ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Dharmasthala Chalo: ಧರ್ಮಸ್ಥಳ ವಿರುದ್ಧ ಪಿತೂರಿ ಕುರಿತು ಎನ್‌ಐಎ ತನಿಖೆಯಾಗಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಧರ್ಮಸ್ಥಳ ವಿರುದ್ಧ ಪಿತೂರಿ; ಎನ್‌ಐಎ ತನಿಖೆಗೆ ಬಿ.ವೈ. ವಿಜಯೇಂದ್ರ ಒತ್ತಾಯ

Dharmasthala Chalo: ಕಳೆದ ಎರಡು ವರ್ಷದಿಂದ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ಅವಮಾನ ಮಾಡುವ ಸರ್ಕಾರವಿದೆ. ಹಿಂದೂಗಳ ಪವಿತ್ರ ಕ್ಷೇತ್ರಕ್ಕೆ ಅಪಚಾರ ಎಸಗುತ್ತಿರುವವರಿಗೆ ಪಾಠ ಕಲಿಸಬೇಕು. ಕ್ಷೇತ್ರದ ಬಗ್ಗೆ ದಿನನಿತ್ಯ ಅಪಪ್ರಚಾರ ನಡೆಯುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

Dharmasthala Chalo: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮಾಡಿದವರನ್ನು ಸಮಾಜ ತಿರಸ್ಕರಿಸಬೇಕು: ಜೋಶಿ

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಮಾಡಿದವರನ್ನು ಸಮಾಜ ತಿರಸ್ಕರಿಸಬೇಕು: ಜೋಶಿ

Pralhad joshi: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಪ್ರಕರಣವನ್ನು NIA ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿದ್ದ ಧರ್ಮಸ್ಥಳ ಚಲೋ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಮಾತನಾಡಿದ್ದು, ಧರ್ಮಸ್ಥಳದ ಪರದ ಹೋರಾಟ ರಾಜಕೀಯವಲ್ಲ, ಇದು ಧರ್ಮ - ಸಂಸ್ಕೃತಿಯ ರಕ್ಷಣೆಗಾಗಿ ನಡೆಯುತ್ತಿರುವ ಪ್ರಾಮಾಣಿಕ ಹೋರಾಟ ಎಂದು ಹೇಳಿದರು.

President Draupadi Murmu: ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸಿಎಂ ಸಿದ್ದರಾಮಯ್ಯ ಸ್ವಾಗತ

ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸಿಎಂ ಸಿದ್ದರಾಮಯ್ಯ ಸ್ವಾಗತ

Mysuru: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಉಪಸ್ಥಿತರಿದ್ದರು.

Dharmasthala Chalo: ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಇತಿಶ್ರೀ ಹಾಡಲು ಧರ್ಮ ಜಾಗೃತಿ ಸಮಾವೇಶ: ವಿಜಯೇಂದ್ರ

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಇತಿಶ್ರೀ ಹಾಡಲು ಧರ್ಮ ಜಾಗೃತಿ ಸಮಾವೇಶ

BY Vijayendra: ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡುವಂತೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ಧರ್ಮಸ್ಥಳದಲ್ಲಿ ಬೃಹತ್ ಧರ್ಮಸ್ಥಳ ಚಲೋ ಅಭಿಯಾನ ಹಾಗೂ ಧರ್ಮ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಳಿಕ ಈ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದಾರೆ.

ಫೇರ್‌ಟ್ರೇಡ್ ಇಂಡಿಯಾದಿಂದ ಸೆ.9–10ರಂದು ಎರಡನೇ ರಾಷ್ಟ್ರೀಯ ಫೇರ್‌ ಟ್ರೇಡ್ ಇನ್ ಇಂಡಿಯಾ ಸಮ್ಮೇಳನ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಸೆ,9–10ರಂದು ಎರಡನೇ ರಾಷ್ಟ್ರೀಯ ಫೇರ್‌ಟ್ರೇಡ್ ಇನ್ ಇಂಡಿಯಾ ಸಮ್ಮೇಳನ

"ಸುಸ್ಥಿರತೆ, ಮಾರುಕಟ್ಟೆಗಳು ಮತ್ತು ಪರಿಣಾಮ" ಎಂಬ ಥೀಮ್‌ನೊಂದಿಗೆ, ಎರಡು ದಿನಗಳ ಕಾರ್ಯ ಕ್ರಮ ನಡೆಯಲಿದ್ದು, ನೈತಿಕ ವ್ಯಾಪಾರವನ್ನು ಮುನ್ನಡೆಸುವಲ್ಲಿ, ಸುಸ್ಥಿರ ಕೃಷಿಯನ್ನು ಬಲಪಡಿಸುವಲ್ಲಿ ಮತ್ತು ಭಾರತದಲ್ಲಿ ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳನ್ನು ಸಕ್ರಿಯಗೊಳಿಸುವಲ್ಲಿ ಫೇರ್‌ಟ್ರೇಡ್‌ನ ಪಾತ್ರ ವನ್ನು ಎತ್ತಿ ತೋರಿಸುತ್ತದೆ.

POCSO case: ಸೋದರನಿಂದಲೇ ಗರ್ಭಿಣಿಯಾದ ಬಾಲಕಿ, ಹೆರಿಗೆಯ ಬಳಿಕ ಕೃತ್ಯ ಬಯಲು

ಸೋದರನಿಂದಲೇ ಗರ್ಭಿಣಿಯಾದ ಬಾಲಕಿ, ಹೆರಿಗೆಯ ಬಳಿಕ ಕೃತ್ಯ ಬಯಲು

Shivamogga news: ಬಾಲಕಿಗೆ ಹೆರಿಗೆಯಾದ ನಂತರ ಬಾಲಕಿಗೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 'ಹೆಂಡತಿ ಕಾಣೆಯಾಗಿದ್ದಾಳೆ' ಎಂಬ ನಿಗೂಢ ಜಾಹೀರಾತು ಫಲಕಗಳು? ಇದರ ಹಿನ್ನೆಲೆ ಏನು?

'ಹೆಂಡತಿ ಕಾಣೆಯಾಗಿದ್ದಾಳೆ' ಎಂಬ ನಿಗೂಢ ಜಾಹೀರಾತು ಫಲಕಗಳು?

ಹೆಂಡತಿಯರ ಕಾಣೆಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿರುವ ಹೋರ್ಡಿಂಗ್‌ ಕಾಣಿಸು ತ್ತಿದೆ. ಈ ನಿಗೂಢತೆ ಏನೆಂದು ನೋಡಲು ನಿಮಗೂ ಕಾತುರತೆ ಇದ್ದರೆ, ಖಂಡಿತ ಕಾಯಬೇಕು. ಈ ಹೋರ್ಡಿಂಗ್‌ನಲ್ಲಿರುವ ಕಾಣೆಯಾಗಿದ್ದಾರೆ ಫಲಕ ನಿಜವಾದುದ್ದೇ? ಅಥವಾ ಸಾಮಾಜಿಕ ಸಂದೇಶವೇ? ಇನ್ನೂ ಯಾರಿಗೂ ತಿಳಿದಿಲ್ಲ, ಕೆಲವೇ ದಿನಗಳಲ್ಲಿ ಈ ಎಲ್ಲದಕ್ಕೂ ಉತ್ತರ ಅದೇ ಹೋರ್ಡಿಂಗ್‌ನಲ್ಲಿ ಕಾಣಿಸಲಿದೆ.

Sirsi news: ಉಂಚಳ್ಳಿ ಗ್ರಾಮ ಪಂಚಾಯತದ ನೂತನ ಕಟ್ಟಡ ಉದ್ಘಾಟನೆ

ಉಂಚಳ್ಳಿ ಗ್ರಾಮ ಪಂಚಾಯತದ ನೂತನ ಕಟ್ಟಡ ಉದ್ಘಾಟನೆ

15ನೇ ಹಣಕಾಸು ಹಾಗೂ MGNREGA ಯೋಜನೆಗಳ ಅಡಿಯಲ್ಲಿ ಮಂಜೂರಾದ ಶಿರಸಿ ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತದ ನೂತನ ಕಟ್ಟಡ ಉದ್ಘಾಟನೆಯನ್ನು ಶಾಸಕ ಶಿವರಾಮ ಹೆಬ್ಬಾರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಸತೀಶ್ ನಾಯ್ಕ, ಅಧ್ಯಕ್ಷೆ ಮಂಜಮ್ಮ ಬೋವಿ, ಸುಮಾ ಉಗ್ರಾಣಕರ್, ತಾಪಂ ಸದಸ್ಯೆ ರತ್ನಾ ಶೆಟ್ಟಿ, ರೂಪಾ ನಾಯ್ಕ, ಬಸವರಾಜ ದೊಡ್ಮನಿ, ಸಿಎಫ್ ನಾಯ್ಕ, ತಾಪಂ ಅಧಿಕಾರಿ ಚನ್ನಬಸಪ್ಪ ಹಾವಣಗಿ ಉಪಸ್ಥಿತರಿದ್ದರು.

ನಿಸರ್ಗದಿಂದಲೇ ಸಕಲ ರೋಗಗಳಿಗೂ ಮದ್ದು; ಡಾ. ವೆಂಕಟರಮಣ ಹೆಗಡೆ ಬಿತ್ತಿದ ಬೀಜ ಇಂದು ಹೆಮ್ಮರ! ನಿಸರ್ಗ ಮನೆ ವೇದ ವೆಲ್‌ನೆಸ್‌ ಸೆಂಟರ್‌ನಿಂದ ಶೇ. 100 ಆರೋಗ್ಯ

ನಿಸರ್ಗ ಮನೆ ವೇದ ವೆಲ್‌ನೆಸ್‌ ಸೆಂಟರ್‌ನಿಂದ ಶೇ. 100 ಆರೋಗ್ಯ

Pravasi Prapancha: ನಿಸರ್ಗ ಚಿಕಿತ್ಸೆಯ ಮೂಲಕವೇ ಸಕಲ ರೋಗಗಳಿಗೂ ಮದ್ದು ನೀಡುತ್ತಿರುವ ಮತ್ತು ದೇಶವ್ಯಾಪಿ ಪ್ರಸಿದ್ಧಿಯಾಗಿರುವ, ಉತ್ತರ ಕನ್ನಡದ ಶಿರಸಿಯಲ್ಲಿ ನಿಸರ್ಗ ಮನೆ ವೇದ ವೆಲ್‌ನೆಸ್‌ ಸೆಂಟರ್ ಬಗ್ಗೆ ಈ ಬಾರಿಯ ಪ್ರವಾಸಿ ಪ್ರಪಂಚ ಸಂಚಿಕೆಯಲ್ಲಿದೆ ವಿವರ.

BJP Dharmasthala Chalo: ಧರ್ಮಸ್ಥಳ ವಿರುದ್ಧದ ಷಡ್ಯಂತ್ರದಲ್ಲಿ ವಿದೇಶಿ ಶಕ್ತಿಗಳೂ ಇವೆ, NIA ತನಿಖೆ ಆಗಬೇಕು: ಜನಾರ್ದನ ರೆಡ್ಡಿ ಆಗ್ರಹ

ಧರ್ಮಸ್ಥಳ ವಿರುದ್ಧದ ಷಡ್ಯಂತ್ರದಲ್ಲಿ ವಿದೇಶಿ ಶಕ್ತಿಗಳೂ ಇವೆ!

G. Janardhana Reddy: ಎಸ್‌ಐಟಿ ತನಿಖೆಯಿಂದ ಒಳ್ಳೆಯದೇ ಆಯ್ತು. ಯಾಕೆಂದರೆ ಮುಸುಕುಧಾರಿಯ ಮುಖವಾಡ ಬದಲಾಯ್ತು, ಆತನ ಬಂಧನವಾಗಿದೆ. ಸುಜಾತಾ ಭಟ್‌ ಅವರ ಕಟ್ಟುಕಥೆ ಸುಳ್ಳಿನ ಕಥೆ ಎಂಬುದು ಗೊತ್ತಾಯಿತು. ಯೂಟ್ಯೂಬರ್ಸ್‌ ಕೂಡ ಬೋಗಸ್‌ ಎಂದು ತಿಳಿಯಿತು. ಇನ್ನು ಇವರೆಲ್ಲರ ಹಿಂದೆ ಯಾರಿದ್ದಾರೆ ಎಂಬ ಸತ್ಯ ಹೊರಲು ಎನ್‌ಐಎ ತನಿಖೆಯಾಗಬೇಕು ಎಂದು ಶಾಸಕ ಜನಾರ್ದನ ರೆಡ್ಡಿ ಒತ್ತಾಯಿಸಿದ್ದಾರೆ.

Murder case: ಲಿವ್‌ ಇನ್‌ ಗೆಳತಿಯ ಮೇಲೆ ಪೆಟ್ರೋಲ್‌ ಸುರಿದು ಸುಟ್ಟು ಕೊಂದ ಸಂಶಯಪಿಶಾಚಿ!

ಲಿವ್‌ ಇನ್‌ ಗೆಳತಿಯ ಮೇಲೆ ಪೆಟ್ರೋಲ್‌ ಸುರಿದು ಸುಟ್ಟು ಕೊಂದ ಸಂಶಯಪಿಶಾಚಿ!

Bengaluru Crime: ವಿಟ್ಠಲ ಕ್ಯಾಬ್‌ ಚಾಲಕನಾಗಿದ್ದ. ಮಳೆನಲ್ಲಸಂದ್ರದಲ್ಲಿ ಕಳೆದ ಮೂರು ವರ್ಷಗಳಿಂದ ಇಬ್ಬರು ಲಿವಿಂಗ್ ಟುಗೆದರ್‌ನಲ್ಲಿದ್ದರು. ಆದರೆ ಇತ್ತೀಚೆಗೆ ಮೃತ ವನಜಾಕ್ಷಿ ಬೇರೊಬ್ಬ ವ್ಯಕ್ತಿಯ ಜೊತೆಗೆ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿ ವಿಠ್ಠಲನಿಗೆ ಅನುಮಾನ ಮೂಡಿತ್ತು. ಇದರಿಂದಾಗಿ ವಿಠ್ಠಲ ಆಕೆಯನ್ನು ಫಾಲೋ ಮಾಡಲು ಶುರು ಮಾಡಿದ್ದ.

Heart Fail: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುತ್ತಾ ಕುಸಿದು ಬಿದ್ದುಇಬ್ಬರ ಸಾವು

ಗಣೇಶ ವಿಸರ್ಜನೆಯಲ್ಲಿ ಡ್ಯಾನ್ಸ್‌ ಮಾಡುತ್ತಾ ಕುಸಿದು ಬಿದ್ದುಇಬ್ಬರ ಸಾವು

Ganesh Chaturthi: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಾ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್​​​ನಿಂದ ಬಿದ್ದು ಇನ್ನೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.

Gold Rate Today: ಚಿನ್ನದ ದರದಲ್ಲಿ ಭಾರೀ ಏರಿಕೆ; ಇಂದಿನ  ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಭಾರೀ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 1st Sep 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 85ರೂ. ಏರಿಕೆ ಕಂಡಿದ್ದು, 9,705 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 93ರೂ. ಏರಿಕೆಯಾಗಿ 10,588 ರೂ.ಗೆ ತಲುಪಿದೆ.

Radhika Kumaraswamy: ಜಮೀರ್‌ ಅಹ್ಮದ್‌ಗೆ ರಾಧಿಕಾ ಕುಮಾರಸ್ವಾಮಿ 2.5 ಕೋಟಿ ರೂ. ಸಾಲ, ಲೋಕಾಯುಕ್ತ ವಿಚಾರಣೆ

ಜಮೀರ್‌ ಅಹ್ಮದ್‌ಗೆ ರಾಧಿಕಾ 2.5 ಕೋಟಿ ರೂ. ಸಾಲ, ಲೋಕಾಯುಕ್ತ ವಿಚಾರಣೆ

ನಾನು ಯಾರ ಬಳಿ ಸಾಲ ಪಡೆದಿದ್ದೇನೆ ಎನ್ನುವುದರ ಬಗ್ಗೆ ಜಮೀರ್‌ ಲೋಕಾಯುಕ್ತ ಪೊಲೀಸರಿಗೆ ಲಿಖಿತವಾಗಿ ಪಟ್ಟಿ ನೀಡಿದ್ದರು. ಈ ಪಟ್ಟಿಯಲ್ಲಿ ರಾಧಿಕಾ ಕುಮಾರಸ್ವಾಮಿ ಬಳಿಯಿಂದ 2.5 ಕೋಟಿ ರೂ. ಸಾಲ ಪಡೆದಿರುವ ವಿಚಾರವನ್ನು ಹಂಚಿಕೊಂಡಿದ್ದರು. ವಿಚಾರಣೆ ವೇಳೆ ರಾಧಿಕಾ, ದಶಕದ ಹಿಂದೆ ತಾವು ಸಚಿವ ಜಮೀರ್ ಅವರಿಗೆ ಸಾಲ ಕೊಟ್ಟಿದ್ದನ್ನು ಒಪ್ಪಿಕೊಂಡು ಹೇಳಿಕೆ ದಾಖಲಿಸಿದ್ದಾರೆ.

Toll hike: ಇಂದಿನಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಇಂದಿನಿಂದ ನೆಲಮಂಗಲ- ಹಾಸನ ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಏರಿಕೆ

ಇಂದು ಮಧ್ಯರಾತ್ರಿಯಂದಲೇ ನೆಲಮಂಗಲ-ಹಾಸನ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್-75ರಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಿದೆ. ಹೀಗಾಗಿ ಲಘು ವಾಹನಗಳಿಗೆ ರೂ.10 ರಿಂದ 15ರಷ್ಟು, ಭಾರೀ ವಾಹನಗಳಿಗೆ ರೂ.50 ರಿಂದ 100 ರೂಪಾಯಿಯಷ್ಟು ಟೋರ್ ದರ ಏರಿಕೆಯ ಬಿಸಿ ತಟ್ಟಲಿದೆ.

LPG Price: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ತುಸು ಇಳಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ತುಸು ಇಳಿಕೆ

ಈ ಹಿಂದೆ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 33.50 ರೂ.ಗಳಷ್ಟು ಕಡಿಮೆ ಮಾಡಿದ್ದವು. ಅದಕ್ಕೂ ಮೊದಲು ಜುಲೈ 1 ರಂದು 58.50 ರೂ.ಗಳಷ್ಟು ಬೆಲೆಯನ್ನು ಕಡಿಮೆ ಮಾಡಿದ್ದವು. ಜೂನ್‌ನಲ್ಲಿ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳಿಗೆ 24 ರೂ.ಗಳಷ್ಟು ಕಡಿತವನ್ನು ಘೋಷಿಸಿ, ದರವನ್ನು 1,723.50 ರೂ.ಗಳಿಗೆ ನಿಗದಿಪಡಿಸಿದ್ದವು.

Harrassment: ಬೆಂಗಳೂರಿನ ಪಿಜಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ದರೋಡೆ

ಬೆಂಗಳೂರಿನ ಪಿಜಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ದರೋಡೆ

Bengaluru: ಕೆಲವು ತಿಂಗಳ ಹಿಂದೆ ಬೆಂಗಳೂರಿನ ಪಿಜಿಯೊಂದರಲ್ಲಿ ಯುವತಿಯೊಬ್ಬಳ ಹತ್ಯೆ ನಡೆದಿತ್ತು. ಇದೀಗ ಈ ಪ್ರಕರಣ ನಡೆದಿದ್ದು, ಪಿಜಿಗಳಲ್ಲಿ ವಾಸಿಸುವ ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಎದ್ದಿವೆ. ಅತಿಕ್ರಮಣ, ಲೈಂಗಿಕ ಕಿರುಕುಳ, ಹಲ್ಲೆ ಮತ್ತು ಕಳ್ಳತನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

CM Siddaramaiah: ಧರ್ಮಾಂಧರಿಂದ ಮಾತ್ರ ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ವಿರೋಧ: ಸಿಎಂ ಸಿದ್ದರಾಮಯ್ಯ

ಧರ್ಮಾಂಧರಿಂದ ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ವಿರೋಧ: ಸಿದ್ದರಾಮಯ್ಯ

ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್ ನೀಡಿರುವ ಹಳೇ ಹೇಳಿಕೆಗೂ ಇದಕ್ಕೂ ಏನು ಸಂಬಂಧ? ಬಿಜೆಪಿಯವರು ಕುಂಟು ನೆಪ ಹುಡುಕುತ್ತಿದ್ದಾರೆ ಅಷ್ಟೇ. ಯಾವತ್ತೋ ಏನೋ ಹೇಳಿದ್ದಾರೆ ಅಂತ ಅದನ್ನ ಇಲ್ಲಿಗೆ ಲಿಂಕ್ ಮಾಡುವುದು ಎಷ್ಟು ಸರಿ? ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ ಎಂದರು.

Dharmasthala case: ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ, ಎನ್‌ಐಎ ತನಿಖೆಗೆ ಒತ್ತಾಯ

ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ, ಎನ್‌ಐಎ ತನಿಖೆಗೆ ಒತ್ತಾಯ

ಹಿಂದೂಗಳ ಅಸ್ಮಿತೆ, ನಂಬಿಕೆ ಹಾಗೂ ಭಾವನೆಗಳಿಗೆ ಘಾಸಿ ಮಾಡುತ್ತಿರುವ ಧರ್ಮ ದ್ರೋಹಿಗಳಿಗೆ, ಹಿಂದೂ ವಿರೋಧಿಗಳಿಗೆ ಕಠಿಣ ಎಚ್ಚರಿಕೆ ನೀಡುವ ಜತೆಗೆ ಧಾರ್ಮಿಕ ಕ್ಷೇತ್ರಗಳ ರಕ್ಷಣೆಗೆ ಬದ್ಧತೆಯನ್ನು ತೋರುವುದು ಈ ಅಭಿಯಾನದ ಉದ್ದೇಶ. ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದ ಪಕ್ಷದ 1 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಧರ್ಮಸ್ಥಳ ಚಲೋದಲ್ಲಿ ಭಾಗವಹಿಸಲಿದ್ದಾರೆ.

Basangouda Patil Yatnal: ಬಿಜೆಪಿ ಸೇರ್ಪಡೆಗೆ ಡಿಕೆಶಿ ಯತ್ನ: ಯತ್ನಾಳ ಆರೋಪ

ಬಿಜೆಪಿ ಸೇರ್ಪಡೆಗೆ ಡಿಕೆಶಿ ಯತ್ನ: ಯತ್ನಾಳ ಆರೋಪ

ಡಿ.ಕೆ ಶಿವಕುಮಾರ್, ವಿಜಯೇಂದ್ರ ಮಾತುಕತೆಯ ಸಂದರ್ಭದಲ್ಲಿ ಡಿಕೆಶಿ ಮುಖ್ಯಮಂತ್ರಿ, ವಿಜಯೇಂದ್ರ ಉಪಮುಖ್ಯಮಂತ್ರಿ ಆಗುವಂತೆ ಚರ್ಚೆ ನಡೆದಿತ್ತು. ಆದರೇ ಡಿಕೆ ಶಿವಕುಮಾರ್ ಅವರ ಹಿಂದೆ ಹೆಚ್ಚಿನ ಸಂಖ್ಯೆಯ ಶಾಸಕರು ಇರಲಿಲ್ಲ. ಹೀಗಾಗಿ ಸುಮ್ಮನಾಗಿದ್ದಾರೆ ಎಂಬುದಾಗಿ ಹೊಸ ಬಾಂಬ್ ಸಿಡಿಸಿದ್ದಾರೆ.

Spoorthivani Column: ಒಂದೇ ದಿನಕ್ಕೆ ನಡಿಗೆ ಕಲಿತಿರಾ? ದೇವರ ದರ್ಶನದ ಪ್ರಯತ್ನವೂ ಹಾಗೆಯೇ

ದೇವರ ದರ್ಶನದ ಪ್ರಯತ್ನ ಹೀಗಿರಲಿ

ನಾವು ನಮ್ಮ ಕೆಲಸಗಳನ್ನು ದೇವರಿಗೆ ಅರ್ಪಣೆ ಎಂದು ತಿಳಿದು ಮಾಡಿದಾಗ, ಅವನು ನಮ್ಮ ಮೇಲೆ ಅನುಗ್ರಹದ ಮಳೆಯನ್ನೇ ಸುರಿಸುತ್ತಾನೆ. ದೇವರಿಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಕೆಲಸ ಮಾಡಿದರೆ, ನಮ್ಮ ಮನಸ್ಸು ಶುದ್ಧವಾಗುತ್ತದೆ. ಪ್ರತಿಯೊಬ್ಬನೂ ದೇವರನ್ನು ಪಡೆಯಲು ಶಕ್ತನಾಗಿದ್ದರೂ, ಅದು ಕೇವಲ ಒಂದು ದಿನದಲ್ಲಿ ಆಗುವಂಥದ್ದಲ್ಲ.

Bagepally News: ಶಾಸಕರ ಕರೆ ಸ್ವೀಕರಿಸದ ಅಧಿಕಾರಿ ಅಮಾನತು

ಶಾಸಕರ ಕರೆ ಸ್ವೀಕರಿಸದ ಅಧಿಕಾರಿ ಅಮಾನತು

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯ ಕ್ರಮಗಳ ಬಗ್ಗೆ ಮಾತನಾಡಲು ಬಿಂದುಮಣಿ ಅವರಿಗೆ ಶಾಸಕರು ಮೂರು ದಿನ ಕರೆ ಮಾಡಿದ್ದಾರೆ. ಆದರೆ ಅಧಿಕಾರಿ ಕರೆ ಸ್ವೀಕರಿಸಿಲ್ಲ. ಇದರಿಂದ ಅಸಮಾಧಾನಗೊಂಡ ಶಾಸಕರು ಬಿಂದುಮಣಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಇಲಾಖೆಯನ್ನು ಕೋರಿದ್ದರು.

Bagepally Ganeshotsava: ಗೂಳೂರು ರೆಡ್ಡಿ ಯುವ ಬಳಗ ವತಿಯಿಂದ ಪ್ರತಿಷ್ಠಾಪಿಸಿದ್ದ 4ನೇ ವರ್ಷದ ಗೌರಿ, ಗಣೇಶ ಮೂರ್ತಿ ವಿಸರ್ಜನೋತ್ಸವ

4ನೇ ವರ್ಷದ ಗೌರಿ, ಗಣೇಶ ಮೂರ್ತಿ ವಿಸರ್ಜನೋತ್ಸವ

ಗೂಳೂರು ಗ್ರಾಮದ ರೆಡ್ಡಿ ಯುವ ಬಳಗ ವತಿಯಿಂದ ಪ್ರತಿಷ್ಠಾಪಿಸಿದ್ದ 4ನೇ ವರ್ಷದ ಗೌರಿ ಗಣೇಶೋತ್ಸ ವದ ವಿಸರ್ಜನೋತ್ಸವವು ಶುಕ್ರವಾರ ಸಂಜೆ ಹರಿ ಸ್ವಾಮಿ ಯವರಿಂದ ವಿವಿಧ ಪೂಜಾ ಕೈಂಕರ್ಯದ ನಂತರ ಪ್ರಮುಖ ಬೀದಿಯಲ್ಲಿ ವಿದ್ಯುತ್ ದೀಪಗಳಿಂದ ಅಲಂಕರಿಸಿದ ಗೌರಿ ಗಣೇಶ ಉತ್ಸವ ಮೂರ್ತಿಯ ಶೋಭಾಯಾತ್ರೆಯಲ್ಲಿ ರಸ್ತೆ ಉದ್ದಕ್ಕೂ ಪಟಾಕಿ ಸಿಡಿಸಿ ಸಂಭ್ರಮಿಸಿದರು.

Gauribidanur News: ಕ್ರೀಡಾಕೂಟದಿಂದ ಶಿಕ್ಷಕರಿಗೆ ಚೈತನ್ಯ ದೊರೆಯುತ್ತದೆ

ಶಿಕ್ಷಕರ ಕ್ರೀಡಾಕೂಟ: ಚಿಣ್ಣರಂತೆ ನಲಿದ ಶಿಕ್ಷಕರು

ಶಿಕ್ಷಕರು ಶಾಲೆಯಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪೋತ್ಸಾಹಿಸುವುದಲ್ಲಿ ಹೆಚ್ಚಿನ ಗಮನ ವಿರಿಸುವುದರಿಂದ ಬಹುತೇಕ ಸಂದರ್ಭಗಳಲ್ಲಿ ತಮ್ಮ ಆಸಕ್ತಿಯ ಕ್ರೀಡೆ, ಹವ್ಯಾಸಗಳನ್ನು ಮರೆತು ಬಿಟ್ಟಿರುತ್ತಾರೆ. ಹೀಗಾಗಿ ಇಂತಹ ಕ್ರೀಡಾಕೂಟಗಳು ವೃತ್ತಿ ಜೀವನದಲ್ಲಿ ಚಿರಸ್ಮರಣಿಯವಾಗಿ ಉಳಿಯುತ್ತವೆ. ಕ್ರೀಡಾಕೂಟದಲ್ಲಿ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡಿರುವುದು ಒಳ್ಳೆಯ ಬೆಳವಣಿಗೆ

Loading...