ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳಕ್ಕೆ ಕಾರಣವೇನು? ಅರಣ್ಯಾಧಿಕಾರಿ ಬಿಚ್ಚಿಟ್ರು ಬೆಚ್ಚಿ ಬೀಳಿಸುವ ಅಂಕಿ-ಅಂಶ

ಅರಣ್ಯ ನಾಶದಿಂದ ಬೆಂಗಳೂರಿನ ತಾಪಮಾನ ಹೆಚ್ಚಳ

ಬೆಂಗಳೂರಿನ ತಾಪಮಾನ ಹೆಚ್ಚಾಗಲು ಅರಣ್ಯ ನಾಶವೇ ಕಾರಣ ಎಂದು ಭಾರತೀಯ ಅರಣ್ಯ ಅಧಿಕಾರಿಯೊಬ್ಬರು ಸಾಮಾಜಿಕ ಮಾಧ್ಯಮದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅವರು ಹಂಚಿಕೊಂಡಿರುವ ಪೋಸ್ಟ್ ಭಾರಿ ವೈರಲ್ ಆಗಿದ್ದು, ಅನೇಕರು ಅವರನ್ನು ಬೆಂಬಲಿಸಿ, ದಿನೇ ದಿನೇ ಹೆಚ್ಚುತ್ತಿರುವ ತಾಪಮಾನದ ಕುರಿತು ಕಾಮೆಂಟ್ ಕೂಡ ಮಾಡಿದ್ದಾರೆ.

ಪೋಷಕರ ಬೇಜವಾಬ್ದಾರಿಯ ಪರಮಾವಧಿ: ಒಂದೇ ಸ್ಕೂಟರ್‌ನಲ್ಲಿ 6 ಮಕ್ಕಳ ಪ್ರಯಾಣ

ಒಂದೇ ಸ್ಕೂಟರ್‌ನಲ್ಲಿ 6 ಮಕ್ಕಳ ಪ್ರಯಾಣ: ವಿಡಿಯೊ ನೋಡಿ ನೆಟ್ಟಿಗರು ಕಿಡಿಕಿಡಿ

Viral Video: ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲಿಸಲು ಎಷ್ಟೇ ಕ್ರಮ ಕೈಗೊಂಡರೂ ಹಲವಾರು ಇದನ್ನು ಗಾಳಿಗೆ ತೂರಿ ನಿಯಮ ಉಲ್ಲಂಘನೆ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಒಂದೇ ಸ್ಕೂಟರ್ ನಲ್ಲಿ ಆರು ಮಕ್ಕಳು ಪ್ರಯಾಣ ಮಾಡಿದ್ದಾರೆ. ಈ ಆಘಾತಕಾರಿ ದೃಶ್ಯವು ಬೆಳಿಗ್ಗೆ 10:45 ರ ಸುಮಾರಿಗೆ ಪಾದರಾಯನಪುರ ಮುಖ್ಯ ರಸ್ತೆಯಲ್ಲಿ ಗೋರಿಪಾಳ್ಯ ಬಳಿ, ಟೋಟಲ್ ಎಂಜಿನಿಯರ್ ಆಟೋ ಗ್ಯಾಸ್ ಎದುರು ಸಂಭವಿಸಿದೆ. ಇದರ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ..

ಮಂಗಳೂರು, ಮೈಸೂರು ಸೇರಿ 100 ನಗರಗಳಲ್ಲಿ 'ಅಮೆಜಾನ್ ನೌ ಕ್ವಿಕ್‌ ಕಾಮರ್ಸ್‌ ಆರಂಭ'; ಕಂಪನಿಯಿಂದ ₹2,800 ಕೋಟಿ ಹೂಡಿಕೆ

100 ನಗರಗಳಲ್ಲಿ 'ಅಮೆಜಾನ್ ನೌ ಕ್ವಿಕ್‌ಕಾಮರ್ಸ್‌ ಆರಂಭ'

ತನ್ನ ಕಾರ್ಯಾಚರಣಾ ಜಾಲವನ್ನು ಬಲಪಡಿಸಲು ಅಮೆಜಾನ್ ಬರೋಬ್ಬರಿ 2,800 ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಈ ಬೃಹತ್ ಮೊತ್ತವನ್ನು ಕೇವಲ ವ್ಯಾಪಾರ ವಿಸ್ತರಣೆಗೆ ಮಾತ್ರವಲ್ಲದೆ, ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಸುರಕ್ಷತೆ, ಆರೋಗ್ಯ ಮತ್ತು ಆರ್ಥಿಕ ಯೋಗಕ್ಷೇಮಕ್ಕೂ ವಿನಿಯೋಗಿಸಲು ಅಮೆಜಾನ್ ನಿರ್ಧರಿಸಿದೆ.

PM Narendra Modi: ಮದುವೆಗೆ ಆಹ್ವಾನ ನೀಡಿದ ರಾಯಚೂರಿನ ಯುವಕನಿಗೆ ಬಂತು ಪ್ರಧಾನಿ ಮೋದಿಯಿಂದ ಶುಭಾಶಯ ಪತ್ರ

ರಾಯಚೂರಿನ ಯುವಕನ ಮದುವೆಗೆ ಪ್ರಧಾನಿ ಮೋದಿಯಿಂದ ಶುಭಾಶಯ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಾನಿಹಾಳ ಗ್ರಾಮದ ರಾಜೇಶ್ ನಾಯಕ್ ಅವರು ಪ್ರಧಾನಿ ಮೋದಿಗೆ ಮದುವೆ ಆಹ್ವಾನ ಪತ್ರಿಕೆ ಕಳುಹಿಸಿದ್ದರು. ಈಗ ಪ್ರಧಾನಿ ಕಚೇರಿಯಿಂದ ನವ ದಂಪತಿಗೆ ಶುಭಾಶಯ ಪತ್ರ ಬಂದಿದೆ. ಈ ಬಗ್ಗೆ ಯುವಕನ ಕುಟುಂಬ ಸಂತಸ ವ್ಯಕ್ತಪಡಿಸಿದೆ.

Panchamasali Mutt: ಪಂಚಮಸಾಲಿ ಮಠದ ಲೆಕ್ಕ ಕೊಡುವ ಸಮಾವೇಶದಲ್ಲಿ ಭಾರಿ ಹೈಡ್ರಾಮಾ; ಟ್ರಸ್ಟಿಗಳು, ವಚನಾನಂದ ಶ್ರೀಗಳ ಬೆಂಬಲಿಗರ ನಡುವೆ ತಳ್ಳಾಟ-ನೂಕಾಟ!

ಪಂಚಮಸಾಲಿ ಮಠದ ಲೆಕ್ಕ ಕೊಡುವ ಸಮಾವೇಶದಲ್ಲಿ ಭಾರಿ ಹೈಡ್ರಾಮಾ!

ಹರಿಹರ ಪಂಚ ಮಠದ ದೇಣಿಗೆ ಹಾಗೂ ಅನುದಾನ ಬಳಕೆಯಲ್ಲಿ ಅವ್ಯವಹಾರ ನಡೆದಿದೆ. ಹೀಗಾಗಿ ಹಣದ ಲೆಕ್ಕ ನೀಡಬೇಕು ಎಂದು ವಚನಾನಂದ ಸ್ವಾಮೀಜಿ ಹಾಗೂ ಭಕ್ತರು, ಲೆಕ್ಕ ಕೊಡಿ ಅಭಿಯಾನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ 2008ರಿಂದ 2026ರವರೆಗೆ ಮಠದ ಆರ್ಥಿಕ ವ್ಯವಹಾರಗಳ ಲೆಕ್ಕವನ್ನು ಟ್ರಸ್ಟಿಗಳು ನೀಡಿದ್ದಾರೆ. ಈ ವೇಳೆ ಟ್ರಸ್ಟಿಗಳು ಹಾಗೂ ಸ್ವಾಮೀಜಿ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ.

Karnataka CM Row: ಮೇ 15ರೊಳಗೆ ಡಿಸಿಎಂ ಡಿಕೆಶಿಗೆ ಹೈಕಮಾಂಡ್‌ನಿಂದ ಬರ್ತ್‌ಡೇ ಗಿಫ್ಟ್: ಶಾಸಕ ರಂಗನಾಥ್

ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್‌ನಿಂದ ಬರ್ತ್‌ಡೇ ಗಿಫ್ಟ್: ಶಾಸಕ ರಂಗನಾಥ್

ಕಾಂಗ್ರೆಸ್‌ ಪಕ್ಷಕ್ಕಾಗಿ ಶ್ರಮಿಸಿರುವ ಡಿ.ಕೆ.ಶಿವಕುಮಾರ್‌ ಅವರಿಗೆ ಒಳ್ಳೆಯ ಸ್ಥಾನ ಸಿಗಬೇಕು ಎಂಬುವುದು ನಮ್ಮ ಆಸೆಯಾಗಿದೆ. ಅವರ ಹುಟ್ಟುಹಬ್ಬಕ್ಕೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ ಎಂದು ಹೇಳುವ ಮೂಲಕ ಸಿಎಂ ಸ್ಥಾನ ಬದಲಾವಣೆಯ ವದಂತಿಗಳಿಗೆ ಕುಣಿಗಲ್‌ ಶಾಸಕ ರಂಗನಾಥ್‌ ಅವರು ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ.

UGCET exam: ವಿದ್ಯಾರ್ಥಿಗಳೇ ಗಮನಿಸಿ, ಯುಜಿಸಿಇಟಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಭಾರೀ ಬದಲಾವಣೆ

ವಿದ್ಯಾರ್ಥಿಗಳೇ ಗಮನಿಸಿ, ಯುಜಿಸಿಇಟಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಬದಲಾವಣೆ

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಹೊರಡಿಸಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ಈ ಮೊದಲು ಏಪ್ರಿಲ್ 29, 2026 ರಂದು ನಡೆಸಲು ಉದ್ದೇಶಿಸಿದ್ದ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಈಗ ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ, ಈ ಪರೀಕ್ಷೆಯು ಈಗ ಮೇ 10, 2026 ರಂದು ನಡೆಯಲಿದೆ.

ಮೆಡ್‌ ಟ್ರಾನಿಕ್‌ ನಿಂದ ಭಾರತದ ಪಾರ್ಕಿನ್ಸನ್ ರೋಗಿಗಳಿಗಾಗಿ 'ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್' ವ್ಯವಸ್ಥೆ ಬಿಡುಗಡೆ

'ಅಡಾಪ್ಟಿವ್ ಡೀಪ್ ಬ್ರೈನ್ ಸ್ಟಿಮ್ಯುಲೇಶನ್' ವ್ಯವಸ್ಥೆ ಬಿಡುಗಡೆ

ಚಲನೆಗೆ ಸಂಬಂಧಿಸಿದ ಸವಾಲುಗಳು ಹೆಚ್ಚಾಗಿ ಗೋಚರಿಸುತ್ತವೆಯಾದರೂ, ಈ ಸ್ಥಿತಿಯು ಸಂವಹನ, ನಿದ್ರೆ ಮತ್ತು ಒಟ್ಟಾರೆ ಯೋಗಕ್ಷೇಮ ಸೇರಿದಂತೆ ದೈನಂದಿನ ಜೀವನದ ಇತರ ಅಂಶ ಗಳ ಮೇಲೂ ಪ್ರಭಾವ ಬೀರಬಹುದು. ಇಂದು, ರೋಗವು ವಿಕಸನಗೊಂಡಂತೆ ರೋಗ ಲಕ್ಷಣ ಗಳನ್ನು ನಿರ್ವಹಿಸಲು ವಿವಿಧ ಚಿಕಿತ್ಸಾ ವಿಧಾನಗಳು ಸಹಾಯ ಮಾಡುತ್ತವೆ.

ಯೆಜ್ಡಿ ಮತ್ತು ಬಿಎಸ್‌ಎ ಎರಡು ಹೊಸ ಸ್ಕ್ರ್ಯಾಂಬ್ಲರ್ ಬೈಕ್‌ಗಳ ಬಿಡುಗಡೆ

ಯೆಜ್ಡಿ ಮತ್ತು ಬಿಎಸ್‌ಎ ಎರಡು ಹೊಸ ಸ್ಕ್ರ್ಯಾಂಬ್ಲರ್ ಬೈಕ್‌ಗಳ ಬಿಡುಗಡೆ

ಬಿಎಸ್‌ಎ ಸ್ಕ್ರ್ಯಾಂಬ್ಲರ್ 650 ಭಾರತದಲ್ಲಿ ಈ ವಿಭಾಗದಲ್ಲಿನ ಏಕೈಕ 650ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್ ಹೊಂದಿದ್ದು, 45 ಬಿಹೆಚ್‌ಪಿ ಮತ್ತು 55 ಎನ್‌ಎಂ ಟಾರ್ಕ್ ಉತ್ಪಾದಿ ಸುತ್ತದೆ. ಗೋಲ್ಡ್ ಸ್ಟಾರ್ ಕ್ಯಾಟಲಿನಾ ಮತ್ತು ಎ10 ಸ್ಪಿಟ್‌ಫೈರ್ ಮಾದರಿಗಳಿಂದ ಪ್ರೇರಿತ ವಾದ ವಿನ್ಯಾಸವು ಇದಕ್ಕೆ ವಿಶಿಷ್ಟ ಗುರುತನ್ನು ನೀಡುತ್ತದೆ. ಇದರ ಪ್ರಾರಂಭಿಕ ಬೆಲೆ ರೂ. 3,24,950.

Anekal News: ಕೃಷಿ ಹೊಂಡಕ್ಕೆ ಬಿದ್ದು ತಾಯಿ- ಮಗಳು ಸಾವು, ಪತಿ ಮೇಲೆ ಸಂಶಯ

ಕೃಷಿ ಹೊಂಡಕ್ಕೆ ಬಿದ್ದು ತಾಯಿ- ಮಗಳು ಸಾವು, ಪತಿ ಮೇಲೆ ಸಂಶಯ

ಲಾವಣ್ಯ ಹಾಗೂ ಮೃತದೇಹ ಕೃಷಿ ಹೊಂಡದಲ್ಲಿ ಸಿಕ್ಕಿದೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಓಡೋಡಿ ಬಂದಿದ್ದಾರೆ. ತಾಯಿ-ಮಗಳ ಸಾವು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗಳು ಆಕಸ್ಮಿಕವಾಗಿ ಸಾವನ್ನಪ್ಪಿಲ್ಲ. ಇದರ ಹಿಂದೆ ಗಂಡನ ಕೈವಾಡವಿದೆ ಎಂದು ಆರೋಪ ಮಾಡಿದ್ದಾರೆ.

Janivara Row: ಜನಿವಾರ ತೆಗೆಸಿದ ಕಾಲೇಜಿಗೆ ಶಾಕ್‌, ಸರ್ಕಾರಿ ಪರೀಕ್ಷೆಗಳಿಂದ ಬ್ಲ್ಯಾಕ್‌ ಲಿಸ್ಟ್‌ಗೆ

ಜನಿವಾರ ತೆಗೆಸಿದ ಕಾಲೇಜಿಗೆ ಶಾಕ್‌, ಸರ್ಕಾರಿ ಪರೀಕ್ಷೆಗಳಿಂದ ಕಪ್ಪು ಪಟ್ಟಿಗೆ

ಕಳೆದ ವರ್ಷದಲ್ಲಿ ನಡೆದ ಇದೇ ತರಹದ ಘಟನೆ ಉಲ್ಲೇಖಿಸಿ ಜನಿವಾರ, ಲಿಂಗ ಇತ್ಯಾದಿ ಧಾರ್ಮಿಕ ದಿರಿಸುಗಳನ್ನು ತೆಗೆಯಬಾರದೆಂದು ಸ್ಪಷ್ಟವಾಗಿ ತರಬೇತಿಯಲ್ಲಿ ತಿಳಿಸಲಾಗಿದೆ. ಆದರೂ ಇಂತಹ ಘಟನೆ ನಡೆದಿದ್ದರೆ ಯಾರೋ ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಹೀಗಾಗಿ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವಿಚಾರಣೆ ನಡೆಸಿ ನಿಯಮಾನುಸಾರ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಪೂರ್ಣ ವರದಿ ಸಲ್ಲಿಸುವಂತೆ ಬೆಂಗಳೂರು ನಗರ ಡಿಸಿಗೆ ಪತ್ರ ಬರೆದು KEA ಕೂಡ ಆಗ್ರಹಿಸಿತ್ತು.

SSLC ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದ ಹೈಕೋರ್ಟ್‌;  ರಾಜ್ಯ ಸರಕಾರಕ್ಕೆ ಹಿನ್ನಡೆ

ತೃತೀಯ ಭಾಷೆಗೆ ಗ್ರೇಡ್‌, ರಾಜ್ಯ ಸರಕಾರಕ್ಕೆ ಹಿನ್ನಡೆ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದ ವೇಳೆಯಲ್ಲಿಯೇ, ಶಿಕ್ಷಣ ಸಚಿವ ಮಧು ಬಂಗಾರಪ್ಪನವರು 2026ರ ಮಾರ್ಚ್‌ 27ರಂದು ದಿಢೀರ್ ಘೋಷಣೆಯೊಂದನ್ನು ಮಾಡಿದ್ದರು. ತೃತೀಯ ಭಾಷೆಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ (ಹಿಂದಿ ಮತ್ತು ಇತರ 8 ಭಾಷೆ) ಅಂಕಗಳ ಬದಲಿಗೆ "ಎʼ ಯಿಂದ ʼಡಿʼ ತನಕ ಗ್ರೇಡ್‌ಗಳನ್ನು ನೀಡಲಾಗುವುದು ಹಾಗೂ ಎಸ್‌ಎಸ್‌ಎಲ್‌ಸಿ ಅಂತಿಮ ಶೇಕಡಾವಾರು ಅಂಕದಲ್ಲಿಈ ಗ್ರೇಡ್‌ ಪರಿಗಣನೆಯಾಗುವುದಿಲ್ಲ ಎಂದು ತಿಳಿಸಿದ್ದರು.

Minister D Sudhakar: ಸಚಿವ ಡಿ ಸುಧಾಕರ್‌ ಆರೋಗ್ಯ ಯಥಾಸ್ಥಿತಿ, ಆಸ್ಪತ್ರೆಗೆ ಸಿಎಂ- ಡಿಸಿಎಂ ಭೇಟಿ

ಸಚಿವ ಡಿ ಸುಧಾಕರ್‌ ಆರೋಗ್ಯ ಯಥಾಸ್ಥಿತಿ, ಆಸ್ಪತ್ರೆಗೆ ಸಿಎಂ- ಡಿಸಿಎಂ ಭೇಟಿ

ಕೆಲದಿನಗಳ ಹಿಂದೆ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಡಿ.ಸುಧಾಕರ್‌ ಅವರಲ್ಲಿ ದಿಢೀರನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ದೇಹಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ಎಲೆಕ್ಟ್ರಾನಿಕ್‌ ಸಿಟಿಯ ಕೃಷ್ಣ ಆರೋಗ್ಯ ವಿಜ್ಞಾನಗಳ ಸಂಸ್ಥೆಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Road Accident: ನಾಲ್ವರು ಪ್ರಯಾಣಿಸುತ್ತಿದ್ದ ಬೈಕಿಗೆ ಟಿಪ್ಪರ್‌ ಡಿಕ್ಕಿ, ಇಬ್ಬರು ಸಾವು

ನಾಲ್ವರು ಪ್ರಯಾಣಿಸುತ್ತಿದ್ದ ಬೈಕಿಗೆ ಟಿಪ್ಪರ್‌ ಡಿಕ್ಕಿ, ಇಬ್ಬರು ಸಾವು

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ. ಶಾಖಾಪುರ ಮುಖ್ಯರಸ್ತೆಯಲ್ಲಿ ಈ ದುರಂತ ನಡೆದಿದೆ. ಮೃತರನ್ನು ಬೈಕ್ ಓಡಿಸುತ್ತಿದ್ದ 37 ವರ್ಷದ ಅಂಜಿನಯ್ಯ ನಾಯಕ ಹಾಗೂ 10 ವರ್ಷದ ಬಾಲಕಿ ಅರ್ಚನಾ ಎಂದು ಗುರುತಿಸಲಾಗಿದೆ. ಗಾಯಾಳುಗಳಲ್ಲಿ 19 ಶ್ವೇತಾ ಅವರ ಕಾಲು ಕಟ್ ಆಗಿದೆ.

CET exam 2026: ಕೆಇಎಯಿಂದ ಸಿಇಟಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ, ಇಲ್ಲಿ ಪರಿಶೀಲಿಸಿ

ಕೆಇಎಯಿಂದ ಸಿಇಟಿ ಪರೀಕ್ಷೆಯ ಕೀ ಉತ್ತರಗಳು ಪ್ರಕಟ, ಇಲ್ಲಿ ಪರಿಶೀಲಿಸಿ

2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET exam)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು (key answers) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಆಕ್ಷೇಪಣೆಗಳ ಜತೆಗೆ ಪ್ರಶ್ನೆ ಸಂಖ್ಯೆ, ವರ್ಷನ್ ಕೋಡ್ ಇತ್ಯಾದಿ ಮಾಹಿತಿಯನ್ನು ನಿಖರವಾಗಿ ದಾಖಲಿಸಬೇಕು. ಅಪೂರ್ಣ ಮಾಹಿತಿಯ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

Elephant Attack: ಕನಕಪುರ ಬಳಿ ಕಾಡಾನೆ ದಾಳಿಗೆ ರೈತ ಬಲಿ

ಕನಕಪುರ ಬಳಿ ಕಾಡಾನೆ ದಾಳಿಗೆ ರೈತ ಬಲಿ

ಸಂಗಮ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ, ಮುತ್ತತ್ತಿ ಬಳಿ ಕಾವೇರಿ ನೀರಿನಲ್ಲಿ ವಿಹರಿಸುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆಯೊಂದು ದಾಳಿ ಮಾಡಿತ್ತು. ಇದೀಗ ಕನಕಪುರ (Kanakapura) ತಾಲೂಕಿನ ಸಂಗಮ ಅರಣ್ಯ ವಲಯ ಪ್ರದೇಶದ ವ್ಯಾಪ್ತಿಯ ಚೀಲಂದವಾಡಿಯಲ್ಲಿ ಈ ಘಟನೆ ನಡೆದಿದೆ.

Kalaburgi Khadak Rotti: ದೇಶದ ಅಂಗಳಕ್ಕೆ ʼಕಲಬುರಗಿ ಖಡಕ್ ರೊಟ್ಟಿʼ ಲಗ್ಗೆ

ದೇಶದ ಅಂಗಳಕ್ಕೆ ʼಕಲಬುರಗಿ ಖಡಕ್ ರೊಟ್ಟಿʼ ಲಗ್ಗೆ

ಇದು ಕೇವಲ ಆಹಾರ ಪದಾರ್ಥದ ಯಶಸ್ಸಲ್ಲ, ಬದಲಾಗಿ ಬಿಸಿಲು ನಾಡಿನ ಸಾಂಸ್ಕೃತಿಕ ಅಸ್ಮಿತೆ ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧೆಗೆ ಇಳಿಯುತ್ತಿರುವ ಹೆಮ್ಮೆಯ ಕ್ಷಣ. ಕಲಬುರಗಿಯ ಮಣ್ಣಿನ ಗುಣವೇ ಹಸಿರು ಸಿರಿಯ ಜೋಳ. ಇಲ್ಲಿನ ಹೊಲಗಳಲ್ಲಿ ಬೆಳೆಯುವ ‘ಮಾಲ್ದಂಡಿ’ ಜೋಳದ ಹಿಟ್ಟಿನಿಂದ ತಯಾರಾಗುವ ರೊಟ್ಟಿಗೆ ವಿಶಿಷ್ಟ ಪೌಷ್ಟಿಕಾಂಶವಿದೆ.

Weather report: ಜಾಗತಿಕ 100 ಬಿಸಿ ನಗರಗಳ ಪಟ್ಟಿಯಲ್ಲಿ ದೇಶದ 95, ಕರ್ನಾಟಕದ 3 ನಗರ!

ಜಾಗತಿಕ 100 ಬಿಸಿ ನಗರಗಳ ಪಟ್ಟಿಯಲ್ಲಿ ದೇಶದ 95, ಕರ್ನಾಟಕದ 3 ನಗರ!

ವಿಶ್ವದ ಅತ್ಯಂತ ಬಿಸಿಯಾದ 100 ನಗರಗಳ ಪಟ್ಟಿಯಲ್ಲಿ ಕರ್ನಾಟಕದ ಮೂರು ಜಿಲ್ಲೆಗಳು ಸ್ಥಾನ ಪಡೆದಿದೆ. ಇದು ರಾಜ್ಯದಲ್ಲಿ ತಾಪಮಾನ ಏರುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಉತ್ತರ ಕರ್ನಾಟಕದ ಈ ಭಾಗಗಳಲ್ಲಿ ಸೂರ್ಯನ ಪ್ರತಾಪ ಅತಿಯಾಗಿದ್ದು, ಜನರು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.

Chikkaballapur News: ರಾಜ್ಯಕ್ಕೆ ಎರಡನೇ ರ‍್ಯಾಂಕ್‌ನ ಗರಿ ಮೂಡಿಸಿದ ಪ್ರಣತಿರಾಜ್‌ಗೆ ವಕೀಲರಿಂದ ಅಭಿನಂದನೆ

ಎರಡನೇ ರ‍್ಯಾಂಕ್‌ನ ಗರಿ ಮೂಡಿಸಿದ ಪ್ರಣತಿರಾಜ್‌ಗೆ ಅಭಿನಂದನೆ

ಪ್ರಣಿತಿರಾಜ್ ನಂತರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ ಧನುಶ್ರೀ.ಸಿ 625ಕ್ಕೆ 621 ಇವರಿ ಬ್ಬರೂ ನಮ್ಮ ಆತ್ಮೀಯ ವಕೀಲ ಮಿತ್ರರ ಮಕ್ಕಳೆಂಬುದು ಹೆಮ್ಮೆಯ ಸಂಗತಿ. ಇವರಿಬ್ಬರೂ ಕೂಡ ತಾಲೂಕಿನ ಮಂಚನಬಲೆ ಬಿ,ಜಿ,ಎಸ್ ಪ್ರೌಢಶಾಲೆ ಹಾಗೂ ಅಗಲ ಗುರ್ಕಿ ಬಿ.ಜಿ.ಎಸ್ ಶಾಲೆಯಲ್ಲಿ ಸಾಧನೆಯನ್ನು ಮಾಡಿರುತ್ತಾರೆ. ಹಾಗಾಗಿ ಇಬ್ಬರು ಹೆಣ್ಣು ಮಕ್ಕಳಿಗೂ ವಕೀಲ ವೃಂದ ಹೋಗಿ ಸನ್ಮಾನ ಮಾಡಿ ಶುಭ ಕೋರಲಾಯಿತು.

SSLC Achievers honoured: ಎಸ್.ಎಸ್.ಎಲ್.ಸಿ ಸಾಧಕರಿಗೆ ನೇತಾಜಿ ಫೌಂಡೇಶನ್‌ನಿಂದ ಸನ್ಮಾನ: ತಲಾ 5 ಸಾವಿರ ರೂ. ನಗದು ಪುರಸ್ಕಾರ

ಎಸ್.ಎಸ್.ಎಲ್.ಸಿ ಸಾಧಕರಿಗೆ ನೇತಾಜಿ ಫೌಂಡೇಶನ್‌ನಿಂದ ಸನ್ಮಾನ

ನೇತಾಜಿ ಫೌಂಡೇಶನ್ ಕಳೆದ 9 ವರ್ಷ ಗಳಿಂದ ಸತತವಾಗಿ ಗೌರಿಬಿದನೂರು ಮತ್ತು ಮಂಚೇನ ಹಳ್ಳಿ ತಾಲ್ಲೂಕುಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಅಲ್ಲದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನಿರಂತರ ವಾಗಿ ಪ್ರೋತ್ಸಾಹ ನೀಡುವ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಈ ಸಮಾಜಮುಖಿ ಕಾರ್ಯವನ್ನು ಜಿಲ್ಲೆಯಾದ್ಯಂತ ವಿಸ್ತರಿಸಲಾಗುವುದು

Chikkaballapur News: ಶ್ರದ್ಧಾಭಕ್ತಿಯಿಂದ ನಡೆದ ಧರ್ಮರಾಯಸ್ವಾಮಿಯ 42ನೇ ವರ್ಷದ ಕರಗ ಮಹೋತ್ಸವ

ನಗರಕ್ಕೆ ಕಳೆಕಟ್ಟಿದ ದೀಪಾಲಂಕಾರ

ಹೂವಿನ ಕರಗದ ಹಿನ್ನೆಲೆಯಲ್ಲಿ ವಹ್ನಿಕುಲ ವಂಶಸ್ಥರು, ಕರಗದಮ್ಮನ ಪುತ್ರರಾದ ವೀರ ಕುಮಾರರು ಗೋವಿಂದ ನಾಮಸ್ಮರಣೆಯೊಂದಿಗೆ ದೇವಿಗೆ ಸಲ್ಲಿಸಬೇಕಾದ ಹರಕೆಯನ್ನು ಶ್ರದ್ಧಾಭಕ್ತಿಯಿಂದ ಅರ್ಪಿಸಿದ್ದು ವಿಶೇಷವಾಗಿತ್ತು. ಕರಗದ ಪೂಜಾರಿ ಕುಪ್ಪಂನ ಬಾಲಾಜಿ ಅವರು ರಾತ್ರಿ 10.30ಕ್ಕೆ ಕರಗಕ್ಕೆ ಪೂಜೆ ಸಲ್ಲಿಸಿದ ನಂತರ ಹೂವಿನ ಕರಗವನ್ನು ತಲೆಯ ಮೇಲೆ ಹೊತ್ತು ತಮಟೆಯ ನಾದಕ್ಕೆ ಪೂರಕವಾಗಿ ಕುಣಿಯುತ್ತಾ ದೇವಾಲಯವನ್ನು 3 ಸುತ್ತು ಪ್ರದಕ್ಷಿಣೆ ಹಾಕಿದ ನಂತರ ನಗರ ಸಂಚಾರಕ್ಕೆ ತೆರಳಿದ್ದು ವಿಶೇಷ.

ಹೆಚ್.ಎನ್.ವ್ಯಾಲಿಯ ನೀರಿನ ಸಂಗ್ರಹಾಗಾರವಾದ ಕಂದವಾರ ಕೆರೆಯಲ್ಲಿ ಮೀನುಗಳ ಮಾರಣಹೋಮ

ಕಂದವಾರ ಕೆರೆಯಲ್ಲಿ ಮೀನುಗಳ ಮಾರಣಹೋಮ

ಎರಡನೇ ಹಂತದ ಶುದ್ಧೀಕರಣದಲ್ಲಿ ಕೂಡ ಲೋಪದೋಷಗಳಾಗುತ್ತಿರುವ ಬಗ್ಗೆ ಸ್ವತಃ ಈ ಯೋಜನೆಯ ಕಾರಣಕರ್ತರು, ಹಾಲಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಇತ್ತೀಚೆಗೆ ಸುದ್ದಿ ಗೋಷ್ಠಿ ನಡೆಸಿ ಶುದ್ಧೀಕರಣ ಸಂಬಂಧದ ಮಾಹಿತಿಗಳನ್ನು ಬಟಾಬಯಲು ಮಾಡಿರುವು ದನ್ನು ಜನತೆ ಕಂಡಿದ್ದಾರೆ.

ವಿಶ್ವೇಶ್ವರ ಭಟ್ ಕೃತಿಗಳೆಂದರೆ ಅವು ಅಮೂಲ್ಯ ಜ್ಞಾನ ಭಂಡಾರ: ವಸಂತ್ ಗಿಳಿಯಾರ್

ವಿಶ್ವೇಶ್ವರ ಭಟ್ ಅವರಿಗೆ ರಾಷ್ಟ್ರೀಯ ಸೌರಭ ಸಮ್ಮಾನ್ ಪ್ರಶಸ್ತಿ ಪ್ರದಾನ

Vishweshwar Bhat: ಅತ್ಯಂತ ವೇಗವಾಗಿ ವಿಶ್ವವನ್ನು ಸುತ್ತ ಬಲ್ಲ, ಅಷ್ಟೇ ವೇಗವಾಗಿ ಬರೆಯಬಲ್ಲ ಪರ್ತಕರ್ತರು ವಿಶ್ವೇಶ್ವರ ಭಟ್. ಅವರಂಥವರು ಇನ್ನೊಬ್ಬರಿಲ್ಲ ಎಂದು ಚಿಂತಕ, ಸಂಘಟಕ ವಸಂತ್ ಗಿಳಿಯಾರ್ ಹೇಳಿದರು. ಕುಮಟಾದಲ್ಲಿ ಆಯೋಜಿಸಲಾಗಿದ್ದ ಸಾಧನಾ ಸೌರಭ ಕಾರ್ಯಕ್ರಮದಲ್ಲಿ ಅವರು ವಿಶ್ವೇಶ್ವರ ಭಟ್ ಅವರ ಬರಹದ ಕುರಿತಾಗಿ ಮಾತನಾಡಿದರು.

Shidlaghatta News: ಎಸ್'ಎಸ್'ಎಲ್'ಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ

ಎಸ್'ಎಸ್'ಎಲ್'ಸಿಯಲ್ಲಿ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಸನ್ಮಾನ

ನಗರದ ಮಾರಮ್ಮ ವೃತ್ತದಲ್ಲಿರುವ ಮರಗೆಲಸ ಕಚೇರಿಯಲ್ಲಿ ತಾಲೂಕು ಮರಗೆಲಸ ಕಾರ್ಮಿಕ ಸಂಘ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರನ್ನು ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಸಾಧನೆ ಸಮಾಜಕ್ಕೆ ಹೆಮ್ಮೆ ತರಿಸುವಂತ ದ್ದಾಗಿದೆ

Loading...