ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಅಪ್ಪು ಸ್ಪೋರ್ಟ್ಸ್ ಕ್ಲಬ್

ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಅಪ್ಪು ಸ್ಪೋರ್ಟ್ಸ್ ಕ್ಲಬ್

ಸ್ಥಳೀಯ ಅಪ್ಪು ಸ್ಪೋರ್ಟ್ಸ್ ಕ್ಲಬ್ ಚಿಕ್ಕಬಳ್ಳಾಪುರ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿಜೇತರಾಗಿ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಅಪ್ಪು ಸ್ಪೋರ್ಟ್ಸ್ ಕ್ಲಬ್ ಕಬಡ್ಡಿ ತಂಡದ ತರಬೇತುದಾರ ರಾಘವೇಂದ್ರ ಅವರು ಮಾತನಾಡುತ್ತಾ ಹತ್ತು ವರ್ಷಗಳ ನಂತರ ನಮ್ಮ ತಾಲೂಕಿನ ಕಬಡ್ಡಿ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ ಯಲ್ಲಿ ವಿಜೇತರಾಗುವ ಮೂಲಕ ತಾಲೂಕಿನ ಕ್ರೀಡಾ ಪ್ರೇಮಿಗಳಲ್ಲಿ ಹರ್ಷವನ್ನು ಉಂಟು ಮಾಡಿದ್ದಾರೆ.

Gauribidanur News: ಡಾ.ಎಚ್.ಎನ್ ವ್ಯಕ್ತಿಯಾಗಿರದೆ ಅವರೊಂದು ಸಂಸ್ಥೆಯಂತಿದ್ದರು: ಲೇಖಕ ಎಸ್.ಎಲ್.ರಾಮಕೃಷ್ಣ ಅಭಿಮತ

ಡಾ.ಎಚ್.ಎನ್ ವ್ಯಕ್ತಿಯಾಗಿರದೆ ಅವರೊಂದು ಸಂಸ್ಥೆಯಂತಿದ್ದರು

ಶಿಕ್ಷಣ ತಜ್ಞ ಡಾ.ಎಚ್ ನರಸಿಂಹಯ್ಯ(Educationist Dr. H. Narasimhaiah) ನವರು ಕೇವಲ ಒಬ್ಬ ವ್ಯಕ್ತಿಯಾಗಿರದೆ ಒಂದು ಸಂಸ್ಥೆಯ ರೀತಿ ಕೆಲಸ ಮಾಡಿದ ಮಹಾನ್ ಚೇತನ ಎಂದು ಬಿಹೆಚ್‌ಇಎಲ್ ಸಂಸ್ಥೆಯ ನಿವೃತ್ತ ಲೆಕ್ಕಪರಿಶೋಧಕರು ಹಾಗೂ ಲೇಖಕರಾದ ಎಸ್.ಎಲ್.ರಾಮಕೃಷ್ಣ ಅಭಿಪ್ರಾಯ ಪಟ್ಟರು.

ನ್ಯಾಶನಲ್ ಹೆರಾಲ್ಡ್ ಪ್ರಕರಣ: ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ದ್ವೇಷ ರಾಜಕಾರಣ ಬಿಟ್ಟು ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಿ

ಕೇಂದ್ರದ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಮೊದಲಾದ ತನಿಖಾಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂಬುದಕ್ಕೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಸುಳ್ಳು ಆರೋಪ ಪಟ್ಟಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದೇ ಸಾಕ್ಷಿಯಾಗಿದೆ

Chikkaballapur News: ಮಂಚೇನಹಳ್ಳಿ ಮಾನಸ ಆಸ್ಪತ್ರೆಯಲ್ಲಿ ಉಚಿತ ಕೀಲು, ಎಲುಬು ಸಾಂಧ್ರತೆ ಪರೀಕ್ಷಾ ಶಿಬಿರ

ಉಚಿತ ಕೀಲು, ಎಲುಬು ಸಾಂಧ್ರತೆ ಪರೀಕ್ಷಾ ಶಿಬಿರ

ಡಿ.20ರ ಶನಿವಾರ ಮಂಚೇನಹಳ್ಳಿಯಲ್ಲಿ ನಡೆಯಲಿರುವ ಉಚಿತ ತಪಾಸಣೆ ಶಿಬಿರದ ಕುರಿತು ಏರ್ಪಡಿಸಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು  ಗ್ರಾಮೀಣ ಜನತೆಗೆ ಆರೋಗ್ಯ ಸಂಬಂಧಿ ವಿಚಾರಗಳಲ್ಲಿ ತಿಳುವಳಿಕೆ ಕೊರತೆಯಿದೆ. ಇದನ್ನು ಮನಗಂಡು ಈ ಶಿಬಿರ ಆಯೋಜಿಸ ಲಾಗಿದೆ ಎಂದರು.

ಸಿಗ್ನಿಫೈನಿಂದ ಬೆಂಗಳೂರಿನಲ್ಲಿ ಬೆಳಕು: ಮೂರು ಹೊಸ ಫಿಲಿಪ್ಸ್ ಸ್ಮಾರ್ಟ್ ಲೈಟಿಂಗ್ ಹಬ್ ಗಳ ಪ್ರಾರಂಭದೊಂದಿಗೆ ಪ್ರೀಮಿಯಂ ಲೈಟಿಂಗ್ ಅನುಭವಕ್ಕೆ ಶಕ್ತಿ

ಸಿಗ್ನಿಫೈನಿಂದ ಬೆಂಗಳೂರಿನಲ್ಲಿ ಬೆಳಕು

ಗ್ರಾಹಕರು ಹೆಚ್ಚಾಗಿ ಪ್ರೀಮಿಯಂ, ವಿನ್ಯಾಸ ಪ್ರೇರಿತ ಮತ್ತು ಸ್ಮಾರ್ಟ್ ಲೈಟಿಂಗ್ ಪರಿಹಾರಗಳಿಗೆ ಆಕರ್ಷಿತ ರಾಗುತ್ತಿರುವುದರಿಂದ ಬೆಂಗಳೂರು ಪ್ರಮುಖ ಮಾರುಕಟ್ಟೆಯಾಗಿ ಹೊರಹೊಮ್ಮಿದೆ. ಭಾರತದ ಆವಿಷ್ಕಾರ ಮತ್ತು ಐಟಿ ರಾಜಧಾನಿಯಾಗಿ ಸ್ಮಾರ್ಟ್ ಹೋಮ್ ಆಟೊಮೇಷನ್ ನ ಪ್ರಾರಂಭಿಕ ಅಳವಡಿ ಕೆದಾರರಾಗಿ ಬೆಂಗಳೂರು ತಂತ್ರಜ್ಞಾನ ಬಳಕೆಯ ಗ್ರಾಹಕರನ್ನು ಹೆಚ್ಚಾಗಿ ಹೊಂದಿದೆ ಮತ್ತು ಆಧುನಿಕ, ಅಲಂಕಾರಿಕ ವಿನ್ಯಾಸಕ್ಕೆ ಬಲವಾದ ಮೌಲ್ಯ ನೀಡುತ್ತದೆ

Kannada Sahitya Sammelan: ಡಿ.20 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಕನ್ನಡ ಹಬ್ಬಕ್ಕೆ ಸಜ್ಜುಗೊಳಿಸಿದ ಪರಿಷತ್ತು

ಡಿ.20 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಬೆಳಿಗ್ಗೆ 7.30 ಕ್ಕೆ ತಹಶೀಲ್ದಾರ್ ಆರತಿ.ಬಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ತಾಪಂ ಆಡಳಿತಾಧಿಕಾರಿ ಬಿ.ಎಲ್.ಕೃಷ್ಣಪ್ಪ ನಾಡ ಧ್ವಜಾರೋಹಣ ನಡೆಸಲಿದ್ದಾರೆ. ಕಸಾಪ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಬೆಳಿಗ್ಗೆ 8.30 ಕ್ಕೆ ಸಮ್ಮೇಳನಾಧ್ಯಕ್ಷ ನಂಜುಂಡಸ್ವಾಮಿ ಅವರನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಭವ್ಯ ಮೆರವಣಿಗೆ ಮೂಲಕ ವೇದಿಕೆಗೆ ಬರ ಮಾಡಿಕೊಳ್ಳಲಾಗುವುದು.

ಕುರ್ಚಿ ಕದನ; ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

Karnataka winter session 2025: ಕಾಂಗ್ರೆಸ್‌ ಸರ್ಕಾರ ತನ್ನ ಪೂರ್ಣ ಅವಧಿಯನ್ನು ಮುಗಿಸಿ, ನಂತರ 2028ರಲ್ಲೂ ಅಧಿಕಾರಕ್ಕೆ ಬರಲಿದೆ. 2008 , 2018 ಅವಧಿಯಲ್ಲಿ ಬಿಜೆಪಿ ಜನಾರ್ಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ರಾಜ್ಯದ ಜನರು ಬಿಜೆಪಿಗೆ ಒಮ್ಮತ ತೋರಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

Valmiki Corporation scam: ಮಾಜಿ ಸಚಿವ ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ

ಮಾಜಿ ಸಚಿವ ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ

former minister B Nagendra: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್​ಗಳಡಿಯಲ್ಲಿ ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿ 4 ಸ್ಥಿರಾಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಇದರಿಂದ ಈ ಪ್ರಕರಣದಲ್ಲಿ ಈವರೆಗೆ ಜಪ್ತಿ ಮಾಡಿದ ಒಟ್ಟು ಮೊತ್ತ 13.01 ಕೋಟಿ ರೂ.ಗಳಾಗಿದೆ.

Sugar Export: ಕೇಂದ್ರ ಸರ್ಕಾರ ಸಕ್ಕರೆ ರಫ್ತು ಹೆಚ್ಚಿಸಲಿ; ಸಿಎಂ ಸಿದ್ದರಾಮಯ್ಯ ಆಗ್ರಹ

ಕೇಂದ್ರ ಸರ್ಕಾರ ಸಕ್ಕರೆ ರಫ್ತು ಹೆಚ್ಚಿಸಲಿ; ಸಿಎಂ ಸಿದ್ದರಾಮಯ್ಯ ಆಗ್ರಹ

ಕೇಂದ್ರ ಸರ್ಕಾರ 2019ರಲ್ಲಿ 1 ಕೆ.ಜಿ. ಸಕ್ಕರೆಗೆ 31 ರೂ. ಎಂಎಸ್‌ಪಿ ನಿಗದಿ ಮಾಡಿದೆ. ಆರು ವರ್ಷಗಳಲ್ಲಿ ಏನೂ ಬದಲಾವಣೆ ಮಾಡಿಲ್ಲ. 41 ರೂಗಳಿಗೆ ಹೆಚ್ಚಿಸಲು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಎಥನಾಲ್ ಹಂಚಿಕೆಯನ್ನು ಕೇಂದ್ರ ಸರ್ಕಾರವೇ ಮಾಡುವುದು. ರಫ್ತು ನಿಗದಿ ಮಾಡುವುದು ಕೂಡ ಕೇಂದ್ರ ಸರ್ಕಾರವೇ. ರೈತರಿಗೆ ಅನ್ಯಾಯ ಆಗಲು ಯಾರು ಕಾರಣ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ; ಅಧಿಕಾರ ಹಂಚಿಕೆ ಬಗ್ಗೆ ಡಿ.ಕೆ. ಶಿವಕುಮಾರ್ ಅಚ್ಚರಿ ಹೇಳಿಕೆ!

ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ ಎಂದ ಡಿ.ಕೆ. ಶಿವಕುಮಾರ್

DK Shivakumar: ನಮ್ಮ ಮಧ್ಯೆ ಎರಡೂವರೆ ವರ್ಷದ ಒಪ್ಪಂದ ಆಗಿಲ್ಲ ಎಂಬ ಸಿಎಂ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ‘ಅವರು ಐದು ವರ್ಷ ಇರಲ್ಲ ಎಂದು ನಾನು ಯಾವತ್ತೂ ಹೇಳಿಲ್ಲ. ಹೈಕಮಾಂಡ್ ಅವರ ಪರ ಇಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ಅವರ ಪರ ಇರುವುದಕ್ಕೆ ಅವರು ರಾಜ್ಯದ ಸಿಎಂ ಆಗಿದ್ದಾರೆ’ ಎಂದು ತಿಳಿಸಿದ್ದಾರೆ.

ದೃಶ್ಯಂ ಸ್ಟೈಲ್​ ಮರ್ಡರ್‌; ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದಾಳು ಕಥೆ ಮುಗಿಸಿದ ಮಗ!

ತಾಯಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಕೆಲಸದಾಳು ಕಥೆ ಮುಗಿಸಿದ ಮಗ!

Vijayapur News: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನ್ನಟ್ಟಿ ಪಿ.ಎ ಗ್ರಾಮದಲ್ಲಿ ಹತ್ಯೆ ನಡೆದಿತ್ತು. ಕೊಲೆ ಬಳಿಕ ಅಮಾಯಕರಂತೆ ಓಡಾಡುತ್ತಿದ್ದ ಹಂತಕರು ಕೊನೆಗೂ ಬಂಧನವಾಗಿದ್ದಾರೆ. ಪ್ರಕರಣ ನಡೆದ 6 ತಿಂಗಳ ಬಳಿಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

World Meditation Day 2025: ಡಿ.21ಕ್ಕೆ ಆಧ್ಯಾತ್ಮಿಕ ನಾಯಕ ದಾಜಿ ಮಾರ್ಗದರ್ಶನದಲ್ಲಿ ʻವಿಶ್ವ ಧ್ಯಾನ ದಿನ 2025ʼ

ಡಿ.21ಕ್ಕೆ ದಾಜಿ ಮಾರ್ಗದರ್ಶನದಲ್ಲಿ ʻವಿಶ್ವ ಧ್ಯಾನ ದಿನ 2025ʼ

ಹಾರ್ಟ್‌ಫುಲ್‌ನೆಸ್‌ನ ಜಾಗತಿಕ ಮಾರ್ಗದರ್ಶಿ ಮತ್ತು ಶ್ರೀ ರಾಮಚಂದ್ರ ಮಿಷನ್‌ನ ಅಧ್ಯಕ್ಷ ಪೂಜ್ಯ ದಾಜಿ (ಕಮಲೇಶ್ ಡಿ. ಪಟೇಲ್) ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದು ಹಾರ್ಟ್‌ಫುಲ್‌ನೆಸ್‌ನ ವಿಶ್ವ ಪ್ರಧಾನ ಕಚೇರಿಯಾದ ಹೈದರಾಬಾದ್‌ನ ಕಾನ್ಹಾ ಶಾಂತಿ ವನಂನಿಂದ ಯೂಟ್ಯೂಬ್‌ ಲೈವ್‌ನಲ್ಲಿ ಪ್ರಸಾರವಾಗಲಿದೆ.

Bengaluru Second Airport: ಬೆಂಗಳೂರಿನಲ್ಲಿ 2ನೇ ಏರ್‌ಪೋರ್ಟ್‌; ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ ಎಂದ ಎಂ.ಬಿ. ಪಾಟೀಲ್‌

ಬೆಂಗಳೂರು 2ನೇ ಏರ್‌ಪೋರ್ಟ್‌ಗೆ ಟೆಂಡರ್ ಆಹ್ವಾನ: ಎಂ.ಬಿ. ಪಾಟೀಲ್‌

MB Patil: ಒಂದು ವಿಮಾನ ನಿಲ್ದಾಣ ಬರಬೇಕೆಂದರೆ ಸ್ಥಳದ ಆಯ್ಕೆ, ಅದರ ಪರಿಶೀಲನೆ, ಭೂಸ್ವಾಧೀನ, ಪರಿಹಾರ ವಿತರಣೆ ಮುಂತಾದ ಅಂಶಗಳು ಮುಖ್ಯವಾಗುತ್ತವೆ. ಇವೆಲ್ಲವನ್ನೂ ಮುಗಿಸಿಕೊಳ್ಳಲು ಏನಿಲ್ಲವೆಂದರೂ ಐದಾರು ವರ್ಷಗಳು ಬೇಕಾಗುತ್ತವೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

WCD Recruitment 2025: ಅಂಗನವಾಡಿಗಳಿಗೆ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕ; ಯಾವ ಜಿಲ್ಲೆ? ಎಷ್ಟು ಪೋಸ್ಟ್ ಗಳಿವೆ? ಇಲ್ಲಿದೆ ಮಾಹಿತಿ

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ನೇಮಕ

23 ಅಂಗನವಾಡಿ ಕಾರ್ಯಕರ್ತೆ ಮತ್ತು 204 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ನಡೆಯಲು ಅಧಿಸೂಚನೆ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಉದ್ಯೋಗಾವಕಾಶವಿದೆ.

Aarogya Setu Mobile Health Unit: ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿಯಲ್ಲಿ ‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕʼ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಮಾಜದ ಪ್ರತಿಯೊಬ್ಬ ನಾಗರಿಕರಿಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವ ಉದ್ದೇಶದಿಂದ ಜಾರಿಗೊಳಿಸಲಾಗಿದೆ. ಆರೋಗ್ಯ ಸೇವೆಗಳಿಂದ ವಂಚಿತರಾಗಿರುವ ಜನರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಶೈಕ್ಷಣಿಕ ಪ್ರಗತಿಗೆ ಛಾಯಾ ದೇಗಾಂವ್ಕರ್ ವರದಿ ಶಿಫಾರಸುಗಳ ಜಾರಿಗೆ ಸರ್ಕಾರ ಬದ್ಧ: ಸಿಎಂ

ಛಾಯಾ ದೇಗಾಂವ್ಕರ್ ವರದಿ ಶಿಫಾರಸುಗಳ ಜಾರಿಗೆ ಸರ್ಕಾರ ಬದ್ಧ: ಸಿಎಂ

371 ಜೆ ಜಾರಿ ಮಾಡಲು ಹೋರಾಡಿದ್ದು, ಜಾರಿ ಮಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ. ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಯ ವೇಗಕ್ಕೆ 371ಜೆ ಮೂಲಕ ಚಾಲನೆ ನೀಡಿದ್ದು ನಾವು. ನೀವೇನು ಮಾಡಿದ್ದೀರಿ ದಾಖಲೆ ಕೊಡಿ ಎಂದು ವಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Bengaluru Child Assault: ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್; ಕ್ರೂರ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

ಆಟವಾಡುತ್ತಿದ್ದ ಬಾಲಕನನ್ನು ಫುಟ್‌ಬಾಲ್‌ನಂತೆ ಒದ್ದು ಜಿಮ್ ಟ್ರೈನರ್ ವಿಕೃತಿ!

ಬೆಂಗಳೂರಿನ ತ್ಯಾಗರಾಜ ನಗರದ ಪೋಸ್ಟ್ ಆಫೀಸ್ ರಸ್ತೆಯಲ್ಲಿ ಘಟನೆ ನಡೆದಿದೆ. ಬಾಲಕನ ಮೇಲೆ ಹಲ್ಲೆ ಸಂಬಂಧ ಪೋಷಕರು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ರಸ್ತೆಯಲ್ಲಿನ ಸಿಸಿಟಿವಿ ಚೆಕ್ ಮಾಡಿದಾಗ, ಆರೋಪಿಯದ್ದು ಇಂತಹ ಕೃತ್ಯ ಇದೇ ಮೊದಲಲ್ಲ, ಈ ಹಿಂದೆಯೂ ಹಲವರಿಗೆ ಕಿರುಕುಳ ಕೊಟ್ಟಿದ್ದಾನೆ ಎಂಬುವುದು ತಿಳಿದುಬಂದಿದೆ.

Karnataka Per Capita Income: ತಲಾದಾಯದಲ್ಲಿ ಬೆಂಗಳೂರು ನಗರ ಜಿಲ್ಲೆ ಪ್ರಥಮ, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ

ತಲಾದಾಯದಲ್ಲಿ ಬೆಂಗಳೂರು ನಗರ ಜಿಲ್ಲೆ ಪ್ರಥಮ, ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ

ನಂಜುಂಡಪ್ಪ ಅವರ ವರದಿಯ ಆಶಯಗಳು ಮತ್ತು ಪರಿಣಾಮಗಳನ್ನು ಅಧಿವೇಶನದಲ್ಲಿ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ ಅವರು, ನಂಜುಂಡಪ್ಪ ಅವರ ವರದಿಯ ಬಳಿಕ ನೀಡಿದ ಅನುದಾನಗಳ ಬಳಕೆ, ಅನುಷ್ಠಾನ ಮತ್ತು ಫಲಿತಾಂಶದ ಬಗ್ಗೆ ಅಧ್ಯಯನ, ಸಮೀಕ್ಷೆ ನಡೆಸುವ ಸರ್ಕಾರದ ಕಾಳಜಿ ಮತ್ತು ಮಹತ್ವವನ್ನು ವಿಸ್ತೃತವಾಗಿ ವಿವರಿಸಿದರು.

ಗ್ಯಾರಂಟಿಗಳಿಗೆ ಇದುವರೆಗೆ ದಲಿತರ 39 ಸಾವಿರ ಕೋಟಿ ರೂ. ಬಳಕೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಗ್ಯಾರಂಟಿಗಳಿಗೆ ದಲಿತರ 39 ಸಾವಿರ ಕೋಟಿ ರೂ. ಬಳಕೆ: ಛಲವಾದಿ ನಾರಾಯಣಸ್ವಾಮಿ

Chalavadi Narayanaswamy: ಈ ವರ್ಷದಲ್ಲಿ ಪರಿಶಿಷ್ಟ ಜಾತಿಗಳ ಶ್ರೇಯೋಭಿವೃದ್ಧಿಗೆ 42 ಸಾವಿರ ಕೋಟಿ ಎಸ್‍ಇಪಿ, ಟಿಎಸ್‍ಪಿ ಮೊತ್ತವನ್ನು ಮೀಸಲಿಟ್ಟಿದ್ದೇವೆ ಎಂದು ಹೇಳುತ್ತಾರೆ. ಇದುವರೆಗೆ ಈ 3 ವರ್ಷಗಳಲ್ಲಿ 39 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನಿದೆ ಎಂದ ಡಿ.ಕೆ. ಶಿವಕುಮಾರ್

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನಿದೆ: ಡಿಕೆಶಿ

DK Shivakumar: ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಗುರುವಾರ ರಾತ್ರಿ ಡಿನ್ನರ್ ಮೀಟಿಂಗ್ ನಡೆದಿದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಲ್ಲ ಸೇರಿ ಊಟ ಮಾಡೋದ್ರಲ್ಲಿ ತಪ್ಪು ಹುಡುಕಬೇಡಿ ಎಂದು ಹೇಳಿದ್ದಾರೆ.

Milk Incentive: ರಾಜ್ಯ ರೈತರಿಗೆ ಗುಡ್‌ನ್ಯೂಸ್‌; ಹಾಲಿನ ಪ್ರೋತ್ಸಾಹಧನ 7 ರೂ.ಗೆ ಹೆಚ್ಚಳ

ರಾಜ್ಯ ರೈತರಿಗೆ ಗುಡ್‌ನ್ಯೂಸ್‌; ಹಾಲಿನ ಪ್ರೋತ್ಸಾಹಧನ 7 ರೂ.ಗೆ ಹೆಚ್ಚಳ

ಹಾಲಿನ ಪ್ರೋತ್ಸಾಹ ಹೆಚ್ಚಿಸುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ರೈತರಿಗೆ ಪ್ರೋತ್ಸಾಹಧನ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಬೆಲೆ ಏರಿಕೆಯ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತಲೇ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.

ಐಸಿಎಸಿಇಎಎ  –2025 ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಚಾಲನೆ

ಐಸಿಎಸಿಇಎಎ –2025 ಅಂತರರಾಷ್ಟ್ರೀಯ ಸಮ್ಮೇಳನಕ್ಕೆ ಬೆಂಗಳೂರಿನಲ್ಲಿ ಚಾಲನೆ

ಮೂರು ದಿನಗಳ ಈ ಪ್ರತಿಷ್ಠಿತ ಸಮ್ಮೇಳನದಲ್ಲಿ ಜಗತ್ತಿನ ನಾನಾ ದೇಶಗಳಿಂದ ಬಂದಿರುವ ವಿಜ್ಞಾನಿ ಗಳು, ಸಂಶೋಧಕರು ಮತ್ತು ಕೈಗಾರಿಕಾ ತಜ್ಞರು ಭಾಗವಹಿಸಿದ್ದು, ವಾಯುಯಾನ ರಚನಾ ವಿನ್ಯಾಸ ದಿಂದ ಹಿಡಿದು ಅತ್ಯಾಧುನಿಕ ಕೃತಕ ಬುದ್ಧಿಮತ್ತೆ (AI) ಆಧಾರಿತ ವ್ಯವಸ್ಥೆಗಳವರೆಗೆ ಇರುವ ವಿಮಾನೋ ದ್ಯಮ ತಂತ್ರಜ್ಞಾನಗಳ ಭವಿಷ್ಯದ ದಿಕ್ಕುಗಳನ್ನು ಚರ್ಚಿಸಲಿದ್ದಾರೆ.

2030ರ ವೇಳೆಗೆ ಭಾರತದ 50 ಲಕ್ಷ ಯುವಜನರಿಗೆ ಎಐ, ಸೈಬರ್‌ ಸೆಕ್ಯುರಿಟಿ ಮತ್ತು ಕ್ವಾಂಟಮ್‌ ಕಂಪ್ಯೂಟಿಂಗ್ ಕೌಶಲ್ಯ ತರಬೇತಿ ನೀಡಲು ಮುಂದಾದ IBM

2030ರ ವೇಳೆಗೆ ಭಾರತದ 50 ಲಕ್ಷ ಯುವಜನರಿಗೆ IBM ನಿಂದ ತರಬೇತಿ

IBM ಸಂಸ್ಥೆಯು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಎಐ ಪಠ್ಯಕ್ರಮವನ್ನು ಸಹಯೋಗದ ಮೂಲಕ ಅಭಿವೃದ್ಧಿಪಡಿಸುತ್ತಿದ್ದು, ಈ ಮೂಲಕ ಶಾಲಾ ಮಟ್ಟದಲ್ಲಿಯೂ ಸಿದ್ಧತೆಯನ್ನು ಬಲಪಡಿಸುತ್ತಿದೆ. ಇದರೊಂದಿಗೆ AI Project Cookbook, Teacher Handbook ಮತ್ತು ವಿವರಣಾ ಮಾಡ್ಯೂಲ್‌ ಗಳಂತಹ ಬೋಧನಾ ಸಾಮಗ್ರಿಗಳನ್ನೂ ಸಹ ಅಭಿವೃದ್ಧಿಪಡಿಸುತ್ತಿದೆ.

ಎಸ್ ಎ ಪಿ ಲ್ಯಾಬ್ಸ್ ಇಂಡಿಯಾದಿಂದ ಬೆಂಗಳೂರು ಕ್ಯಾಂಪಸ್‌ನಲ್ಲಿ ಹೊಸ ಅತ್ಯಾಧುನಿಕ ಕ್ರೀಡಾ ಸೌಲಭ್ಯಕ್ಕೆ ಚಾಲನೆ

ಬೆಂಗಳೂರು ಕ್ಯಾಂಪಸ್‌ನಲ್ಲಿ ಹೊಸ ಅತ್ಯಾಧುನಿಕ ಕ್ರೀಡಾ ಸೌಲಭ್ಯಕ್ಕೆ ಚಾಲನೆ

ಒಳಾಂಗಣ ಸಂಕೀರ್ಣದಲ್ಲಿ ಎರಡು ವಿಶೇಷ ಬ್ಯಾಡ್ಮಿಂಟನ್ ಕೋರ್ಟ್‌ಗಳು ಮತ್ತು ಬ್ಯಾಡ್ಮಿಂಟನ್ ಹಾಗೂ ಪಿಕಲ್‌ಬಾಲ್ ಎರಡಕ್ಕೂ ಅನುಕೂಲವಾಗುವ ಬಹುಉದ್ದೇಶ ಕೋರ್ಟ್ ಇದೆ. ಜೊತೆಗೆ ಸ್ಕ್ವಾಷ್ ಕೋರ್ಟ್, ಗಾಲ್ಫ್ ಸಿಮ್ಯುಲೇಟರ್ ಮತ್ತು ಟೇಬಲ್ ಟೆನ್ನಿಸ್, ಫೂಸ್‌ಬಾಲ್, ಚೆಸ್ ಹಾಗೂ ಬಿಲಿಯರ್ಡ್ಸ್ ಸೇರಿದಂತೆ ಹಲವು ಒಳಾಂಗಣ ಆಟಗಳ ವ್ಯವಸ್ಥೆಯೂ ಇದೆ.

Loading...