ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Karnataka Assembly Session: ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಯಾವುದೇ ರೀತಿಯ ಅನ್ಯಾಯವಾಗಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

ಅಂಗನವಾಡಿ ನೇಮಕಾತಿಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ: ಹೆಬ್ಬಾಳ್ಕರ್

Laxmi Hebbalkar: ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಯಲ್ಲಿ ಯಾವುದೇ ರೀತಿಯ ಅನ್ಯಾಯವಾಗಿಲ್ಲ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯಲ್ಲಿ ಪಾರದರ್ಶಕವಾಗಿ ಆಯ್ಕೆ ನಡೆದಿದೆ. ಆಯ್ಕೆಯಲ್ಲಿ ಯಾವುದೇ ಹಸ್ತಕ್ಷೇಪ ಆಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

Karnataka Assembly Session: ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕಾ ಪಡೆ:  ಲಕ್ಷ್ಮಿ ಹೆಬ್ಬಾಳ್ಕರ್‌

ಮಹಿಳೆಯರ ರಕ್ಷಣೆಗೆ ಬರಲಿದೆ ಅಕ್ಕಾ ಪಡೆ: ಲಕ್ಷ್ಮಿ ಹೆಬ್ಬಾಳ್ಕರ್‌

Laxmi Hebbalkar: ಶಾಲಾ- ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕಾ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ> ಈ ಕುರಿತ ವಿವರ ಇಲ್ಲಿದೆ.

Nodiddu Sullagabahudu Movie: ʼನೋಡಿದ್ದು ಸುಳ್ಳಾಗಬಹುದುʼ ಚಿತ್ರದ ʼಕನಸುಗಳ ಮೆರವಣಿಗೆʼ ಹಾಡು ರಿಲೀಸ್‌

ʼನೋಡಿದ್ದು ಸುಳ್ಳಾಗಬಹುದುʼ ಚಿತ್ರದ ʼಕನಸುಗಳ ಮೆರವಣಿಗೆʼ ಹಾಡು ರಿಲೀಸ್‌

Nodiddu Sullagabahudu Movie: ಅನಿಲ್ ಕುಮಾರ್ ಕೆ.ಆರ್. ನಿರ್ಮಾಣ ಮಾಡುವುದರೊಂದಿಗೆ ನಾಯಕನಾಗೂ ನಟಿಸಿರುವ, ವಿಜಯ್ ಚಲಪತಿ ನಿರ್ದೇಶನದ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʼನೋಡಿದ್ದು ಸುಳ್ಳಾಗಬಹುದುʼ ಚಿತ್ರದ ʼಕನಸುಗಳ ಮೆರವಣಿಗೆʼ ಎಂಬ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಗಿದೆ.

ಬಾಕ್ಸರ್‌ ಮಾನ್ಸಿ  ಜೆ ಸುವರ್ಣ ಸಾಧನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ಲಾಘನೆ

ಕಂಚಿನ ಪದಕ ಗೆದ್ದ ಮಾನ್ಸಿ ಸುವರ್ಣ ಸಾಧನೆಗೆ ಹೆಬ್ಬಾಳಕರ್ ಶ್ಲಾಘನೆ

ಮಾನ್ಸಿ ಸುವರ್ಣ, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಹೆಚ್ಚು ಪದಕಗಳನ್ನು ಜಯಿಸಲಿ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತರಲಿ. ಆಕೆಯ‌ ಸಾಧನೆಗೆ ನಮ್ಮ ಸರ್ಕಾರ ಸದಾ ಬೆನ್ನೆಲುಬು ಆಗಿ ನಿಲ್ಲಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BY Vijayendra: ಆ.17ರಂದು ಬಿಜೆಪಿ ಶಾಸಕರು, ಹಿರಿಯರ ತಂಡ ಧರ್ಮಸ್ಥಳಕ್ಕೆ ಭೇಟಿ: ಬಿ.ವೈ. ವಿಜಯೇಂದ್ರ

ಆ.17ರಂದು ಬಿಜೆಪಿ ಶಾಸಕರು, ಹಿರಿಯರ ತಂಡ ಧರ್ಮಸ್ಥಳಕ್ಕೆ ಭೇಟಿ

BY Vijayendra: ಬಿಜೆಪಿ ನಿಲುವು ಸ್ಪಷ್ಟವಿದೆ. ಎಸ್‍ಐಟಿ ತನಿಖೆ ಶೀಘ್ರದಲ್ಲಿ ಮುಗಿಯಬೇಕು. ಇದನ್ನು ಹೀಗೇ ಎಳೆದುಕೊಂಡು ಹೋಗಲು ಸಾಧ್ಯವಿಲ್ಲ. ಸತ್ಯಾಸತ್ಯತೆ ಬಹಿರಂಗ ಆಗಬೇಕು. ಗೊಂದಲಗಳಿಗೆ ಅತಿ ಶೀಘ್ರವೇ ತೆರೆ ಬೀಳಬೇಕಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

Dharmasthala Case: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ರಾಜ್ಯಾದ್ಯಂತ ಸಿಡಿದೆದ್ದ ಭಕ್ತರು, ಪ್ರತಿಭಟನೆ, ಬಿಜೆಪಿಯಿಂದ ಯಾತ್ರೆಗೆ ಚಿಂತನೆ

ಧರ್ಮಸ್ಥಳ ವಿರುದ್ಧ ಅಪಪ್ರಚಾರ: ರಾಜ್ಯಾದ್ಯಂತ ಭಕ್ತರಿಂದ ಪ್ರತಿಭಟನೆ

Dharmasthala: ಶ್ರೀಕ್ಷೇತ್ರದ ಅಭಿಮಾನಿಗಳು ರಾಜ್ಯಾದ್ಯಂತ ಸಿಡಿದೆದ್ದಿದ್ದಾರೆ. ಈ ಅಪಪ್ರಚಾರ ಮಾಡುತ್ತಿರುವವರು, ಅವರಿಗೆ ಎಲ್ಲಿಂದ ಫಂಡಿಂಗ್‌ ಆಗುತ್ತಿದೆ, ದೇಶದ್ರೋಹಿಗಳ ಹಾಗೂ ಧರ್ಮದ್ರೋಹಿಗಳ ಕೈವಾಡ ಇದರ ಹಿಂದೆ ಇದೆಯೇ ಎಂಬ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಕ್ತರು ಪ್ರತಿಭಟನೆ ಆರಂಭಿಸಿದ್ದಾರೆ.

Food poison: ಈರುಳ್ಳಿ ದೋಸೆ ತಿಂದು ಕಾಲೇಜು ಹಾಸ್ಟೆಲ್‌ನ 30 ವಿದ್ಯಾರ್ಥಿಗಳು ಆಸ್ಪತ್ರೆ ಪಾಲು

ಈರುಳ್ಳಿ ದೋಸೆ ತಿಂದು ಕಾಲೇಜು ಹಾಸ್ಟೆಲ್‌ನ 30 ವಿದ್ಯಾರ್ಥಿಗಳು ಅಸ್ವಸ್ಥ

Kolar news: ತಡರಾತ್ರಿಯಲ್ಲಿ ಈರುಳ್ಳಿ ದೋಸೆ, ಇಡ್ಲಿ ಮತ್ತು ಚಟ್ನಿ ಸೇವಿಸಿದ ನಂತರ ವಿದ್ಯಾರ್ಥಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದು, ಅವರನ್ನು ಕೋಲಾರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್ ಆಗಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

Gold Price Today: ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌- ಸತತ ನಾಲ್ಕನೇ ದಿನವೂ ಚಿನ್ನದ ದರ ಇಳಿಕೆ

ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌-ಚಿನ್ನದ ದರದಲ್ಲಿ ಇಳಿಕೆ

Gold Price Today on 13th Aug 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 5 ರೂ ಇಳಿಕೆಯಾಗಿದ್ದು 9,290 ರೂ. ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 5 ರೂ. ಇಳಿಕೆಯಾಗಿ, 10,135 ರೂ. ಆಗಿದೆ. ಆ ಮೂಲಕ 22 ಕ್ಯಾರಟ್‌ನ 8 ಗ್ರಾಂ ಚಿನ್ನ 74,320 ರೂ. ಬಾಳಿದರೆ, 10 ಗ್ರಾಂಗೆ ನೀವು 92,900 ರೂ. ಹಾಗೂ 100 ಗ್ರಾಂಗೆ 9,29,000ರೂ. ನೀಡಬೇಕಾಗುತ್ತದೆ.

Murder Case: ಪತ್ನಿ, ಮಗುವಿನ ಮುಂದೆಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಪತ್ನಿ, ಮಗುವಿನ ಮುಂದೆಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Udupi news: ಪತ್ನಿ, ಮಗುವಿನೊಂದಿಗೆ ಮಲಗಿದ್ದ ವಿನಯ್ ಕೋಣೆಗೆ ಹೋಗಿ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ತಡೆಯಲು ಹೋಗಿದ್ದ ವಿನಯ್ ಪತ್ನಿ ಕೈಗೆ ಗಂಭೀರ ಗಾಯವಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ED Raid: ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್

ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ನಿವಾಸದ ಮೇಲೆ ಇಡಿ ರೇಡ್

Satish Sail: 24ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಸತೀಶ್ ಸೈಲ್ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಕಾರಣ ಶಾಸಕ ಸೈಲ್ ಬೆಂಗಳೂರಿನಲ್ಲಿದ್ದಾರೆ. ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜೈಲು ಶಿಕ್ಷೆಗೊಳಗಾಗಿದ್ದ ಸೈಲ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ.

Om Prakash Murder Case: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್: ಸಿಸಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಕೇಸ್: ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್

Charge sheet: ಚಾರ್ಜ್ ಶೀಟ್‌ನಲ್ಲಿ ಓಂ ಪ್ರಕಾಶ್ ಪುತ್ರಿ ಕೃತಿಕಾ ಹೆಸರು ಕೈಬಿಡಲಾಗಿದ್ದು, ತನಿಖೆ ವೇಳೆ ಕೊಲೆಯಲ್ಲಿ ಕೃತಿಕಾ ಪಾತ್ರ ಕಂಡುಬಾರದ ಹಿನ್ನೆಲೆಯಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಕೊಲೆ ವೇಳೆ ಕೃತಿಕಾ ಮನೆಯ ಮೇಲ್ಮಹಡಿಯಲ್ಲಿದ್ದರು. ಕೊಲೆಯಲ್ಲಿ ಭಾಗಿಯಾದ ಬಗ್ಗೆ ಸೂಕ್ತ ಸಾಕ್ಷ್ಯಗಳ ಕೊರತೆ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ.

Street Dog attack: ಬೆಂಗಳೂರು ವಿವಿ ಆವರಣದಲ್ಲಿ ಬೀದಿ ನಾಯಿ ದಾಳಿ, ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರ

ಬೆಂಗಳೂರು ವಿವಿ ಆವರಣದಲ್ಲಿ ಬೀದಿ ನಾಯಿ ದಾಳಿ, ವಿದ್ಯಾರ್ಥಿನಿಯರು ಗಂಭೀರ

Bengaluru University: ಹಾವೇರಿಯ ಸೌಜನ್ಯ ಜಿಜೆ ಮತ್ತು ತೆಲಂಗಾಣದ ರೇಗಾ ನಿಕ್ಷಿತಾ ಇಬ್ಬರೂ ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ಇಂಟಿಗ್ರೇಟೆಡ್ ಎಂಎಸ್ಸಿ ಇನ್ ಎಕನಾಮಿಕ್ಸ್ ಕೋರ್ಸ್‌ನ ಮೂರನೇ ವರ್ಷದ ವಿದ್ಯಾರ್ಥಿಗಳು. ಇಬ್ಬರನ್ನೂ ನಾಯಿಗಳು ದಾಳಿ ಮಾಡಿ ಕಚ್ಚಿ ಗಾಯಗೊಳಿಸಿವೆ.

Heart Attack: ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

ಹೃದಯಾಘಾತದಿಂದ ಇಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Heart Failure: ಬೆಂಗಳೂರಿನ ಕಾಲೇಜ್ ಒಂದರಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನವೀನ್ ರಜೆ ಇದ್ದ ಕಾರಣ ಊರಿಗೆ ಬಂದಿದ್ದ. ಮನೆಯಲ್ಲಿ ಇದ್ದಾಗಲೇ ಎದೆನೋವಿನಿಂದ ಕುಸಿದುಬಿದ್ದಿದ್ದಾನೆ. ಚಿಕಿತ್ಸೆಗಾಗಿ ಚನ್ನರಾಯಪಟ್ಟಣಕ್ಕೆ ಕರೆದುಕೊಂಡು ಹೋದರೂ ಮಾರ್ಗ ಮಧ್ಯದಲ್ಲೇ ನವೀನ್ ಮೃತಪಟ್ಟಿದ್ದಾನೆ.

Hassan Murder Case: ತಂದೆಯ ಸಾವಿನಿಂದಲೇ ಬಯಲಾಯ್ತು ಮಗನ ಕೊಲೆಯ ರಹಸ್ಯ!  ಕಿರಿಯ ಮಗನೇ ತೋರಿಸಿದ ಅಸ್ಥಿಪಂಜರ

ತಂದೆಯ ಸಾವಿನಿಂದಲೇ ಬಯಲಾಯ್ತು ಮಗನ ಕೊಲೆಯ ರಹಸ್ಯ!

Hassan: ಹಿರಿಯ ಮಗನ ಬಗ್ಗೆ ಯಾರಾದರೂ ವಿಚಾರಿಸಿದರೆ, ಐವತ್ತು ಸಾವಿರ ರೂಪಾಯಿ ಹಣ ಕೊಟ್ಟು ಕಳುಹಿಸಿದ್ದೇನೆ. ಬೆಂಗಳೂರಿನಲ್ಲಿ ಎಲ್ಲೋ ಇದ್ದಾನೆ ಎಂದು ತಂದೆ ಗಂಗಾಧರ್ ಹೇಳುತ್ತಿದ್ದ. ಆದರೆ ಇದೀಗ ಗಂಗಾಧರ್‌ ಸಾವಿನ ನಂತರ ಮಗನ ಕೊಲೆ ರಹಸ್ಯ ಬಯಲಾಗಿದೆ.

DJ ban: ರಾಜ್ಯಾದ್ಯಂತ ಚೌತಿ, ಈದ್ ಹಬ್ಬಕ್ಕೆ ಡಿಜೆ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ಚೌತಿ, ಈದ್ ಹಬ್ಬಕ್ಕೆ ಡಿಜೆ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

Ganesh Chaturthi: ಕೆಲವು ಸಂದರ್ಭಗಳಲ್ಲಿ ಡಿಜೆ ಶಬ್ದದ ಪರಿಣಾಮ ಹೃದಯಾಘಾತ ಹಾಗೂ ಹೃದಯವೈಫಲ್ಯದಿಂದ ಸಾವುಗಳೂ ಸಂಭವಿಸಿವೆ. ಡಿಜೆಯ ಮಾರಣಾಂತಿಕ ಶಬ್ದಕ್ಕೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರು ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇದೆಲ್ಲದರ ಹಿನ್ನೆಲೆಯಲ್ಲಿ ಡಿಜೆ ಸದ್ದಿನ ನಿಷೇಧ ಚಿಂತನೆ ನಡೆದಿದೆ.

Body Found: ಹೊತ್ತಿ ಉರಿದ ಶಾಲಾ ಬಸ್‌, ಅದರೊಳಗೆ ಸುಟ್ಟು ಕರಕಲಾದ ಶವ ಪತ್ತೆ

ಹೊತ್ತಿ ಉರಿದ ಶಾಲಾ ಬಸ್‌, ಅದರೊಳಗೆ ಸುಟ್ಟು ಕರಕಲಾದ ಶವ ಪತ್ತೆ

Bengaluru: ಯಾರೂ ಉಪಯೋಗಿಸದೆ ನಿಲ್ಲಿಸಿದ್ದ ಈ ಬಸ್ಸು ಪಡ್ಡೆ ಹುಡುಗರ ಅಡ್ಡೆಯಾಗಿತ್ತು. ಅದರೊಳಗೆ ಹುಡುಗರು ಮದ್ಯ ಸೇವನೆ, ಗಾಂಜಾ ಸೇವನೆ ನಡೆಸುತ್ತಿದ್ದರು. ಹೀಗಾಗಿ ಬಸ್‌ನೊಳಗೆ ಎಣ್ಣೆ ಹೊಡೆದು, ವ್ಯಕ್ತಿಯನ್ನು ಕೊಲೆ ಮಾಡಿ ಬಸ್‌ಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

Karnataka Weather: ಇಂದು ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾರ್ಭಟ ಸಾಧ್ಯತೆ

ಇಂದು ಉತ್ತರ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾರ್ಭಟ ಸಾಧ್ಯತೆ

Weather Updates: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

ಪರಿಶಿಷ್ಟ ಪಂಗಡ ಮತ್ತು ವರ್ಗಗಳ ಮೇಲಿನ ದೌರ್ಜನ್ಯ ನಿಲ್ಲಲಿ : ಹಳ್ಳಿ ಮಕ್ಕಳ ಸಂಘದ ವೆಂಕಟರಮಣಪ್ಪ ಆಗ್ರಹ

ಪರಿಶಿಷ್ಟ ಪಂಗಡ ಮತ್ತು ವರ್ಗಗಳ ಮೇಲಿನ ದೌರ್ಜನ್ಯ ನಿಲ್ಲಲಿ

ರಾಜ್ಯ ಮತ್ತು ಕೇಂದ್ರದಲ್ಲಿ ದಲಿತ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಿ ಅತ್ಯಾಚಾರ ಮಾಡುತ್ತಿರು ವುದು ಇತ್ತೀಚೆಗೆ ಹೆಚ್ಚಾಗಿ ಕಾಣುತ್ತಿರುತ್ತೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಂದರೆ ಮಾದಿಗ ಜನಾಂಗಕ್ಕೆ ಬರುವ ಮೀಸಲಾತಿ ಜಾರಿಗೆ ಆಗ್ರಹಿಸಿ ಒಂದು ವರ್ಷದಿಂದ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದರೂ ರಾಜ್ಯ ಸರಕಾರ ಕಿವಿ ಕೇಳಿಸದಂತೆ ಮತ್ತು ಕಣ್ಣು ಕಾಣದಂತೆ ಅಂಧರಂತೆ ವರ್ತಿಸುತ್ತಿರು ವುದು ತುಂಬಾ ನೋವನ್ನು ಉಂಟು ಮಾಡಿದೆ

ಕೌಶಲ್ಯ ಕಲಿಕೆಯಿಂದ ಉದ್ಯೋಗ ಭದ್ರತೆ ಸಾಧ್ಯ: ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ

ಕೌಶಲ್ಯ ಕಲಿಕೆಯಿಂದ ಉದ್ಯೋಗ ಭದ್ರತೆ ಸಾಧ್ಯ

ಕೌಶಲ್ಯ ಕಲಿಕೆಯಿಂದ ಯುವ ಸಮೂಹಕ್ಕೆ ಉದ್ಯೋಗ ಭದ್ರತೆ ಸಾಧ್ಯವಾಗಲಿದೆ. ಆದ್ದರಿಂದ ಉದ್ಯೋ ಗಾಂಕ್ಷಿಗಳು, ಉದ್ಯೋಗದಾತರು ಮತ್ತು ಹೊಸದಾಗಿ ಉದ್ಯೋಗ ಗಳಿಸುವವರು ವಿಕಸಿತ ಭಾರತ ಉದ್ಯೋಗ ಯೋಜನೆಯ ಮಹತ್ವವನ್ನು ಅರಿತುಕೊಳ್ಳಬೇಕು. ಈ ಯೋಜನೆಯನ್ನು ಖಾಸಗಿ ವಲಯದ ನೌಕರರು ಮತ್ತು ಅವರ ಕುಟುಂಬದ ಸದಸ್ಯರ ಆರ್ಥಿಕ ಭದ್ರತೆಯನ್ನು ಖಚಿತಪಡಿಸಿ ಕೊಳ್ಳಲು ವಿನ್ಯಾಸ ಗೊಳಿಸಲಾಗಿದೆ.

ಧರ್ಮಸ್ಥಳ ಪ್ರಕರಣ: 13ನೇ ಪಾಯಿಂಟ್‌ನಲ್ಲಿ 18 ಅಡಿ ಆಳ ಅಗೆದರೂ ಸಿಗಲಿಲ್ಲ ಕಳೇಬರ

ಧರ್ಮಸ್ಥಳ: 13ನೇ ಸ್ಥಳದ ಶೋಧ ಅಂತ್ಯ

ಧರ್ಮಸ್ಥಳ ಶವ ಹೂತು ಹಾಕಿದ ಆರೋಪದಲ್ಲಿ ತನಿಖೆಯಲ್ಲಿ ಹೊಸ ತಿರುವು ಸಿಕ್ಕಿದೆ. ಪಾಯಿಂಟ್ ನಂಬರ್ 13ರಲ್ಲಿ ಶೋಧ ಕಾರ್ಯ ಪೂರ್ಣಗೊಂಡಿದ್ದು, ಯಾವುದೇ ಕಳೇಬರ ಸಿಕ್ಕಿಲ್ಲ. ಎಸ್ಐಟಿ ಸಾಕ್ಷ್ಯ ಪರಿಕರಗಳ ವಿಶ್ಲೇಷಣೆಯತ್ತ ಗಮನ ಹರಿಸಿದೆ. ಮುಸುಕುಧಾರಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಶಾಸಕರೇ ದಲಿತರ ಹೆಸರೇಳಿ ಜಾತಿ ರಾಜಕಾರಣ ಮಾಡುವುದನ್ನು ನಿಲ್ಲಿಸಿ : ಹರೀಶ್ ರೆಡ್ಡಿ ಆಗ್ರಹ

ಶಾಸಕರೇ ದಲಿತರ ಹೆಸರೇಳಿ ಜಾತಿ ರಾಜಕಾರಣ ಮಾಡುವುದನ್ನು ನಿಲ್ಲಿಸಿ

ಸಾವಿನ ಮನೆಯಲ್ಲಿ ರಾಜಕೀಯ ಮಾಡಲು ಹೊರಟಿರುವ ನಿಮ್ಮ ನಡೆಸ ಸರ್ವಥಾ ಸರಿಯಿಲ್ಲ. ನೀವು ಕ್ಷೇತ್ರದ ಜನರ ಸಮಸ್ಯೆ ಅರಿಯುವುದಕ್ಕಿಂತ ಹೆಚ್ಚಾಗಿ ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಕಾಲ ಕಳೆಯುತ್ತಿದ್ದೀರಿ. ಶಾಸಕರೇ ನೀವು ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಡುವ ಜವಾಬ್ದಾರಿ ಸ್ಥಾನದಲ್ಲಿದ್ದೀರಿ,ಕೇವಲ ದಲಿತರ ಹೆಸರೇಳಿ ಜಾತಿ ರಾಜಕಾರಣ ಮಾಡಬೇಡಿ

Chikkaballapur News: ಸಮಗ್ರ ಕೀಟ ನಿರ್ವಹಣೆ ಮೂಲಕ ಬೂದಿ ಹುಳು ಹಾವಳಿ ನಿವಾರಣೆ ಸಾಧ್ಯ : ರಾಧಾಕೃಷ್ಣನ್

ಸಮಗ್ರ ಕೀಟ ನಿರ್ವಹಣೆ ಮೂಲಕ ಬೂದಿ ಹುಳು ಹಾವಳಿ ನಿವಾರಣೆ ಸಾಧ್ಯ

ಫಾಲ್ ಆರ್ಮಿ ವರ್ಮ್ ಒಂದು ವಿದೇಶಿ ಕೀಟವಾಗಿದ್ದು, ಇದು ಮುಖ್ಯವಾಗಿ ಮೆಕ್ಕೆಜೋಳ, ಭತ್ತ, ಕಬ್ಬು, ರಾಗಿ ಮತ್ತು ಇತರ ಹಲವು ಬೆಳೆಗಳನ್ನು ಭಾರಿ ಪ್ರಮಾಣದಲ್ಲಿ ನಾಶಪಡಿಸುತ್ತದೆ. ಈ ಹುಳುವು ತನ್ನ ಆರಂಭಿಕ ಹಂತದಲ್ಲಿ ಸಸ್ಯದ ಎಲೆಗಳನ್ನು ತಿನ್ನುತ್ತಾ, ನಂತರ ಕಾಂಡದ ಒಳಗೆ ಸೇರಿಕೊಂಡು ಬೆಳೆಯ ಸಂಪೂರ್ಣ ನಾಶಕ್ಕೆ ಕಾರಣವಾಗುತ್ತದೆ.

Pralhad Joshi: ಸಂಪುಟದಿಂದ ರಾಜಣ್ಣರನ್ನು ವಜಾಗೊಳಿಸಿರುವುದು ರಾಹುಲ್‌ ಗಾಂಧಿ ಅಹಂಕಾರಕ್ಕೆ ನಿದರ್ಶನ: ಜೋಶಿ

ರಾಜಣ್ಣ ರಾಜೀನಾಮೆ ರಾಹುಲ್‌ ಗಾಂಧಿ ಅಹಂಕಾರಕ್ಕೆ ನಿದರ್ಶನ: ಜೋಶಿ

Pralhad Joshi: ಕಾಂಗ್ರೆಸ್‌ನಲ್ಲಿ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದು ರಾಹುಲ್‌ ಗಾಂಧಿ ಅಹಂಕಾರಕ್ಕೆ ನಿದರ್ಶನವಾಗಿದೆ ಎಂದು ಆರೋಪಿಸಿದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ, ರಾಜಣ್ಣ ಮಾಡಿದ ತಪ್ಪೇನು? ಎಂಬ ಬಗ್ಗೆ ಇಡೀ ಕಾಂಗ್ರೆಸ್‌ ಪಕ್ಷ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

Cauvery Wildlife Sanctuary: ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ಸಾವು

ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ಸಾವು

Cauvery Wildlife Sanctuary: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಶಾಖೆಯ ಹೊಳೆಮೂರ್ದಟ್ಟಿ ಗಸ್ತಿನ ಕಿರಬನಕಲ್ಲುಗುಡ್ಡ ಬಳಿ ಮೃತಪಟ್ಟಿವೆ. ಸುಮಾರು 10 ದಿನದ ಹಿಂದೆಯೇ ಒಂದು ಹೆಣ್ಣು, ಒಂದು ಗಂಡು ಹುಲಿ ಮರಿಗಳು ಕೊನೆಯುಸಿರೆಳೆದಿವೆ.

Loading...