ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Bengaluru Stampede: ಜೀವಗಳನ್ನು ಕಳೆದುಕೊಂಡು ಸಂಭ್ರಮಾಚರಣೆ ಬೇಕಿಲ್ಲ: ರಾಹುಲ್‌ ಗಾಂಧಿ ಸಂತಾಪ

ಜೀವಗಳನ್ನು ಕಳೆದುಕೊಂಡು ಸಂಭ್ರಮಾಚರಣೆ ಬೇಕಿಲ್ಲ: ರಾಹುಲ್‌ ಗಾಂಧಿ ಸಂತಾಪ

Bengaluru Stampede: ಕರ್ನಾಟಕ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಪರಿಹಾರವನ್ನು ಒದಗಿಸಬೇಕು. ಮಾನವ ಜೀವಗಳನ್ನು ಕಳೆದುಕೊಂಡು ಯಾವುದೇ ಆಚರಣೆ ಮಾಡಬೇಕಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಿಗೆ ಪ್ರತಿಯೊಂದು ಸುರಕ್ಷತಾ ಪ್ರೋಟೋಕಾಲ್ ಅನ್ನು ಪರಿಶೀಲಿಸಬೇಕು ಮತ್ತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

Bangalore Stampede: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ವಿವರ ಇಲ್ಲಿದೆ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ವಿವರ ಇಲ್ಲಿದೆ

ಸ್ಟೇಡಿಯಂನಲ್ಲಿ ಕಾಲ್ತುಳಿತ (Bengaluru Stampede) ಸಂಭವಿಸುತ್ತಿದ್ದಂತೆಯೇ ಗಾಯಾಳುಗಳನ್ನು ಅಕ್ಕಪಕ್ಕದ ಆಸ್ಪತ್ರೆಗಳಿಗೆ ರವಾನಿಸಲಾಯಿತು. ಅಭಿಮಾನಿಗಳ ಸಾಗರ ಎಷ್ಟಿತ್ತು ಅಂದರೆ, ಆ್ಯಂಬುಲೆನ್ಸ್​​ಗಳು ಹೋಗಲೂ ದಾರಿ ಇರಲಿಲ್ಲ. ಈ ನಡುವೆ ಹಲವರನ್ನು ಮಲ್ಯ ರಸ್ತೆಯಲ್ಲಿರುವ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Murder Case: ಕೋಲಾರದಲ್ಲಿ ಹೇಯ ಕೃತ್ಯ, 80ರ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಕೋಲಾರದಲ್ಲಿ ಹೇಯ ಕೃತ್ಯ, 80ರ ವೃದ್ಧೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಆರೋಪಿ ಕೊಲೆ ಮಾಡಿ ಸ್ವಲ್ಪ ಹೊತ್ತು ಬಿಟ್ಟು ಅಲ್ಲೇನಾಗಿದೆ ಎಂದು ನೋಡಲು ವಾಪಸ್​ ಬಂದಿದ್ದ ಎನ್ನಲಾಗಿದೆ. ಈ ವೇಳೆ ಕಾರ್ಯ ಪ್ರವೃತ್ತರಾದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದು, ಈ ವೇಳೆ ಆರೋಪಿ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ಬಳಿಕ ಹದಿನೈದು ಸಾವಿರ ರೂ ಹಣವನ್ನು ದೋಚಿರುವುದಾಗಿ ಒಪ್ಪಿಕೊಂಡಿದ್ದಾನೆ.

Kamal Hassan: ಕಮಲ ಹಾಸನ್ ಕ್ಷಮಾಪಣೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಬೃಹತ್ ಪ್ರತಿಭಟನೆ

ಕಮಲ ಹಾಸನ್ ಕ್ಷಮಾಪಣೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದ್ದು ಎನ್ನುವ ಮಾತನ್ನು  ಆಡಿರುವ ಮಾತಿನ ಹಿಂದೆ ಭಾಷಾ ಸಾಮರಸ್ಯ ಕದಡುವ ಹುನ್ನಾರವಿದೆ.ತನ್ನ ಮಾತಿನಿಂದ ಸಮಾಜದಲ್ಲಿ ಕ್ಷೋಭೆಯನ್ನು ಉಂಟು ಮಾಡಿರುವ ಈತ ನಟನೇ ಅಲ್ಲ.ಈತ ಕ್ಷಮೆಕೇಳಲೇಬೇಕು.ಇಷ್ಟಕ್ಕೆ ಸುಮ್ಮನಾಗದೆ ರಾಜ್ಯ ಸರಕಾರವೂ ಕೂಡ ಈತನ ವಿರುದ್ಧ ಕ್ರಮಜರುಗಿಸಬೇಕು

Chikkaballapur News: ಕಾಂಗ್ರೆಸ್ ಆಡಳಿತದಲ್ಲಿ ಪ್ರಗತಿಯ ಚಕ್ರ ನಿಂತಿದೆ: ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ : ಬಿಜೆಪಿ ರಾಜ್ಯ ವಕ್ತಾರ ಭಾಸ್ಕರ್ ರಾವ್ ಆರೋಪ

ಕಾಂಗ್ರೆಸ್ ಆಡಳಿತದಲ್ಲಿ ಪ್ರಗತಿಯ ಚಕ್ರ ನಿಂತಿದೆ

ಪಂಚ ಗ್ಯಾರಂಟಿಗಳನ್ನು ತೋರಿಸಿ ಅತಿ ಹೆಚ್ಚು ಸ್ಥಾನಗಳಲ್ಲು ಗೆದ್ದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜಧಾನಿ ಕೋಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಒಂದು ಮುನ್ನೋಟ ವಿಟ್ಟು ಕೊಂಡು ಬೇರೆ ಬೇರೆ ರಾಜ್ಯಗಳ ರಾಜಧಾನಿಗಳ ಅಕ್ಕಪಕ್ಕದ ಜಿಲ್ಲೆಗಳನ್ನು ಆಭಿವೃದ್ದಿ ನಾಡಿದಂತೆ ಕೈಗಾರಿಕೆ,ಟೌನ್ ಶಿಫ್,ಸ್ಯಾಟಲೈಟ್ ಸಿಟಿಯಂತೆ ಅಭಿವೃದ್ದಿ ಪಡಿಸಬಹುದಿತ್ತು

Chikkaballapur News: ಅಪಘಾತದಲ್ಲಿ ಗ್ರಾಮ ಆಡಳಿತ ಅಧಿಕಾರಿ ರಮೇಶ್ ನಿಧನ

ಅಪಘಾತದಲ್ಲಿ ಗ್ರಾಮ ಆಡಳಿತ ಅಧಿಕಾರಿ ರಮೇಶ್ ನಿಧನ

ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ಪೆದ್ದೂರು ಸರ್ಕಲ್ ನ ಗ್ರಾಮ ಆಡಳಿತ ಅಧಿಕಾರಿ ಹಾಗೂ ಸದರಿ ಹೋಬಳಿಯ ಕಂದಾಯ ಇಲಾಖೆಯ ಆರ್ ಐ ಆಗಿ ಕೆಲಸ ನಿರ್ವಹಿಸು ತ್ತಿದ್ದ ರಮೇಶ್(28 ವರ್ಷ) ಇವರು ರಾತ್ರಿ ಮಲ್ಲೂರು ಬಳಿ ಅಪಘಾತವಾಗಿ ಮೃತಪಟ್ಟಿದ್ದಾರೆ.

Belagavi News: ಬೆಳಗಾವಿ ಕೆ.ಕೆ.ಕೊಪ್ಪ ಗುಡ್ಡದಲ್ಲಿ ಮಿನಿ ತಿರುಪತಿ ನಿರ್ಮಾಣ

ಬೆಳಗಾವಿ ಕೆ.ಕೆ.ಕೊಪ್ಪ ಗುಡ್ಡದಲ್ಲಿ ಮಿನಿ ತಿರುಪತಿ ನಿರ್ಮಾಣ

ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆ ಸಲ್ಲಿಸಬೇಕು ಎಂಬ ಸಂಕಲ್ಪದೊಂದಿಗೆ ಸ್ಥಾಪನೆಗೊಂಡಿ ರುವ ಬೆಳಗಾವಿ ರಡ್ಡಿ ಸಂಘ ಸದಾ ಪಕ್ಷಾತೀತ, ಜ್ಯಾತ್ಯಾತೀತವಾಗಿ ತನ್ನ ಕಾರ್ಯ ನಡೆಸಿಕೊಂಡು ಬರುತ್ತಿದೆ. ಮುಂಬರುವ ದಿನಗಳಲ್ಲಿ ವೆಂಕಟೇಶ್ವರ ದೇವಸ್ಥಾನದಿಂದ ಆದಾಯದಿಂದ ಶೈಕ್ಷಣಿಕ ಸಂಸ್ಥೆಗಳನ್ನು ಆರಂಭಿಸುವ ಗುರಿ ಹಾಕಿಕೊಂಡಿದ್ದೇವೆ.

DK Shivakumar: ನಾಳೆ ಸಚಿವ ಸಂಪುಟ ಸಭೆ ಹೊರತಾಗಿ ಉಳಿದ ಎಲ್ಲ ಸರ್ಕಾರಿ ಕಾರ್ಯಕ್ರಮ ಮುಂದೂಡಿಕೆ: ಡಿಕೆಶಿ

ಬಿಜೆಪಿ ಹೆಣದ ಮೇಲೆ ರಾಜಕೀಯ ಮಾಡುತ್ತಿದೆ: ಡಿಕೆಶಿ

18 ವರ್ಷಗಳ ಸುದೀರ್ಘ ಅವಧಿ ಬಳಿಕ ತಮ್ಮ ನೆಚ್ಚಿನ ತಂಡ ಗೆದ್ದಿದೆ. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಜನ ತಮ್ಮ ಕೆಲಸ, ಕಾರ್ಯ ಬಿಟ್ಟು ಕ್ರಿಕೆಟ್ ಆಟಗಾರರನ್ನು ಕಣ್ತುಂಬಿಕೊಳ್ಳಲು ಬಂದಿದ್ದಾರೆ. ಹೀಗಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗಿದೆ. ಈ ದುರ್ಘಟನೆ ಹಿನ್ನೆಲೆಯಲ್ಲಿ ನಾಳೆ ಸಚಿವ ಸಂಪುಟ ಸಭೆ ಹೊರತು ಪಡಿಸಿ ವಿಶ್ವ ಪರಿಸರ ದಿನ ಸೇರಿದಂತೆ ಉಳಿದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ನಟಿ ಉಮಾಶ್ರೀ, ಕಲಾವಿದೆ ಬಿ.ಜಯಶ್ರೀ ಸೇರಿ 16 ಸಾಧಕಿಯರಿಗೆ 'ವಾವ್' ಪ್ರಶಸ್ತಿ

ನಟಿ ಉಮಾಶ್ರೀ, ಕಲಾವಿದೆ ಬಿ.ಜಯಶ್ರೀ ಸೇರಿ 16 ಸಾಧಕಿಯರಿಗೆ 'ವಾವ್' ಪ್ರಶಸ್ತಿ

ಬೆಂಗಳೂರಿನಲ್ಲಿ ಉಬುಂಟು ಮಹಿಳಾ ನಿಯೋಗವು ಬುಧವಾರ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ, ಖ್ಯಾತ ರಂಗಭೂಮಿ ಗಾಯಕಿ ಮತ್ತು ಮಾಜಿ ಸಂಸದೆ ಪದ್ಮಶ್ರೀ ಬಿ. ಜಯಶ್ರೀ ಹಾಗೂ ಕಲಬುರಗಿಯ ಕ್ಯಾನ್ಸರ್‌ ತಜ್ಞೆ ಡಾ. ವಿಜಯಲಕ್ಷ್ಮೀ ದೇಶಮಾನೆ ಸೇರಿದಂತೆ 16 ಮಹಿಳಾ ಸಾಧಕಿಯರಿಗೆ ʼವುಮೆನ್ ಆಫ್ ವರ್ತ್ʼ (ವಾವ್‌) ಪ್ರಶಸ್ತಿ ಪ್ರದಾನ ಮಾಡಿತು.

DK Shivakumar: ಬೇರೆಯವರ ಮುಂದೆ ಮಂಡಿಯೂರುವುದು ಕನಕಪುರದವರ ರಕ್ತದಲ್ಲಿ ಇಲ್ಲ ಎಂದ ಡಿಕೆಶಿ

ಬೇರೆಯವರ ಮುಂದೆ ಮಂಡಿಯೂರುವುದು ಕನಕಪುರದವರ ರಕ್ತದಲ್ಲಿ ಇಲ್ಲ: ಡಿಕೆಶಿ

ನಾನು ಇಡಿ, ಸಿಬಿಐ ಪ್ರಕರಣವನ್ನು ಹಿಂಪಡೆಯಲು ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ ಕಾರಣ ನಾನು 100 ಕೋಟಿ ರೂ. ಮಾನಹಾನಿ ಪ್ರಕರಣ ದಾಖಲಿಸಿದ್ದೆ. ಇದಕ್ಕಾಗಿ 1 ಕೋಟಿ ರೂ. ಶುಲ್ಕ ಠೇವಣಿಯನ್ನು ನ್ಯಾಯಾಲಯಕ್ಕೆ ಕಟ್ಟಿದ್ದೇನೆ. ಈ ಪ್ರಕರಣವನ್ನು ಬೆಂಗಳೂರಿನಲ್ಲಿ ನಡೆಸಬೇಕು ಎಂದು ಹೈಕೋರ್ಟ್‌ನಲ್ಲಿ ಅರ್ಜಿ ಹಾಕಿದ್ದರು. ಅದು ವಜಾ ಆಗಿದೆ. ಹೀಗಾಗಿ ಇಂದು ನಾನು ಸಲ್ಲಿಸಿರುವ ದಾಖಲೆಗಳ ದೃಢಪಡಿಸಬೇಕಿತ್ತು. ಹೀಗಾಗಿ ನ್ಯಾಯಾಲಯದ ವಿಚಾರಣೆಯಲ್ಲಿ ಭಾಗಿಯಾಗಿದ್ದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

Bengaluru News: ಐಐಟಿ ಮದ್ರಾಸ್ ಸ್ಕೇಲರ್ ಸ್ಕೂಲ್ ಆಫ್ ಟೆಕ್ನಾಲಜಿಯ ಸಹಭಾಗಿತ್ವ: ಬಿಎಸ್ ಪದವಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಎಐ ಸಾಧನಗಳ ಸಂಯೋಜನೆ

ಬಿಎಸ್ ಪದವಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಎಐ ಸಾಧನಗಳ ಸಂಯೋಜನೆ

ದೇಶಾದ್ಯಂತದ ತನ್ನ ಬಿಎಸ್ ಪದವಿ ವಿದ್ಯಾರ್ಥಿಗಳಿಗೆ ಸ್ಕೇಲೆಬಲ್, ವೈಯಕ್ತೀಕರಿಸಿದ ಕಲಿಕೆಯ ಅನುಭ ವಗಳನ್ನು ಬೆಂಬಲಿಸಲು ಎಐ ಚಾಲಿತ ಶೈಕ್ಷಣಿಕ ಸಾಧನ ಗಳನ್ನು ನಿಯೋಜಿಸಲಾಗುವುದು. ಈ ಉಪ ಕ್ರಮವು ಭಾರತದಾದ್ಯಂತ ಕಲಿಯುವವರಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪ್ರವೇಶಿಸಲು ಮತ್ತು ಸ್ಕೇಲೆಬಲ್ ಮಾಡಲು CODE ನ ನಿರಂತರ ಧ್ಯೇಯವನ್ನು ಪ್ರತಿಬಿಂಬಿಸುತ್ತದೆ.

Bengaluru News: ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯ ಕಾಪಾಡಲು ಲಿವ್-ಲವ್‌-ಲಫ್ ಫೌಂಡೇಶನ್ನಿಂದ  ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ

ಕಾರ್ಪೊರೇಟ್ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಉಪಕ್ರಮ ಜಾರಿ

ಮೆಕಿನ್ಸೆ ಹೆಲ್ತ್ ಇನ್‌ಸ್ಟಿಟ್ಯೂಟ್ ನಡೆಸಿದ ಇತ್ತೀಚಿನ ಸಂಶೋಧನೆಯೊಂದರ ಪ್ರಕಾರ ಭಾರತೀಯ ಉದ್ಯೋಗಿಗಳು ಕೆಲಸದಲ್ಲಿ ಹೆಚ್ಚು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಶೇ. 51ರಷ್ಟು ಜನರು ಈ ಒತ್ತಡದಿಂದ ತಮ್ಮಮಾನಸಿಕ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ವೃತ್ತಿಪರರ ಮಾನಸಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದೇವೆ

Bengaluru Stampede: ಮೂವರು ಹುಡುಗಿಯರು ಬೀಳುವುದನ್ನು ನೋಡಿದೆ: ಬೆಂಗಳೂರು ಕಾಲ್ತುಳಿತದ ಭಯಾನಕ ಘಟನೆ ವಿವರಿಸಿದ ಪ್ರತ್ಯಕ್ಷದರ್ಶಿ

ಬೆಂಗಳೂರು ಕಾಲ್ತುಳಿತದ ಭಯಾನಕ ಘಟನೆ ವಿವರಿಸಿದ ಪ್ರತ್ಯಕ್ಷದರ್ಶಿ

Royal Challengers Bengaluru: ರಾಯಲ್ ಚಾಲೆಂಜರ್ಸ್ ಬೆಂಗಳೂರ ತಂಡದ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಉಂಟಾದ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ್ದಾರೆ. ಮೂವರು ಯುವತಿಯರು ಬಿದ್ದಿದ್ದನ್ನು ನೋಡಿದೆ, ಆದರೆ ಯಾರೂ ರಕ್ಷಣೆಗೆ ಬರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Bengaluru Stampede: ಕಾಲ್ತುಳಿತ ಪ್ರಕರಣ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ-ಕೆಎಸ್‌ಸಿಎ

ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ-ಕೆಎಸ್‌ಸಿಎ

Bengaluru Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತದ ಬಗ್ಗೆ ಆರ್‌ಸಿಬಿ-ಕೆಎಸ್‌ಸಿಎ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರ್ಘಟನೆಗೆ ತೀವ್ರ ಸಂತಾಪ ಸೂಚಿಸುತ್ತೇವೆ. ಈ ದುಃಖದ ಸಂದರ್ಭದಲ್ಲಿ ನಾವು ಮೃತರ ಕುಟುಂಬಗಳೊಂದಿಗೆ ಇರುತ್ತೇವೆ ಎಂದು ತಿಳಿಸಿವೆ.

Narendra Modi: ಹೃದಯ ವಿದ್ರಾವಕ; ಬೆಂಗಳೂರು ಕಾಲ್ತುಳಿತಕ್ಕೆ ಪ್ರಧಾನಿ ಮೋದಿ ಆಘಾತ

ಬೆಂಗಳೂರು ಕಾಲ್ತುಳಿತಕ್ಕೆ ಪ್ರಧಾನಿ ಮೋದಿ ಫಸ್ಟ್‌ ರಿಯಾಕ್ಷನ್‌

Bengaluru Stampede: ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಮೃತಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನಾವಿದ್ದೇವೆ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Chinnaswamy Stadium Stampede: ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಮ್ಯಾಜಿಸ್ಟ್ರಿಯಲ್‌ ತನಿಖೆಗೆ ಸಿಎಂ ಆದೇಶ

ಚಿನ್ನಸ್ವಾಮಿ ಸ್ಟೇಡಿಯಂ ದುರಂತದ ಮ್ಯಾಜಿಸ್ಟ್ರಿಯಲ್‌ ತನಿಖೆಗೆ ಸಿಎಂ ಆದೇಶ

Chinnaswamy Stadium Stampede: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ದುರಂತದ ಬಗ್ಗೆ ಮ್ಯಾಜಿಸ್ಟ್ರಿಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15 ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Chinnaswamy Stadium Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ 11 ಮಂದಿ ಸಾವು; ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವು; 10 ಲಕ್ಷ ಪರಿಹಾರ ಘೋಷಣೆ

Chinnaswamy Stadium Stampede: ಮೃತರ ಕುಟುಂಬಗಳಿಗೆ ಸರ್ಕಾರದಿಂದ 10 ಲಕ್ಷ ರೂ.ಗಳನ್ನು ಪರಿಹಾರ ನೀಡಲಾಗುತ್ತದೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುತ್ತದೆ. ಚಿಕಿತ್ಸೆ ಖರ್ಚನ್ನು ಸರ್ಕಾರ ಭರಿಸಲಿದೆ. ಇನ್ನು ಘಟನೆ ಕುರಿತು ಮ್ಯಾಜಿಸ್ಟ್ರಿಯಲ್‌ ತನಿಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

Bengaluru Stampede: ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ; ಬಿಜೆಪಿ ವಾಗ್ದಾಳಿ

ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ: ಬಿಜೆಪಿ

ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಆರ್‌ಸಿಬಿ ವಿಜಯೋತ್ಸವ ಆಯೋಜನೆ ವೇಳೆ ಈ ದುರಂತ ನಡೆದಿದೆ. ಈ ಘಟನೆಗೆ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿ ಆರೋಪಿಸಿದೆ.

Electric Shock: ಕಾಡು ಪ್ರಾಣಿ ಹಾವಳಿ ತಡೆಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ 7 ಜಾನುವಾರು ಸಾವು

ಕಾರವಾರದಲ್ಲಿ ವಿದ್ಯುತ್ ತಂತಿ ತಗುಲಿ 7 ಜಾನುವಾರುಗಳ ಸಾವು

Electric Shock: ಕಾಡು ಪ್ರಾಣಿ ಹಾವಳಿ ತಡೆಯಲು ಹಾಕಲಾದ ವಿದ್ಯುತ್ ತಂತಿ ತಗುಲಿ ಏಳು ಜಾನುವಾರುಗಳು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ಸಮೀಪದ ಗದ್ದೆಯ ಬಳಿ ಜರುಗಿದೆ. ಸುರೇಖಾ ಫಡ್ನೇಕರ್ ಎಂಬುವವರಿಗೆ ಸೇರಿದ ಎರಡು ಕೋಣ ಹಾಗೂ ಐದು ಎಮ್ಮೆ ಸೇರಿ ಒಟ್ಟು ಏಳು ಜಾನುವಾರು ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ.

Pravasi Prapancha: ಶ್ರೀ ಸಾಮಾನ್ಯರ ಪ್ರವಾಸೋದ್ಯಮಕ್ಕೆ ಪ್ರವಾಸಿ ಪ್ರಪಂಚ ಅಗತ್ಯ: ಸಚಿವ ಎಚ್.ಕೆ ಪಾಟೀಲ್‌

ಸಾಮಾನ್ಯರ ಪ್ರವಾಸೋದ್ಯಮಕ್ಕೆ ಪ್ರವಾಸಿ ಪ್ರಪಂಚ ಅಗತ್ಯ: ಎಚ್.ಕೆ ಪಾಟೀಲ್‌

Pravasi Prapancha: ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ಪ್ರವಾಸ, ಪ್ರವಾಸೋದ್ಯಮ ಮತ್ತು ಅತಿಥಿ ಕ್ಷೇತ್ರಕ್ಕೆ ಮೀಸಲಾದ ಕನ್ನಡದ ಪ್ರಪ್ರಥಮ ಏಕೈಕ ವಿನೂತನ ವಾರಪತ್ರಿಕೆ ʼಪ್ರವಾಸಿ ಪ್ರಪಂಚʼದ ಲೋಕಾರ್ಪಣೆ ಕಾರ್ಯಕ್ರಮ ಬುಧವಾರ ನೆರವೇರಿತು. ಈ ವೇಳೆ ಸಚಿವ ಎಚ್.ಕೆ.ಪಾಟೀಲ್‌ ಅವರು ಮಾತನಾಡಿದ್ದಾರೆ.

Bengaluru Stampede: ಜೀವಕ್ಕಿಂತ ಅಭಿಮಾನ ದೊಡ್ಡದಲ್ಲ; ಬೆಂಗಳೂರು ಕಾಲ್ತುಳಿತಕ್ಕೆ ಡಿಸಿಎಂ ಡಿಕೆಶಿ ಆಘಾತ

ಬೆಂಗಳೂರು ಕಾಲ್ತುಳಿತಕ್ಕೆ ಡಿಸಿಎಂ ಡಿಕೆಶಿ ಆಘಾತ

DK Shivakumar: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಘಟನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಘಾತ ವ್ಯಕ್ತಪಡಿಸಿದ್ದಾರೆ. ಜೀವಕ್ಕಿಂತ ಅಭಿಮಾನ ದೊಡ್ಡದಲ್ಲ ಎಂದು ಎಕ್ಸ್‌ನಲ್ಲಿ ಫ್ಯಾನ್ಸ್‌ಗೆ ಸಂದೇಶ ನೀಡಿದ್ದಾರೆ.

Pravasi Prapancha: ಪ್ರವಾಸಿಗರಿಗೆ ಮೌಲ್ಯಯುತ ಮಾರ್ಗದರ್ಶಿ ʼಪ್ರವಾಸಿ ಪ್ರಪಂಚʼ: ಸಿಎಂ ಸಿದ್ದರಾಮಯ್ಯ

ಪ್ರವಾಸಿಗರಿಗೆ ಮೌಲ್ಯಯುತ ಮಾರ್ಗದರ್ಶಿ ʼಪ್ರವಾಸಿ ಪ್ರಪಂಚʼ: ಸಿಎಂ

Pravasi Prapancha: ವಿಶ್ವವಾಣಿಯ ವಿನೂತನ ಪತ್ರಿಕೆಯಾದ ʼಪ್ರವಾಸಿ ಪ್ರಪಂಚʼವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿರುವ ಅವರು, ರಾಜ್ಯದ ಪ್ರವಾಸೋದ್ಯಮದ ಅಭಿವೃದ್ಧಿಯ ದೃಷ್ಟಿಯಿಂದ ಪ್ರವಾಸಿ ಪ್ರಪಂಚ ಪತ್ರಿಕೆಯ ಅಗತ್ಯವಿದ್ದು, ಪ್ರವಾಸಿಗರಿಗೆ ಮೌಲ್ಯಯುತವಾದ ಮಾರ್ಗದರ್ಶಿಯಾಗಲಿದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

Bengaluru Stampede: 18 ವರ್ಷದ ಬಳಿಕ ಐಪಿಎಲ್‌ ಕಪ್‌ ಗೆದ್ದರೂ ಆರ್‌ಸಿಬಿಗಿಲ್ಲ ಸಂಭ್ರಮ; ಬೆಂಗಳೂರು ಕಾಲ್ತುಳಿತಕ್ಕೆ ಕಾರಣವೇನು?

ಬೆಂಗಳೂರು ಕಾಲ್ತುಳಿತಕ್ಕೆ ಕಾರಣವೇನು?

IPL: ಚೊಚ್ಚಲ ಐಪಿಎಲ್‌ ಕಪ್‌ ಗೆದ್ದ ಆರ್‌ಸಿಬಿ ತಂಡ ಬೆಂಗಳೂರಿಗೆ ಆಗಮಿಸಿದೆ. ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ಹೊರಗಡೆ ನಡೆದ ಕಾಲ್ತುಳಿತಕ್ಕೆ ಸಿಲುಕಿ 10ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಕಪ್‌ ಗೆದ್ದ ಬೆಂಗಳೂರಿನಲ್ಲಿ ಸೂತಕದ ಛಾಯೆ ಆವರಿಸಿಕೊಂಡಿದೆ. ಈ ಕಾಲ್ತುಳಿತ ಸಂಭವಿಸಲು ಕಾರಣವೇನು ಎನ್ನುವ ವಿವರ ಇಲ್ಲಿದೆ.

Stampede at Chinnaswamy Stadium: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತ; ಸಾವಿನ ಸಂಖ್ಯೆ 7ಕ್ಕೆ ಏರಿಕೆ

RCB celebrations: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನೂಕು ನುಗ್ಗಲು ಉಂಟಾಗಿದ್ದರಿಂದ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದು, ಈ ವೇಳೆ ಕಾಲ್ತುಳಿತ ಉಂಟಾಗಿದೆ. ಈ ವೇಳೆ 7 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.