21ರಷ್ಟು ಮಳೆ ಕೊರತೆ ದಾಖಲಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಯ 86 ಮಿ.ಮೀ. ಮಳೆಗೆ ಬದಲಾಗಿ ಕೇವಲ 13 ಮಿ.ಮೀ. ಮಳೆಯಾಗಿದ್ದು, ಶೇ.85ರಷ್ಟು ಮಳೆ ಕೊರತೆ ಉಂಟಾಗಿದೆ.

Ration card: ರೇಷನ್‌ ಕಾರ್ಡ್‌ ರದ್ದಾಗುವ ಆತಂಕದಲ್ಲಿದ್ದ ಜನರಿಗೆ ಗುಡ್‌ ನ್ಯೂಸ್‌; ಪರಿಷ್ಕರಣೆ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತ

ರೇಷನ್‌ ಕಾರ್ಡ್‌ ಪರಿಷ್ಕರಣೆ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತ

Ration card verification: ಅನರ್ಹ ಪಡಿತರ ಚೀಟಿ, ನಕಲಿ ದಾಖಲೆ ನೀಡಿ ಪಡೆದಿರುವ ರೇಷನ್‌ ಕಾರ್ಡ್‌ಗಳನ್ನು ಗುರುತಿಸಿ ರದ್ದು ಮಾಡುವ ಪ್ರಕ್ರಿಯೆಯಿಂದಾಗಿ ಜನಸಾಮಾನ್ಯರಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಹೀಗಾಗಿ ಜನರ ಹಿತರಕ್ಷಣೆ ಹಾಗೂ ಪ್ರಸ್ತುತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಡಿತರ ಚೀಟಿ ಪರಿಶೀಲನಾ ಕಾರ್ಯಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ಆಹಾರ ಸಚಿವ ರಿಜ್ವಾನ್‌ ಅರ್ಷದ್‌ ಮಾಹಿತಿ ನೀಡಿದ್ದಾರೆ.

Belagavi News: ಬೆಳಗಾವಿಯಲ್ಲಿ 44 ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ

ಬೆಳಗಾವಿಯಲ್ಲಿ 44 ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ

Belagavi News: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆ.ಎಚ್. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗಾವಿ ಗ್ರಾಮೀಣ ಭಾಗದ 2025-26ನೇ ಸಾಲಿನ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭ ಜರುಗಿತು.

ಹೋಟೆಲ್, ಫ್ಲೈಟ್ ಆಯ್ತು, ಈಗ ಆನ್‌ಲೈನ್‌ನಲ್ಲೇ ಗೈಡ್ ಬುಕ್ಕಿಂಗ್‌!; ಪ್ರವಾಸೋದ್ಯಮ ಸಚಿವಾಲಯ - ಮೇಕ್ ಮೈ ಟ್ರಿಪ್ ಮಹತ್ವದ ಒಪ್ಪಂದ

ಹೋಟೆಲ್, ಫ್ಲೈಟ್ ಆಯ್ತು, ಈಗ ಆನ್‌ಲೈನ್‌ನಲ್ಲೇ ಮಾಡಬಹುದು ಗೈಡ್ ಬುಕ್ಕಿಂಗ್‌!

ಪ್ರಸಿದ್ಧ ಟ್ರಾವೆಲ್ ಪ್ಲಾಟ್‌ಫಾರ್ಮ್ ಮೇಕ್ ಮೈ ಟ್ರಿಪ್ ಇದೀಗ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ. 'ಇನ್‌ಕ್ರೆಡಿಬಲ್ ಇಂಡಿಯಾ' ಮತ್ತು 'ದೇಖೋ ಅಪ್ನಾ ದೇಶ್' ಅಭಿಯಾನದ ಅಡಿಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದೇ ದೇಶದ 60ಕ್ಕೂ ಹೆಚ್ಚು ನಗರಗಳಲ್ಲಿ ಬರೋಬ್ಬರಿ 350ಕ್ಕೂ ಅಧಿಕ ವಿಶೇಷ ಗೈಡೆಡ್ ಟೂರ್‌ಗಳನ್ನು ಆರಂಭಿಸುತ್ತಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್‌

ಶಿವಾನಂದ ನೀಲಣ್ಣನವರ್‌ ಬಂಧನ; 12 ದಿನ ಇಡಿ ಕಸ್ಟಡಿಗೆ ನೀಡಿದ ಕೋರ್ಟ್‌

Shivam Associates Scam: ಶಿವಂ ಅಸೋಸಿಯೇಟ್ಸ್ ಸಂಸ್ಥೆಯು ಕರ್ನಾಟಕ ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರ, ಗೋವಾ ಹಾಗೂ ಛತ್ತೀಸ್‌ಗಢ ರಾಜ್ಯಗಳಾದ್ಯಂತ ಪೋಂಜಿ ಶೈಲಿಯ ಸ್ಕೀಮ್‌ಗಳ ಮೂಲಕ ಸಾರ್ವಜನಿಕರಿಂದ ಅಕ್ರಮವಾಗಿ ಹೂಡಿಕೆ ಸಂಗ್ರಹಿಸಿರುವುದು ಪತ್ತೆಯಾಗಿದೆ. ಹೀಗಾಗಿ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣನವರ್‌ನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಜೋಡಿಯ ದುರಂತ ಅಂತ್ಯ: ಮೈಸೂರಿನಲ್ಲಿ ಯುವತಿ, ಕೇರಳದಲ್ಲಿ ಯುವಕ ಆತ್ಮಹತ್ಯೆ!

ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಜೋಡಿ ದುರಂತ ಅಂತ್ಯ!

ಪ್ರೀತಿಸಿ ಮದುವೆಯಾಗಲು ಸಿದ್ಧಾಗಿದ್ದ ಜೋಡಿ ಆತ್ಮಹತ್ಯೆಗೆ ಶರಣಾಗಿದೆ. ಡಿಸೆಂಬರ್‌ನಲ್ಲಿ ಈ ಜೋಡಿಯ ಮದುವೆ ನಡೆಯಬೇಕಿತ್ತು. ಆದರೆ, ಮದುವೆಗೂ ಕೆಲವೇ ತಿಂಗಳು ಬಾಕಿ ಇರುವಾಗ ಜೋಡಿಯ ಬದುಕು ದುರಂತದಲ್ಲಿ ಅಂತ್ಯವಾಗಿದೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕೇರಳದಲ್ಲಿ ಯುವಕ ಸಾವಿಗೆ ಶರಣಾಗಿದ್ದಾನೆ.

Belagavi News: ಬೆಳಗಾವಿಯ ಜನಸ್ನೇಹಿ ಪೊಲೀಸ್ ಅಧಿಕಾರಿ ಬಿ.ಆರ್.ಗಡ್ಡೇಕರ್‌ಗೆ ರಾಷ್ಟ್ರಪತಿ ಪದಕ ಗೌರವ

ಬೆಳಗಾವಿಯ ಸಿಪಿಐ ಬಿ.ಆರ್.ಗಡ್ಡೇಕರ್‌ಗೆ ರಾಷ್ಟ್ರಪತಿ ಪದಕ ಗೌರವ

Belagavi News: ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ.ಆರ್. ಗಡ್ಡೇಕರ್ ಅವರಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡಲಾಗುವ ಗೌರವ ರಾಷ್ಟಪತಿ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದು, ಇದು ನಗರ ಪೊಲೀಸ್ ಇಲಾಖೆಗೆ ಹೆಮ್ಮೆಯ ಸಂಗತಿಯಾಗಿದೆ.

ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಾಗಿ ಶಾಸಕ ಶ್ರೀನಿವಾಸ ಮಾನೆ ನೇಮಕ

ರಾಜ್ಯ ಗೃಹ ಮಂಡಳಿ ಅಧ್ಯಕ್ಷರಾಗಿ ಶಾಸಕ ಶ್ರೀನಿವಾಸ ಮಾನೆ ನೇಮಕ

ಸಚಿವ ಸ್ಥಾನ ಸಿಗದೇ ಹೋದ ಶಾಸಕರಿಗೆ ನಿಗಮ- ಮಂಡಳಿಗಳ ಅಧ್ಯಕ್ಷ ಹುದ್ದೆಗಳನ್ನು ನೀಡುವ ಮೂಲಕ ಶಾಸಕರ ಅಸಮಾಧಾನ ತಣಿಸಲು ಸಿಎಂ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಶ್ರೀನಿವಾಸ ಮಾನೆ ಅವರಿಗೆ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಸ್ಥಾನ ಸಿಕ್ಕಿದೆ.

PES University: ಎಚ್‌ಎಎಲ್ ಏರೋಥನ್ 2026ರಲ್ಲಿ ಪಿಇಎಸ್ ವಿವಿ ವಿದ್ಯಾರ್ಥಿ ಗೌರವ್.ಎಸ್ ನೇತೃತ್ವದ ತಂಡಕ್ಕೆ ಪ್ರಥಮ ಸ್ಥಾನ

ಎಚ್‌ಎಎಲ್ ಏರೋಥನ್ 2026ರಲ್ಲಿ ಪಿಇಎಸ್ ವಿವಿ ವಿದ್ಯಾರ್ಥಿ ತಂಡ ಪ್ರಥಮ

HAL Aerothon 2026: ಇಂದೋರ್‌ನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ 'ಎಚ್‌ಎಎಲ್ ಏರೋಥನ್ 2026' ರ ಅಂತಿಮ ಸುತ್ತಿನಲ್ಲಿ ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಗೌರವ್ ಎಸ್. ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

2028ರ ಚುನಾವಣೆ ಹೇಗೆ ಎದುರಿಸಬೇಕು ಎನ್ನೋದು ನನಗೆ ಗೊತ್ತಿದೆ; ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು ಎಂದ ಸಿಎಂ

2028ರ ಚುನಾವಣೆ ಹೇಗೆ ಎದುರಿಸಬೇಕು ಎನ್ನೋದು ನನಗೆ ಗೊತ್ತಿದೆ: ಸಿಎಂ

Karnataka Assembly session 2026: ವಿಧಾನಸಭೆಯಲ್ಲಿ ಶುಕ್ರವಾರ ಸಚಿವ ಸಂಪುಟ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ. ನನ್ನ 40 ವರ್ಷಗಳ ರಾಜಕೀಯದಲ್ಲಿ ಏಳು ಬೀಳುಗಳನ್ನು ಕಂಡಿದ್ದು, ನನ್ನದೇ ಆದ ಅನುಭವದಲ್ಲಿ ಹೊಸ ಆಲೋಚನೆಗಳನ್ನು ಹೊಂದಿದ್ದೇನೆ. ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವೆ ಎಂದು ಸಿಎಂ ತಿಳಿಸಿದ್ದಾರೆ.

Loading...