ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
CM Siddaramaiah: ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ- ಸಿಎಂ ಸಿದ್ದರಾಮಯ್ಯ

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ- ಸಿಎಂ

CM Siddaramaiah: ವರದಿ ಬರುವ ಮೊದಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತೇವೆ ಎನ್ನುವುದು ಸರಿಯಲ್ಲ. ಇಂಥಾ ತೀರ್ಮಾನ ನಮ್ಮಿಂದ ಆಗಿಲ್ಲ ಎಂದು ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಸದನದಲ್ಲಿ ತಿಳಿಸಿದ್ದಾರೆ.

Water tariff hike: ನೀರಿನ ದರ ಲೀಟರ್‌ಗೆ 1 ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ನೀರಿನ ದರ ಲೀಟರ್‌ಗೆ 1 ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ: ಡಿಕೆಶಿ

Water tariff hike: ಜಲ ಮಂಡಳಿಯವರು ಲೀಟರ್‌ಗೆ 7-8 ಪೈಸೆಗೆ ಏರಿಸಲು ಪ್ರಸ್ತಾಪ ಮಾಡಿದ್ದರು. ಆದರೆ, ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡಲು ಚಿಂತನೆ ಮಾಡಲಾಗಿದ್ದು, ಮಂಡಳಿ ಅನುಭವಿಸುತ್ತಿರುವ ನಷ್ಟ ಭರಿಸಲು ಈ ತೀರ್ಮಾನ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ- ಲಕ್ಷ್ಮೀ ಹೆಬ್ಬಾಳಕರ್

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ- ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೇ ನಮ್ಮ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರಕ್ಕೆ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಹಾಗಾಗಿಯೇ ಅವರ ಗೌರವ ಧನ ಹೆಚ್ಚಳ ಮಾಡಲು ಸರ್ಕಾರ ಮತ್ತು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

Basavaraj Bommai: ಕರ್ನಾಟಕದ ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ರೈತರು ಬೆಳೆದ ಮೆಣಸಿನಕಾಯಿ ಖರೀದಿಸಲು ಕೇಂದ್ರ ಸಚಿವರಿಗೆ ಬೊಮ್ಮಾಯಿ ಪತ್ರ

Basavaraj Bommai: ರಾಜ್ಯದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೇಂದ್ರ ಸರ್ಕಾರವು ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

IIFA 2025: IIFA 2025 ಗ್ರೀನ್ ಕಾರ್ಪೆಟ್‌ನಲ್ಲಿ ಮಿಂಚಿದ ಕನ್ನಡದ ನಟಿ, ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

ಗ್ರೀನ್ ಕಾರ್ಪೆಟ್‌ನಲ್ಲಿ ಮಿಂಚಿದ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ

IIFA 2025: ಕನ್ನಡದ ನಟಿ ಹಾಗೂ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಬಾಲಿವುಡ್ ಅತೀ ದೊಡ್ಡ ಪ್ರಶಸ್ತಿ ಸಮಾರಂಭ ಇಂಟರ್‌ನ್ಯಾಷನಲ್ ಇಂಡಿಯನ್ ಫಿಲಂ ಅಕಾಡೆಮಿ ಅವಾರ್ಡ್ (IIFA 2025) ನಲ್ಲಿ ಅತಿಥಿಯಾಗಿ ಭಾಗಿಯಾಗಿದ್ದಾರೆ. ಖ್ಯಾತ ವಸ್ತ್ರ ವಿನ್ಯಾಸಕ ಫಾರೆವರ್ ನವೀನ್ ಕುಮಾರ್, ಸಿದ್ದಪಡಿಸಿದ ವಿನೂತನ ಉಡುಗೆಯಲ್ಲಿ ಸಂಹಿತಾ ವಿನ್ಯಾಸ IIFA 2025 ಗ್ರೀನ್ ಕಾರ್ಪೆಟ್‌ನಲ್ಲಿ ಮಿಂಚಿದ್ದಾರೆ.

Haveri Murder Case: ಹಾವೇರಿಯಲ್ಲಿ ಲವ್‌ ಜಿಹಾದ್‌ಗೆ ಹಿಂದು ಯುವತಿ ಬಲಿ?; ಕೊಲೆಗೈದು ನದಿಗೆ ಬಿಸಾಡಿದ ಕಿರಾತಕರು

ಹಾವೇರಿಯಲ್ಲಿ ಲವ್‌ ಜಿಹಾದ್‌ಗೆ ಹಿಂದು ಯುವತಿ ಬಲಿ?

Haveri Murder Case: ಹಾವೇರಿ ಜಿಲ್ಲೆಯ ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೊದಲಿಗೆ ಅಪರಿಚಿತ ಶವ ಎಂದು ಪೊಲೀಸರು ಘೋಷಿಸಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಎಂದು ತಿಳಿದುಬಂದಿದ್ದು, ಇದರಿಂದ ಲವ್‌ ಜಿಹಾದ್‌ ಆರೋಪ ಕೇಳಿಬಂದಿದೆ.

Lakshmi Hebbalkar: ಕರ್ನಾಟಕದಲ್ಲಿ ವಿಕಲಚೇತನರಿಗೆ 3 ಪ್ರಮುಖ ಯೋಜನೆ: 1 ಲಕ್ಷ ರೂ. ವರೆಗೂ ವೈದ್ಯಕೀಯ ಪರಿಹಾರ: ಲಕ್ಷ್ಮೀ ಹೆಬ್ಬಾಳಕರ್

ವಿಕಲಚೇತನರಿಗೆ 1 ಲಕ್ಷ ರೂ.ವರೆಗೂ ವೈದ್ಯಕೀಯ ಪರಿಹಾರ: ಲಕ್ಷ್ಮೀ ಹೆಬ್ಬಾಳಕರ್

Lakshmi Hebbalkar: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

KSMCL: ಸರ್ಕಾರಕ್ಕೆ 1402 ಕೋಟಿ ರೂ. ಚೆಕ್ ಹಸ್ತಾಂತರಿಸಿದ ಕರ್ನಾಟಕ ಮಿನರಲ್ಸ್ ಕಾರ್ಪೋರೇಷನ್

KSMCLನಿಂದ ಸರ್ಕಾರಕ್ಕೆ 1402 ಕೋಟಿ ರೂ. ಚೆಕ್ ಹಸ್ತಾಂತರ

KSMCL: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ವತಿಯಿಂದ 2023-24ನೇ ಸಾಲಿನ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ 15 ಕೋಟಿ ರೂ., 191.43 ಕೋಟಿ ರೂ. ಲಾಭಾಂಶ ಹಾಗೂ 1195.63 ಕೋಟಿ ರೂ. ವಿಶೇಷ ಲಾಭಾಂಶದ ಚೆಕ್‌ ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಲಾಗಿದೆ.

Murder Case: ಹಾವೇರಿಯಲ್ಲಿ ಯುವತಿಯ ಹತ್ಯೆ; ಆರೋಪಿ ನಯಾಜ್‌ ಅರೆಸ್ಟ್‌

ಹಾವೇರಿಯಲ್ಲಿ ಯುವತಿಯ ಬರ್ಬರ ಹತ್ಯೆ; ನಯಾಜ್ ಅರೆಸ್ಟ್

Murder Case: ಮೊದಲು ಅಪರಿಚಿತ ಯುವತಿಯ ಶವ ಎಂದು ಹಲಗೇರಿ ಪೊಲೀಸರು ಘೋಷಿಸಿದ್ದರು. ಮರಣೋತ್ತರ ಪರೀಕ್ಷೆ ವೇಳೆ ಸ್ವಾತಿ ಎಂಬ ಯುವತಿ ಹತ್ಯೆಯಾಗಿರುವುದು ದೃಢಪಟ್ಟಿದೆ. ಪ್ರಕರಣ ಸಂಬಂಧ ಆರೋಪಿ ನಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

B. S. Yediyurappa: ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪಗೆ ಬಿಗ್‌ ರಿಲೀಫ್‌; ಪೋಕ್ಸೊ ಕೇಸ್‌ಗೆ ಮಧ್ಯಂತರ ತಡೆ

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪಗೆ ಬಿಗ್‌ ರಿಲೀಫ್‌

B. S. Yediyurappa: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಪೋಕ್ಸೊ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆವರೆಗೆ ವಿಚಾರಣಾಧೀನ ನ್ಯಾಯಾಲಯಕ್ಕೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ. ಇದರಿಂದ ಎರಡನೇ ಸುತ್ತಿನ ದಾವೆಯಲ್ಲಿ ಸದ್ಯಕ್ಕೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನಿರಾಳರಾದಂತಾಗಿದೆ.

Viral Post: ಟೇಬಲ್ ಟೆನ್ನಿಸ್ ಕೋಚ್ ಆಗಿದ್ದವ ಆಟೋ ಡ್ರೈವರ್ ಆಗಿದ್ದು ಹೇಗೆ..? ಇಂಟರ್ನೆಟ್‌ನಲ್ಲಿ ಈತ ಫುಲ್‌ ಫೇಮಸ್‌!

ಟೇಬಲ್ ಟೆನ್ನಿಸ್ ಕೋಚ್ ಆಗಿದ್ದವ ಆಟೋ ಡ್ರೈವರ್ ಆಗಿದ್ದು ಹೇಗೆ..?

ಬೆಂಗಳೂರಲ್ಲಿ ಆಟೋ ಓಡಿಸುವ ಒಬ್ಬ ಸಾಮಾನ್ಯ ವ್ಯಕ್ತಿ ಸದ್ಯಕ್ಕೆ ಇಂಟರ್‌ನೆಟ್‌ನಲ್ಲಿ(internet) ಸಂಚಲನ ಮೂಡಿಸಿದ್ದಾರೆ. ಇಷ್ಟಕ್ಕೆಲ್ಲಾ ಕಾರಣ, ಅವರ ಆಟೋದಲ್ಲಿದ್ದ ಒಂದು ಸಣ್ಣ ಪೋಸ್ಟರ್(Poster).‌ ಈ ಪೋಸ್ಟರ್ ಮೂಲಕ ಆಟೋ ಚಾಲಕನ ಬದುಕಿನ ಕತೆ ಇಂದು ನೆಟ್ಟಿಗರಿಗೆ ಸ್ಫೂರ್ತಿಯನ್ನು ತುಂಬಿದೆ. ಅರೇ ಅಂತದ್ದು ಆ ಪೋಸ್ಟರ್ ನಲ್ಲಿ ಏನಿದೆ ಅಂತೀರಾ..? ಇಲ್ಲಿದೆ ನೋಡಿ ಉತ್ತರ

Student Death: ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ವಸತಿ ಶಾಲೆ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

ವಿದ್ಯಾರ್ಥಿನಿ ಪೂರ್ವಿಕ ನಿನ್ನೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕುಸಿದು ಬಿದ್ದ ಪೂರ್ವಿಕಾಳನ್ನು ಶಿಕ್ಷಕರು ತಕ್ಷಣ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ.

Gold Price Today: ಚಿನ್ನದ ದರದಲ್ಲಿ ಇಂದು ಭಾರೀ ಏರಿಕೆ; ಇಂದಿನ ರೇಟ್‌ ಇಷ್ಟಿದೆ ನೋಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 110 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 120 ರೂ. ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,230 ರೂ. ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 8,978 ರೂ. ಆಗಿದೆ.

Assault Case: ವೃದ್ಧ ಅತ್ತೆ-ಮಾವನ ಮೇಲೆ ಸೊಸೆ, ಮಕ್ಕಳಿಂದ ಬರ್ಬರ ಹಲ್ಲೆ

ವೃದ್ಧ ಅತ್ತೆ-ಮಾವನ ಮೇಲೆ ಸೊಸೆ, ಮಕ್ಕಳಿಂದ ಬರ್ಬರ ಹಲ್ಲೆ

ಹಲ್ಲೆ ಮಾಡಿರುವ ಸೊಸೆ ಪ್ರಿಯದರ್ಶಿನಿ ವಿಕ್ಟೋರಿಯ ಆಸ್ಪತ್ರೆಯ ವೈದ್ಯೆ ಆಗಿದ್ದಾಳೆ ಎಂದು ತಿಳಿದುಬಂದಿದೆ. ಕಳೆದ 10 ವರ್ಷದಿಂದ ಈಕೆ ಅತ್ತೆ ಮತ್ತು ಮಾವನಿಗೆ ಕಿರುಕುಳ ನೀಡುತ್ತಿದ್ದಾಳೆ. ಕಿರುಕುಳ ತಾಳದೆ ಅತ್ತೆ ಹಾಗೂ ಮಾವ ಬೇರೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆದರೂ ಕೂಡ ಮಾರ್ಚ್ 10ರಂದು ಈಕೆ ವೃದ್ಧ ಅತ್ತೆ ಮಾವನ ಬಾಡಿಗೆ ಮನೆಗೆ ಹೋಗಿ ಹಲ್ಲೆ ನಡೆಸಿದ್ದಾಳೆ.

Self Harming: ಪ್ರೇಮಿಯಿಂದ ವಂಚನೆ, ಪುತ್ರಿ ಸೂಸೈಡ್, ನೊಂದ ತಾಯಿ ನೇಣಿಗೆ ಶರಣು

ಪ್ರೇಮಿಯಿಂದ ವಂಚನೆ, ಪುತ್ರಿ ಸೂಸೈಡ್, ನೊಂದ ತಾಯಿ ನೇಣಿಗೆ ಶರಣು

ನ್ಯಾಯ ಕೇಳಲು ಹೋದವರ ವಿರುದ್ಧವೇ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ವ್ಯಕ್ತವಾಗಿತ್ತು. ಮಗಳ ಸಾವಿಗೆ ನ್ಯಾಯ ಸಿಕ್ಕಿಲ್ಲವೆಂದು ಮನನೊಂದು ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಕ್ಷ್ಮಿ ಶವ ಸಾಗಿಸಲು ಬಿಡದೆ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Lunar Eclipse 2025: ಹೋಳಿಯಂದೇ ಈ ವರ್ಷದ ಮೊದಲ ಚಂದ್ರಗ್ರಹಣ; ಇದರ ಬಗ್ಗೆ ನಿಮಗೆ ಗೊತ್ತಿರಲಿ

ಇಂದು ಚಂದ್ರಗ್ರಹಣ; ತಪ್ಪಿಯೂ ಈ ಕೆಲಸ ಮಾಡಬೇಡಿ

2025ರಲ್ಲಿ ವರ್ಷದ ಮೊದಲ ಚಂದ್ರಗ್ರಹಣವನ್ನು ವೀಕ್ಷಿಸಲು ಜಗತ್ತು ಸಿದ್ಧವಾಗಿದೆ. ಮಾರ್ಚ್ 14ರಂದು ಹೋಳಿ ಹಬ್ಬದಂದೇ ಚಂದ್ರ ಗ್ರಹಣ ಉಂಟಾದರೂ ಇದು ಭಾರತದಲ್ಲಿ ಗೋಚರವಾಗುವುದಿಲ್ಲ. ಬೇರೆಡೆ ಚಂದ್ರಗ್ರಹಣ ಸಮಯ, ಅದನ್ನು ವೀಕ್ಷಿಸುವುದು ಹೇಗೆಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

Holi 2025:  ಹೋಳಿ ಹಬ್ಬದ ಪೌರಾಣಿಕ ಹಿನ್ನೆಲೆ ಏನು...? ಹೋಲಿಕಾ ದಹನ ಯಾಕೆ ಮಾಡುತ್ತಾರೆ ಗೊತ್ತಾ..?

ಹೋಳಿ ಹಬ್ಬದಂದು ಹೋಲಿಕಾ ದಹನ ಯಾಕೆ ಮಾಡ್ತಾರೆ?

ಸನಾತನ ಹಿಂದೂ ಸಂಸ್ಕೃತಿಯಲ್ಲಿ ಪ್ರತಿಯೊಂದು ಹಬ್ಬ, ಆಚರಣೆ, ಸಂಪ್ರದಾಯಕ್ಕೂ ಅದರದ್ದೆ ಆದ ಇತಿಹಾಸ, ಮಹತ್ವ, ಧಾರ್ಮಿಕ ಹಿನ್ನೆಲೆ ಮತ್ತು ವೈಜ್ಞಾನಿಕ ಕಾರಣಗಳಿದ್ದು, ಹೋಳಿ ಹಬ್ಬವು ಅದರ ಹೊರತಾಗಿಲ್ಲ. ಆ ಹೋಳಿಯ ಇತಿಹಾಸದ ಕುರಿತು ಮಾಹಿತಿ ಇಲ್ಲಿದೆ.

Cotton Saree Styling 2025: ಕಾಟನ್ ಸೀರೆಯನ್ನು ಸ್ಟೈಲಿಶ್ ಆಗಿ ಉಡಲು ಇಲ್ಲಿದೆ 5 ಸಿಂಪಲ್ ಐಡಿಯಾ

ಕಾಟನ್ ಸೀರೆಯನ್ನು ಸ್ಟೈಲಿಶ್ ಆಗಿ ಉಡಲು ಇಲ್ಲಿದೆ 5 ಸಿಂಪಲ್ ಐಡಿಯಾ

Cotton Saree Styling 2025: ಕಾಟನ್ ಸೀರೆಗಳನ್ನು ಸ್ಟೈಲಿಶ್ ಆಗಿ ಉಟ್ಟು ಆಕರ್ಷಕವಾಗಿ ಕಾಣಿಸಿಕೊಳ್ಳಬಹುದು. ಇದಕ್ಕಾಗಿ ಒಂದಿಷ್ಟು ಸ್ಟೈಲಿಂಗ್ ಕಾನ್ಸೆಪ್ಟ್ ಅಳವಡಿಸಿಕೊಳ್ಳಬೇಕು ಎನ್ನುವ ಸೀರೆ ಸ್ಟೈಲಿಸ್ಟ್ ರೇಣುಕಾ ಪ್ರಕಾಶ್ ಒಂದಿಷ್ಟು ಉದಾಹರಣೆಯೊಂದಿಗೆ 5 ಸಿಂಪಲ್ ಐಡಿಯಾ ನೀಡಿದ್ದಾರೆ. ಈ ಕುರಿತಂತೆ ಇಲ್ಲಿದೆ ಡಿಟೇಲ್ಸ್.

Crime news: ಮಂಗಳೂರಿನಲ್ಲಿ ಕೇರಳದ ಗ್ಯಾಂಗ್‌ ಸೆರೆ, ಭಾರಿ ದುಷ್ಕೃತ್ಯಕ್ಕೆ ಸಂಚು ಬಯಲು

ಮಂಗಳೂರಿನಲ್ಲಿ ಕೇರಳದ ಗ್ಯಾಂಗ್‌ ಸೆರೆ, ಭಾರಿ ದುಷ್ಕೃತ್ಯಕ್ಕೆ ಸಂಚು ಬಯಲು

ಕಳೆದ ಜನವರಿಯಲ್ಲಿ ಮಂಗಳೂರು ಹೊರವಲಯದ ವಾಮಂಜೂರು ಎಂಬಲ್ಲಿ ಮುಸ್ಲಿಂ ಧರ್ಮಗುರು ಸಫ್ವಾನ್ ಎಂಬವರ ಮೇಲೆ ಗುಂಡು ಹಾರಿಸಲಾಗಿತ್ತು. ಈ ಬಗ್ಗೆ ಹೆಚ್ಚಿನ ತನಿಖೆಗೆ ಇಳಿದ ಪೊಲೀಸರು ಸತತ ಎರಡು ತಿಂಗಳ ಕಾರ್ಯಾಚರಣೆ ಬಳಿಕ ಕೇರಳ ಮೂಲಕ ನಟೋರಿಯಸ್ ಅಂತಾರಾಜ್ಯ ಕ್ರಿಮಿನಲ್​​ಗಳನ್ನು ಬಂಧಿಸಿದ್ದಾರೆ.

Maha Kumbh Mela: ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ಸಂತ್ರಸ್ತರ ಕುಟುಂಬಕ್ಕೆ ಬಂತು ಪರಿಹಾರದ ಹಣ

ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಕ್ಕೆ ಬಂತು ಪರಿಹಾರ

ಪರಿಹಾರದ ಮೊತ್ತವನ್ನು ನೇರವಾಗಿ ಮೃತರ ಕುಟುಂಬಗಳಾದ ಜ್ಯೋತಿ ಹತ್ತರವಾಡ, ಮೇಘಾ ಹತ್ತರವಾಡ, ಮಹಾದೇವಿ ಬಾವನೂರ ಮತ್ತು ಅರುಣ್ ಕೋಪರ್ಡೆ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ. ಮಹಾಕುಂಭದ ಪ್ರಮುಖ ಸ್ನಾನದ ದಿನವಾದ ಮೌನಿ ಅಮಾವಾಸ್ಯೆಯಂದು ಸಂಗಮ ಘಾಟ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಭಕ್ತರು ಸಾವನ್ನಪ್ಪಿದ್ದರು.

Holi Beauty Tips: ಹೋಳಿಯಾಟದ ನಂತರ ತ್ವಚೆ & ಕೂದಲ ಆರೈಕೆ ಹೇಗೆ?

ಹೋಳಿಯಾಟದ ನಂತರ ತ್ವಚೆ & ಕೂದಲ ಆರೈಕೆ ಹೇಗೆ?

Holi Beauty Tips: ಬಣ್ಣದ ಓಕುಳಿಯಿಂದಾಡುವ ಹೋಳಿಯ ಸಂಭ್ರಮದ ಸೈಡ್ ಎಫೆಕ್ಟ್ ನೇರವಾಗಿ ತ್ವಚೆ ಹಾಗೂ ಕೂದಲಿನ ಮೇಲುಂಟಾಗುತ್ತದೆ. ಇದನ್ನು ನಿರ್ಲಕ್ಷಿಸದೇ ಆರೈಕೆ ಮಾಡಿಕೊಳ್ಳುವುದು ಅವಶ್ಯ. ಇದಕ್ಕಾಗಿ ಏನೆಲ್ಲ ಮಾಡಬಹುದು? ಎಂಬುದರ ಬಗ್ಗೆ ಬ್ಯೂಟಿ ಎಕ್ಸ್‌ಪರ್ಟ್ಸ್ ಸಿಂಪಲ್ಲಾಗಿ ತಿಳಿಸಿದ್ದಾರೆ.

Crime News: ಮಂಗಳೂರಿನಲ್ಲೊಂದು ವಿಚಿತ್ರ ಘಟನೆ; ಕಾರು ಗುದ್ದಿಸಿ ಯುವಕನ ಕೊಲ್ಲಲು ಯತ್ನ, ಕಂಪೌಂಡ್‌ನಲ್ಲಿ ನೇತಾಡಿದ ಮಹಿಳೆ!

ಕಾರು ಗುದ್ದಿಸಿ ಯುವಕನ ಕೊಲ್ಲಲು ಯತ್ನ, ಕಂಪೌಂಡ್‌ನಲ್ಲಿ ನೇತಾಡಿದ ಮಹಿಳೆ!

ಅಕ್ಕಪಕ್ಕದ ಮನೆಯವರ ನಡುವೆ ತಕರಾರು ಇದ್ದು, ಇದೇ ವಿಚಾರಕ್ಕೆ ಮುರಳಿ ಪ್ರಸಾದ್​ನನ್ನು ಕೊಲ್ಲಲು ಸತೀಶ್ ಕುಮಾರ್​​ ಎಂಬಾತ ಸ್ಕೆಚ್ ಹಾಕಿದ್ದ. ಅದರಂತೆ ನಿನ್ನೆ ಮುರಳಿ ಪ್ರಸಾದ್​ ಬೈಕ್​ನಲ್ಲಿ ಹೋಗುತ್ತಿರುವುದನ್ನು ನೋಡಿ ಸತೀಶ್ ಕುಮಾರ್ ಕಾರಿನಿಂದ ಗುದ್ದಲು ಪ್ರಯತ್ನಿಸಿದ್ದಾನೆ.

Weather Forecast: ಇಂದಿನ ಹವಾಮಾನ; ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

ಇಂದು ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶ, ಉಳಿದೆಡೆ ಒಣ ಹವೆ

Weather Forecast: ಬೆಂಗಳೂರು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶವಿರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 20°C ಇರುವ ಸಾಧ್ಯತೆ ಇದೆ.

ದರ ಏರಿಸಿದರೆ ಆಟೋ ಚಾಲಕರ ಬದುಕಿನ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ಬೆಂಗಳೂರಿನಲ್ಲಿ ಆಟೋ ದರ ಏರಿಕೆಗೆ ಚಾಲಕ ಸಂಘಟನೆಗಳಿಂದ ಪರ ವಿರೋಧ

ಇಂದು ಪೂರ್ವ ಸಂಚಾರಿ ವಿಭಾಗದ ವಿಭಾಗದ ಡಿಸಿಪಿ ಸಾಹಿಲ್ ಬಾಗ್ಲಾ ನೇತೃತ್ವದಲ್ಲಿ ಆಟೋ ಮೀಟರ್ ದರ ಪರಿಷ್ಕರಣೆಗಾಗಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಸಾರಿಗೆ ಇಲಾಖೆಯ ಅಧಿ ಕಾರಿಗಳು ಸೇರಿದಂತೆ ನಗರದ ಎಲ್ಲಾ ಚಾಲಕ ಸಂಘಟನೆಗಳು ಭಾಗಿ ಯಾಗಿದ್ವು. 17 ಸಂಘಟನೆ ಗಳ ಪೈಕಿ 16 ಸಂಘಟನೆಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿವೆ.