ಪೋಲಿಯೋ ಹನಿ ಪಡೆಯದ ಯಾವ ಮಗುವೂ ಸುರಕ್ಷಿತವಲ್ಲ
ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯ ವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಹನಿಯನ್ನು ತಪ್ಪದೇ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಪಾರು ಮಾಡಿ. ಪೋಲಿಯೋ ಹನಿ ಪಡೆಯದ ಯಾವ ಮಗುವೂ ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು
ಪ್ರತಿಯೊಬ್ಬ ಮಕ್ಕಳಲ್ಲಿಯೂ ಒಂದೊಂದು ರೀತಿಯ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರ್ತಿಸಿ ಪ್ರೋತ್ಸ ಹಿಸುವ ಕೆಲಸವನ್ನು ಪೋಷಕರು ಮಾಡಬೇಕು. ಅಡಗಿರುವ ಪ್ರತಿಭೆಗಳನ್ನು ಹೊರಗೆ ತರಲು ಇಂತಹ ವೇದಿಕೆಗಳು ಬಹಳ ಅನುಕೂಲಕರವಾಗಿವೆ. ಇಂದಿನಿಂದ ಪ್ರತೀ ಭಾನುವಾರ ಚಿಣ್ಣರ ಕಲಾ ಉತ್ಸವ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರಿನ 220/66/11ಕೆ.ವಿ ಇ.ಪಿ.ಐ.ಪಿ ಸ್ಟೇಷನ್ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -3 ರ ರಿಟ್ರೋಫಿಲ್ಲಿಂಗ್ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಹಿನ್ನೆಲೆಯಲ್ಲಿ ಡಿಸೆಂಬರ್ 23ರಂದು ಬೆಳಗ್ಗೆ 10 ಗಂಟೆಯಿಂದ ಜನವರಿ 11ರಂದು ಸಂಜೆ 5 ಗಂಟೆಯವರೆಗೆ ಹಲವು ಸ್ಥಳಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯವಾಗಲಿದೆ.
ಇಸ್ಕಾನ್ ಸಂಸ್ಥಾಪಕ ಶ್ರೀಲ ಪ್ರಭುಪಾದ ಅವರಿಗೆ ಕುಂಭಮೇಳದ ಸಂದರ್ಭದಲ್ಲಿ ಅಖಾಡ ಪರಿಷತ್ ವತಿಯಿಂದ ನೀಡಲಾದ `ವಿಶ್ವ ಗುರು' ಗೌರವವನ್ನು ಶ್ರೀ ಕೃಷ್ಣನಿಗೆ ಭಾನುವಾರ ಸಮರ್ಪಿಸಲಾಯಿತು. ಉಡುಪಿ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ಆಶ್ರಯದಲ್ಲಿ ಬೆಂಗಳೂರಿನ ಇಸ್ಕಾನ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
Ayurveda World Summit: ಕಜೆ ಆಯುರ್ವೇದಿಕ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಡಿಸೆಂಬರ್ 25 ರಿಂದ 4 ದಿನಗಳ ಕಾಲ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನದ ಪ್ರಚಾರಾರ್ಥವಾಗಿ ವಿಂಟೇಜ್ ಕಾರ್ ರ್ಯಾಲಿ ಹಾಗೂ ವಾಕಥಾನ್ ಅನ್ನು ಭಾನುವಾರ ಆಯೋಜಿಸಲಾಗಿತ್ತು.
ಜಾಗೃತ ಶಕ್ತಿ ಪೀಠಗಳಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆಯನ್ನು ಫೆ. 24ರಿಂದ ಮಾ. 4ರವರೆಗೆ ಒಂಬತ್ತು ದಿನಗಳ ಕಾಲ ಅದ್ಧೂರಿಯಾಗಿ ನಡೆಸಲು ದೇಗುಲ ಆಡಳಿತ ಮಂಡಳಿ ನಿರ್ಧರಿಸಿದೆ. ಫೆ.24 ರಂದು ದೇವಿಯ ರಥದ ಕಲಶ ಪ್ರತಿಷ್ಠೆ ಮತ್ತು ಜಾತ್ರಾ ಕಲ್ಯಾಣ ಪ್ರತಿಷ್ಠೆ, ಫೆ.25 ರಂದು ಬೆಳಗ್ಗೆ 7.27ಕ್ಕೆ ರಥೋತ್ಸವ ನಡೆಯಲಿದೆ.
ಜಿಲ್ಲೆಯಾದ್ಯಂತ ಇಂದು ಭೂತ್ ಮಟ್ಟದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿ ಕೊಂಡಿದ್ದು, 24ರವರೆಗೆ ಮನೆ ಮನೆ ಭೇಟಿ ಮೂಲಕ ಲಸಿಕಾಕರಣ ಮಾಡಲಾಗುತ್ತದೆ. ಮೊದಲ ದಿನವಾದ ಇಂದು ವಿವಿಧ ಲಸಿಕಾ ಕೇಂದ್ರಗಳಲ್ಲಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿ ಯೋ ಲಸಿಕೆಯನ್ನು ಉಚಿತವಾಗಿ ಹಾಕಲಾಗುತ್ತದೆ.
ಯೋಚನೆಗಳು ಸಂಪೂರ್ಣವಾಗಿ ನಿಂತು ಮನಸ್ಸು ಸ್ಥಿರವಾಗಿರುವ ಸ್ಥಿತಿಯೇ ಧ್ಯಾನ. ಧ್ಯಾನದಿಂದ ಶರೀರದ ಸ್ಥಿರತೆ ಹೆಚ್ಚಾಗುತ್ತದೆ. ಉಸಿರಾಟವು ಸರಾಗವಾಗುತ್ತದೆ. ಶರೀರದಲ್ಲಿರುವ ಕಲ್ಮಶಗಳನ್ನು ಹೊರಹಾಕಲು ಧ್ಯಾನ ಸಹಕಾರಿಯಾಗಿದೆ. ಆತಂಕ, ಕೋಪ, ಭಯ, ಆನಾರೋಗ್ಯಗಳು ಧ್ಯಾನ ಮಾಡುವು ದರಿಂದ ಕಡಿಮೆಯಾಗುತ್ತದೆ. ಜ್ಞಾಪಕ ಶಕ್ತಿಯು ವೃದ್ಧಿಸುತ್ತದೆ. ಪ್ರಸ್ತುತ ಒತ್ತಡದ ಜೀವನಕ್ಕೆ ಧ್ಯಾನ ಹೇಳಿ ಮಾಡಿಸಿದ ಔಷಧವಾಗಿದೆ.
ಡಿ.24 ಮತ್ತು 26ರಂದು ಬೆಂಗಳೂರಿನಲ್ಲಿ ನಿಗದಿಯಾಗಿರುವ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಗಳಲ್ಲಿ ದೆಹಲಿ ತಂಡದ ಪರವಾಗಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳಿಗೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮನವಿ ಮಾಡಿದ್ದಾರೆ.
Laxmi Hebbalkar: 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇನ್ನು ಸತ್ತವರ ಅಕೌಂಟ್ಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಆಗುತ್ತಿರುವ ಬಗ್ಗೆ ಸಚಿವರು ಪ್ರತಿಕ್ರಿಯಿಸಿ, ಈ ಬಗ್ಗೆ ಪರಿಶೀಲನೆ ಮಾಡಿ, ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
DK Shivakumar: ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿದ್ದೀರಿ ಎಂಬ ಪ್ರಶ್ನೆಗೆ ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದಾರೆ. ಮಾಜಿ ಸಚಿವ ರಾಜಣ್ಣ ಅವರು ನಮ್ಮ ಜತೆ ಕೆಲಸ ಮಾಡಿರುವವರು. ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯಗಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಎನ್ಡಿಎ ಮುಖಂಡರ ನಡುವೆ ಭಾರೀ ಪೈಪೋಟಿ ನಡೆದಿತ್ತು. ತಮ್ಮ ಬೆಂಬಲಿತ ಸದಸ್ಯರನ್ನು ಉಳಿಸಿಕೊಳ್ಳಲು ಉಭಯ ಪಕ್ಷಗಳ ನಾಯಕರು ಹರ ಸಾಹಸ ಪಟ್ಟಿದ್ದರು. ಈ ವೇಳೆ ಕೆಲಕಾಲ ರಾಜಕೀಯ ಹೈಡ್ರಾಮಾ ಕೂಡ ನಡೆಯಿತು. ಅಧಿಕಾರ ಹಿಡಿಯಲು ಕಾಂಗ್ರೆಸ್ ನಡೆಸಿದ ತಂತ್ರಗಾರಿಕೆಯನ್ನು ಮೆಟ್ಟಿ ನಿಲ್ಲುವಲ್ಲಿ ಎನ್ಡಿಎ ಯಶಸ್ವಿಯಾಗಿದೆ.
ವಿಶ್ವಸಂಸ್ಥೆ 2024 ಡಿಸೆಂಬರ್ 21ರಂದು ವಿಶ್ವ ಧ್ಯಾನ ದಿನವೆಂದು ಘೋಷಿಸಿದ್ದು ಜಗತ್ತಿನಾದ್ಯಂತ ಈ ದಿನವನ್ನು ಆಚರಿಸುತ್ತಾರೆ. ಧ್ಯಾನದಿಂದ ಏಕಾಗ್ರತೆ ಹೆಚ್ಚಾಗುತ್ತದೆ. ಏಕಾಗ್ರತೆಯಿಂದ ಮಾನಸಿಕ ಸ್ಥಿರತೆ ಮತ್ತು ಸಮತೋಲನವನ್ನು ಸಾಧಿಸಬಹುದು. ನಮ್ಮ ಗುರಿಯನ್ನು ಸಾಧಿಸಲು ಧ್ಯಾನ ಹೆಚ್ಚು ಸಹಕಾರಿ ಯಾಗಿದೆ.
ಲಕ್ಷ್ಮೀಸಾಗರ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಬೆಳೆಸಲು ಎಲ್ಲರೂ ಶ್ರಮಿಸುತ್ತೇವೆ. ಸಂಘದ ಷೇರುದಾರರು ಉತ್ತಮ ಹಾಗೂ ಗುಣಮಟ್ಟದ ಹಾಲನ್ನು ಪೂರೈಸಬೇಕು. ಜೊತೆಗೆ ಸಂಘಕ್ಕೆ ಒಂದು ಕಟ್ಟಡದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲೂ ನಾವೆಲ್ಲರೂ ಶ್ರಮಿಸುತ್ತೇವೆ. ಆದಷ್ಟು ಶೀಘ್ರವಾಗಿ ಸಂಘಕ್ಕೆ ಹೊಸ ನಿವೇಶನ ಹಾಗೂ ಕಟ್ಟಡವನ್ನು ಕಟ್ಟಲು ಎಲ್ಲಾ ರೀತಿಯಲ್ಲೂ ಶ್ರಮಿಸುತ್ತೇವೆ
ವ್ಯವಸಾಯವನ್ನೇ ಮುಖ್ಯ ಕಸುಬಾಗಿಸಿಕೊಂಡು ಸಮಾಜದ ಜೊತೆಯಲ್ಲಿ ಸಹಬಾಳ್ವೆಯಿಂದ ಬದುಕು ತ್ತಿರುವ ಹಿಂದು ಸಾದರ ಸಮಾಜವು ಇತ್ತೀಚಿನ ಕಾಲಘಟ್ಟದಲ್ಲಿ ವ್ಯವಸಾಯದಿಂದ ಸಾಕಷ್ಟು ನಷ್ಟ ಅನುಭವಿಸಿ ಆರ್ಥಿಕವಾಗಿ ಸಂಕಷ್ಟದ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಕೆಲವರಿಗೆ ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ಕೊಡಿಸಲಾಗದೆ ಕೈಚಲ್ಲಿರುವುದನ್ನು ಕಂಡಿದ್ದೇವೆ.
ಗ್ರಂಥಾಲಯಗಳು ಸಹ ಓದುಗರ ಕೊರತೆ ಎದುರಿಸಿದೆ. ಸರ್ಕಾರ ಪುಸ್ತಕಗಳ ಖರೀದಿ ಮಾಡಬೇಕಿದೆ. ಪಟ್ಟಣ ನಗರದಲ್ಲಿ ಪ್ರತಿ ಪ್ರಜೆಯಿಂದ ಲೈಬ್ರರಿ ಸೆಸ್ ವಸೂಲಿ ಮಾಡಲಾಗುತ್ತಿದೆ. ಆದರೆ ಗ್ರಂಥಾ ಲಯಕ್ಕೆ ಪುಸ್ತಕಗಳು ಖರೀದಿ ಆಗುತ್ತಿಲ್ಲ. ಅಂತೂ ಇಂತೂ ಖರೀದಿ ನಡೆದರೆ ಅದರ ಹಣ ಬರಲು ಮೂರು ನಾಲ್ಕು ವರ್ಷ ಬೇಕಿದೆ. ಈ ಜೊತೆಗೆ ಪ್ರಕಾಶಕರ ಸ್ಥಿತಿ ಶೋಚನೀಯ ಎಂದು ಬೇಸರ ವ್ಯಕ್ತಪಡಿಸಿದ ಅವರು ಸರ್ಕಾರ ಪುಸ್ತಕೋದ್ಯಮ ರಕ್ಷಿಸಬೇಕಿದೆ. ಈ ಕಾಯಕ ಎಲ್ಲಾ ಕನ್ನಡಿಗರ ಕರ್ತವ್ಯ
Pulse Polio Campaign 2025: ಆರೋಗ್ಯ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪೋಲಿಯೋ ಬೂತ್, ಪ್ರಾಥಮಿಕ ಆಸ್ಪತ್ರೆ ಮಾಹಿತಿ ಪಡೆಯಲು QR ಕೋಡ್ ಬಿಡುಗಡೆ ಮಾಡಿದೆ. ಹಾಗೆಯೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಜಿಬಿಎ ನೀಡಿರುವ ಕ್ಯೂಆರ್ ಕೋಡ್ ಮತ್ತು ಲಿಂಕ್ ಮೂಲಕ ಹತ್ತಿರದ ಪೋಲಿಯೋ ಬೂತ್ ಮಾಹಿತಿ ಪಡೆಯಬಹುದಾಗಿದೆ.
ಧ್ಯಾನವು ಜೀವನದಲ್ಲಿ ಶಾಂತಿ ಮತ್ತು ಸಂತೋಷವನ್ನು ತರುವ ಒಂದು ಶಕ್ತಿಯುತವಾದ ಸಾಧನ ವಾಗಿದೆ. ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರು ತಮ್ಮ ಬೋಧನೆಗಳಲ್ಲಿ ಧ್ಯಾನದ ಮಹತ್ವ ವನ್ನು ಸಾರಿದ್ದಾರೆ. ಈ ಕಾರಣದಿಂದ ಮಠದಲ್ಲಿ ಆತ್ಮಧ್ಯಾನ ಮಂದಿರವನ್ನು ನಿರ್ಮಿಸಲಾಗಿದೆ. ಪ್ರತಿನಿತ್ಯ ಧ್ಯಾನಾಸಕ್ತರು ಬಂದು ಧ್ಯಾನವನ್ನು ಮಾಡುತ್ತಾರೆ
ಭಾರತ ಇಂದು 4 ಲಕ್ಷ ಟನ್ ಕಾಫಿಯನ್ನು ಉತ್ಪಾದಿಸುತ್ತಿದ್ದು, ಶೇ.70ರಷ್ಟು ಕಾಫಿ ರಫ್ತು ಮಾಡುತ್ತಿದೆ. ಶೇ.30ರಷ್ಟು ಮಾತ್ರ ಸ್ಥಳೀಯವಾಗಿ ಬಳಕೆಯಾಗುತ್ತಿದೆ. ಚಿಕ್ಕಮಗಳೂರು ಕಾಫಿ, ಅರೋಕೋ ಕಾಫಿ ಸೇರಿದಂತೆ ದೇಶದೆಲ್ಲೆಡೆ ಕಾಫಿ ಬೆಳೆಗೆ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.