ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿ.ಕೆ.ಶಿವಕುಮಾರ್;‌ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸೂಚನೆ

ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ: ಸಿಎಂ ಡಿಕೆಶಿ

ಚೆನ್ನಮ್ಮನವರು ದೇವೇಗೌಡರ ಪ್ರತಿ ಯಶಸ್ಸಿನ‌ ಹಿಂದೆ ಹಾಗೂ ರಾಜಕೀಯದ ಏಳು-ಬೀಳುಗಳಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ಮನೆಯನ್ನು ಜವಾಬ್ದಾರಿಯಿಂದ ನೋಡಿಕೊಳ್ಳುವ ಮೂಲಕ ಅವರು ಗೌಡರ ಬದುಕಿನ ನಿಜವಾದ ಶಕ್ತಿಯಾಗಿದ್ದರು. ಭಗವಂತ ಹಿರಿಯರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.

Chennamma Photos: ಆ್ಯಸಿಡ್ ದಾಳಿಗೂ ಮುನ್ನ ಹೀಗಿದ್ದರು ಚೆನ್ನಮ್ಮ; ತಾಯಿ ಜತೆಗಿನ ಹಳೆಯ ಫೋಟೊಗಳನ್ನು ಹಂಚಿಕೊಂಡ ಕುಮಾರಸ್ವಾಮಿ

ತಾಯಿ ಜತೆಗಿನ ಹಳೆಯ ಫೋಟೊಗಳನ್ನು ಹಂಚಿಕೊಂಡ ಕುಮಾರಸ್ವಾಮಿ

ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನನ್ನ ತಾಯಿ ಚೆನ್ನಮ್ಮ ಅವರು ಗುಣಮುಖರಾಗಿ ಮನೆಗೆ ಮರಳುತ್ತಾರೆನ್ನುವ ನಿರೀಕ್ಷೆ ನನ್ನದಾಗಿತ್ತು. ಆದರೆ, ಅವರು ನಮ್ಮನ್ನಗಲಿದ್ದಾರೆ. ಸದಾ ಶಿವಧ್ಯಾನದಲ್ಲಿ ತಲ್ಲೀನರಾಗಿರುತ್ತಿದ್ದ ಅಮ್ಮನವರನ್ನು ಆ ಶಿವನೇ ತನ್ನಲ್ಲಿಗೆ ಕರೆಸಿಕೊಂಡಿದ್ದಾನೆ ಅವರಿಗೆ ಸದ್ಗತಿ ದೊರೆಯಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಚೆನ್ನಮ್ಮ ನಿಧನಕ್ಕೆ ಸಿಎಂ ಡಿಕೆಶಿ, ಸಿದ್ದರಾಮಯ್ಯ, ಜೋಶಿ ಸೇರಿ ಗಣ್ಯರ ಸಂತಾಪ

ಚೆನ್ನಮ್ಮ ನಿಧನಕ್ಕೆ ಸಿಎಂ ಡಿಕೆಶಿ ಸೇರಿ ಗಣ್ಯರ ಸಂತಾಪ

Chennamma Deve Gowda: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾಗಿದ್ದಾರೆ. ಚೆನ್ನಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Bengaluru Power Cut: ಜುಲೈ 20ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಜುಲೈ 20ರಂದು ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ

Bengaluru Power Cut: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ ವೆಲ್ಕಾಸ್ಟ್ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ಜುಲೈ 20ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಿದ್ಯುತ್‌ ಕಂಬಗಳ ನಡುವೆ ತಲೆ ಸಿಲುಕಿ ಹಸು ನರಳಾಟ; ರಕ್ಷಿಸಿ ಮಾನವೀಯತೆ ಮೆರೆದ ಶಾಸಕ ರವಿ ಸುಬ್ರಮಣ್ಯ

ವಿದ್ಯುತ್‌ ಕಂಬಗಳ ನಡುವೆ ಸಿಲುಕಿದ್ದ ಹಸುವನ್ನು ರಕ್ಷಿಸಿದ ಶಾಸಕ

ಬಸವನಗುಡಿ ವಿಧಾನಸಭಾ ಕ್ಷೇತ್ರದ ಕತ್ರಿಗುಪ್ಪೆ ವಾಟರ್ ಟ್ಯಾಂಕ್ ಹಿಂಭಾಗದ ರಸ್ತೆಯಲ್ಲಿ ಎರಡು ವಿದ್ಯುತ್ ಕಂಬಗಳ ನಡುವೆ‌ ತಲೆ ಸಿಲುಕಿ ಹಸು ಒದ್ದಾಡುತ್ತಿದ್ದದ್ದನ್ನು ಕಂಡ ಶಾಸಕ ರವಿ ಸುಬ್ರಮಣ್ಯ ಅವರು ಸಾರ್ವಜನಿಕರ ಸಹಾಯದೊಂದಿಗೆ ತಕ್ಷಣ ಮೂಕಪ್ರಾಣಿಯನ್ನು ರಕ್ಷಿಸಿದ್ದಾರೆ.

Pravasi Prapancha: ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ 40ನೆಯ ಜನ್ಮವರ್ಧಂತಿ

ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ 40ನೆಯ ಜನ್ಮವರ್ಧಂತಿ

ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರು ಕೇವಲ ಧಾರ್ಮಿಕ ಮುಖಂಡರಾಗಿರದೆ, ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅಪಾರ ದೂರದೃಷ್ಟಿಯುಳ್ಳ ಚೇತನ. ತಮ್ಮ 12-13ನೆಯ ವಯಸ್ಸಿನಲ್ಲೇ ಜನಸೇವೆಯ ಗುರಿಯನ್ನು ಇಟ್ಟುಕೊಂಡು ಗುರುಕುಲಕ್ಕೆ ಪ್ರವೇಶಿಸಿದ ಇವರು, ಇದೇ 'ಜನಾರ್ದನ ಸೇವೆ' ಎಂದು ಭಾವಿಸಿ ಸಮಾಜವನ್ನು ಮುನ್ನಡೆಸುತ್ತಿದ್ದಾರೆ. ಆರಂಭದಲ್ಲಿ ಸಣ್ಣ ಗುಡಿಸಲಾಗಿದ್ದ ಮಠವನ್ನು, ಭಕ್ತರ ಪ್ರೀತಿ-ವಿಶ್ವಾಸ ಮತ್ತು ಸ್ವಯಂಪ್ರೇರಿತ ಬೆಂಬಲದೊಂದಿಗೆ ಇಂದು ಅಭಿವೃದ್ಧಿಯ ಕೇಂದ್ರವನ್ನಾಗಿ ರೂಪಿಸಿದ್ದಾರೆ.

ಪದ್ಮನಾಭನಗರದ ನಿವಾಸದಲ್ಲಿ ಚೆನ್ನಮ್ಮ ಅಂತಿಮ ದರ್ಶನಕ್ಕೆ ವ್ಯವಸ್ಥೆ; ಹೊಳೆನರಸೀಪುರದಲ್ಲಿ ಸೋಮವಾರ ಅಂತ್ಯಕ್ರಿಯೆ

ಪದ್ಮನಾಭನಗರದ ನಿವಾಸದಲ್ಲಿ ಚೆನ್ನಮ್ಮ ಅಂತಿಮ ದರ್ಶನಕ್ಕೆ ವ್ಯವಸ್ಥೆ

Chennamma's funeral: ನಾಳೆ ಮಧ್ಯಾಹ್ನದವರೆಗೆ ಬೆಂಗಳೂರಿನ ಪದ್ಮನಾಭನಗರದ ನಿವಾಸದಲ್ಲಿ ಚೆನ್ನಮ್ಮ ಅವರ ಅಂತಿಮ ದರ್ಶನ ನಡೆಯಲಿದೆ. ಬಳಿಕ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕು ಹರದನಹಳ್ಳಿಗೆ ಪಾರ್ಥಿವ ಶರೀರ ರವಾನೆಯಾಗಲಿದೆ. ಸೋಮವಾರ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಷ್ಟಗಳನ್ನು ಧೈರ್ಯದಿಂದ ಎದುರಿಸಿದ್ದ ಗಟ್ಟಿಗಿತ್ತಿ, ಆದರ್ಶ ಗೃಹಿಣಿ ಚೆನ್ನಮ್ಮ: ಮಾಜಿ ಸಿಎಂ ಸಿದ್ದರಾಮಯ್ಯ

ಚೆನ್ನಮ್ಮ ಒಬ್ಬ ಆದರ್ಶ ಗೃಹಿಣಿಯಾಗಿದ್ದರು: ಸಿದ್ದರಾಮಯ್ಯ

ದೀರ್ಘಕಾಲದ ಸಂಗಾತಿಯನ್ನು ಈ ಇಳಿವಯಸ್ಸಿನಲ್ಲಿ ಕಳೆದುಕೊಂಡ ದೇವೇಗೌಡರಿಗೆ ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ. ಗೌಡರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು. ಅವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Chennamma Death: ಅಜ್ಜಿ ಚೆನ್ನಮ್ಮ ನಮ್ಮ ಮನೆಯ ಆಧಾರಸ್ತಂಭವಾಗಿದ್ರು: ನಿಖಿಲ್‌ ಕಂಬನಿ

ನಮ್ಮ ಮನೆಯ ಆಧಾರಸ್ತಂಭ ಅಜ್ಜಿ ಚೆನ್ನಮ್ಮ: ನಿಖಿಲ್‌ ಕಂಬನಿ

ಅಜ್ಜಿ ಚೆನ್ನಮ್ಮನವರು ಇಂದು ನಮ್ಮನ್ನು ಅಗಲಿದ್ದಾರೆ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ನನಗೆ ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆ ಇಡೀ ಕುಟುಂಬಕ್ಕೆ ಮತ್ತು ನನಗೆ ತುಂಬಲಾರದ ನಷ್ಟ ತಂದಿದೆ ಎಂದು ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ. ಇನ್ನು ಚೆನ್ನಮ್ಮ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

25 ವರ್ಷಗಳ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ, ಸೊಸೆ ಮೇಲೆ ನಡೆದಿತ್ತು ಆ್ಯಸಿಡ್‌ ದಾಳಿ: ಈ ಭಯಾನಕ ಘಟನೆಗೆ ಕಾರಣವಾಗಿದ್ದೇನು?

ದೇವೇಗೌಡರ ಪತ್ನಿ ಚೆನ್ನಮ್ಮ ಮೇಲೆ ಆ್ಯಸಿಡ್‌ ದಾಳಿ ನಡೆದಿದ್ದೇಕೆ?

Chennamma Deve Gowda: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪತ್ನಿ, 85 ವರ್ಷದ ಚೆನ್ನಮ್ಮ ಇಹಲೋಹ ತ್ಯಜಿಸಿದ್ದಾರೆ. 4 ದಿನಗಳಿಂದ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸುಮಾರು 25 ವರ್ಷಗಳ ಹಿಂದೆ ಅವರ ಮೇಲೆ ಆ್ಯಸಿಡ್‌ ದಾಳಿ ನಡೆದಿತ್ತು. ಅದೇಕೆ ಎನ್ನುವ ವಿವರ ಇಲ್ಲಿದೆ.

Chennamma Death: ಕಷ್ಟದ ಸಮಯದಲ್ಲಿ ದೇವೇಗೌಡರಿಗೆ ಬೆನ್ನೆಲುಬಾಗಿ ನಿಂತಿದ್ದ ಚೆನ್ನಮ್ಮ

ಕಷ್ಟದ ಸಮಯದಲ್ಲಿ ದೇವೇಗೌಡರಿಗೆ ಬೆನ್ನೆಲುಬಾಗಿದ್ದ ಚೆನ್ನಮ್ಮ

ಚೆನ್ನಮ್ಮ ಅವರು ರಾಜಕೀಯದ ಗೋಜಿಗೆ ಹೋಗದೆ, ದೇವೇಗೌಡರ ರಾಜಕೀಯ ಏಳು-ಬೀಳುಗಳಲ್ಲಿ ಮತ್ತು ಸಾಂಸಾರಿಕ ಜೀವನದಲ್ಲಿ ಜೊತೆಯಾಗಿ ನಿಂತು ಕುಟುಂಬವನ್ನು ನಿರ್ವಹಿಸಿದವರು. ಪತ್ನಿಯ ತ್ಯಾಗ ಮತ್ತು ತಾಳ್ಮೆಯನ್ನು ಸ್ವತಃ ದೇವೇಗೌಡರು ಹಲವು ಸಂದರ್ಭಗಳಲ್ಲಿ ಭಾವುಕರಾಗಿ ಸ್ಮರಿಸಿಕೊಂಡಿದ್ದಾರೆ.

Chennamma Deve Gowda: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅನಾರೋಗ್ಯದಿಂದ ನಿಧನ

Chennamma Deve Gowda: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ರಾಜಕೀಯದಲ್ಲಿ ಉತ್ತುಂಗಕ್ಕೇರುವ ಸಮಯದಲ್ಲಿ ಅವರ ಬೆನ್ನೆಲುಬಾಗಿ ನಿಂತವರು ಪತ್ನಿ ಚೆನ್ನಮ್ಮ. ಇವರ ತ್ಯಾಗ ಮತ್ತು ತಾಳ್ಮೆಯನ್ನು ಸ್ವತಃ ದೇವೇಗೌಡರು ಹಲವು ಸಂದರ್ಭಗಳಲ್ಲಿ ಭಾವುಕರಾಗಿ ಸ್ಮರಿಸಿಕೊಂಡಿದ್ದಾರೆ.

Bengaluru Rain: ಬೆಂಗಳೂರಿನ ಹಲವೆಡೆ ವರುಣನ ಆರ್ಭಟ; ರಾಜ್ಯಾದ್ಯಂತ ನಾಳೆ ಅಬ್ಬರಿಸಲಿದೆ ಮಳೆ!

ಬೆಂಗಳೂರಿನ ಹಲವೆಡೆ ವರುಣನ ಆರ್ಭಟ; ವಾಹನ ಸವಾರರ ಪರದಾಟ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Prajwal Revanna: ಅಜ್ಜಿ ಚೆನ್ನಮ್ಮನ ನೋಡಲು ಜೈಲಿನಿಂದ ಹೊರ ಬರ್ತಾರಾ ಪ್ರಜ್ವಲ್​ ರೇವಣ್ಣ?; ಪೆರೋಲ್‌ ಅರ್ಜಿ ಸಲ್ಲಿಕೆ ಸಾಧ್ಯತೆ

ಅಜ್ಜಿ ನೋಡಲು ಜೈಲಿನಿಂದ ಹೊರ ಬರ್ತಾರಾ ಪ್ರಜ್ವಲ್​ ರೇವಣ್ಣ?

ಅಜ್ಜಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ಅವರನ್ನು ನೋಡುವ ಸಲುವಾಗಿ ಪ್ರಜ್ವಲ್‌ ರೇವಣ್ಣ ಅವರು ಪೆರೋಲ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರ ನ್ಯಾಯಾಧೀಶರು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತಾರೆ.

ರಾಮಚಂದ್ರಾಪುರ ಮಠದ ವತಿಯಿಂದ ಜುಲೈ 29ರಿಂದ 'ಅನ್ನಬ್ರಹ್ಮ ಚಾತುರ್ಮಾಸ್ಯ' ; ಆಹಾರ ಜಾಗೃತಿಯೇ ಈ ಬಾರಿಯ ವ್ರತದ ಧ್ಯೇಯ

ರಾಮಚಂದ್ರಾಪುರ ಮಠದ ವತಿಯಿಂದ ಜುಲೈ 29ರಿಂದ ಅನ್ನಬ್ರಹ್ಮ ಚಾತುರ್ಮಾಸ್ಯ

ಶುದ್ಧ ಹಾಗೂ ವೈಜ್ಞಾನಿಕ ಆಹಾರ ಕ್ರಮದ ಜಾಗೃತಿ ಮೂಡಿಸಲು ಶ್ರೀ ರಾಮಚಂದ್ರಾಪುರ ಮಠವು ಈ ಬಾರಿ ವಿಶಿಷ್ಟವಾದ 'ಅನ್ನಬ್ರಹ್ಮ ಚಾತುರ್ಮಾಸ್ಯ' ವ್ರತವನ್ನು ಹಮ್ಮಿಕೊಂಡಿದೆ. ಶ್ರೀಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ 33ನೇ ಚಾತುರ್ಮಾಸ್ಯ ವ್ರತವು ಉತ್ತರ ಕನ್ನಡದ ಗೋಕರ್ಣದ ಅಶೋಕೆಯ ಮೂಲ ಮಠದದಲ್ಲಿ ಜರುಗಲಿದೆ.

ಅಪಘಾತದಲ್ಲಿ ಕಟ್‌ ಆಗಿ ಬಿದ್ದಿದ್ದ ಕೈಯನ್ನೇ ಆಸ್ಪತ್ರೆಗೆ ಹಿಡಿದು ಬಂದ ಯುವಕ!

ಅಪಘಾತದಲ್ಲಿ ಕಟ್‌ ಆಗಿದ್ದ ಕೈಯನ್ನೇ ಆಸ್ಪತ್ರೆಗೆ ಹಿಡಿದು ಬಂದ ಯುವಕ!

ಭೀಕರ ರಸ್ತೆ ಅಪಘಾತದಲ್ಲಿ ತುಂಡಾಗಿ ಬಿದ್ದಿದ್ದ ಕೈಯನ್ನು ಹಿಡಿದು ಯುವಕನೊಬ್ಬ ಆಸ್ಪತ್ರೆಗೆ ಬಂದ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಯುವಕ ಕೈ ಮಣಿಕಟ್ಟಿನ ಭಾಗದಲ್ಲಿ ಸಂಪೂರ್ಣವಾಗಿ ಕತ್ತರಿಹೋದರೂ ಧೈರ್ಯ ಕಳೆದುಕೊಳ್ಳದೆ, ಕತ್ತರಿಸಿದ ಕೈಯನ್ನೇ ಹಿಡಿದು ಆಸ್ಪತ್ರೆಗೆ ಬಂದಿದ್ದಾನೆ. ರೋಹನ್ ಎಂಬ ಯುವಕ ಸ್ನೇಹಿತರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ.

ಅಪ್ರಾಪ್ತ ಲಿವ್ ಇನ್ ಸಂಗಾತಿಯನ್ನು ಕೊಂದು ಹೂತುಹಾಕಿದ್ದ 16 ವರ್ಷದ ಬಾಲಕನ ಬಂಧನ

ಅಪ್ರಾಪ್ತ ಲಿವ್ ಇನ್ ಸಂಗಾತಿಯನ್ನು ಕೊಂದು 16 ವರ್ಷದ ಬಾಲಕ

ಅಪ್ರಾಪ್ತ ಬಾಲಕನೊಬ್ಬ ಜುಲೈ 10 ರಂದು ತನ್ನ ಲಿವ್ ಇನ್ ಪಾರ್ಟ್ನರ್ ಆಗಿದ್ದ 16 ವರ್ಷದ ಬಾಲಕಿಯನ್ನು ನಾಡಬಂದೂಕಿನಿಂದ ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯು ಇತರ ಇಬ್ಬರೊಂದಿಗೆ ಸೇರಿ ಆಕೆಯ ಮೃತದೇಹವನ್ನು ತಮ್ಮ ಕೃಷಿ ಜಮೀನಿನಲ್ಲಿ ಹೂತುಹಾಕಿದ್ದನು ಎಂದು ತಿಳಿದು ಬಂದಿದೆ.

ಸಿವಿಲ್​ ಕಾನ್ಸ್‌ಟೆಬಲ್‌ ಹುದ್ದೆ ನೇಮಕಾತಿ; ಯಾವ ಜಿಲ್ಲೆಯಲ್ಲಿ ಎಷ್ಟು ಅರ್ಜಿ ಸಲ್ಲಿಕೆಯಾಗಿದೆ ಗೊತ್ತಾ?

ಕಾನ್ಸ್‌ಟೆಬಲ್‌ ಹುದ್ದೆ ನೇಮಕಾತಿ; ಒಟ್ಟು ಅರ್ಜಿ ಸಲ್ಲಿಕೆಯಾಗಿದ್ದೆಷ್ಟು?

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 08, 2026 ರಿಂದ ಅಧಿಕೃತವಾಗಿ ಪ್ರಾರಂಭವಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 03, 2026 ಕೊನೆಯ ದಿನಾಂಕವಾಗಿತ್ತು.

ಸರ್ಕಾರಿ ಶಾಲೆಗಳ 15 ಸಾವಿರ ಶಿಕ್ಷಕರ ನೇರ ನೇಮಕಾತಿ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

ಸರ್ಕಾರಿ ಶಾಲೆಗಳ 15 ಸಾವಿರ ಶಿಕ್ಷಕರ ನೇರ ನೇಮಕಾತಿ

Teachers recruitment: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 15,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಈ ಅನುಮೋದನೆ ನೀಡಲಾಗಿದೆ.

ಕರಾವಳಿ, ಮಲೆನಾಡಿನಲ್ಲಿ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

ಕರಾವಳಿ, ಮಲೆನಾಡಿನಲ್ಲಿ ಮಳೆಯಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather: ಕೆಲ ದಿನಗಳಿಂದ ತಗ್ಗಿದ್ದ ಮಳೆಯಾರ್ಭಟ ನಿನ್ನೆಯಿಂದ ಮತ್ತೆ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಶನಿವಾರ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜುಲೈ 18 ಶನಿವಾರದಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಆಸ್ಪತ್ರೆಯಲ್ಲಿ ಚೆನ್ನಮ್ಮ; ಕಣ್ಣೀರು ಹಾಕಿದ ದೇವೇಗೌಡರು, ಆ ದೇವರೇ ಕಾಪಾಡಬೇಕು ಎಂದ ಎಚ್‌ಡಿಕೆ

ಕಣ್ಣೀರು ಹಾಕಿದ ದೇವೇಗೌಡರು; ಆ ದೇವರೇ ಕಾಪಾಡಬೇಕು ಎಂದ ಎಚ್‌ಡಿಕೆ

ಮಣಿಪಾಲ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅವರಿಗೆ ಅತ್ಯಂತ ಉತ್ತಮವಾದ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ, ವೈದ್ಯರು ತಮ್ಮ ಕೈಮೀರಿ ಪ್ರಯತ್ನ ಮಾಡಿದ್ದಾರೆ. ಈಗ ಆ ದೇವರೇ ಅವರನ್ನು ಕಾಪಾಡಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭಾವುಕರಾಗಿ ಹೇಳಿದ್ದಾರೆ.

Chennamma Deve gowda: ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ?: ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ ಮಣಿಪಾಲ್‌ ಆಸ್ಪತ್ರೆ

ಚೆನ್ನಮ್ಮ ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್‌ ಆಸ್ಪತ್ರೆ ವೈದ್ಯರ ಮಾಹಿತಿ

ಉಸಿರಾಟ ಸಮಸ್ಯೆ ಹಿನ್ನೆಲೆ ಕಳೆದ ಎರಡು ದಿನಗಳ ಹಿಂದೆ ಚೆನ್ನಮ್ಮ ಅವರು ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ತಜ್ಞ ವೈದ್ಯರ ನಿಗಾದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದೆ.

ದೇಶಾದ್ಯಂತ 1275 ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗೆ ಯೋಜನೆ: ಜೋಶಿ ಮಾಹಿತಿ

ದೇಶಾದ್ಯಂತ 1275 ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗೆ ಯೋಜನೆ: ಜೋಶಿ ಮಾಹಿತಿ

Pralhad Joshi: ರಾಜ್ಯದಲ್ಲಿನ ನಾಲ್ಕು ರೈಲು ನಿಲ್ದಾಣಗಳು ಸೇರಿದಂತೆ ದೇಶದ ಒಟ್ಟಾರೆ 75 ಅಮೃತ್ ಭಾರತ ರೈಲ್ವೆ ನಿಲ್ದಾಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿರುವುದು ಭಾರತದ ವೇಗದ ಬೆಳವಣಿಗೆಗೆ ನಿದರ್ಶನವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಗ್ರಾಹಕರನ್ನು ಆಕರ್ಷಿಸಲು ಡಾರ್ಕ್ ಪ್ಯಾಟರ್ನ್ ಪ್ರದರ್ಶನ; ಸ್ಪೈಸ್ ಜೆಟ್ ಏರ್‌ಲೈನ್ಸ್‌ಗೆ 1 ಲಕ್ಷ ರು. ದಂಡ

ಡಾರ್ಕ್ ಪ್ಯಾಟರ್ನ್; ಸ್ಪೈಸ್ ಜೆಟ್ ಏರ್‌ಲೈನ್ಸ್‌ಗೆ 1 ಲಕ್ಷ ದಂಡ

ವಿಮಾನಯಾನ ಟಿಕೆಟ್ ಬುಕಿಂಗ್ ವೇಳೆ ಗ್ರಾಹಕರನ್ನು ವಂಚಿಸುವ ರೀತಿಯಲ್ಲಿ 'ಡಾರ್ಕ್ ಪ್ಯಾಟರ್ನ್ ' ಪ್ರದರ್ಶಿಸಿದ್ದ ಸ್ಪೈಸ್ ಜೆಟ್ ಏರ್‌ಲೈನ್ಸ್ ವಿಮಾನಯಾನ ಸಂಸ್ಥೆಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) 1 ಲಕ್ಷ ರುಪಾಯಿ ದಂಡ ವಿಧಿಸುವ ಮೂಲಕ ಎಚ್ಚರಿಸಿದೆ.

Loading...