ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Kalaburagi News: ಕರೆಂಟ್‌ ಹರಿಸಿ ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ತೆಲಂಗಾಣ ಗಡಿಭಾಗದ ಸಂಗಾಪೂರ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕರೆಂಟ್‌ ಹರಿಸಿ ಪ್ರಾಣಿಗಳನ್ನು ಬಲಿ ಪಡೆಯುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಸಂಗಾಪೂರ ಗ್ರಾಮದ ಮಾಣಿಕ ತಂದೆ ಹರಿಶ್ಚಂದ್ರ ಪವಾರ (40) ಹಾಗೂ ಸುನೀಲ ತಂದೆ ಧರ್ಮು ರಾಠೋಡ (30) ಬಂಧಿತರು.

MLA Pradeep Eshwar: ಶಾಸಕ ಪ್ರದೀಪ್ ಈಶ್ವರ್ ಸಚಿವರಾಗಬೇಕು ಎಂಬುದು ಕ್ಷೇತ್ರದ ಜನತೆಯ ಆಶಯವಾಗಿದೆ : ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗಭೂಷಣ್

ಶಾಸಕ ಪ್ರದೀಪ್ ಈಶ್ವರ್ ಸಚಿವರಾಗಬೇಕು ಎಂಬುದು ಕ್ಷೇತ್ರದ ಜನತೆಯ ಆಶಯ

ಹಳ್ಳಿಗಳ ಬೆಳವಣಿಗೆಯಲ್ಲಿಯೇ ದೇಶದ ಅಭಿವೃದ್ದಿಯ ಗುಟ್ಟು ಅಡಗಿದೆ ಎಂಬ ಮಹಾತ್ಮಾ ಗಾಂಧೀಜಿ ಅವರ ಗ್ರಾಮಸ್ವರಾಜ್ಯ ತತ್ವದಲ್ಲಿ ನಂಬಿಕೆ ಇಟ್ಟಿರುವ ನಮ್ಮ ಶಾಸಕ ಪ್ರದೀಪ್ ಈಶ್ವರ್ ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕರಾಗಿದ್ದಾರೆ. ಕ್ಷೇತ್ರದ ಪ್ರತಿಹಳ್ಳಿಯ ರಸ್ತೆಗಳು ಚೆನ್ನಾಗಿರಬೇಕು ಎಂದು ಭಾವಿಸಿ ಎಲ್ಲೆಲ್ಲಿ ಸಾಧ್ಯವೋ ಎಲ್ಲೆಲ್ಲಾ ಸಿ ಸಿ ರಸ್ತೆ ನಿರ್ಮಾಣಕ್ಕೆ ಅಡಿಗಲ್ಲು ಹಾಕುತ್ತಿದ್ದಾರೆ. ಇದಕ್ಕೆ ಇಂದಿನ  ಶಂಕುಸ್ಥಾಪನೆಯೇ ಸಾಕ್ಷಿ ಎಂದರು

Indira Kit: ಅಕ್ಕಿಯ ಜೊತೆಗೆ ಇಂದಿರಾ ಕಿಟ್: ಸರ್ಕಾರದ ಘೋಷಣೆ ಮೇಲೆ ಜನರ ಕಣ್ಣು

ಇಂದಿರಾ ಕಿಟ್ ಯೋಜನೆಗೆ ಚಾಲನೆ – ಜೂನ್‌ನಲ್ಲಿ ವಿತರಣೆ ಸಾಧ್ಯತೆ

ಸಚಿವರ ಮಾಹಿತಿಯಂತೆ ಕಿಟ್ ವಿತರಣೆಗೆ ಸಂಬಂಧಿಸಿದ ಮರು ಟೆಂಡರ್ ಪ್ರಕ್ರಿಯೆ ಅಂತಿಮ ಹಂತ ದಲ್ಲಿದ್ದು, ಶೀಘ್ರದಲ್ಲೇ ಜಿಲ್ಲೆಗಳಿಗೆ ಸರಬರಾಜು ಆರಂಭವಾಗಲಿದೆ. ಇಂದಿರಾ ಕಿಟ್‌ನಲ್ಲಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ ಹಾಗೂ ಉಪ್ಪು ಸೇರಿರಲಿದ್ದು, ಬಡ ಕುಟುಂಬಗಳಿಗೆ ಇದು ನೆರವಾಗಲಿದೆ ಎಂದು ಸರ್ಕಾರ ಹೇಳಿದೆ.

ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌; ನ್ಯಾಯಾಲಯ ಹೇಳಿದ್ದೇನು?

ʼಗೃಹಲಕ್ಷ್ಮಿʼ ಬಾಕಿ ಹಣ ವಿಚಾರದಲ್ಲಿ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Gruhalakshmi Scheme: ಗೃಹಲಕ್ಷ್ಮಿ ಯೋಜನೆ 2 ತಿಂಗಳ ಕಂತು ಪಾವತಿಯಾಗದಿರುವ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ನೋಟಿಸ್‌ ನೀಡಿದೆ. 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ‌ ಹಣವನ್ನು ಪಾವತಿ ಮಾಡದ ಹಿನ್ನೆಲೆಯಲ್ಲಿ ಫಲಾನುಭವಿಗಳು ಕೋರ್ಟ್‌ ಮೊರೆ ಹೋಗಿದ್ದರು.

Gauribidabur News: ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

Gauribidabur News: ಸವಿತಾ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ

ತಾಲೂಕು ಸವಿತಾ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಡಿ.ಶಿವಕುಮಾರ್ ಮಾತನಾಡಿ, ಸಮುದಾಯದವರು ಸಂಘಟನೆ ಮತ್ತು ಒಗ್ಗಟ್ಟಿನಿಂದ ಸಾಗಿದಾಗ ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ನಮಗೆ ಪ್ರಾತಿನಿಧ್ಯ ಸಿಗಲಿದೆ, ಈ ನಿಟ್ಟಿನಲ್ಲಿ ನೂತನ ಪದಾಧಿ ಕಾರಿಗಳು ಸಮುದಾಯದ ಸಂಘಟನೆ ಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು

ಬೆಂಗಳೂರಿನಲ್ಲಿ ಡಿ.5,6ರಂದು ಮನೋತ್ಸವ-2026 ರಾಷ್ಟ್ರೀಯ ಮಾನಸಿಕ ಆರೋಗ್ಯ ಹಬ್ಬ: ಕಾರ್ಯಕ್ರಮ ಪ್ರಸ್ತಾವನೆಗಳಿಗೆ ಆಹ್ವಾನ

ಡಿ.5,6ರಂದು ಮನೋತ್ಸವ-2026 ರಾಷ್ಟ್ರೀಯ ಮಾನಸಿಕ ಆರೋಗ್ಯ ಹಬ್ಬ

ದೇಶದ ಪ್ರತಿಷ್ಠಿತ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಬ್ಬ ಮನೋತ್ಸವದ ಮೂರನೇ ಆವೃತ್ತಿಯು ಇದೇ ವರ್ಷದ ಡಿಸೆಂಬರ್ 5 ಮತ್ತು 6 ರಂದು ಬೆಂಗಳೂರಿನಲ್ಲಿ ಆಯೋ ಜನೆಗೊಂಡಿದೆ. ಸಾರ್ವಜನಿಕ ರಿಗೆ ಉಚಿತ ಪ್ರವೇಶವಿರುವ ಈ ವಿಶಿಷ್ಟ ಕಾರ್ಯಕ್ರಮಕ್ಕಾಗಿ ಪ್ರಸ್ತುತ ಕಾರ್ಯಕ್ರಮ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ನೀಟ್‌ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಕಿಂಗ್‌ ಹೇಳಿಕೆ; ಕೇಂದ್ರದ ವಿರುದ್ಧ ವಾಗ್ದಾಳಿ

ವೈದ್ಯಕೀಯ ಪ್ರವೇಶ ಪರೀಕ್ಷೆ ಕೇಂದ್ರೀಕೃತವಾಗಬಾರದು‌: ಸಿಎಂ ಸಿದ್ದರಾಮಯ್ಯ

CM Siddaramaiah: ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನಮಂತ್ರಿ ನರೇಂದ್ರ ಮೋದಿಯವರಾಗಲಿ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದು , ಈ ಜವಾಬ್ದಾರಿಯನ್ನು ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಹೊರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ

Karnataka Weather: ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜತೆಗೆ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 'ಚಾಲೆಂಜರ್ 2026' ಭರ್ಜರಿ ತಾಲೀಮು

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 'ಚಾಲೆಂಜರ್ 2026' ಭರ್ಜರಿ ತಾಲೀಮು

Kempegowda International Airport: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 'ಚಾಲೆಂಜರ್ 2026' ಎಂಬ ಮಹಾ ಅಭ್ಯಾಸವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ತಾಲೀಮಿನಲ್ಲಿ ವಿಮಾನಯಾನ ಸಂಸ್ಥೆಗಳು, ರಾಜ್ಯ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಆಸ್ಪತ್ರೆಗಳು, ಭಾರತೀಯ ವಾಯುಪಡೆ, ಸೇನಾ ಹಾಗೂ ಅರೆಸೇನಾ ಪಡೆಗಳು ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸೇರಿ ಬರೋಬ್ಬರಿ 100ಕ್ಕೂ ಹೆಚ್ಚು ಸಂಸ್ಥೆಗಳು ಹಾಗೂ 3,000ಕ್ಕೂ ಅಧಿಕ ಸಿಬ್ಬಂದಿ ಪಾಲ್ಗೊಂಡಿದ್ದರು.

ತಪ್ಪಿದ ಭಾರೀ ದುರಂತ: ನೆಲಕ್ಕಪ್ಪಳಿಸಿದ ಏರ್ ಇಂಡಿಯಾ ವಿಮಾನದ ಹಿಂಭಾಗ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವಘಡ

ಬೆಂಗಳೂರಿನಲ್ಲಿ ನೆಲಕ್ಕಪ್ಪಳಿಸಿದ ಏರ್ ಇಂಡಿಯಾ ವಿಮಾನದ ಹಿಂಭಾಗ

tail strike in Bengaluru: ಏರ್ ಇಂಡಿಯಾ ವಿಮಾನವೊಂದು ಇಂದು (ಗುರುವಾರ, ಮೇ 21) ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಅದರ ಹಿಂಭಾಗ ನೆಲಕ್ಕಪ್ಪಳಿಸಿದ ಘಟನೆ ನಡೆದಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ತಾಂತ್ರಿಕ ಅಡಚಣೆ ಉಂಟಾಗಿದ್ದರಿಂದ ಈ ದುರ್ಘಟನೆ ನಡೆದಿದೆ.

ರಾಹುಲ್ ಗಾಂಧಿ ಅಸಂಬದ್ಧ, ಬೇಜವಾಬ್ದಾರಿಯ ಹೇಳಿಕೆ ಖಂಡನೀಯ: ಬಿ.ವೈ. ರಾಘವೇಂದ್ರ

ರಾಹುಲ್ ಗಾಂಧಿ ಹೇಳಿಕೆ ಖಂಡನೀಯ: ಬಿ.ವೈ. ರಾಘವೇಂದ್ರ

BY Raghavendra: ಮೇಲಿಂದ ಮೇಲೆ ಚುನಾವಣಾ ಸೋಲುಗಳನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಜನರ ಅಚಲ ನಂಬಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಾಗದೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮತ್ತೆ ತಮ್ಮ ಅದೇ ನಿಂದನೀಯ ಮತ್ತು ಬೇಜವಾಬ್ದಾರಿಯುತ ನಾಲಿಗೆಯನ್ನು ಹರಿ ಬಿಟ್ಟಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಟೀಕಿಸಿದ್ದಾರೆ.

ರಾಜ್ಯದಲ್ಲೂ ಜಿರಳೆ ಅಬ್ಬರ; ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ ಕಾಂಗ್ರೆಸ್‌ ನಾಯಕರು

ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ ಸಿದ್ದರಾಮಯ್ಯ

I am Cockroach Tshirt: ದೇಶಾದ್ಯಂತ ಕಾಕ್ರೋಚ್​​ ಜನತಾ ಪಾರ್ಟಿ ಸದ್ದು ಮಾಡುತ್ತಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ನಾಯಕರು ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆಗೊಳಿಸಿದ್ದಾರೆ. ಸದ್ಯ ಈ ವಿಡಿಯೊ ಭಾರಿ ಸದ್ದು ಮಾಡುತ್ತಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

Karnataka 2nd PUC Exam 2 Result: ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುರುವಾರ (ಮೇ 21) ಪ್ರಕಟಿಸಿದೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಒಟ್ಟು 80,535 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ದುಬಾರೆ ಆನೆ ಶಿಬಿರ ದುರಂತ; ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ನಿಷೇಧ

Sakrebyle Elephant Camp: ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ನಾಳೆಯಿಂದ (ಮೇ 22) ತಾತ್ಕಾಲಿಕವಾಗಿ ಪ್ರವೇಶ ನಿಷೇಧಿಸಲಾಗಿದೆ. ದುಬಾರೆ ಆನೆ ಬಿಡಾರದಲ್ಲಿ ಕಾವೇರಿ ನದಿಯಲ್ಲಿ ಸ್ನಾನ ಮಾಡಿಸುವ ವೇಳೆ ಎರಡು ಸಾಕಾನೆಗಳ ನಡುವೆ ನಡೆದ ಕಾದಾಟದಲ್ಲಿ ತಮಿಳುನಾಡಿನ ಮಹಿಳೆ ಆನೆಯಡಿ ಸಿಲುಕಿ ಮೃತಪಟ್ಟ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ನಾನ್‌ ಸ್ಟಾಪ್‌ ಓಟ, ಪ್ರಯಾಣಿಕರ ಪರದಾಟ ?

ನಾನ್‌ ಸ್ಟಾಪ್‌ ಓಟ, ಪ್ರಯಾಣಿಕರ ಪರದಾಟ ?

ಕೊಪ್ಪಳ, ಯಲಬುರ್ಗಾ ಹಾಗೂ ಕುಕನೂರು ಸಾರಿಗೆ ಘಟಕಗಳ ಬಸ್ ಗಳು ಈ ಮಾರ್ಗದಲ್ಲಿ ಕಾರ್ಯಾ ಚರಣೆ ಮಾಡುತ್ತವೆ. ಜೊತೆಗೆ ಕೊಪ್ಪಳ ಜಿಲ್ಲೆಯ ಹೊರತಾಗಿ ಬೇರೆ ಘಟಕದ ಬಸ್ ಕೂಡ ಈ ಮಾರ್ಗ ದಲ್ಲಿ ಓಡಾಡುತ್ತವೆ. ಇದರಿಂದ ಕೊಪ್ಪಳ- ಯಲಬುರ್ಗಾ ಮಾರ್ಗದಲ್ಲಿ ಬಸ್ ಕೊರತೆ ಇಲ್ಲ. ಆದರೆ, ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡುವ ಬಹುತೇಕ ಬಸ್ ಗಳು ನಾನ್ ಸ್ಟಾಪ್ ಬೋರ್ಡ್ ಹಾಕಿಕೊಂಡೇ ಓಡಾಡುತ್ತವೆ. ಇದರಿಂದ ಹಲಗೇರಿ, ಭಾನಾಪೂರ ಮಸಬಹಂಚಿನಾಳ ಸೇರಿ ಗ್ರಾಮೀಣ ಭಾಗದ ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ.

ಸಾಲ ವಾಪಸ್ ಕೇಳಿದ್ದಕ್ಕೆ ದರ್ಪ; ಕಾರಿನ ಬಾನೆಟ್‌ನಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಸಾಲಗಾರ, ವಿಡಿಯೋ ವೈರಲ್‌

ಕಾರಿನ ಬಾನೆಟ್‌ನಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಸಾಲಗಾರ

drags man on car bonnet: ಹಣ ಮರುಪಾವತಿ ವಿಚಾರದಲ್ಲಿ ಸಾಲಗಾರನ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬರನ್ನು ಚಲಿಸುತ್ತಿದ್ದ ಕಾರಿನ ಬಾನೆಟ್ ಮೇಲೆ ಸುಮಾರು 500 ಮೀಟರ್ ಎಳೆದೊಯ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ರಸ್ತೆಯಲ್ಲಿ ವಾಹನ ಚಲಾಯಿಸುತ್ತಿದ್ದ ಇತರರು ಘಟನೆಯ ದೃಶ್ಯವನ್ನು ವಿಡಿಯೊ ಮಾಡಿದ್ದಾರೆ.

ಮಹಾರಾಜಾವಾಡಿ ಜನರಿಗೆ ಟ್ರ್ಯಾಕ್ಟರ್‌ ನೀರೇ ಗತಿ

ಮಹಾರಾಜಾವಾಡಿ ಜನರಿಗೆ ಟ್ರ್ಯಾಕ್ಟರ್‌ ನೀರೇ ಗತಿ

ಮಹಾರಾಜವಾಡಿ ಗ್ರಾಮದಲ್ಲಿ ತೀವ್ರ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಮಾರುತಿ ರಾಠೋಡ್ ಅವರು ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ; ಏನಿದು ಸ್ಟೋರಿ?

ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ; ಏನಿದು ಸ್ಟೋರಿ?

ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪಾರ್ಟ್‌ ಟೈಂ ಜಾಬ್‌ ಮಾಡುತ್ತಿದ್ದ ಕಾಲೇಜು ಯುವತಿ ಮೇಲೆ ಅತ್ಯಾಚಾರ ನಡೆದಿದ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Anti-Terrorism Day: ಭಯೋತ್ಪಾದನಾ ವಿರೋಧಿ ದಿನ

Anti-Terrorism Day: ಭಯೋತ್ಪಾದನಾ ವಿರೋಧಿ ದಿನ

ಭಾರತವು ದಶಕಗಳಿಂದಲೂ ಗಡಿಯಾಚೆಗಿನ ಮತ್ತು ದೇಶದೊಳಗಿನ ಭಯೋತ್ಪಾದನೆಯಿಂದ ತತ್ತರಿಸಿದೆ. ಮುಂಬೈ ದಾಳಿ, ಸಂಸತ್ ಭವನದ ಮೇಲಿನ ದಾಳಿ, ಪುಲ್ವಾಮಾ ದಾಳಿಯಂತಹ ಘಟನೆಗಳು ನಮ್ಮ ಸೈನಿಕರ ಮತ್ತು ಅಮಾಯಕ ನಾಗರಿಕರ ರಕ್ತವನ್ನು ಹರಿಸಿವೆ. ಈ ಎಲ್ಲ ಹುತಾತ್ಮರ ತ್ಯಾಗವನ್ನು ಸ್ಮರಿಸುವ ಮತ್ತು ಅವರ ಕುಟುಂಬಗಳ ಪರವಾಗಿ ನಿಲ್ಲುವ ಕರ್ತವ್ಯವನ್ನು ಈ ದಿನ ನಮಗೆ ನೆನಪಿಸು ತ್ತದೆ.

First Tech Park in Kalyana Karnataka: ಕಲಬುರಗಿಯಲ್ಲಿ ತಲೆ ಎತ್ತಲಿದೆ ಕಲ್ಯಾಣ ಕರ್ನಾಟಕದ ಮೊದಲ ‘ಟೆಕ್ ಪಾರ್ಕ್’

ಕಲಬುರಗಿಯಲ್ಲಿ ತಲೆ ಎತ್ತಲಿದೆ ಕಲ್ಯಾಣ ಕರ್ನಾಟಕದ ಮೊದಲ ‘ಟೆಕ್ ಪಾರ್ಕ್’

ಈ ಎರಡು ದಿನಗಳ ಉತ್ಸವದಲ್ಲಿ ‘ಟೆಕ್ನೋವಿಷನ್’ ಅಡಿಯಲ್ಲಿ ವಿವಿಧ ತಾಂತ್ರಿಕ ಸ್ಪರ್ಧೆಗಳಾದ ‘12 ಗಂಟೆಯ ಕೋಡ್ ಎಕ್ಸರೇಟ್’, ‘ಸ್ಪೀಕ್ ಟ್ಯಾಕ್ಯುಲರ್’, ‘ಸ್ಲೈಡ್ ಎನ್ ಸರ್ವೈವ್’ ಹಾಗೂ ‘ಟೆಕ್ ಆನ್ ವಾರ್ಸ್’ ಒಳಗೊಂಡಂತೆ ಹತ್ತಾರು ರೋಚಕ ಸ್ಪರ್ಧೆಗಳು ಜರುಗಲಿವೆ. ಇದರಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸ ಲಿದ್ದಾರೆ.

ಸುಖಕರ ಪ್ರಯಾಣ ಅಲ್ಲ, ಪ್ರತಿದಿನವೂ ನರಕ ದರ್ಶನ

ಸುಖಕರ ಪ್ರಯಾಣ ಅಲ್ಲ, ಪ್ರತಿದಿನವೂ ನರಕ ದರ್ಶನ

ಜನರಲ್ ಬೋಗಿಯಲ್ಲಿ ಕೂರಲು ಸ್ಥಳವಕಾಶವಿಲ್ಲದೇ ಅನಿವಾರ್ಯವಾಗಿ ಪ್ರಯಾಣಿಕರು ರಿಸರ್ವೇಷನ್ ಕಂಪಾರ್ಟ್‌ಮೆಂಟ್‌ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ತುಸು ಕೂರಲು ಸ್ಥಳವಿಲ್ಲದೇ ಗಂಟೆಗಂಟಲೇ ನಿಂತುಕೊಂಡೆ ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ. ರೈಲ್ವೆ ಇಲಾಖೆಗೆ ಪ್ರತಿ ಕೇಂದ್ರ ಬಜೆಟ್‌ ನಲ್ಲಿ ಸಾವಿರಾರು ಕೋಟಿ ಅನುದಾನ ಹರಿದು ಬಂದರೂ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಚಲಿಸುವ ರೈಲುಗಳನ್ನು ಮಾತ್ರ ಹೆಚ್ಚಳ ಮಾಡುತ್ತಿಲ್ಲ.

Chinthamani News: ನೂತನ ಬಿ ಇ ಓ ರವರಿಗೆ ನಿವೃತ್ತ ನೌಕರರ ಸಂಘದ ವತಿಯಿಂದ ಸನ್ಮಾನ

ನೂತನ ಬಿ ಇ ಓ ರವರಿಗೆ ನಿವೃತ್ತ ನೌಕರರ ಸಂಘದ ವತಿಯಿಂದ ಸನ್ಮಾನ

ನೂತನ ಬಿಇಒ ರವರು ಈ ಹಿಂದೆ ಚಿಂತಾಮಣಿ ತಾಲೂಕಿನ ವಿವಿಧಡೆಗಳಲ್ಲಿ ಕೆಲಸ ಮಾಡಿದ್ದಾರೆ ಬಹಳಷ್ಟು ಸೇವೆಗೈದು ಒಳ್ಳೆಯ ಹೆಸರು ಪಡೆದಿದ್ದಾರೆಂದು ಹೇಳಿದರು. ಇವರು ತಾಲೂಕಿನ ಪ್ರತಿ ಶಾಲೆಗೂ ಭೇಟಿ ನೀಡಿ ಸೂಕ್ತ ಸಲಹೆ ಸೂಚನೆ ಮಾರ್ಗದರ್ಶನ ನೀಡಿ ಎಸ್ ಎಸ್ ಎಲ್ ಸಿ ಯಲ್ಲಿ ಇನ್ನೂ ಹೆಚ್ಚಿನ ಫಲಿತಾಂಶ ಬರುವಂತೆ ಪ್ರಯತ್ನಿಸುತ್ತಾರೆಂಬ ಭರವಸೆಯನ್ನು ವ್ಯಕ್ತಪಡಿಸಿದರು

Chikkaballapur News: ಕೋಡಿಹಳ್ಳಿ ಚಂದ್ರಶೇಖರ್ ಬಣದ ಕೆಐಎಡಿಬಿ ರೈತಪರ ಹೋರಾಟಕ್ಕೆ ಆದಿಚುಂಚನಗಿರಿ ಶ್ರೀಮಠದ ಅಭಯ

ರೈತರ ಸಂಕಷ್ಟಗಳಿಗೆ ಆದಿಚುಂಚನಗಿರಿ ಮಹಾಸಂಸ್ಥಾನಮಠ ಸದಾ ಜೊತೆಗಿರುತ್ತದೆ

ಜಿಲ್ಲಾಡಳಿತ ಭವನದ ಎದುರು ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಕೆಐಎಡಿಬಿ ಭೂ ಸ್ವಾಧೀನಕ್ಕೆ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂಹಸಿರು ಸೇನೆ, ಕನ್ನಡಪರ, ದಲಿತಪರ ಹೋರಾಟ ಗಾರರು ನಡೆಸುತ್ತಿರುವ ಅನಿರ್ದಿಷ್ಠಾವದಿ ಹೋರಾಟ ಬೆಂಬಲಿಸಿ 66ನೇ ದಿನವಾದ ಬುಧವಾರ  ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಪರವಾಗಿ ಅವರ ಪ್ರತಿನಿಧಿಯಾಗಿ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀಮಂಗಳನಾಥ ಸ್ವಾಮೀಜಿ ಭಾಗವಹಿಸಿ ಮಾತನಾಡಿದರು

MLA B N Ravikumar: ಜೂನ್ 20ರೊಳಗೆ ವಾಸವಿ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ

ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಶಾಸಕ ಬಿ.ಎನ್. ರವಿಕುಮಾರ್

ಮಳೆಗಾಲ ಆರಂಭಕ್ಕೂ ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳ್ಳದಿದ್ದರೆ ವಾಹನ ಸವಾರರು, ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಕಷ್ಟ ಅನುಭವಿಸಬೇಕಾಗುತ್ತದೆ. ಈ ಹಿನ್ನೆಲೆ ಯಲ್ಲಿ ಜೂನ್ 20ರೊಳಗೆ ಕಾಮಗಾರಿ ಸಂಪೂರ್ಣ ಮುಗಿಸಿ ಸಾರ್ವಜನಿಕ ಬಳಕೆಗೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಗಡುವು ನೀಡಿದರು.

Loading...