ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಬಿಗ್ ಬಿಲಿಯನ್ ಡೇ 2025ಗೆ ಮುಂಚಿತವಾಗಿ ಉದ್ಯಮದಲ್ಲಿ ಇದೇ ಮೊದಲ ಬಾರಿಗೆ ವೀಸಾ ನಿರಾಕರಣೆ ಕವರ್ ಅನ್ನು ಘೋಷಿಸಿದ ಕ್ಲಿಯರ್‌ಟ್ರಿಪ್

ಮೊದಲ ಬಾರಿಗೆ ವೀಸಾ ನಿರಾಕರಣೆ ಕವರ್ ಅನ್ನು ಘೋಷಿಸಿದ ಕ್ಲಿಯರ್‌ಟ್ರಿಪ್

ಕ್ಲಿಯರ್‌ಟ್ರಿಪ್ ಬಿಗ್ ಬಿಲಿಯನ್ ಡೇಯನ್ನು ಹಲವಾರು ಭಾರಿ ಆಫರ್‌ ಗಳೊಂದಿಗೆ ಆಚರಿಸುತ್ತಿದೆ. ಫ್ಲಾಶ್ ಸೇಲ್‌ ಗಳ ಸಮಯದಲ್ಲಿ, ದೇಶೀಯ ವಿಮಾನಗಳ ಟಿಕೆಟ್ ಗಳು ಕೇವಲ ₹999* ರಿಂದ ಪ್ರಾರಂಭವಾಗು ತ್ತವೆ ಮತ್ತು ಅಂತಾರಾಷ್ಟ್ರೀಯ ವಿಮಾನಗಳಿಗೆ 20% ರಿಯಾಯಿತಿ* ಲಭ್ಯವಿದೆ. ಜೊತೆಗೆ, ಕ್ಲಿಯರ್‌ಟ್ರಿಪ್ ತನ್ನ ಹೋಟೆಲ್ ವಿಭಾಗವನ್ನು 20,000ರಿಂದ 80,000+ ಹೋಟೆಲ್ ಗಳಿಗೆ ಗಣನೀಯವಾಗಿ ವಿಸ್ತರಿಸಿದೆ.

Chalavadi Narayanaswamy: ಎಡಪಂಥೀಯರ ವಿಚಾರ ಜನರ ಮೇಲೆ ಹೇರುವ ಕಾಂಗ್ರೆಸ್ ಆಡಳಿತ: ಛಲವಾದಿ ನಾರಾಯಣಸ್ವಾಮಿ

ಎಡಪಂಥೀಯರ ವಿಚಾರ ಜನರ ಮೇಲೆ ಹೇರುವ ಕಾಂಗ್ರೆಸ್: ಛಲವಾದಿ

Chalavadi Narayanaswamy: ಸಮೀಕ್ಷೆಗೂ ಜನಗಣತಿಗೂ ವ್ಯತ್ಯಾಸವಿದೆ. ಜನಗಣತಿಯನ್ನು ರಾಜ್ಯ ಸರ್ಕಾರ ಮಾಡಲು ಸಾಧ್ಯವಿಲ್ಲ; ಅದೇನಿದ್ದರೂ ಕೇಂದ್ರ ಸರ್ಕಾರ ಮಾಡಬೇಕು. ಈ ಸಮೀಕ್ಷೆ ಹೆಸರಿನಲ್ಲಿ ಇವರು ಜನಗಣತಿ ಮಾಡಲು ಮುಂದಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

Election Commission: ಆನ್‌ಲೈನ್‌ನಲ್ಲಿ ಮತದಾರರ ಹೆಸರು ಡಿಲೀಟ್‌ ಮಾಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ಆರೋಪ ತಿರಸ್ಕರಿಸಿದ ಚುನಾವಣಾ ಆಯೋಗ

ರಾಹುಲ್ ಗಾಂಧಿಗೆ ಮತ್ತೆ ಬಿಸಿ ಮುಟ್ಟಿಸಿದ ಎಲೆಕ್ಷನ್ ಕಮಿಷನ್

ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ ಮತದಾರರ ಹೆಸರನ್ನು ಅಳಿಸುವ ಅವಕಾಶವಿಲ್ಲ ಎಂದು ಭಾರತದ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಆ ಮೂಲಕ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾಡಿದ ಆರೋಪವನ್ನು ತಳ್ಳಿ ಹಾಕಿದೆ.

Govinda Karajola: ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿಗೆ ತಯಾರಿ: ಗೋವಿಂದ ಕಾರಜೋಳ

ಜನರ ಗಮನ ಬೇರೆಡೆ ಸೆಳೆಯಲು ಜಾತಿಗಣತಿ: ಕಾರಜೋಳ

Govinda Karajola: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಕಳೆದ ಎರಡೂವರೆ ವರ್ಷದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಜನ ಅವರಿಗೆ ಛೀಮಾರಿ ಹಾಕುತ್ತಿದ್ದಾರೆ. ಎಲ್ಲಿಯೂ ಅವರು ಓಡಾಡುವ ಪರಿಸ್ಥಿತಿಯಿಲ್ಲ. ಜನರ ಗಮನವನ್ನು ಬೇರೆಡೆ ಸೆಳೆಯುವ ಸಲುವಾಗಿ ಸಿದ್ದರಾಮಯ್ಯ ಜಾತಿಗಣತಿಯನ್ನು ಮಾಡಿಸಲು ತಯಾರಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

45 Movie: ನಟ ಉಪೇಂದ್ರ ಬರ್ತ್‌ ಡೇ; ರಿಯಲ್ ಬೈಕ್ ಅನಾವರಣ ಮಾಡಿ ವಿಶ್‌ ಮಾಡಿದ ʼ45ʼ ಚಿತ್ರತಂಡ

ಉಪೇಂದ್ರ ಬರ್ತ್‌ ಡೇ; ರಿಯಲ್ ಬೈಕ್ ಅನಾವರಣಗೊಳಿಸಿ ʼ45ʼ ಚಿತ್ರತಂಡ

45 Movie: ಸ್ಯಾಂಡಲ್‌ವುಡ್‌ ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬದ ದಿನ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ವಿಶೇಷವಾದ ಬೈಕ್ ಅನಾವರಣ ಮಾಡಲಾಯಿತು. ಈ ಮೂಲಕ ʼ45ʼ ಚಿತ್ರತಂಡ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

2025ರ ಅಂತ್ಯದ ವೇಳೆಗೆ 400 ಮಿಲಿಯನ್ ಸಾಧನಗಳಲ್ಲಿ ಗ್ಯಾಲಕ್ಸಿ ಎಐ ಪರಿಚಯಿಸಲಿರುವ ಸ್ಯಾಮ್‌ಸಂಗ್

400 ಮಿಲಿಯನ್ ಸಾಧನಗಳಲ್ಲಿ ಗ್ಯಾಲಕ್ಸಿ ಎಐ ಪರಿಚಯಿಸಲಿರುವ ಸ್ಯಾಮ್‌ಸಂಗ್

ಸ್ಯಾಮ್‌ಸಂಗ್ 2024ರಲ್ಲಿ ವಿಶ್ವದ ಮೊದಲ ಎಐ ಫೋನ್ ಆದ ಗ್ಯಾಲಕ್ಸಿ ಎಸ್24 ಸರಣಿಯನ್ನು ಬಿಡುಗಡೆ ಮಾಡಿತು. ಇದು ಹೊಸ ಹೊಸ ಎಐ ಆವಿಷ್ಕಾರಗಳಿಗೆ ದಾರಿಯಾಯಿತು. ಆಗಿನಿಂದ, ಸ್ಯಾಮ್‌ಸಂಗ್ ತನ್ನ ಮೊಬೈಲ್ ಎಐ ವ್ಯವಸ್ಥೆಯನ್ನು ವಿಸ್ತರಿಸುತ್ತಾ ಬಂದಿದ್ದು, ಮಲ್ಟಿಮಾಡೆಲ್ ಇಂಟೆಲಿಜೆನ್ಸ್ ಅನ್ನು ಬಳಸಿಕೊಂಡು ತನ್ನ ವೇರೆಬಲ್ಸ್, ಟ್ಯಾಬ್ಲೆಟ್‌ ಗಳು, ಪಿಸಿಗಳು ಮತ್ತು ಇತರೆ ಸಾಧನಗಳಲ್ಲಿ ಎಐ ಅನ್ನು ಸಂಯೋಜಿಸಿದೆ.

ಕರ್ನಾಟಕದಲ್ಲಿ ದಸರಾ ಹಬ್ಬದ ವಿಶೇಷ ಆಫರ್‌ ಗಳ ಘೋಷಿಸಿದ ಯಮಹಾ

ದಸರಾ ಹಬ್ಬದ ವಿಶೇಷ ಆಫರ್‌ ಗಳ ಘೋಷಿಸಿದ ಯಮಹಾ

ಕರ್ನಾಟಕದೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಆವರಿಸಿರುವ ಈ ಸಂದರ್ಭದಲ್ಲಿ ಯಮಹಾ ಇಂಡಿಯಾ ಮೋಟಾರ್ ಸಂಸ್ಥೆಯು ಗ್ರಾಹಕರಿಗೆ ವಿಶೇಷ ಆಫರ್‌ ಗಳನ್ನು ಘೋಷಿಸಿದೆ. ಈ ಶುಭ ಸಂದರ್ಭದಲ್ಲಿ ಸಂಭ್ರಮ ಹೆಚ್ಚಿಸುವ ನಿಟ್ಟಿನಲ್ಲಿ ಯಮಹಾ ತನ್ನ ಜನಪ್ರಿಯ ಮೋಟಾರ್‌ ಸೈಕಲ್‌ ಗಳು ಮತ್ತು ಸ್ಕೂಟರ್‌ ಗಳ ಮೇಲೆ ಜಿಎಸ್‌ಟಿ ಲಾಭಗಳು, ವಿಮಾ ಆಫರ್‌ ಗಳು ಮತ್ತು ಕ್ಯಾಶ್‌ ಬ್ಯಾಕ್‌ ಒದಗಿಸುವ ಮೂಲಕ ಹಲವಾರು ವಿಶೇಷ ಆಫರ್ ಗಳನ್ನು ನೀಡುತ್ತಿದೆ.

Cabinet Meeting: ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಎಸ್‌ಸಿ/ಎಸ್‌ಟಿ ಸಂತ್ರಸ್ತರ ಕುಂಟುಂಬಕ್ಕೆ ಸರ್ಕಾರಿ ನೌಕರಿ

ಸಿದ್ದರಾಮಯ್ಯ ಅಧ್ಯಕ್ಷತೆಯ ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ (ಸೆಪ್ಟೆಂಬರ್‌ 18) ಸಚಿವ ಸಂಪುಟ ಸಭೆ ನಡೆಯಿತು. ದೌರ್ಜನ್ಯಕ್ಕೊಳಗಾಗಿ ಮೃತಪಟ್ಟ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ವ್ಯಕ್ತಿಗಳ ಅವಲಂಬಿತರಿಗೆ ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಹುದ್ದೆಗಳಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ನೀಡಲು ಸಚಿವ ಸಂಪುಟ ಅನುಮತಿ ಸೇರಿದಂತೆ ಅನೇಕ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು.

South Indian Bank: ಸೌತ್‌ ಇಂಡಿಯನ್‌ ಬ್ಯಾಂಕ್‌ ಮೂಲಕ ಜಿಎಸ್‌ಟಿ ಪಾವತಿ ಇನ್ನಷ್ಟು ಸುಲಭ!

ಸೌತ್‌ ಇಂಡಿಯನ್‌ ಬ್ಯಾಂಕ್‌ ಮೂಲಕ ಜಿಎಸ್‌ಟಿ ಪಾವತಿ ಇನ್ನಷ್ಟು ಸುಲಭ!

ಭಾರತೀಯ ರಿಸರ್ವ್‌ ಬ್ಯಾಂಕ್‌ ಸರ್ಕಾರದ ವಹಿವಾಟುಗಳಿಗೆ ಏಜೆನ್ಸಿ ಬ್ಯಾಂಕ್‌ ಆಗಿ ಕಾರ್ಯ ನಿರ್ವಹಿ ಸಲು ಸೌತ್‌ ಇಂಡಿಯನ್‌ ಬ್ಯಾಂಕ್‌ಗೆ ಪರವಾನಿಗೆ ನೀಡಿದೆ. ಜೊತೆಗೆ ಪರೋಕ್ಷ ತೆರಿಗೆ ಸಂಗ್ರಹಿಸಲು ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿ (CBIC) ಕೂಡ ಪರವಾನಿಗೆ ನೀಡಿದೆ.

ವಿಷ್ಣುವರ್ಧನ್‌ ಹುಟ್ಟುಹಬ್ಬದಂದೇ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ ನೀಡಿದ ಕಿಚ್ಚ ಸುದೀಪ್‌; ಅಭಿಮಾನ ಕ್ಷೇತ್ರದ ಮಾಡೆಲ್‌ ರಿಲೀಸ್‌

ವಿಷ್ಣುವರ್ಧನ್‌ ಅಭಿಮಾನ ಕ್ಷೇತ್ರದ ಮಾಡೆಲ್‌ ರಿಲೀಸ್‌ ಮಾಡಿದ ಕಿಚ್ಚ

Dr Vishnuvardhan: ಸಾಹಸಸಿಂಹ, ದಿವಂಗತ ಡಾ. ವಿಷ್ಣುವರ್ಧನ್‌ ಅವರ ಹುಟ್ಟುಹಬ್ಬದಂದು ನಟ ಕಿಚ್ಚ ಸುದೀಪ್‌ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಹಿಂದೆ ವಿಷ್ಣುವರ್ಧನ್‌ ಅಭಿಮಾನ ಕ್ಷೇತ್ರ ನಿರ್ಮಿಸುವುದಾಗಿ ಘೋಷಿಸಿದ್ದ ಅವರು ಅದರ ಮಾಡೆಲ್‌ ರಿಲೀಸ್‌ ಮಾಡಿದ್ದಾರೆ.

DK Shivakumar: ಮತದಾನದ ಹಕ್ಕು ಕಾಯೋದು ಆಯೋಗದ ಕರ್ತವ್ಯ, ಕಸಿಯುವುದಲ್ಲ ಎಂದ ಡಿ.ಕೆ. ಶಿವಕುಮಾರ್‌

ಮತದಾನದ ಹಕ್ಕು ಕಾಯೋದು ಆಯೋಗದ ಕರ್ತವ್ಯ, ಕಸಿಯುವುದಲ್ಲ: ಡಿಕೆಶಿ

DK Shivakumar: ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತಹ ಪರಿಶಿಷ್ಟರು, ಅಲ್ಪಸಂಖ್ಯಾತರು, ಸಾಮಾನ್ಯ ವರ್ಗದವರು ಸೇರಿದಂತೆ ಎಲ್ಲ ಜನ ಸಾಮಾನ್ಯರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಗಡಿ ಭಾಗದಲ್ಲಿರುವ ಬೇರೆ ರಾಜ್ಯದವರ ಹೆಸರನ್ನು ಸೇರಿಸಲಾಗಿತ್ತು. ಒಟ್ಟಾರೆ ಇದೆಲ್ಲವನ್ನೂ ಪೂರ್ವ ನಿಯೋಜಿತವಾಗಿ ಮಾಡಲಾಗಿತ್ತು. ಹೀಗಾಗಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಈ ವಿಚಾರವನ್ನು ಪ್ರಸ್ತಾಪಿಸಿದ್ದು, ಅವರು ಮಾಡಿರುವ ಆರೋಪಗಳೆಲ್ಲವೂ ನಿಜ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತಗಳ್ಳತನದ ಮೂಲಕ ಬಿಜೆಪಿ  ಬುಡಮೇಲುಗೊಳಿಸಿದೆ; ರಾಹುಲ್‌ ಗಾಂಧಿ ಆರೋಪಕ್ಕೆ ಸಿದ್ದರಾಮಯ್ಯ ಸಮರ್ಥನೆ

ರಾಹುಲ್‌ ಗಾಂಧಿ ಮತಗಳ್ಳತನ ಆರೋಪಕ್ಕೆ ಸಿದ್ದರಾಮಯ್ಯ ಸಮರ್ಥನೆ

CM Siddaramaiah: ಕಲಬುರಗಿಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್‌ ನಾಯಕ, ಸಂಸದ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಆರೋಪವನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು ಎನ್ನುವ ವಿರ ಇಲ್ಲಿದೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ

ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ

Bengaluru Power Cut: ಬೆಂಗಳೂರಿನ ಪದ್ಮನಾಭನಗರ ಉಪಕೇಂದ್ರ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಸೆ.19ರಂದು ಶುಕ್ರವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Pralhad Joshi: ರಾಹುಲ್‌ ಗಾಂಧಿ ಮಾಲೂರು ವಿಧಾನಸಭಾ ಕ್ಷೇತ್ರದ ಬಗ್ಗೆ ಏಕೆ ಮಾತನಾಡಲ್ಲ? ಜೋಶಿ ಪ್ರಶ್ನೆ

ಕಾಂಗ್ರೆಸ್ಸೇ ನಿಜವಾದ ʼವೋಟ್‌ ಚೋರಿʼ: ಜೋಶಿ ಆರೋಪ

Pralhad Joshi: ಮಾತೆತ್ತಿದರೆ ʼವೋಟ್‌ ಚೋರಿʼ ಆರೋಪ ಮಾಡುವ ರಾಹುಲ್‌ ಗಾಂಧಿ ಈಗ ಮಾಲೂರು ವಿಧಾನಸಭಾ ಕ್ಷೇತ್ರದ ಬಗ್ಗೆ ಏಕೆ ಮಾತನಾಡಲಿಲ್ಲ? ಅಲ್ಲಿ ಕಾಂಗ್ರೆಸ್‌ ಪಕ್ಷವೇ ಗೆದ್ದಿದೆ. ಇಲ್ಲಿ ನಡೆದ ಚುನಾವಣಾ ದುಷ್ಕೃತ್ಯದ ಕಾರಣ ಎರಡು ದಿನಗಳ ಹಿಂದಷ್ಟೇ ಹೈಕೋರ್ಟ್‌ ಶಾಸಕತ್ವ ಅನರ್ಹಗೊಳಿಸಿ, ಹೊಸ ಮತ ಎಣಿಕೆಗೆ ಆದೇಶಿಸಲಾಗಿದೆ. ಇನ್ನಾದರೂ ರಾಹುಲ್‌ ಗಾಂಧಿ ಬುದ್ಧಿ ಕಲಿಯಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಚಾಟಿ ಬೀಸಿದ್ದಾರೆ.

Caste Census: ರಾಜ್ಯ ಸರ್ಕಾರದ ಜಾತಿಗಣತಿಗೆ ಸಚಿವರಿಂದಲೇ ವಿರೋಧ

ಜಾತಿಗಣತಿಗೆ ಸಚಿವರಿಂದಲೇ ವಿರೋಧ

ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಜಾತಿಗಣತಿಗೆ ಸಚಿವರಿಂದಲೇ ವಿರೋಧ ವ್ಯಕ್ತವಾಗುತ್ತಿದೆ. ಗುರುವಾರ (ಸೆಪ್ಟೆಂಬರ್ 18) ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆಯೇ ಕೆಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 331 ಹೊಸದಾಗಿ ಜಾತಿಗಳ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸಿದ ಕೆಲ ಸಚಿವರು, ಹೊಸ ಜಾತಿಗಳ ಸೇರ್ಪಡೆಯಿಂದ ಗೊಂದಲ ಸೃಷ್ಟಿಯಾಗಿದೆ ಎಂದಿದ್ದಾರೆ.

CT Ravi: ಚುನಾವಣಾ ಆಯೋಗಕ್ಕೆ ಪ್ರಮಾಣಪತ್ರದ ಮೂಲಕ ದೂರು ಕೊಡುತ್ತಿಲ್ಲವೇಕೆ?- ರಾಹುಲ್‌ ಗಾಂಧಿಗೆ ಸಿ.ಟಿ. ರವಿ ಪ್ರಶ್ನೆ

ರಾಹುಲ್‌ ಗಾಂಧಿಗೆ ಟಾಂಗ್‌ ಕೊಟ್ಟ ಸಿ.ಟಿ.ರವಿ

CT Ravi: ರಾಹುಲ್ ಗಾಂಧಿ ಅವರು 100ಕ್ಕೂ ಹೆಚ್ಚು ಚುನಾವಣೆಯ ನೇತೃತ್ವ ವಹಿಸಿ 8-9 ಕಡೆ ಯಶಸ್ಸು ಕಂಡಿದ್ದಾರೆ. ಸುಮಾರು ಶೇ 92ರಷ್ಟು ವೈಫಲ್ಯ ಅವರದು. ತಮ್ಮ ಚುನಾವಣಾ ವೈಫಲ್ಯವನ್ನು ಅವರು ಚುನಾವಣಾ ಆಯೋಗದ ಹೆಗಲಿಗೆ ಕಟ್ಟಲು ಹೊರಟಿದ್ದಾರಾ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.

R Ashok: ದೇಶದಲ್ಲಿ ಅತಿ ಹೆಚ್ಚು ಅಪಹಾಸ್ಯಕ್ಕೆ ಒಳಗಾದ ವ್ಯಕ್ತಿ ರಾಹುಲ್ ಗಾಂಧಿ- ಆರ್.ಅಶೋಕ್

ರಾಹುಲ್ ಗಾಂಧಿ ಸಾಮಾನ್ಯ ಜ್ಞಾನ ಇಲ್ಲದ ವ್ಯಕ್ತಿ- ಆರ್.ಅಶೋಕ್

R Ashok: ರಾಹುಲ್ ಅವರು ಯಾರೋ ಬರೆದುಕೊಟ್ಟಿದ್ದನ್ನು ಪದೇ ಪದೇ ಹೇಳಿ ಕಳೆದ 4-5 ವರ್ಷಗಳಿಂದ ದೇಶದಲ್ಲಿ ಅತಿ ಹೆಚ್ಚು ಅಪಹಾಸ್ಯಕ್ಕೆ ಒಳಗಾದ ವ್ಯಕ್ತಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.

HD Kumaraswamy: ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ; HDK ವಾಗ್ದಾಳಿ

ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ: HDK

HD Kumaraswamy: ಕಂಪನಿಗಳು ರಾಜ್ಯ ಸರ್ಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆ ರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Dharmasthala Case: ಬಯಲಾಯ್ತು ಬಂಗ್ಲೆಗುಡ್ಡ ರಹಸ್ಯ; ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್​​ ಗುರುತು ಪತ್ತೆ

ಬಂಗ್ಲೆಗುಡ್ಡ: ಅಸ್ಥಿಪಂಜರದ ಬಳಿ ಸಿಕ್ಕ ಐಡಿ ಕಾರ್ಡ್​​ ಗುರುತು ಪತ್ತೆ

Banglegudda Case: ಧರ್ಮಸ್ಥಳದ ಸಮೀಪದ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಮಾನವ ಅವಶೇಷ ಬಳಿ ಪತ್ತೆಯಾದ ಐಡಿ ಕಾರ್ಡ್‌ನ ರಹಸ್ಯ ಬಯಲಾಗಿದೆ. ಇದು ಯು.ಬಿ.ಅಯ್ಯಪ್ಪ (70) ಎಂಬುವರ ಐಡಿ ಕಾರ್ಡ್ ಎನ್ನುವುದು ಗೊತ್ತಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ ನಿವಾಸಿ ಅಯ್ಯಪ್ಪ 2017ರಲ್ಲಿ ನಾಪತ್ತೆಯಾಗಿದ್ದರು.

Uttara Kannada News: ಭಟ್ಕಳ ಅರಣ್ಯದಲ್ಲಿ ಜಾನುವಾರು ಮೂಳೆ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಭಟ್ಕಳದಲ್ಲಿ ಜಾನುವಾರು ಮೂಳೆ ಪತ್ತೆ; ಇಬ್ಬರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಗುಡ್ಡದಲ್ಲಿ ಜಾನುವಾರುಗಳ ರಾಶಿ ರಾಶಿ ಮೂಳೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಮಗ್ಗಂ ಕಾಲೋನಿ ನಿವಾಸಿ ಮೊಹಮ್ಮದ್ ಸಮಾನ್ ಹಾಗೂ ಚೌಥನಿ ನಿವಾಸಿ ಮೊಹಮ್ಮದ್ ರಾಹೀನ್ ಬಂಧಿತರು. ಇತರ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಆರೋಗ್ಯ ಮತ್ತು ಮನೆಗಳಲ್ಲಿ ಸಂತೋಷದ ಜಾಗತಿಕ ಆಂದೋಲನ ಆಚರಣೆ

ಆರೋಗ್ಯ ಮತ್ತು ಮನೆಗಳಲ್ಲಿ ಸಂತೋಷದ ಜಾಗತಿಕ ಆಂದೋಲನ ಆಚರಣೆ

1983ರಲ್ಲಿ ಅಪೋಲೋ ಪ್ರಾರಂಭವಾದಾಗ, ಅದು ಕೇವಲ ಆಸ್ಪತ್ರೆಯ ಹುಟ್ಟಾಗಿರಲಿಲ್ಲ, ಬದಲಾಗಿ ಒಂದು ಚಳುವಳಿಯ ಹುಟ್ಟಾಗಿತ್ತು. ನಾಲ್ಕು ದಶಕಗಳಲ್ಲಿ, ಆ ಚಳುವಳಿ 200 ಮಿಲಿಯನ್ ಜೀವಗಳನ್ನು ಮುಟ್ಟಿದ, 185 ರಾಷ್ಟ್ರಗಳಲ್ಲಿ ವಿಶ್ವಾಸವನ್ನು ಬೆಳೆಸಿದ ಮತ್ತು ಆರೋಗ್ಯ ರಕ್ಷಣೆಯಲ್ಲಿ ಸಾಧ್ಯವಾದ ದ್ದನ್ನು ಮರು ವ್ಯಾಖ್ಯಾನಿಸಿದ ಶಕ್ತಿಯಾಗಿ ಬೆಳೆದಿದೆ.

Dharmasthala Case: ಬಂಗ್ಲೆಗುಡ್ಡದಲ್ಲಿ ಸಿಕ್ಕ ಮಾನವ ಅವಶೇಷ ಯಾರದ್ದು? ಎಸ್‌ಐಟಿ ತಂಡ ಹೇಳಿದ್ದೇನು?

ಬಂಗ್ಲೆಗುಡ್ಡದಲ್ಲಿ ಸಿಕ್ಕ ಮಾನವ ಅವಶೇಷ ಯಾರದ್ದು?

ಧರ್ಮಸ್ಥಳ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ವಿಶೇಷ ತನಿಖಾ ತಂಡ ಇದೀಗ ಬಂಗ್ಲೆಗುಡ್ಡೆಯಲ್ಲಿ ಶೋಧ ಕಾರ್ಯ ನಡೆಸಿದೆ. ಸೌಜನ್ಯಾ ಮಾವ ವಿಠ್ಠಲ್ ಗೌಡ ಅವರ ಹೇಳಿಕೆ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು 13 ಎಕ್ರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಕಾಡಿನಲ್ಲಿ ತನಿಖೆ ನಡೆಸಿದ್ದಾರೆ. ಈ ವೇಳೆ ಕೆಲವು ಮಾನವ ಶರೀರದ ಅವಶೇಷ, ವಿಷದ ಬಾಟಲ್‌, ಹಗ್ಗದ ತುಂಡು ಇತ್ಯಾದಿ ಪತ್ತೆಯಾಗಿದೆ.

ಟಿವಿಎಸ್ ಮೋಟಾರ್ ಕಂಪನಿ ಮತ್ತು ನಾಯ್ಸ್ ಪಯೋನೀರ್ ಭಾರತದ ಮೊದಲ ಇವಿ ಸ್ಮಾರ್ಟ್‌ವಾಚ್ ಸಂಯೋಜನೆ

ಭಾರತದ ಮೊದಲ ಇವಿ ಸ್ಮಾರ್ಟ್‌ವಾಚ್ ಸಂಯೋಜನೆ

ನೈಜ-ಸಮಯದ ಸವಾರಿ ಅಂಕಿ ಅಂಶಗಳನ್ನು ನೀಡುತ್ತದೆ: ಬ್ಯಾಟರಿ, ಟೈರ್ ಒತ್ತಡ, ಶ್ರೇಣಿ ಮತ್ತು ಸುರಕ್ಷತಾ ಎಚ್ಚರಿಕೆಗಳನ್ನು ಸರಳವಾಗಿ ವೀಕ್ಷಿಸಬಹುದಾದ ಸ್ವರೂಪದಲ್ಲಿ. ಸುರಕ್ಷಿತ ಏಪಿಐಗಳು ಮತ್ತು ಬಳಕೆದಾರರ ಅನುಮತಿಗಳ ಮೇಲೆ ನಿರ್ಮಿಸಲಾಗಿದೆ, ಭಾರತದಲ್ಲಿ ಬುದ್ಧಿವಂತ, ಸಂಪರ್ಕಿತ ಚಲನ ಶೀಲತೆಯ ಭವಿಷ್ಯವನ್ನು ಅನ್‌ಲಾಕ್ ಮಾಡುವಾಗ ಗೌಪ್ಯತೆಯನ್ನು ಖಚಿತಪಡಿಸುತ್ತದೆ.

Actor Ranjith: ಅಕ್ಕನ ವಿರುದ್ಧವೇ ಠಾಣೆ ಮೆಟ್ಟಿಲೇರಿದ ಬಿಗ್‌ ಬಾಸ್‌ ರಂಜಿತ್; ಏನಿದು ವಿವಾದ?

ಅಕ್ಕನ ವಿರುದ್ಧವೇ ಠಾಣೆ ಮೆಟ್ಟಿಲೇರಿದ ಬಿಗ್‌ ಬಾಸ್‌ ರಂಜಿತ್

ಬಿಗ್‌ ಬಾಸ್‌ ಕನ್ನಡ ರಿಯಾಲಿಟಿ ಶೋ ವೇಳೆ ದೊಡ್ಮನೆಯಲ್ಲಿ ಕಿರಿಕ್‌ ಮಾಡಿಕೊಂಡಿದ್ದ ನಟ ರಂಜಿತ್ ಇದೀಗ ತಮ್ಮ ಮನೆಯಲ್ಲೇ ಜಗಳವಾಡಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದಿದೆ. ಸದ್ಯ ಅವರು ಮತ್ತು ಸಹೋದರಿ ಜಗಳ ಮಾಡುತ್ತಿರುವ ವಿಡಿಯೊ ಹೊರ ಬಂದಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

Loading...