ಕರ್ನಾಟಕ ಬಜೆಟ್​ ವಿದೇಶ ಮಹಿಳಾ ದಿನಾಚರಣೆ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Sumalatha Ambareesh: ಇನ್‌ಸ್ಟಾದಲ್ಲಿ ದರ್ಶನ್‌ ಅನ್‌ಫಾಲೋ; ತಾಯಿ-ಮಗನ ನಡುವೆ ವಿವಾದ ಸೃಷ್ಟಿಸಬೇಡಿ ಎಂದ ಸುಮಲತಾ

ತಾಯಿ-ಮಗನ ನಡುವೆ ವಿವಾದ ಸೃಷ್ಟಿಸಬೇಡಿ ಎಂದ ಸುಮಲತಾ

Sumalatha Ambareesh: ಸುಮಲತಾ ಅಂಬರೀಷ್ ಹಾಗೂ ದರ್ಶನ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ಏಕಾಏಕಿ ದರ್ಶನ್‌ ಅವರು, ಸುಮಲತಾ ಸೇರಿ ಹಲವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಅನ್‌ಫಾಲೋ ಮಾಡಿರುವುದರಿಂದ ಇಬ್ಬರ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಹೀಗಾಗಿ ಇದೀಗ ಸುಮಲತಾ ಅಂಬರೀಶ್‌ ಅವರು ಸ್ಪಷ್ಟನೆ ನೀಡಿದ್ದಾರೆ.

LIVA Miss Diva 2024: ಲೀವಾ ಮಿಸ್ ದಿವಾ 2024 ಗ್ರ್ಯಾಂಡ್ ಫಿನಾಲೆ; ಆಯುಶ್ರಿ ಮಲಿಕ್, ವಿಪ್ರಾ ಮೆಹ್ತಾಗೆ ಕಿರೀಟ

ಲೀವಾ ಮಿಸ್ ದಿವಾ 2024: ಆಯುಶ್ರಿ ಮಲಿಕ್, ವಿಪ್ರಾ ಮೆಹ್ತಾಗೆ ಕಿರೀಟ

LIVA Miss Diva 2024: ಲೀವಾ ಮಿಸ್ ದಿವಾ 2024 ಗ್ರ್ಯಾಂಡ್ ಫಿನಾಲೆ (LIVA Miss Diva 2024) ಇತ್ತೀಚೆಗೆ ನಡೆಯಿತು. ಆಯುಶ್ರಿ ಮಲಿಕ್ ಅವರು ʼಲೀವಾ ಮಿಸ್ ದಿವಾ ಸುಪ್ರಾನ್ಯಾಷನಲ್ 2024ʼ ಕಿರೀಟ ಮುಡಿಗೇರಿಸಿಕೊಂಡರೆ ವಿಪ್ರಾ ಮೆಹ್ತಾ, ʼಲೀವಾ ಮಿಸ್ ದಿವಾ ಕೋಸ್ಮೋ 2024ʼ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Veera Kambala Movie: ಗಾಯಕ ಕೈಲಾಶ್ ಖೇರ್ ಗಾಯನದಲ್ಲಿ ʼವೀರ ಕಂಬಳʼ ಚಿತ್ರದ ಗೀತೆ

ಗಾಯಕ ಕೈಲಾಶ್ ಖೇರ್ ಗಾಯನದಲ್ಲಿ ʼವೀರ ಕಂಬಳʼ ಚಿತ್ರದ ಗೀತೆ

Veera Kambala Movie: ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಹಾಗೂ ಅರುಣ್ ರೈ ತೋಡಾರ್ ಅವರ ನಿರ್ಮಾಣದಲ್ಲಿ ಕನ್ನಡ ಹಾಗೂ ತುಳು ಭಾಷೆಗಳಲ್ಲಿ ಮೂಡಿಬರುತ್ತಿರುವ ʼವೀರ ಕಂಬಳʼ (ಬಿರ್ದುದ ಕಂಬಳ) ಚಿತ್ರದ ಹಾಡೊಂದನ್ನು ಗಾಯಕ ಕೈಲಾಶ್ ಖೇರ್ ಹಾಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tiptur News: ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ವಾಮಾಚಾರ ಮಾಡಿ, ದೇವಾಲಯಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

Tiptur News ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಶ್ರೀ ಕೆಂಪಮ್ಮ ದೇವಿ ದೇವಾಲಯದಲ್ಲಿ ಬುಧವಾರ ವಾಮಾಚಾರ ಮಾಡಿ ಬಾಗಿಲಿಗೆ ಬೆಂಕಿ ಹಚ್ಚಲಾಗಿದೆ. ಸ್ಥಳಕ್ಕೆ ಕಿಬ್ಬನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Self Harming: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

Self Harming: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕಂಠಿ ತಾಂಡಾದಲ್ಲಿ ಮಂಗಳವಾರ ತಡರಾತ್ರಿ ಘಟನೆ ನಡೆದಿದೆ. ಶೀಲ ಶಂಕಿಸಿ ಗಂಡನ ನಿರಂತರ ಕಿರುಕುಳ ನೀಡಿದ್ದೆ ಮಹಿಳೆಯ ಆತ್ಮಹತ್ಯೆಗೆ ಪ್ರಮುಖ ಕಾರಣವೆಂದು ಸಂಬಂದಧಿಕರು ಆರೋಪ ಮಾಡಿದ್ದಾರೆ.

CM Siddaramaiah: ಕೇಂದ್ರದಿಂದ ಅನ್ಯಾಯ ವಿರೋಧಿಸಿ ದಕ್ಷಿಣದ ರಾಜ್ಯಗಳು ಹೋರಾಟಕ್ಕೆ ಸಜ್ಜು, ಸಿಎಂ ಸಿದ್ದರಾಮಯ್ಯ ಬೆಂಬಲ

ಕೇಂದ್ರದ ಅನ್ಯಾಯ ವಿರೋಧಿಸಿ ಹೋರಾಟ, ಸಿಎಂ ಸಿದ್ದರಾಮಯ್ಯ ಬೆಂಬಲ

ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾದರು. ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ಮತ್ತು ದಕ್ಷಿಣ ರಾಜ್ಯಗಳ ವಿರೋಧಿ ನಿಲುವನ್ನು ವಿರೋಧಿಸಿ ದಕ್ಷಿಣ ಭಾರತದ ರಾಜ್ಯಗಳು ನಡೆಸಲು ಮುಂದಾಗಿರುವ ಪ್ರತಿಭಟನೆಯ ನಡೆಗಳ ಕುರಿತು ಚರ್ಚಿಸಿದರು.

Astro Tips: ಗಣೇಶನ ಅನುಗ್ರಹ ಪ್ರಾಪ್ತಿಯಾಗಬೇಕಾ? ಹಾಗಾದ್ರೆ ತಪ್ಪದೇ ಆತನಿಗೆ ಈ ಹೂಗಳನ್ನು ಅರ್ಪಿಸಿ

ಬುಧವಾರದ ಪೂಜೆ: ಗಣೇಶನನ್ನು ಪ್ರಿಯವಾದ ಈ ಹೂಗಳಿಂದ ಪೂಜಿಸಿ

ಇಂದು ಬುಧವಾರದ ಶುಭ ದಿನವಾದ್ದರಿಂದ ನಾವು ಭಗವಾನ್‌ ಗಣೇಶನನ್ನು ಪೂಜಿಸುತ್ತೇವೆ. ಗಣೇಶನಿಗೆ ಪ್ರಿಯವಾದ ವಸ್ತುಗಳನ್ನು ನಾವು ಈ ದಿನ ಪೂಜೆಯಲ್ಲಿ ಬಳಸುವುದರಿಂದ ಅವನ ಆಶೀರ್ವಾದವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಹಾಗೇ ಇಂದು ಗಣೇಶನಿಗೆ ಪ್ರಿಯವಾದ ಹೂಗಳನ್ನು ಅರ್ಪಿಸುವುದರಿಂದಲೂ ಆತನ ಕೃಪೆ ಪಾತ್ರರಾಗಬಹುದಾಗಿದ್ದು, ಆತನಿಗೆ ಪ್ರಿಯವಾದ ಹೂಗಳನ್ನು ನೀಡಿ, ಬೇಡಿಕೊಂಡರೆ ಸಾಕು, ಆತ ತೃಪ್ತನಾಗುತ್ತಾನೆ. ಗಣೇಶನಿಗೆ ಇಷ್ಟವಾದ ಹೂವುಗಳ ಬಗ್ಗೆ ಇಲ್ಲಿದೆ ನೋಡಿ...?

Actress Ragini: ನಟಿ ಸಂಜನಾ, ರಾಗಿಣಿಗೆ ಮತ್ತೆ ಹೆಗಲೇರಿದ ಡ್ರಗ್ಸ್‌ ಕೇಸ್‌, ಸುಪ್ರೀಂ ಕೋರ್ಟ್‌ಗೆ ಹೋದ ಸಿಸಿಬಿ

ನಟಿ ಸಂಜನಾ, ರಾಗಿಣಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋದ ಸಿಸಿಬಿ

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ, ರಾಗಿಣಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ಸ್ ಪೆಡ್ಲರ್‌ಗಳ ಬಂಧನವಾಗಿತ್ತು. ಸಂಜನಾ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಎಫ್ಐಆರ್ ರದ್ದುಗೊಳಿಸಲಾಗಿತ್ತು.

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಬುಧವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 45 ರೂ. ಮತ್ತು 24 ಕ್ಯಾರಟ್‌ನ 1 ಗ್ರಾಂ ಚಿನ್ನದ ದರ 49 ರೂ. ಏರಿಕೆಯಾಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 8,065 ರೂ. ತಲುಪಿದರೆ, 24 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆ 8,798 ರೂ. ಆಗಿದೆ.

Shocking News: ರಾಜ್ಯದಲ್ಲಿ 1,533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ: ಸಚಿವರಿಂದ ಮಾಹಿತಿ

ರಾಜ್ಯದಲ್ಲಿ 1,533 ಮಕ್ಕಳಲ್ಲಿ ಕ್ಯಾನ್ಸರ್ ಪತ್ತೆ: ಸಚಿವರಿಂದ ಮಾಹಿತಿ

ಮಕ್ಕಳಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಂಡುಬರುತ್ತಿರುವುದು ಆತಂಕಕಾರಿ (Shocking News) ವಿಷಯವಾಗಿದ್ದು, ಕಳೆದ ವರ್ಷ 14 ವರ್ಷದೊಳಗಿನ 876 ಗಂಡು ಮಕ್ಕಳು, 657 ಹೆಣ್ಣು ಮಕ್ಕಳು ಸಹಿತ 1,533 ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ. ಸರಕಾರದ ಮಟ್ಟದಲ್ಲೂ ಪ್ರತೀ ವರ್ಷ ಕ್ಯಾನ್ಸರ್‌ ಜಾಗೃತಿ ಹಾಗೂ ಚಿಕಿತ್ಸೆ ಕಾರ್ಯಕ್ರ ಮಗಳನ್ನು ಆಯೋಜಿಸಲಾಗುತ್ತಿದೆ.

Road Accident: ಖಾಸಗಿ ಬಸ್‌ಗಳು ಡಿಕ್ಕಿಯಾಗಿ ಒಬ್ಬ ಸಾವು, ಹಲವರಿಗೆ ಗಾಯ

ಖಾಸಗಿ ಬಸ್‌ಗಳು ಡಿಕ್ಕಿಯಾಗಿ ಒಬ್ಬ ಸಾವು, ಹಲವರಿಗೆ ಗಾಯ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗುಂಟಪಲ್ಲಿ ಕ್ರಾಸ್ ಎಂಬಲ್ಲಿ ಆಂಧ್ರಪ್ರದೇಶದ ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಂಧ್ರಪ್ರದೇಶದ ಮದನಪಲ್ಲಿಯ ಗಂಗಾಧರ್ ಎಂಬವರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ.

Ranya Rao: ನಟಿ ರನ್ಯಾ ರಾವ್‌ ತಂದೆ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

ನಟಿ ರನ್ಯಾ ರಾವ್‌ ತಂದೆ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರದ ಬಗ್ಗೆ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಗೌರವ್ ಗುಪ್ತಾ ಅವರನ್ನು ತನಿಖಾ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ. ರನ್ಯಾ ರಾವ್ ಅವರು ತಾವು ಐಪಿಎಸ್ ಅಧಿಕಾರಿಯ ಪುತ್ರಿ ಎಂದು ಹೇಳಿಕೊಂಡು ವಿಮಾನ ನಿಲ್ದಾಣಗಳಲ್ಲಿ ಶಿಷ್ಠಾಚಾರ ನಿಮಯ ಉಲ್ಲಂಘನೆ ಮಾಡಿ, ತಪಾಸಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರು.

Holi Mens Fashion 2025: ಹೋಳಿ ಹಬ್ಬದ ಮೆನ್ಸ್ ಫ್ಯಾಷನ್‌ನಲ್ಲಿ ಟ್ರೆಂಡಿಯಾದ ಔಟ್‌ಫಿಟ್ಸ್‌ಗಳಿವು

ಹೋಳಿ ಹಬ್ಬದ ಮೆನ್ಸ್ ಫ್ಯಾಷನ್‌ನಲ್ಲಿ ಟ್ರೆಂಡಿಯಾದ ಔಟ್‌ಫಿಟ್ಸ್‌ಗಳಿವು

Holi Mens Fashion 2025: ಹೋಳಿ ಹಬ್ಬದ ಮೆನ್ಸ್ ಫ್ಯಾಷನ್‌ನಲ್ಲಿ ಸಾಕಷ್ಟು ವಿಧದ ಔಟ್‌ಫಿಟ್‌ಗಳು ಬಿಡುಗಡೆಗೊಂಡಿವೆ. ಅದರಲ್ಲೂ ಬಣ್ಣದ ಹಬ್ಬದಂದು ಹೈಲೈಟ್ ಆಗುವಂತಹ ಹಾಗೂ ಸೆಲೆಬ್ರೇಷನ್‌ಗೆ ಸಾಥ್ ನೀಡುವಂತವು ಟ್ರೆಂಡಿಯಾಗಿವೆ. ಅವು ಯಾವುವು? ಎಂಬುದರ ಬಗ್ಗೆ ಮೆನ್ಸ್ ಸ್ಟೈಲಿಸ್ಟ್‌ಗಳು ಒಂದಿಷ್ಟು ವಿವರ ನೀಡಿದ್ದಾರೆ.

Self Harming: ಡೆತ್‌ನೋಟ್‌ ಬರೆದಿಟ್ಟು ಬಿಜೆಪಿ ನಾಯಕಿ ಆತ್ಮಹತ್ಯೆ

ಡೆತ್‌ನೋಟ್‌ ಬರೆದಿಟ್ಟು ಬಿಜೆಪಿ ನಾಯಕಿ ಆತ್ಮಹತ್ಯೆ

ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ. ಮಂಜುಳಾ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

Drowned: ಕೃಷಿಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು

ಕೃಷಿಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳು ಸಾವು

ಮುಳುಗುತ್ತಿರುವ ಮಕ್ಕಳನ್ನು ರಕ್ಷಿಸಲು ಹೋಗಿ ತಾಯಿಯೂ ಸಾವಿಗೀಡಾಗಿದ್ದಾಳೆ. ನೀಲಾಭಾಯಿ (32), ರಾಜೇಶ್ವರಿ (11), ಡುಮ್ಮಿ (6) ಮೃತಪಟ್ಟ ದುರ್ದೈವಿಗಳು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಿಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Weather Forecast: ಬಿಸಿಲಿನಿಂದ ಬಸವಳಿದವರಿಗೆ ಗುಡ್‌ನ್ಯೂಸ್‌; ರಾಜ್ಯದ ಹಲವೆಡೆ ತಂಪೆರೆಯಲಿದೆ ಬೇಸಗೆ ಮಳೆ

ರಾಜ್ಯದ ಹಲವೆಡೆ ತಂಪೆರೆಯಲಿದೆ ಮಳೆ

Weather Forecast: ರಾಜ್ಯದಾದ್ಯಂತ ಒಣ ಹವೆ ಮುಂದುವರಿದಿದೆ. ಈ ಮಧ್ಯೆ ಬುಧವಾರ (ಮಾ. 12) ಹಲವೆಡೆ ಬೇಸಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೈಸೂರು, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ 1 ಅಥವಾ 2 ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

PM Surya Ghar Yojana: ಪಿಎಂ ಸೂರ್ಯಘರ್ ಯೋಜನೆಗೆ ಭರ್ಜರಿ ಸ್ಪಂದನೆ; 10 ಲಕ್ಷ ಸೌರ ಘಟಕ ಸ್ಥಾಪನೆ

ಪಿಎಂ ಸೂರ್ಯಘರ್ ಯೋಜನೆ; 10 ಲಕ್ಷ ಸೌರ ಘಟಕ ಗುರಿ ಸಾಧನೆ

PM Surya Ghar Yojana: ಪಿಎಂ ಸೂರ್ಯ ಘರ್ ಫಲಾನುಭವಿ 3 KW ಸಾಮರ್ಥ್ಯದ ಸೌರ ಮೇಲ್ಛಾವಣಿ ಘಟಕವನ್ನು ₹15,000ಕ್ಕಿಂತ ಕಡಿಮೆ ಹೂಡಿಕೆಯೊಂದಿಗೆ ಸ್ಥಾಪಿಸಬಹುದು. ಅಲ್ಲದೇ ಇದರಿಂದ 25 ವರ್ಷಗಳಲ್ಲಿ ₹15 ಲಕ್ಷದವರೆಗೆ ಆದಾಯ ಸಹ ಪಡೆಯಲು ಸಾಧ್ಯವಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ತಿಳಿಸಿದೆ.

CID Dysp KanakaLakshmi: ವಕೀಲೆ ಜೀವಾ ಆತ್ಮಹತ್ಯೆ: ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮೀ ಬಂಧನ

ಸಿಐಡಿ ಡಿವೈಎಸ್‌ಪಿ ಕನಕಲಕ್ಷ್ಮೀ ಬಂಧನ

2024ರ ನ. 22ರಂದು ಬೆಂಗಳೂರಿನಲ್ಲಿ ವಕೀಲೆ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮಂಗಳವಾರ ಎಸ್‌ಐಟಿ ಅಧಿಕಾರಿಗಳು, ಸಿಐಡಿ ಡಿವೈಎಸ್​ಪಿ ಕನಕಲಕ್ಷ್ಮೀ ಅವರನ್ನು ಬಂಧಿಸಿದ್ದಾರೆ. ವಕೀಲೆ ಜೀವಾ ಡೆತ್‌ನೋಟ್‌ನಲ್ಲಿ ಕನಕಲಕ್ಷ್ಮೀ ಹೆಸರು ಉಲ್ಲೇಖಿಸಿದ್ದರಿಂದ ಅದಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.

Chikkaballapur Crime: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು

ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಾಗೇಪಲ್ಲಿ ತಾಲ್ಲೂಕು ಮಿಟ್ಟೇಮರಿ ಬಳಿ ಮಂಗಳ ವಾರ ನಡೆದಿದೆ. ಬಾಗೇಪಲ್ಲಿ ಕಡೆಯಿಂದ ಚಿಂತಾಮಣಿಗೆ ತೇರುಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಮಿಟ್ಟೇಮರಿ ಸಮೀಪ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಬಳಿ ಅಪಘಾತ ನಡೆದಿದೆ

DK Shivakumar: ಭದ್ರಾ ಮೇಲ್ದಂಡೆ ಯೋಜನೆ; 6 ತಿಂಗಳಿನಲ್ಲಿ ಕಾಮಗಾರಿ ಮುಗಿಸಿ ನೀರು ಹರಿಸಲು ಚಿಂತನೆ: ಡಿಕೆಶಿ

ಭದ್ರಾ ಮೇಲ್ದಂಡೆ ಯೋಜನೆ; 6 ತಿಂಗಳಿನಲ್ಲಿ ನೀರು ಹರಿಸಲು ಚಿಂತನೆ: ಡಿಕೆಶಿ

DK Shivakumar: ಪರಿಹಾರ ತಾರತಮ್ಯ ಪರಿಹರಿಸುವುದಕ್ಕೆ ರೈತರು ಸಹ ಒಪ್ಪಿಕೊಂಡಿದ್ದಾರೆ. ಅವರಿಗೂ ಅನ್ಯಾಯವಾಗದ ರೀತಿಯಲ್ಲಿ ಗಮನ ಹರಿಸುತ್ತೇವೆ. ಆದಷ್ಟು ಬೇಗ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ನಾವು ಗಮನ ಹರಿಸುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Chikkaballapur News: ಆಯುಕ್ತರ ಆದೇಶವನ್ನು ಗಾಳಿಗೆ ತೂರಿ ಅಡುಗೆದಾರನಿಗೆ ವಾರ್ಡನ್ ಮಾಡಿದ ಜಿಲ್ಲಾ ಅಧಿಕಾರಿ

ಆಯುಕ್ತರ ಆದೇಶಕ್ಕೂ ಬೆಲೆ ಇಲ್ಲದೆ ವಾರ್ಡನ್ ಮಾಡಿದ ಅಧಿಕಾರಿ

ಮಹಬೂಬ್ ಪಾಷಾ ನಿಲಯ ಪಾಲಕರು ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿ ನಿಲಯ (BCWD-1753) ಚಿನ್ನಸಂದ್ರ ಚಿಂತಾಮಣಿ, ಹೆಚ್ಚುವರಿಯಾಗಿ ನಿಲಯ ಮೇಲ್ವಿಚಾರಕರ ಪ್ರಭಾರ ವನ್ನು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ(BCWD-300)  ಚಿಂತಾಮಣಿ ಇಲ್ಲಿಗೆ ನಿಯೋಜಿಸಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ.

Karnataka State Film Awards: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಪ್ರಜ್ವಲ್‌ ಅತ್ಯುತ್ತಮ ನಟ, ಅಕ್ಷತಾ ಪಾಂಡವಪುರ ಅತ್ಯುತ್ತಮ ನಟಿ

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

Karnataka State Film Awards: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಿಸಲಾಗಿದೆ. ʼಜಂಟಲ್​ಮ್ಯಾನ್’ ಸಿನಿಮಾದ ಅಭಿನಯಕ್ಕಾಗಿ ಪ್ರಜ್ವಲ್ ದೇವರಾಜ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರೆ, ‘ಪಿಂಕಿ ಎಲ್ಲಿ’ ಸಿನಿಮಾದ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ‘ಅತ್ಯುತ್ತಮ ನಟಿ’ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ.

Chikkaballapur News: ಸರ್ವೆ ಕಾರ್ಯದ ವೇಳೆ ಸ್ಥಳೀಯರ ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ

ರಾಜ ಕಾಲುವೆ ಒತ್ತುವರಿ ಆರೋಪ: ಜಂಟಿ ಸರ್ವೆ ಕಾರ್ಯ ನಡೆಸಿದ ಅಧಿಕಾರಿಗಳು

ಜಮೀನಿನಲ್ಲಿ ಕೋಳಾಲಮ್ಮ ಕೆರೆಯಿಂದ ಹಾದು ಹೋಗಿರುವ ಸರ್ಕಾರಿ ನಾಲಾ ಅಥವಾ ಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಬಡಾವಣೆಗಳು ಮಾಡು ತ್ತಿದ್ದಾರೆ. ಕೂಡಲೇ ಕಾನೂ ನು ರೀತಿಯಲ್ಲಿ ಬಡಾವಣೆಗಳು ಮಾಡದೇ ಇದ್ದರೆ ಕಾನೂನು ಹೋರಾಟ ಮಾಡುವು ದಾಗಿ ಹೇಳಿದರು

Pralhad Joshi: ಕೆಂಪು ಮೆಣಸಿನಕಾಯಿಗೆ ಬೆಂಬಲ ಬೆಲೆ; ಕರ್ನಾಟಕಕ್ಕೂ ವಿಸ್ತರಿಸಲು ಸಚಿವ ಪ್ರಲ್ಹಾದ್‌ ಜೋಶಿ ಒತ್ತಾಯ

ಕೆಂಪು ಮೆಣಸಿನಕಾಯಿಗೆ ಬೆಂಬಲ ಬೆಲೆ; ಕರ್ನಾಟಕಕ್ಕೂ ವಿಸ್ತರಿಸಲು ಜೋಶಿ ಒತ್ತಾಯ

Pralhad Joshi: ರಾಜ್ಯದಲ್ಲಿ ಕೆಂಪು ಮೆಣಸಿನಕಾಯಿ ಬೆಳೆಗಾರರು ಬೆಲೆ ಕುಸಿತದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಖರೀದಿದಾರರು ಕೇಳುವಂತಹ ಕನಿಷ್ಠ ಬೆಲೆಗೆ ಮಾರಿ ರೈತರು ಕೈ ಸುಟ್ಟು ಕೊಳ್ಳುತ್ತಿದ್ದಾರೆ. ಹಾಗಾಗಿ ಇದಕ್ಕೆ ಪರಿಹಾರ ಮಾರ್ಗ ಕಲ್ಪಿಸಬೇಕು ಎಂದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಗಮನ ಸೆಳೆದಿದ್ದಾರೆ.