ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಜನರ ಜೇಬಿಗೆ ಕತ್ತರಿ ಹಾಕುತ್ತಲೇ 3 ವರ್ಷ ಸವೆಸಿದ್ದು ಒಂದು ಸಾಧನೆಯೇ?: ರಾಜ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ

ಜನರ ಜೇಬಿಗೆ ಕತ್ತರಿ ಹಾಕುತ್ತಲೇ 3 ವರ್ಷ ಸವೆಸಿದ್ದು ಒಂದು ಸಾಧನೆಯೇ?: ಜೋಶಿ

Pralhad Joshi: ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದು ಬಳಿಕ ಒಂದೊಂದೇ ಅಗತ್ಯತೆಗಳ ಬೆಲೆ ಏರಿಸಿ ಜನರ ಜೇಬಿಗೆ ಕತ್ತರಿ ಹಾಕುತ್ತಲೇ ಮೂರು ವರ್ಷ ಸವೆಸಿದ್ದು, ಜನರನ್ನು‌ ದುಸ್ಥಿತಿಗೆ ತಳ್ಳಿರುವುದು ಈ ಸರ್ಕಾರದ ಸಾಧನೆಯೇ? ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

Elephant Marthanda Dies: ದುಬಾರೆಯಲ್ಲಿ ಸಾಕಾನೆಗಳ ಕಾಳಗ; ಗಾಯಗೊಂಡಿದ್ದ ʼಮಾರ್ತಾಂಡʼ ಆನೆ ಚಿಕಿತ್ಸೆ ಫಲಿಸದೆ ಸಾವು

ದುಬಾರೆ ಸಾಕಾನೆಗಳ ಕಾಳಗ; ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ದುಬಾರೆ ಆನೆಗಳ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಮಾರ್ತಾಂಡ ಆನೆ ಗಂಭೀರವಾಗಿ ಗಾಯಗೊಂಡಿತ್ತು. ಕಂಜನ್ ಆನೆಯು ಚೂಪಾದ ದಂತಗಳಿಂದ ಮಾರ್ತಾಂಡನ ಹೊಟ್ಟೆ, ಕಿವಿಯ ಹಿಂಭಾಗ ಹಾಗೂ ಕಾಲುಗಳಿಗೆ ತಿವಿದು ಗಂಭೀರ ಗಾಯಗೊಳಿಸಿತ್ತು. ಇದರಿಂದ ಚಿಕಿತ್ಸೆ ಫಲಿಸದೆ ಮಾರ್ತಾಂಡ ಮೃತಪಟ್ಟಿದೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌; ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆಗೆ ಪ್ರಾರ್ಥನೆ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌

ತಿರುಮಲಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ದಂಪತಿ ಮಂಗಳವಾರ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌ ಅವರು. ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಸಾರಿಗೆ ಮುಷ್ಕರ ನಡೆಸುವಂತಿಲ್ಲ; ಹೈಕೋರ್ಟ್‌ ಖಡಕ್‌ ಆದೇಶ

ರಾಜ್ಯದಲ್ಲಿ ಸಾರಿಗೆ ಮುಷ್ಕರ ನಡೆಸುವಂತಿಲ್ಲ; ಹೈಕೋರ್ಟ್‌

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದರು. ಇದೀಗ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು ಬಸ್ ಮುಷ್ಕರ ಮಾಡಬೇಡಿ ಎಂದು ರಾಜ್ಯದ ಸಾರಿಗೆ ನೌಕರರಿಗೆ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.

ನಾಳೆ ಸಾರಿಗೆ ಮುಷ್ಕರ ನಡೆಯುತ್ತಾ? ಸಂಘಟನೆಗಳಲ್ಲಿಯೇ ಒಡಕು?

ನಾಳೆ ಬಸ್​ ಸಂಚಾರ ಬಂದ್ ಆಗೋದು ಡೌಟ್​?

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಒಕ್ಕೂಟಗಳು ಜಂಟಿಯಾಗಿ ಮೇ 20ರಿಂದ (ಬುಧವಾರ) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಆದರೆ ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ಮುಷ್ಕರದಿಂದ ಹಿಂದೆ ಸರಿದಿದೆ. ಜಂಟಿ ಕ್ರಿಯಾ ಸಮಿತಿಯಿಂದ ಹೊರ ಬಂದಿದೆವೆಂದು ಪತ್ರ ಬರೆದಿದೆ.

ದುಬಾರೆ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ; ಪ್ರವಾಸಿಗರಿಗೆ ಮಾರ್ಗಸೂಚಿ ಪ್ರಕಟ

ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ; ಪ್ರವಾಸಿಗರಿಗೆ ಮಾರ್ಗಸೂಚಿ ಪ್ರಕಟ

ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರಕ್ಕೆ ಭೇಟಿ ನೀಡಿದ್ದ ಮಹಿಳೆಯೊಬ್ಬರು ಎರಡು ಸಾಕಾನೆಗಳ ನಡುವೆ ನಡೆದ ದಿಢೀರ್ ಕಾಳಗಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆ ಬೆನ್ನಲ್ಲೇ ಎಚ್ಚೆತ್ತುಕೊಂಡು ಅರಣ್ಯ ಇಲಾಖೆ, ಇನ್ಮುಂದೆ ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

HDDevegowda Birthday Celebration: ಜಿಲ್ಲೆಯಾದ್ಯಂತ ಸೇವಾ ಕಾರ್ಯಗಳ ಮೂಲಕ ಮಾಜಿ ಪ್ರಧಾನಿ ದೇವೇಗೌಡರ ಹುಟ್ಟು ಹಬ್ಬದ ಆಚರಣೆ

ಸೇವಾ ಕಾರ್ಯಗಳ ಮೂಲಕ ಮಾಜಿ ಪ್ರಧಾನಿ ಹುಟ್ಟುಹಬ್ಬ ಆಚರಣೆ

ಜಿಲ್ಲಾ ಜೆಡಿಎಸ್ ವತಿಯಿಂದ ಮಾಜಿ ಪ್ರಧಾನಿ ಹೆಚ್ ದೇವೇಗೌಡ ಅವರ ಹುಟ್ಟುಹಬ್ಬದ ಅಂಗ ವಾಗಿ ನಗರದ ಹೊರವಲಯದಲ್ಲಿರುವ ವೀರಾಂಜನೇಯ ಸ್ವಾಮಿಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹಿತ ನೂರೊಂದು ತೆಂಗಿನಕಾಯಿ ಈಡುಗಾಯಿ ಒಡೆದು,ಬಳಿಕ ಕೇಕ್ ಕತ್ತರಿಸಿ ಅನ್ನಸಂತರ್ಪಣೆ ಮಾಡುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜೈ ಫೌಂಡೇಶನ್ ಅಧ್ಯಕ್ಷ ಜಯಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಜೈ ಫೌಂಡೇಶನ್ ಅಧ್ಯಕ್ಷ ಜಯಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ

ಬೆಳಿಗ್ಗೆ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ನಂದಿ ಗ್ರಾಮದ ಭೋಗನಂದೀಶ್ವರ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಪ್ರಸಾದ ವಿನಿಯೋಗ ನಂತರ ನಗರದ ಮಿಸ್ಕೀನ್ ಶಾ ಸೈಲಾನಿ ದರ್ಗಾ ಹಾಗೂ ಸಂತ ಕ್ಯಾಥೊಲಿಕ್ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಬಳಿಕ ಜೈ ಭೀಮ್ ಹಾಸ್ಟೆಲ್ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

Bengaluru News: ಕಾರಿನಲ್ಲಿ ಎಸಿ ಹಾಕಿಕೊಂಡು ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಮಲಗಿದ್ದಲ್ಲೇ ಸಾವು!

ಕಾರಿನಲ್ಲಿ ಎಸಿ ಹಾಕಿಕೊಂಡು ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಸಾವು!

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಿಸಿಲು ಹೆಚ್ಚಿದ್ದರಿಂದ ಕಾರಿನ ಎಸಿ ಆನ್ ಮಾಡಿ, ಕಿಟಕಿ ಗಾಜುಗಳನ್ನು ಪೂರ್ತಿಯಾಗಿ ಮುಚ್ಚಿ ಚಾಲಕ ಒಳಗೆ ಮಲಗಿದ್ದರು. ಆದರೆ, ಎಷ್ಟೇ ಕೂಗಿದರೂ, ಕಾರಿನ ಮೇಲೆ ತಟ್ಟಿದರೂ ಚಾಲಕ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಜನರು ಪರಿಶೀಲಿಸಿದಾಗ ಚಾಲಕ ಮೃತಪಟ್ಟಿರುವುದು ಕಂಡುಬಂದಿದೆ.

ಪಬ್ಲಿಕ್ ಟಿ.ವಿ.ವರದಿಗಾರ ಮುದ್ದುಕೃಷ್ಣಗೆ ಮಾತೃವಿಯೋಗ

ಪಬ್ಲಿಕ್ ಟಿ.ವಿ.ವರದಿಗಾರ ಮುದ್ದುಕೃಷ್ಣಗೆ ಮಾತೃವಿಯೋಗ

ನಗರದ ಗಂಗನಮಿದ್ದೆ ರಸ್ತೆಯ ಬಡಾವಣೆಯಲ್ಲಿ ವಾಸವಿದ್ದ 54 ವರ್ಷದ ರಾಧಮ್ಮ ಅವರಿಗೆ ಮುದ್ದು ಕೃಷ್ಣ ಅವರು ಒಬ್ಬನೇ ಮಗನಾಗಿದ್ದರು. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಎರಡನೇ ಮಹಡಿಯಲ್ಲಿದ್ದ ನೀರಿನ ಡ್ರಂ ಸ್ವಚ್ಚಮಾಡಲು ಹೋಗಿದ್ದ ವೇಳೆ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಬೆನ್ನುಹುರಿಗೆ ಭಾರೀ ಪೆಟ್ಟಾಗಿದ್ದು ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ.

ನೀಲಾದ್ರಿ ಎಂಟರ್ ಪ್ರೈಸಸ್ ಮತ್ತು ಸಂತೋಷ್ ಎಂಟರ್ ಪ್ರೈಸಸ್ ಕಂಪನಿಗಳನ್ನು ಕಪ್ಪುಪಟ್ಟಿಗೆ ಸೇರಿಸಲು ಆಗ್ರಹ

ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸಿ ನಿಯಮಾವಳಿಯಂತೆ ವೇತನ ಪಾವತಿ ಮಾಡಿ

ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಗೆ ಮನವಿ ನೀಡಿದ ಬಳಿಕೆ ಜಿಲ್ಲಾಡಳಿತ ಭವನದ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಬಳಿಕೆ ಮಾಧ್ಯಮದೊಂದಿಗೆ ಮಾತನಾಡಿದ ನಾಗಣ್ಣ ಗೌಡ ಜಿಲ್ಲೆಯಲ್ಲಿ ಹೊರಗುತ್ತಿಗೆ ನೌಕರರನ್ನು ನೇಮಿಸಿಕೊಂಡು ಅವರಿಗೆ ಕನಿಷ್ಟ ವೇತನ ನೀಡದೆ, ಪಿ.ಎಫ್ ಮತ್ತು ಇಎಸ್‌ಐ ಕೂಡ ಪಾವತಿಸದೆ ಅನ್ಯಾಯವೆಸಗಿದೆ.

Haveri News: ಹಾನಗಲ್‌ ಜ್ಯುವೆಲ್ಲರಿ ಶಾಪ್‌ ಕಳ್ಳತನ ಪ್ರಕರಣ; ಇಬ್ಬರ ಬಂಧನ, 310 ಗ್ರಾಂ ಚಿನ್ನ, 26 ಕೆ.ಜಿ ಬೆಳ್ಳಿ ವಶಕ್ಕೆ

ಹಾನಗಲ್‌ ಜ್ಯುವೆಲ್ಲರಿ ಶಾಪ್‌ ಕಳ್ಳತನ ಪ್ರಕರಣ; ಇಬ್ಬರ ಬಂಧನ

ಹಾವೇರಿ ಹಾಗೂ ಧಾರವಾಡ ಜಿಲ್ಲಾ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಅಂತರಾಜ್ಯ ಕಳ್ಳರಿಂದ ಸುಮಾರು 1.15 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದೆ. ಇದರಲ್ಲಿ 31 ತೊಲ (310 ಗ್ರಾಂ) ಚಿನ್ನ, 26 ಕೆ.ಜಿ ಬೆಳ್ಳಿ ಸೇರಿದೆ.

ಜಿಲ್ಲಾಡಳಿತ ಭವನದ ಪಡಸಾಲೆಯಲ್ಲಿ ಅಮರಣಾಂತ ಉಪವಾಸ ಕುಳಿತ ಭಾಸ್ಕರ್ ಅಂಕಲಮಡುಗು ಶಿವಾರೆಡ್ಡಿ

ಜಿಲ್ಲಾಡಳಿತದ ವಿರುದ್ಧ ಸಾಮಾಜಿಕ ಹೋರಾಟಗಾರನ ಏಕಾಂಗಿ ಸಮರ

ನಗರ ಹೊರವಲಯ ಜಿಲ್ಲಾಡಳಿತ ಭವನದ ಮೊದಲಮಹಡಿಯ ಬಲ ಪಡಸಾಲೆಯಲ್ಲಿ ಅಮರಣಾಂತ ಉಪವಾಸದ ಕರಪತ್ರಗಳನ್ನು ನಾಗರೀಕರಿಗೆ ಹಂಚುವ ಮೂಲಕ ಸೋಮವಾರ ಸಂವಿಧಾನದ ಪೀಠಿಕೆ, ಗಂಗಮ್ಮ ಪೋಟೋ, ಉಪವಾಸ ಸತ್ಯಾಗ್ರಹದ ಬ್ಯಾನರ್‌ಗೆ ಹೂವಿನ ಹಾರ ಹಾಕಿ ಚಾಪೆಯ ಮೇಲೆ ಏಕಾಂಗಿಯಾಗಿ ಅಮರಣಾಂತ ಉಪವಾಸ ಕುಳಿತು ಸಾರ್ವಜನಿಕರ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.

Transport workers strike: ಸಾರಿಗೆ ನೌಕರರ ಜತೆಗಿನ ಸರ್ಕಾರದ ಸಂಧಾನ ವಿಫಲ; ನಾಳೆ ಮಧ್ಯರಾತ್ರಿಯಿಂದಲೇ ಬಸ್ ಬಂದ್!

ಸರ್ಕಾರದ ಸಂಧಾನ ವಿಫಲ; ನಾಳೆ ಮಧ್ಯರಾತ್ರಿಯಿಂದಲೇ ಬಸ್ ಬಂದ್!

Karnataka transport employees: 2024ರ ಜನವರಿಯಿಂದ ಶೇ.25ರಷ್ಟು ವೇತನ ನೀಡಬೇಕು, ಬಾಕಿ ವೇತನ ಪೂರ್ಣ ಪ್ರಮಾಣದಲ್ಲಿ ಪಾವತಿಯಾಗಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದಾರೆ.

ಕರ್ನಾಟಕ ಸರ್ಕಾರದಿಂದ ಅಬಕಾರಿ ನೀತಿ ಸುಧಾರಣೆ: ಪ್ರೀಮಿಯಂ ಮದ್ಯದ ದರ ಶೇ.. 20 ರವರೆಗೆ ಇಳಿಕೆ; ಸರ್ಕಾರದ ಕ್ರಮಕ್ಕೆ ಐಎಸ್‌ಡಬ್ಲ್ಯೂಎಐ ಸ್ವಾಗತ

ಅಬಕಾರಿ ನೀತಿ ಸುಧಾರಣೆ: ಪ್ರೀಮಿಯಂ ಮದ್ಯದ ದರ ಶೇ.. 20 ರವರೆಗೆ ಇಳಿಕೆ

ಸರ್ಕಾರದ ಈ ಹೊಸ ನಿರ್ಧಾರವು ಮದ್ಯದ ಉದ್ಯಮದ ಬೆಳವಣಿಗೆಗೆ ಪೂರಕವಾಗುವುದಲ್ಲದೆ, ರಾಜ್ಯಕ್ಕೆ ದೀರ್ಘಾವಧಿಯ ಆದಾಯ ವೃದ್ಧಿ ಹಾಗೂ ಪಾರದರ್ಶಕ ನಿಯಂತ್ರಣ ವಾತಾವರಣವನ್ನು ನಿರ್ಮಿಸಲು ಸಹಕಾರಿಯಾಗಲಿದೆ ಎಂದು ಸಂಸ್ಥೆ ತಿಳಿಸಿದೆ. ಕೆಳವು ದಿನಗಳ ಹಿಂದೆ ಸಂಸ್ಥೆಯು ತೆರಿಗೆ ಪರಿಷ್ಕರಣೆ ಕುರಿತು ಮನವಿ ಸಲ್ಲಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.

ಭಾರತದ ಅತಿ ಕಿರಿಯ ಥಿಯೇಟ್ರಿಕಲ್ ಮಾಯಾಜಾಲ ಕಲಾವಿದನ ಮರುಪ್ರವೇಶ – ಅಮ್ಮ ಮತ್ತು ಮಗನ ‘MAAgic’ ಥಿಯೇಟ್ರಿಕಲ್ ಮ್ಯಾಜಿಕ್ ಶೋ

ಅಮ್ಮ ಮತ್ತು ಮಗನ ‘MAAgic’ ಥಿಯೇಟ್ರಿಕಲ್ ಮ್ಯಾಜಿಕ್ ಶೋ

ಭಾರತದಲ್ಲಿ ವಿರಳವಾಗಿ ಕಾಣಸಿಗುವ ಕಥಾಹಂದರ ಆಧಾರಿತ ಥಿಯೇಟ್ರಿಕಲ್ ಮ್ಯಾಜಿಕ್ ಶೋ ಇದಾ ಗಿದೆ. 75 ನಿಮಿಷಗಳ ಈ ಪ್ರದರ್ಶನವು ಕಥೆ, ಭಾವನೆಗಳು ಮತ್ತು ಪ್ರತಿಯೊಂದು ಭಾರತೀಯ ಮನೆಯೊ ಳಗಿನ ಕಾಣದ ಮ್ಯಾಜಿಕ್ ಅನ್ನು ವೇದಿಕೆಗೆ ತರುತ್ತದೆ.ರಾಷ್ಟ್ರೀಯ ಪ್ರಶಸ್ತಿ ವಿಜೇತ 15 ವರ್ಷದ ಲೇಖಕ ಮತ್ತು ಇಲ್ಯೂಷನಿಸ್ಟ್ ಜಯಂತ್ ಪಟ್ವಾರಿ, ಈಗಾಗಲೇ 200ಕ್ಕೂ ಹೆಚ್ಚು ಮನಮೋಹಕ ಮ್ಯಾಜಿಕ್ ಶೋಗಳನ್ನು ನೀಡಿರುವ ಅವರು, ತಮ್ಮ ತಾಯಿ ಮೋನಿಕಾ ಅವರೊಂದಿಗೆ ವೇದಿಕೆ ಹಂಚಿಕೊಳ್ಳ ಲಿದ್ದಾರೆ.

ಉಡುಪಿ-ಕಾಸರಗೋಡು ವಿದ್ಯುತ್ ಯೋಜನೆಗೆ ಜಮೀನು ನೀಡಿದ ರೈತರಿಗೆ ಸನ್ಮಾನ

ಉಡುಪಿ-ಕಾಸರಗೋಡು ವಿದ್ಯುತ್ ಯೋಜನೆಗೆ ಜಮೀನು ನೀಡಿದ ರೈತರಿಗೆ ಸನ್ಮಾನ

ಸ್ವಂತ ಭೂಮಿ ಬಿಟ್ಟುಕೊಟ್ಟು ಸಹಕರಿಸಿದ ತಾಲೂಕಿನ ವಿವಿಧ ಗ್ರಾಮಗಳ ಭೂ ಮಾಲೀಕರು ಹಾಗೂ ರೈತರನ್ನು ಯುಕೆಟಿಎಲ್ ಕಂಪೆನಿಯ ವ್ಯವಸ್ಥಾಪಕರಾದ ಆಗ್ನೆಸ್ ಗೋನ್ಸಾಲ್ವಿಸ್ ಅವರು ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ, ಶಾಲು ಹೊದಿಸಿ, ಸ್ಮರಣಿಕೆ ಹಾಗೂ ಅಭಿನಂದನಾ ಪತ್ರಗಳನ್ನು ಹಸ್ತಾಂತರಿಸಿ ಅಭಿನಂದಿಸಿದ್ದಾರೆ.

ಬಲಿಷ್ಠ ಆರ್ಥಿಕ ವ್ಯವಸ್ಥೆ ಹಾಳಾಗಿದೆ; ಪ್ರಧಾನಿ ಈ ದೇಶದ ಜನರ ಕ್ಷಮೆ ಕೇಳಬೇಕು ಎಂದು ಡಿ.ಕೆ.ಸುರೇಶ್ ಆಗ್ರಹ

ಪ್ರಧಾನಿ ಈ ದೇಶದ ಜನರ ಕ್ಷಮೆ ಕೇಳಬೇಕು: ಡಿ.ಕೆ. ಸುರೇಶ್ ಆಗ್ರಹ

DK Suresh: ನಿರಂತರ ಯುದ್ಧಗಳು ಮತ್ತು ಜಾಗತಿಕ ಅಸ್ಥಿರತೆಯು ದಶಕಗಳ ಅಭಿವೃದ್ಧಿಯನ್ನು ಹಿಮ್ಮೆಟ್ಟಿಸಬಹುದು ಮತ್ತು ದೊಡ್ಡ ಜನಸಂಖ್ಯೆಯನ್ನು ಮತ್ತೆ ಬಡತನಕ್ಕೆ ತಳ್ಳಬಹುದು ಎನ್ನುವ ಬಗ್ಗೆ ಪ್ರಧಾನಿ ನರೇಂದ್ರ ಅವರು ಸ್ಪಷ್ಟನೆ ನೀಡಬೇಕು ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಒತ್ತಾಯಿಸಿದ್ದಾರೆ.

Bengaluru Rains: ಬೆಂಗಳೂರಿನಲ್ಲಿ ಮಳೆರಾಯನ ಅಬ್ಬರ; ಹಲವೆಡೆ ಧರೆಗುರುಳಿದ ಮರಗಳು, ರಸ್ತೆಗಳು ಜಲಾವೃತವಾಗಿ ಭಾರಿ ಸಂಚಾರ ದಟ್ಟಣೆ!

ಬೆಂಗಳೂರಿನಲ್ಲಿ ಮಳೆ ಅಬ್ಬರ; ರಸ್ತೆಗಳು ಜಲಾವೃತವಾಗಿ ಸಂಚಾರ ದಟ್ಟಣೆ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Shivam Associates scam: ಶಿವಂ ಅಸೋಸಿಯೇಟ್ಸ್‌ ಹಗರಣ; ಮಾಲೀಕ ಶಿವಾನಂದ ನೀಲಣ್ಣವರ್‌ 10 ದಿನ ಸಿಐಡಿ ಕಸ್ಟಡಿಗೆ

4,500 ಕೋಟಿ ವಂಚನೆ ಕೇಸ್‌; ಶಿವಾನಂದ ನೀಲಣ್ಣವರ್‌ 10 ದಿನ ಸಿಐಡಿ ಕಸ್ಟಡಿಗೆ

Shivam Associates scam: ಹೆಚ್ಚಿನ ಬಡ್ಡಿ ಆಮಿಷ ತೋರಿ ಬೆಳಗಾವಿಯಲ್ಲಿ ಮಾಜಿ ಸೈನಿಕರು ಹಾಗೂ ಸಾರ್ವಜನಿಕರಿಂದ ಸಾವಿರಾರು ಕೋಡಿ ಹಣ ಸಂಗ್ರಹಿಸಿರುವ ಆರೋಪ ಶಿವಾನಂದ್ ನೀಲಣ್ಣವರ್ ವಿರುದ್ಧ ಕೇಳಿಬಂದಿದೆ. ಶಿವಂ ಅಸೋಸಿಯೇಟ್ಸ್‌ ವಿರುದ್ಧದ 4,500 ಕೋಟಿ ರೂ. ವಂಚನೆ ಆರೋಪ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿದೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನೇ ಯಾಮಾರಿಸಿದ ಬುರ್ಖಾಧಾರಿ ಮಹಿಳೆ; ಹಿಂದು ಮಹಿಳೆ ಪರ ನೆರವು ಕೋರಿದ್ದು ಮತಾಂತರಗೊಂಡ ಮಗಳೇ!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನೇ ಯಾಮಾರಿಸಿದ ಬುರ್ಖಾಧಾರಿ ಮಹಿಳೆ!

Udupi News: ಉಡುಪಿಯಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಹಿಂದೂ ಮಹಿಳೆಗಾಗಿ ನೆರವು ಕೋರಲು ಬಂದಾಗ ಪ್ರತಿಕ್ರಿಯಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಅವರು, ಇದರಿಂದ ಉಡುಪಿಯ ಬಿಜೆಪಿಯವರು ಕಲಿಯಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ

ಬೆಂಗಳೂರಿನಲ್ಲಿ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು

ಕೋಟಕ್ ಮಹೀಂದ್ರಾ ಬ್ಯಾಂಕ್ ಪ್ರಕಾರ, ಉದ್ಯೋಗ ಭದ್ರತೆ, ಸುಧಾರಿತ ಮೂಲಸೌಕರ್ಯ ಮತ್ತು ಸರಳ ಸಾಲ ಪ್ರಕ್ರಿಯೆಗಳು ಬೆಂಗಳೂರಿನಲ್ಲಿ ಮೊದಲ ಬಾರಿಗೆ ಮನೆ ಖರೀದಿಸುವವರು ಶೀಘ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡುತ್ತಿವೆ. ಈ ಹಿಂದೆ ಬಾಡಿಗೆ ಮನೆಯಲ್ಲಿದ್ದ ಜೆನ್ ಜೀ ಮತ್ತು ಯುವ ಮಿಲೇನಿಯಲ್ಸ್‌ ಈಗ ಮೊದಲಿನಿಗಿಂತಲೂ ಬೇಗನೆ ಸ್ವಂತ ಮನೆ ಹೊಂದುವತ್ತ ಹೆಜ್ಜೆ ಹಾಕುತ್ತಿರುವು ದನ್ನು ಬ್ಯಾಂಕ್ ಗಮನಿಸಿದೆ.

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

ಉತ್ಪಾದನಾ ಸಾಮರ್ಥ್ಯಕ್ಕೆ ವೇಗ ನೀಡಲು GE ಏರೋಸ್ಪೇಸ್ ಮುಂದು

ಕಳೆದ ಎರಡು ವರ್ಷಗಳಲ್ಲಿ ಘೋಷಿಸಲಾದ ₹410 ಕೋಟಿಗೆ ಈ ಇತ್ತೀಚಿನ ಹೂಡಿಕೆ ಸೇರ್ಪಡೆ ಯಾಗಿದ್ದು, GE ಏರೋಸ್ಪೇಸ್ ತನ್ನ ಪುಣೆ ಕೇಂದ್ರದಲ್ಲಿ ಕಳೆದ ಮೂರು ವರ್ಷಗಳಲ್ಲಿ ₹510 ಕೋಟಿಗಿಂತ ಹೆಚ್ಚಿನ ಹೂಡಿಕೆಯನ್ನು ಮಾಡಿದೆ. ಹಿಂದಿನ ಹೂಡಿಕೆಗಳು ಮುಂದಿನ ಪೀಳಿಗೆಯ ಎಂಜಿನ್ ಘಟಕಗಳಿಗೆ ಉತ್ಪಾದನಾ ಪ್ರಕ್ರಿಯೆಗಳು, ಯಾಂತ್ರೀಕೃತಗೊಳಿಸುವಿಕೆ ಮತ್ತು ಸುಧಾರಿತ ಸಾಮರ್ಥ್ಯಗಳನ್ನು ಸುಧಾರಿಸುವತ್ತ ಗಮನ ಹರಿಸಿವೆ.

House Lease Scam: ಬೆಂಗಳೂರಿನಲ್ಲಿ ಮನೆ ಲೀಸ್‌, ಬಾಡಿಗೆ ಹೆಸರಲ್ಲಿ 200 ಕೋಟಿ ವಂಚನೆ: ದೂರು ದಾಖಲು, ಕಂಪನಿ‌ ಮಾಲೀಕ ಎಸ್ಕೇಪ್‌

ಬೆಂಗಳೂರಿನಲ್ಲಿ ಮನೆ ಲೀಸ್‌, ಬಾಡಿಗೆ ಹೆಸರಲ್ಲಿ 200 ಕೋಟಿ ವಂಚನೆ

ಬೆಂಗಳೂರಿನಲ್ಲಿ ಮನೆ ಲೀಸ್‌ ಹಾಗೂ ಬಾಡಿಗೆಗೆ ಕೊಡಿಸುವುದಾಗಿ 300ಕ್ಕೂ ಹೆಚ್ಚು ಜನರಿಗೆ ಜಾನ್ಸ್ ಅಸೆಟ್ ಮ್ಯಾನೇಜ್‌ಮೆಂಟ್‌ ಕಂಪನಿ ವಂಚಿಸಿದೆ. ಈ ಬಗ್ಗೆ ಇಂದಿರಾನಗರ ಠಾಣೆಯಲ್ಲಿ ದೂರು ದಾಖಲಾಇದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಕಂಪನಿಯ ಮಾಲೀಕ ಸದ್ಯ ಪರಾರಿಯಾಗಿದ್ದಾನೆ.

Loading...