ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Colonel Sofiya Qureshi: ಕರ್ನಲ್ ಸೋಫಿಯಾ ಖುರೇಷಿ ಮನೆ ಮೇಲೆ ದಾಳಿ ಎಂಬ ಫೇಕ್ ಪೋಸ್ಟ್; ಎಫ್‌ಐಆರ್‌ ದಾಖಲು

ಸೋಫಿಯಾ ಖುರೇಷಿ ಮನೆ ಮೇಲೆ ದಾಳಿ ಎಂಬ ಫೇಕ್ ಪೋಸ್ಟ್; ಎಫ್‌ಐಆರ್‌ ದಾಖಲು

Colonel Sofiya Qureshi: ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಅವರ ಸೂಚನೆ ಮೇರೆಗೆ ಆರೋಪಿ ಅನೀಸ್ ಉದ್ದೀನ್ ವಿರುದ್ಧ ಬೆಳಗಾವಿ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕರ್ನಲ್ ಸೋಫಿಯಾ ಖುರೇಷಿ ಅವರ ಪತಿ ಮನೆ ಮೇಲೆ ಆರ್‌ಎಸ್‌ಎಸ್ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಸುಳ್ಳು ಸುದ್ದಿಯನ್ನು ಹರಿಬಿಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

Sonu Nigam Case: ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಸೋನು ನಿಗಮ್ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ

ಗಾಯಕ ಸೋನು ನಿಗಮ್ ವಿರುದ್ಧ ತನಿಖೆಗೆ ಹೈಕೋರ್ಟ್ ಅನುಮತಿ

Sonu Nigam Case: ತಮ್ಮ ಮೇಲಿನ ಎಫ್​ಐಆರ್ ರದ್ದು ಮಾಡುವಂತೆ ಗಾಯಕ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಗುರುವಾರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್, ಮುಂದಿನ ವಿಚಾರಣೆಯ ದಿನಾಂಕದವರೆಗೆ ಗಾಯಕ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದು ಹೈಕೋರ್ಟ್ ನಿರ್ದೇಶಿಸಿದೆ.

Karnataka Rains: ಮುಂದಿನ 3 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 3 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Karnataka Rains: ಮುಂದಿನ 3 ದಿನಗಳ ಕಾಲ ಕರಾವಳಿ ಕರ್ನಾಟಕದಾದ್ಯಂತ ಮಳೆ ಹೆಚ್ಚಾಗಲಿದ್ದು, ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಇಳಿಕೆಯ ಪ್ರವೃತ್ತಿಯೊಂದಿಗೆ ದೊಡ್ಡ ಬದಲಾವಣೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

Anand Guruji: ಆನಂದ ಗುರೂಜಿಗೆ ಹಣಕ್ಕಾಗಿ ಬ್ಲ್ಯಾಕ್ ಮೇಲ್; ದಿವ್ಯಾ ವಸಂತ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್‌

ಆನಂದ ಗುರೂಜಿಗೆ ಬ್ಲ್ಯಾಕ್ ಮೇಲ್; ಇಬ್ಬರ ವಿರುದ್ಧ ಎಫ್‌ಐಆರ್‌

Anand Guruji: ವಿಡಿಯೋ ಇದೆ ಪ್ರತಿನಿತ್ಯ ಹಣಕ್ಕಾಗಿ ಆರೋಪಿಗಳು ಬ್ಲ್ಯಾಕ್​ಮೇಲ್ ಮಾಡುತ್ತಿದ್ದಾರೆ. ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್, ಜೀವಬೆದರಿಕೆ ಹಾಕಿದ್ದಾರೆ. ಅಲ್ಲದೇ ಕಾರು ಅಡ್ಡಗಟ್ಟಿ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದಾರೆ ಎಂದು ಜ್ಯೋತಿಷಿ ಆನಂದ ಗುರೂಜಿ ಅವರು ಬೆಂಗಳೂರಿನ ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದಾರೆ.

Babban Singh Raghuvanshi: ಡ್ಯಾನ್ಸರ್‌ ಜತೆ ಬಿಜೆಪಿ ನಾಯಕನ ಅನುಚಿತ ವರ್ತನೆ; ತೊಡೆ ಮೇಲೆ ಕೂರಿಸಿ ಮುತ್ತಿನ ಮಳೆಗೆರೆದ!

ಡ್ಯಾನ್ಸರ್‌ ಜತೆ ಬಿಜೆಪಿ ನಾಯಕನ ಅನುಚಿತ ವರ್ತನೆ

Viral Video: ಉತ್ತರ ಪ್ರದೇಶದ ಬಿಜೆಪಿ ನಾಯಕ ಬಬ್ಬನ್‌ ಸಿಂಗ್‌ ರಘುವಂಶಿ ಮಹಿಳೆಯೊಂದಿಗೆ ಅಶ್ಲೀಲವಾಗಿ ವರ್ತಿಸಿದ್ದು, ಸದ್ಯ ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. 70 ವರ್ಷದ ಬಿಜೆಪಿ ನಾಯಕ ಬಬ್ಬನ್‌ ನರ್ತಕಿಯೊಬ್ಬಳನ್ನು ತೊಡೆ ಮೇಲೆ ಕೂರಿಸಿಕೊಂಡು ಆಕೆಯ ಎದೆಯನ್ನು ಸ್ಪರ್ಶಿಸುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕ ಸಹಾಯ; 5ನೇ ರಾಜ್ಯ ಹಣಕಾಸು ಆಯೋಗದ  ವರದಿ ಜಾರಿಗೆ ಕ್ರಮ ಎಂದ ಸಿಎಂ

5ನೇ ರಾಜ್ಯ ಹಣಕಾಸು ಆಯೋಗದ ವರದಿ ಜಾರಿಗೆ ಕ್ರಮ ಎಂದ ಸಿಎಂ

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ . ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

Greater Bengaluru: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ; ಇಂದಿನಿಂದ ಜಾರಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ; ಇಂದಿನಿಂದ ಜಾರಿ

Greater Bengaluru: ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

Safest City in India: ಭಾರತದಲ್ಲೇ ಅತ್ಯಂತ ಸುರಕ್ಷಿತ ನಗರ ಬೆಂಗಳೂರು; ಕೊನೆಯ ಸ್ಥಾನ ಯಾವ ನಗರಕ್ಕೆ?

ಭಾರತದಲ್ಲೇ ಅತ್ಯಂತ ಸುರಕ್ಷಿತ ನಗರ ಬೆಂಗಳೂರು; ಕೊನೆಯ ಸ್ಥಾನ ಯಾವ ನಗರಕ್ಕೆ?

Safest City in India: ಹಿಂದಿನ ವರ್ಷಗಳಿಗೆ ಹೋಲಿಸಿದರೆ 2025ರ ಮೊದಲ ಮೂರು ತಿಂಗಳಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿದೆ. ಕಳೆದ ವರ್ಷ ದಾಖಲಾಗಿದ್ದ ಪ್ರಕರಣಗಳಿಗೂ ಹಾಗೂ ಈ ವರ್ಷ ವರದಿಯಾದ ಕೇಸ್ ತುಲನೆ ಮಾಡಿದಾಗ ಒಟ್ಟಾರೆ ಶೇ.12ರಷ್ಟು ಇಳಿಕೆಯಾಗಿರುವುದು ಕಂಡುಬಂದಿದೆ.

Tumkur News: ಕಡಬ ಗ್ರಾಪಂ ಉಪಾಧ್ಯಕ್ಷರಾಗಿ ಪೂರ್ಣಿಮಾ ಶಿವಕುಮಾರ್ ಅವಿರೋಧ ಆಯ್ಕೆ

ಕಡಬ ಗ್ರಾಪಂ ಉಪಾಧ್ಯಕ್ಷರಾಗಿ ಪೂರ್ಣಿಮಾ ಶಿವಕುಮಾರ್ ಅವಿರೋಧ ಆಯ್ಕೆ

ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲಾ ಸದಸ್ಯರ ಸಹಕಾರ ದೊಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು, ಚರಂಡಿ ಸ್ವಚ್ಛತೆ, ರಸ್ತೆ ನಿರ್ಮಾಣ, ಬೀದಿದೀಪ ಸೇರಿದಂತೆ ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಇನ್ನೂ ಬೇಸಿಗೆ ಇರುವುದರಿಂದ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು

BBMP News: ಈ ಪ್ರಮಾಣ ಪತ್ರ ಇದ್ದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್‌, ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ- BBMP ಆದೇಶ

ಬೆಂಗಳೂರಿನ ಕಟ್ಟಡ ಮಾಲಿಕರೇ ಇನ್ಮುಂದೆ ಈ ಪ್ರಮಾಣ ಪತ್ರ ಕಡ್ಡಾಯ!

Possession certificates:ರಾಷ್ಟ್ರ ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್‌ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ / ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, ನೀರು ಸರಬರಾಜು / ಒಳಚರಂಡಿ ಸಂಪರ್ಕ ನೀಡುವಂತೆ ಆದೇಶಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Indi (Vijayapura) news: ಶಾಂತಿ ಸಮಾನತೆ ಸರಳತೆ ಕಾರುಣೆ ಸಂದೇಶ ನೀಡಿದ ಗೌತಮ ಬುದ್ದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಗೌತಮ ಬುದ್ದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಸಮಾಜದಲ್ಲಿ ಮೂಢನಂಬಿಕೆ, ಅಸಮಾನತೆ ಸಂಪ್ರದಾಯಗಳು ಸಾಕಷ್ಟು ಜಟಿಲವಾಗಿದ್ದವು ಆದರೆ ಗೌತಮ ಬುದ್ದರು ಸರಳತೆ ಮಾರ್ಗ ತೋರಿಸಿದ ಮಹಾನ್ ದಾರ್ಶನಿಕ ಪುರುಷ. ಡಾ.ಬಿ.ಆರ್ ಅಂಬೇಡ್ಕರ ವರು ಇಡೀ ವಿಶ್ವದ ಶ್ರೇಷ್ಠ ವ್ಯಕ್ತಿಗಳಲ್ಲಿ ಪ್ರಥಮ ಪಂಕ್ತಿಯಲ್ಲಿದ್ದ ಮೇರು ಪರ್ವತ ಇವರು ಅನೇಕ ಧರ್ಮಗಳ ಬಗ್ಗೆ ಅಧ್ಯಾಯನ ಮಾಡಿ ಯಾವ ಧರ್ಮ ಸರಳ ಎಂಬುದನ್ನು ಅರಿತು ಜಿಟ್ಟುಗಟ್ಟಿದ ಧರ್ಮಗಳ ಕಡೆ ವಾಲದೆ ಸರಳ ಮಾರ್ಗ ತೋರಿದ ಬುದ್ದ ಧಮ್ಮ ಸ್ವೀಕರಿಸಿದ ತನ್ನ ಜನತೆಗೆ ಸರಳ ಮಾರ್ಗ ಹಾಕಿಕೊಟ್ಟಿದ್ದಾರೆ

Chikkanayakanahalli News: ಪ್ರತಿಯೊಬ್ಬರೂ ನೀರಿನ ರಕ್ಷಣಾ ಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ

ಪ್ರತಿಯೊಬ್ಬರೂ ನೀರಿನ ರಕ್ಷಣಾ ಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ

ಸಣ್ಣ ನೀರಾವರಿ ಇಲಾಖೆಯ ಐಇಸಿ ತಜ್ಞ ರಾಘವೇಂದ್ರ ಮಾತನಾಡಿ ನೀರಿನ ಮಿತವ್ಯಯದ ಬಳಕೆ ಹಾಗೂ ಸಂರಕ್ಷಣೆ ಎಲ್ಲರ ಸ್ವಭಾವವಾಗಬೇಕು, ಮಳೆ ನೀರನ್ನು ತಡೆದು ನಿಲ್ಲಿಸುವುದು, ಅಂತರ್ಜಲ ಮರು ಪೂರಣ ಗೊಳಿಸುವುದು, ಹರಿಯುವ ನೀರನ್ನು ತಡೆದು ಕಟ್ಟೆ, ಚೆಕ್‌ಡ್ಯಾಂ, ಕೃಷಿ ಹೊಂಡಗಳಲ್ಲಿ ಸಂಗ್ರಹಿಸಿ ದರೆ ಬೇಸಿಗೆ ಹಾಗೂ ಇನ್ನಿತರ ಸಂದರ್ಭದಲ್ಲಿ ನೀರಿನ ಕೊರತೆ ಇಲ್ಲವಾಗಲಿದೆ

Chikkaballapur News: ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ಯಶಸ್ವಿಯಾಗಿ ನಡೆದ ಆಪರೇಷನ್ ಅಭ್ಯಾಸ್ ಅಣಕು ಕವಾಯತು

ಅಣಕು ಪ್ರಾತ್ಯಕ್ಷಿಕೆಯ ಮೂಲಕ ಅರಿವು: ಜಿಲ್ಲಾಡಳಿತದ ಪ್ರದರ್ಶನ

ದೇಶದಲ್ಲಿ ಯುದ್ಧದ ತುರ್ತುಪರಿಸ್ಥಿತಿ ನಿರ್ಮಾಣ ಆಗಿರುವ ಹಿನ್ನೆಲೆಯಲ್ಲಿ ಭಯೋತ್ಪಾಧಕರು ದೇಶದ ಒಳಗೆ ನುಸುಳಿ ಆತಂಕ ಸೃಷ್ಟಿಸುವ ಸಂದರ್ಭ ಎದುರಾಗುವುದನ್ನು ತಳ್ಳಿ ಹಾಕುವಂತಿಲ್ಲ. ಇವರು ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಸಮುಚ್ಛಯ, ಅಂಗಡಿ ಮುಂಗಟ್ಟೆ, ಕೈಗಾರಿಕಾ ಪ್ರದೇಶ, ಬಸ್ಸು, ರೈಲು, ವಿಮಾನ ನಿಲ್ದಾಣ , ಪ್ರಾರ್ಥನಾ ಮಂದಿರ ಇತ್ಯಾದಿ ಜನನಿಬಿಡ ಪ್ರದೇಶಗಳನ್ನು ಗುರಿಯಾಗಿಸಿ ಕೊಂಡು ದಾಳಿ ನಡೆಸುವ ಸಂಭವವಿದ್ದು, ಇಂತಹ ಸಂದರ್ಭಗಳಲ್ಲಿ ನಾಗರೀಕರು ಹೇಗೆ ಇವರ ಯತ್ನ ವನ್ನು ವಿಫಲಗೊಳಿಸಬೇಕು.

Gold Rate Today: ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌; ಇಂದಿನ ರೇಟ್‌ ಎಷ್ಟಿದೆ?

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 15th May 2025: ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 195 ರೂ. ಇಳಿಕೆಯಾಗಿದ್ದು, 8,610 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 213 ರೂ. ಕಡಿಮೆಯಾಗಿ, 9,393 ರೂ.ಗೆ ಬಂದು ಮುಟ್ಟಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 68,880 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 86,100 ರೂ. ಮತ್ತು 100 ಗ್ರಾಂಗೆ 8,61,000 ರೂ. ನೀಡಬೇಕಾಗುತ್ತದೆ.

Chikkaballapur News: ಮಕ್ಕಳು ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಿ: ಡಿಡಿಪಿಐ ವೆಂಕಟೇಶ್ ರೆಡ್ಡಿ

ಮಕ್ಕಳು ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಿ: ಡಿಡಿಪಿಐ ವೆಂಕಟೇಶ್ ರೆಡ್ಡಿ

ಬೇಸಿಗೆ ರಜೆ ಅವಧಿಯಲ್ಲಿ ಮಕ್ಕಳು ಕಾಲ ಕಳೆಯುವುದನ್ನು ಬಿಟ್ಟು ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತರಬೇತಿ ಪಡೆಯುವುದರ ಮೂಲಕ 15 ದಿನಗಳ ಕಾಲ ಬೇಸಿಗೆ ಶಿಬಿರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ ಪೋಷಕರಿಗೆ ಮನವಿ ಮಾಡಿದರು

N H Shivashankar Reddy : ಡಾ.ಹೆಚ್.ಎನ್ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಜಿ ಶಾಸಕ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ನೇಮಕ

ಎಚ್.ಎನ್ ಪ್ರಾಧಿಕಾರದ ಅಧ್ಯಕ್ಷರಾಗಿ ಮಾಜಿ ಶಾಸಕ ನೇಮಕ

ಇದು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರಿಗೆ ಸಂತಸದ ಸುದ್ದಿಯಾಗಿದೆ. 25 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ತೋರಿಸಿಕೊಳ್ಳದೆ  ತಾಲ್ಲೂಕಿನ ಅಭಿವೃದ್ಧಿಗೆ ತಮ್ಮ ತನುಮನ ಧನವನ್ನು ಅರ್ಪಿಸಿ ತಾಲ್ಲೂಕಿನ್ನು ಅಭಿವೃದ್ಧಿ ಮಾಡಿದ್ದಾರೆ. ಇಂತಹ ಜನಪರ ನಾಯಕರಿಗೆ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಳಿದು ಬಂದಿರುವುದು ತಾಲೂಕಿನ ಕಾಂಗ್ರೆಸ್ ಪಾಳೆಯದಲ್ಲಿ ಸಂತೋಷ ತಂದಿದೆ

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ : ಅತೃಪ್ತರ ಸಭೆ ಮೂಲಕ ಎಚ್ಚರಿಕೆ ಸಂದೇಶ ರವಾನೆ

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ

ಕಳೆದ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ, ಬಲಾಢ್ಯ ರಾಜಕಾರಣಿ ಡಾ. ಕೆ.ಸುಧಾಕರ್ ಅವರನ್ನು ಶತಾಯಗತಾಯ ಸೋಲಿಸಲೇಬೇಕು ಎಂಬ ಕೆಚ್ಚಿ ನಿಂದ ರಾಜಕೀಯ ಕ್ಷೇತ್ರಕ್ಕೆ ಮೊದಲ ಬಾರಿ ಅಂಬೆಗಾಲಿಟ್ಟು ಬಂದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಸ್ಪರ್ಧಿಸಿದ್ದ ಪ್ರದೀಪ್ ಈಶ್ವರ್ ರವರನ್ನು ಏನೂ ನೋಡದೆ ಅಖಂಡ ಬೆಂಬಲದಿಂ ದ ಇದೇ ಕಾಂಗ್ರೆಸ್ ಮುಖಂಡರುಗಳು ಹಗಲು ಇರುಳು ಶ್ರಮವಹಿಸಿ ಗೆಲ್ಲಿಸಿಸುವ ಮೂಲಕ ವಿಧಾನ ಸಭೆಯ ಮೆಟ್ಟಲು ಏರುವಂತೆ ಮಾಡಿದ್ದೆವು.ಇದು ನಿರರ್ಥಕ ಎಂದು ಈಗ ಅನಿಸುತ್ತಿದೆ

Chikkaballapur rain: ಬಾಗೇಪಲ್ಲಿ ಪಟ್ಟಣದಲ್ಲಿ ಭಾರಿ ಮಳೆ ಅವಾಂತರ ಜನಜೀವನ ಅಸ್ತವ್ಯಸ್ತ

ಬಾಗೇಪಲ್ಲಿ ಪಟ್ಟಣದಲ್ಲಿ ಭಾರಿ ಮಳೆ ಅವಾಂತರ ಜನಜೀವನ ಅಸ್ತವ್ಯಸ್ತ

ಪಟ್ಟಣದಲ್ಲಿ ಬುಧವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಹಲವು ಅವಾಂತರಗಳು ಸಂಭವಿಸಿದವರ ಪಟ್ಟಣದ ಹೆಚ್ ನರಸಿಂಹಯ್ಯ ವೃತ್ತದಲ್ಲಿ  ರಸ್ತೆಗಳ ಸಂಪೂರ್ಣ ಜಲಾವೃತ ಗೊಂಡಿದ್ದು, ಚರಂಡಿಗಳ ಕೊಳಚೆ ನೀರು ಮಳೆ ನೀರಿರೊಂದಿಗೆ ಸೇರಿ ರಸ್ತೆ ಅಗಲಕ್ಕೂ ಹರಡಿ ಅವಾಂತರ ಸೃಷ್ಟಿಸಿದೆ.

Lokayukta Raid: ಬೆಳ್ಳಂ ಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಶಾಕ್- ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ರೇಡ್‌

ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ರಾಜ್ಯಾದ್ಯಂತ ವಿವಿಧ ಇಲಾಖೆಯ ಅಧಿಕಾರಿಗಳ ಮನೆ, ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ತುಮಕೂರು, ಮಂಗಳೂರು, ವಿಜಯಪುರ, ಬೆಂಗಳೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Greater Bengaluru Authority: ಇನ್ಮುಂದೆ BBMP ಇರಲ್ಲ.. ಇನ್ನೇನಿದ್ದರೂ ಗ್ರೇಟರ್‌ ಬೆಂಗಳೂರು- ಆಡಳಿತದಲ್ಲೂ ಬದಲಾವಣೆ!

BBMP ಯುಗಾಂತ್ಯ! ಇಂದಿನಿಂದ ಗ್ರೇಟರ್‌ ಬೆಂಗಳೂರು ಆಡಳಿತ

BBMP: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಯಾಚರಣೆ ನಿನ್ನೆದ ಮುಕ್ತಾಯಗೊಂಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ನಿನ್ನೆ GBAಗೆ ಅಧಿಕೃತ ಅಧಿಸೂಚನೆ ಹೊರಡಿಸಿತ್ತು. ಇಂದಿನಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಬಿಬಿಎಂಪಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಿಕೊಳ್ಳಲು ಅವಕಾಶ ಇದೆ.

Summer Printed Fashion: ಬೇಸಿಗೆಯಲ್ಲಿ ಮನಸ್ಸನ್ನು ಉಲ್ಲಾಸಗೊಳಿಸುವ ಪ್ರಿಂಟೆಡ್‌ ಫ್ಯಾಷನ್‌ವೇರ್ಸ್ ಹಂಗಾಮ

ಬೇಸಿಗೆಯಲ್ಲಿ ಪ್ರಿಂಟೆಡ್‌ ಫ್ಯಾಷನ್‌ವೇರ್ಸ್ ಹಂಗಾಮ

Summer Printed Fashion: ಪ್ರತಿ ಬಾರಿಯಂತೆ ಈ ಬಾರಿಯೂ ಬೇಸಿಗೆಯಲ್ಲಿ ಮನಸ್ಸನ್ನು ಉಲ್ಲಾಸಿತಗೊಳಿಸುವ ಪ್ರಿಂಟೆಡ್‌ ಫ್ಯಾಷನ್‌ವೇರ್‌ಗಳು ಹೊಸ ರೂಪದಲ್ಲಿ ಮರುಕಳಿಸಿವೆ. ಯಾವ್ಯಾವ ಬಗೆಯವು ಬಂದಿವೆ? ಯಾವ ಬಗೆಯವು ಪ್ರಚಲಿತದಲ್ಲಿವೆ? ಎಂಬುದರ ಬಗ್ಗೆ ಇಲ್ಲಿದೆ ವರದಿ.

Suhas Shetty Murder Case: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ-  ಮತ್ತೆ ಮೂವರು ಆರೋಪಿಗಳು ಅರೆಸ್ಟ್‌

ಸುಹಾಸ್‌ ಶೆಟ್ಟಿ ಹತ್ಯೆ ಕೇಸ್‌- ಮತ್ತೆ ಮೂವರು ಅರೆಸ್ಟ್‌

ಮೇ 1ರ ಗುರುವಾರದಂದು ರಾತ್ರಿ ಮಂಗಳೂರು ಸಮೀಪವಿರುವ ಬಜ್ಪೆ ಎಂಬಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್​ ಶೆಟ್ಟಿಯರನ್ನು ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿಂದಂತೆ ಮಂಗಳೂರು ಪೊಲೀಸರಿಂದ ಈಗಾಗಲೇ 8 ಆರೋಪಿಗಳ ಬಂಧನ ಆಗಿದೆ. ಇದೀಗ ಮತ್ತೆ ಮೂವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

Karnataka weather: ಇಂದಿನ ಹವಾಮಾನ; ಬೆಂಗಳೂರು, ರಾಮನಗರ ಸೇರಿ ಈ ಜಿಲ್ಲೆಗಳಲ್ಲಿ ಆರ್ಭಟಿಸಲಿದೆ ಮಳೆ!

ಇಂದು ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ ಸಾಧ್ಯತೆ

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ ಇರಲಿದ್ದು, ಸಂಜೆಯ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಾಗುತ್ತದೆ. ಬಿರುಗಾಳಿ ಸಹಿತ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

4 ಬೇಸ್‌ಕೇರ್‌ನ ಹೊಸ ಜೀನೋಮಿಕ್ಸ್ ಪ್ರಯೋಗಾಲಯ, ಜಾಗತಿಕ ಕ್ಯಾನ್ಸರ್ ವೈವಿಧ್ಯತಾ ಭೂಪಟ' ಉದ್ಘಾಟಿಸಿದ ನಾರಾಯಣ ಮೂರ್ತಿ

ಮಹದೇವಪುರದಲ್ಲಿ ಅತ್ಯಾಧುನಿಕ ಜೀನೋಮಿಕ್ಸ್ ಪ್ರಯೋಗಾಲಯ ಲೋಕಾರ್ಪಣೆ

4ಬೇಸ್‌ಕೇರ್‌ನ (4baseCare) ಈ ನೂತನ ಪ್ರಯೋಗಾಲಯವು ಅತ್ಯಾಧುನಿಕ ಜೀನೋಮಿಕ್ ಪರೀಕ್ಷಾ ತಂತ್ರಜ್ಞಾನಗಳನ್ನು ಹೊಂದಿದೆ. ಇದರಲ್ಲಿ ಸಮಗ್ರ ಜೀನ್ ಪ್ಯಾನೆಲ್‌ಗಳು, ಸಂಪೂರ್ಣ ಎಕ್ಸೋಮ್ ಸೀಕ್ವೆನ್ಸಿಂಗ್ ಮತ್ತು ಟ್ರಾನ್ಸ್‌ಕ್ರಿಪ್ಟೋಮ್ ವಿಶ್ಲೇಷಣೆಯಂತಹ ಸೌಲಭ್ಯಗಳು ವೈದ್ಯರಿಗೆ ಲಭ್ಯವಾಗಲಿವೆ. ಈ ಸುಧಾರಿತ ವಿಧಾನಗಳು ವೈಯಕ್ತಿಕ ರೋಗಿಗಳಿಗನುಗುಣವಾಗಿ ಹೆಚ್ಚು ಪರಿಣಾಮಕಾರಿ ಕ್ಯಾನ್ಸರ್ ಚಿಕಿತ್ಸೆ ಗಳನ್ನು ನೀಡಲು ನೆರವಾಗುತ್ತವೆ.