ಸರ್ಕಾರಿ ವಹಿಗೆ ಖಾಸಗಿ ವ್ಯಕ್ತಿ ಸಹಿ; ಬಂಧನಕ್ಕೆ ಆದೇಶ
ಹೊಸಪೇಟೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದ್ದಾರೆ. ಈ ವೇಳೆ ವಾಹನ ನೋಂದಣಿ ನವೀಕರಣ ಸ್ವೀಕೃತಿ ವಹಿಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ನಿರಂತರವಾಗಿ ಸಹಿ ಮಾಡಿರುವುದನ್ನು ಪತ್ತೆಹಚ್ಚಿ, ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.