ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Budget 2026

ಬೆಂಗಳೂರನ್ನು ಗ್ರೇಟರ್‌ ಮಾಡಲು ಬದ್ಧ

ಬೆಂಗಳೂರನ್ನು ಗ್ರೇಟರ್‌ ಮಾಡಲು ಬದ್ಧ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಅಭಿವೃದ್ಧಿಗೆ ಏಳು ಸಾವಿರ ಕೋಟಿ ಅನುದಾನದೊಂದಿಗೆ, ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರವನ್ನಾಗಿ ಮಾಡಲು ಸಾವಿರಾರು ಕೋಟಿ ವ್ಯಯಿಸಲು ಸಿದ್ಧ. ಬೆಂಗಳೂರು ಒಂದು ನಗರವಷ್ಟೆ ಅಲ್ಲ. ಇದು ಅಸಂಖ್ಯಾತ ಕನಸುಗಳ ನೆಲೆಬೀಡು.

ಗ್ರಾಮ ಪಂಚಾಯಿತಿಗೆ ‘ಮಹಾತ್ಮ ಗಾಂಧಿ’ ಹೆಸರು

ಗ್ರಾಮ ಪಂಚಾಯಿತಿಗೆ ‘ಮಹಾತ್ಮ ಗಾಂಧಿ’ ಹೆಸರು

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ನರೇಗಾ ಯೋಜನೆಯಿಂದ ಗಾಂಧೀಜಿ ಹೆಸರು ಕೈಬಿಟ್ಟ ನಂತರ, ರಾಜ್ಯ ಕಾಂಗ್ರೆಸ್ ಸರಕಾರ ಸಾಧ್ಯವಾದಲ್ಲೆಲ್ಲ ಗಾಂಧೀಜಿ ಹೆಸರಿನ ಯೋಜನೆ ಗಳನ್ನು ಶುರು ಮಾಡುತ್ತಿದೆ. ಗಾಂಧೀಜಿ ಆದರ್ಶಗಳಿಗೆ ಗೌರವ ಸಲ್ಲಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಎಂದು ನಾಮಕರಣ ಮಾಡಲು ಸರಕಾರ ತೀರ್ಮಾನಿಸಿದೆ.

ಉತ್ತರ ಕರ್ನಾಟಕಕ್ಕೆ ಸಾವಿರ ಎಕರೆ ಕೈಗಾರಿಕಾ ಪಾರ್ಕ್

ಉತ್ತರ ಕರ್ನಾಟಕಕ್ಕೆ ಸಾವಿರ ಎಕರೆ ಕೈಗಾರಿಕಾ ಪಾರ್ಕ್

ಉತ್ತರ ಕರ್ನಾಟಕದಲ್ಲಿ ಆರ್ಥಿಕ ಅಭಿವೃದ್ಧಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಬೆಳಗಾಗಿ ಜಿಲ್ಲೆಯಲ್ಲಿ 1 ಸಾವಿರ ಎಕರೆ ಪ್ರದೇಶದಲ್ಲಿ ‘ಕೈಗಾರಿಕಾ ಪಾರ್ಕ್’ ಅಭಿವೃದ್ಧಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು 2026-27ನೇ ಹಣಕಾಸು ವರ್ಷದ ಬಜೆಟ್ ಪ್ರಸ್ತಾವನೆಯಲ್ಲಿ ಘೋಷಿಸಿದ್ದಾರೆ.

Interest Free loan: 83 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲI

83 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಸಹಕಾರ ಇಲಾಖೆಯ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ವಿಶೇಷ ಒತ್ತು ನೀಡಲಾಗಿದೆ. ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ವಿತರಣೆ ಯ ಗುರಿಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸುವ ಜತೆಗೆ, ಕೃಷಿ ಮಾರುಕಟ್ಟೆಗಳ ಸಂಪೂರ್ಣ ಗಣಕೀಕರಣ ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಕಾರ ಬ್ಯಾಂಕ್‌ಗಳ ಜಾಲವನ್ನು ವಿಸ್ತರಿಸುವ ಕುರಿತಾದ ಮಹತ್ವದ ಘೋಷಣೆಗಳನ್ನು ಸರಕಾರ ಮಾಡಿದೆ.

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆಗೆ ಭರ್ಜರಿ ಅನುದಾನ

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆಗೆ ಭರ್ಜರಿ ಅನುದಾನ

ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೂ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಟ್ಟು 62,345 ಕೋಟಿ ರು.ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಯಶಸ್ವಿ ಯಾಗಿ ಧನಸಹಾಯ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 28,608 ಕೋಟಿ ರು.ಗಳನ್ನು ಮೀಸಲಿರಿಸಿದೆ.

ಮೋದಿ ಮಿತಿಮೀರಿ ಸಾಲ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಮೋದಿ ಮಿತಿಮೀರಿ ಸಾಲ ಮಾಡಿದ್ದಾರೆ: ಸಿಎಂ ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದಾಗ ಸಾಲ 5.54 ಲಕ್ಷ ಕೋಟಿ ರು. ಸಾಲ ಇತ್ತು. ಈಗ ಸಾಲ 8.14 ಲಕ್ಷ ಕೋಟಿ ರು. ಆಗುತ್ತದೆ. ಫಿಸ್ಕಲ್ ರೆಸ್ಪಾನ್ಸಿಬಲ್ ಆಕ್ಟ್ ಪ್ರಕಾರ ವಿತ್ತೀಯ ಕೊರತೆ ಜಿಡಿಪಿಯ ಶೇ. 3ರ ಒಳಗೆ ಇರಬೇಕು. ಸಾಲವು ಶೇ.25ರ ಒಳಗೆ ಇರಬೇಕು. ಕರ್ನಾಟಕದ ಜಿಡಿಪಿ ಮುಂದಿನ ವರ್ಷ 33 ಲಕ್ಷ ಕೋಟಿ ರು. ಆಗುತ್ತದೆ.

Havyaka Language Academy: ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ

ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ

ರಾಜ್ಯದ ಸಾಂಸ್ಕೃತಿಕ ಅಂಗವಾದ ಹವ್ಯಕ ಭಾಷೆ ಬೆಳವಣಿಗೆಗೆ ‘ಹವ್ಯಕ ಭಾಷಾ ಅಕಾಡೆಮಿ’ ಸ್ಥಾಪನೆ ಘೋಷಣೆ ಈ ಬಾರಿಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹೊರ ಹೊಮ್ಮಿರುವುದು ವಿಶೇಷ. ಹವಿಗನ್ನಡ, ಹವ್ಯಕ ಕನ್ನಡ, ಹೈವಗನ್ನಡ, ಹೈಗಭಾಷೆ ಎಂಬ ಹೆಸರುಗಳಿಂದ ಗುರುತಿಸಲ್ಪಡುವ ಹವ್ಯಕ ಭಾಷೆ, ಕನ್ನಡದ ಸಾಮಾಜಿಕ ಉಪಭಾಷೆ ಯಾಗಿದೆ.

ಅಭಿವೃದ್ಧಿ ಮತ್ತು ಆರ್ಥಿಕ ಕೊರತೆಗಳ ನಡುವೆ ಜಟಾಪಟಿ !

ಅಭಿವೃದ್ಧಿ ಮತ್ತು ಆರ್ಥಿಕ ಕೊರತೆಗಳ ನಡುವೆ ಜಟಾಪಟಿ !

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳಿಗೆ ಹಣವಿಲ್ಲದಂತಾಗಿದೆ. ಅಭಿವೃದ್ಧಿ ಬೇಕಾದರೆ ಗ್ಯಾರಂಟಿ ಯೋಜನೆಗಳನ್ನು ಕೈ ಬಿಡಬೇಕು ಎನ್ನುವ ಚರ್ಚೆ ಸರಕಾರ ಮತ್ತು ಕಾಂಗ್ರೆಸ್‌ನಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಅಂದರೆ ಈ ಚರ್ಚೆಗಳು ಈಗ ಅಭಿವೃದ್ಧಿ ಬೇಕಾ ಅಥವಾ ಗ್ಯಾರಂಟಿ ಬೇಕಾ ಎನ್ನುವ ಹಂತಕ್ಕೆ ಬಂದಿವೆ.

Karnataka Budget 2026: ಸಿದ್ಧರಾಮಯ್ಯ ಅವರ ದಾಖಲೆಯ 17ನೇ ಬಜೆಟ್ ಬಗ್ಗೆ ಜಿಲ್ಲೆಯ ಜನಾಂತರಂಗದ ನೋಟ

17ನೇ ಬಜೆಟ್ ಬಗ್ಗೆ ಜಿಲ್ಲೆಯ ಜನಾಂತರಂಗದ ನೋಟ

ಪ್ರಗತಿಶೀಲ ರಾಜ್ಯದ ಜನರ ತೆರಿಗೆ ಹಣಕ್ಕೆ ಪ್ರಮುಖ ಟ್ರಸ್ಟಿ ನಾನು ಎಂದು ಹೇಳಿಕೊಂಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿರುವ ಸರ್ವರ ಏಳಿಗೆಯನ್ನು ಬಯಸಿ ಮಂಡಿಸಿರುವ 17ನೇ ಅಯವ್ಯಯದ ಬಗ್ಗೆ ಜಿಲ್ಲೆಯ ಜನಾಂತ ರಂಗದ ನೋಟ ಹೀಗಿದೆ.

Karnataka Budget 2026: ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಈ ಬಜೆಟ್: ಛಲವಾದಿ ನಾರಾಯಣಸ್ವಾಮಿ

ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಈ ಬಜೆಟ್: ಛಲವಾದಿ

Chalavadi Narayanaswamy: ವಿತ್ತೀಯ ಶಿಸ್ತಿನ ನಿಯಮವನ್ನು ಪಾಲಿಸುತ್ತಿದ್ದೇವೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಕಿ ಸಂಖ್ಯೆ ಬದಲಿಸುವ ಜಾದೂಗಾರನಂತೆ ಈ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ಆರ್ಥಿಕ ಶಿಸ್ತಿನ ಪಾವಿತ್ರ್ಯ ಹೊಂದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ.

ಬಜೆಟ್‌ನಿಂದ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಡಾ.ಸಿ.ಎನ್. ಅಶ್ವತ್ಥ ನಾರಾಯಣ್

ಬಜೆಟ್‌ನಿಂದ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಅಶ್ವತ್ಥ ನಾರಾಯಣ್ ಟೀಕೆ

Karnataka Budget 2026: ಗುಣಮಟ್ಟದ ಶಿಕ್ಷಣ, ಗುಣಮಟ್ಟದ ಆರೋಗ್ಯ ಸೇವೆಗಳಾಗಲೀ, ರೈತರ ಪರವಾಗಲೀ, ದೀನ ದಲಿತರ ಪರವಾಗಿ ಆಗಲೀ ಇಲ್ಲ. ಒಟ್ಟಿನಲ್ಲಿ ಯಾವುದೇ ಕ್ಷೇತ್ರಕ್ಕೂ ಅನುಕೂಲವಾಗಿಲ್ಲ. ಇದು ನಿರಾಸೆ ಮೂಡಿಸಿದೆ ಎಂದು ಶಾಸಕ ಮತ್ತು ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥ ನಾರಾಯಣ್ ಟೀಕಿಸಿದ್ದಾರೆ.

ರಾಜ್ಯ ಬಜೆಟ್: ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ, ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆಯ ಸಮರ್ಥ ಬಳಕೆ

ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ

Karnataka Budget 2026: ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಮತ್ತು ಸಮರ್ಥ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು (ಎಐ) ರಾಜ್ಯದ ದೃಷ್ಟಿಕೋನದ ಕೇಂದ್ರದಲ್ಲಿ ಇರಿಸಿದೆ. ಈ ಕುರಿತ ವಿವರ ಇಲ್ಲಿದೆ.

Karnataka Budget 2026: ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ: ಅಡಿಗಾಸ್‌ ಯಾತ್ರಾ ಸ್ವಾಗತ

ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ: ಸ್ವಾಗತಿಸಿದ ಅಡಿಗಾಸ್‌ ಯಾತ್ರಾ

Karnataka Budget 2026: ರಾಜ್ಯ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿರುವುದು ಸ್ವಾಗತಾರ್ಹ. ಸರ್ಕ್ಯೂಟ್‌ ಅಭಿವೃದ್ಧಿ, ರೋಪ್‌ ವೇ, ಹೆಲಿ ಟ್ಯಾಕ್ಸಿ, ಸೀಪ್ಲೇನ್‌ ಮೊದಲಾದ ಯೋಜನೆಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ ಎಂದು ಅಡಿಗಾಸ್‌ ಯಾತ್ರಾದ ಸ್ಥಾಪಕ ಕೆ. ನಾಗರಾಜ್‌ ಅಡಿಗ ಹೇಳಿದ್ದಾರೆ.

Dr. Sonali Sarnobat on Budget: ಕರ್ನಾಟಕ ರಾಜ್ಯ ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲ: ಡಾ.ಸೋನಾಲಿ ಸರ್ನೋಬತ

ಬಜೆಟ್ ಜನಸಾಮಾನ್ಯರ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲ

ಕೇವಲ ಭರವಸೆಗಳು ಮತ್ತು ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಆರ್ಥಿಕತೆಯ ಮೇಲೆ ಹೆಚ್ಚಿನ ಸಾಲದ ಹೊರೆ ಹಾಕುವ ಪ್ರಯತ್ನ ಈ ಬಜೆಟ್‌ನಲ್ಲಿ ಕಾಣಿಸುತ್ತದೆ. ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಕೈಗಾರಿಕಾ ಹೂಡಿಕೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಗೆ ಬೇಕಾದ ದೂರದೃಷ್ಟಿಯ ಯೋಜನೆಗಳು ಕಾಣಿಸದೇ ಇರುವುದೇ ವಿಷಾದಕರ ಸಂಗತಿ.

Karnataka Budget 2026: ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೇ ಬಜೆಟ್‌ ಮಂಡಿಸಲು ಕಾರಣವೇನು?; ಶಾಸಕ ಸುರೇಶ್‌ ಕುಮಾರ್‌ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10.15ಕ್ಕೇ ಬಜೆಟ್‌ ಮಂಡಿಸಲು ಕಾರಣವೇನು?

ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಿರುವ ಸಮಯದ ಬಗ್ಗೆ ಶಾಸಕ ಸುರೇಶ್‌ ಕುಮಾರ್‌ ಮಾಡಿರುವ ಪೋಸ್ಟ್‌ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಾಮಾನ್ಯವಾಗಿ ಬಜೆಟ್ ಮಂಡನೆ 10 ಗಂಟೆ ಅಥವಾ 11 ಗಂಟೆಗೆ ಮಾಡಲಾಗುತ್ತದೆ. ಆದರೆ ಈ ಬಾರಿ 10.15ಕ್ಕೆ ಬಜೆಟ್ ಮಂಡನೆಯಾಗಿದೆ ಯಾಕೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಮೆಟ್ರೋ ವಿಸ್ತರಣೆ, ಟ್ರಾಫಿಕ್‌ ಸಮಸ್ಯೆಗೆ ಬಜೆಟ್‌ನಲ್ಲಿ ಮಾಸ್ಟರ್‌ ಪ್ಲಾನ್‌

ಮೆಟ್ರೋ ವಿಸ್ತರಣೆ, ಟ್ರಾಫಿಕ್‌ ಸಮಸ್ಯೆಗೆ ಬಜೆಟ್‌ನಲ್ಲಿ ಮಾಸ್ಟರ್‌ ಪ್ಲಾನ್‌

Karnataka Budget 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದಾಖಲೆಯ 17ನೇ ಬಜೆಟ್‌ ಮಂಡಿಸಿದ್ದು, ಬಜೆಟ್‌ನಲ್ಲಿ ಬೆಂಗಳೂರು ನಗರಕ್ಕೆ ಬಂಪರ್‌ ಕೊಡುಗೆಯನ್ನೇ ನೀಡಿದ್ದಾರೆ. ಮೆಟ್ರೋ ವಿಸ್ತರಣೆ, 2027ರ ಅಂತ್ಯದೊಳಗೆ ಬೆಂಗಳೂರಿಗೆ ಹೊಸ ಪರಿಷ್ಕೃತ ಮಾಸ್ಟರ್‌ ಪ್ಲಾನ್‌ ಸಮಗ್ರ ಮೊಬಿಲಿಟಿ ಯೋಜನೆಯನ್ನು ಘೋಷಿಸಲಾಗಿದೆ.

Karnataka Budget 2026: ವಿತ್ತೀಯ ಶಿಸ್ತು ಉಲ್ಲಂಘಿಸಿಲ್ಲ, ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದ ಸಿಎಂ

ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ

CM Siddaramaiah: ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ. ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ರಾಜ್ಯಕ್ಕೆ ಆರ್ಥಿಕ ಹೊರೆ ಹೆಚ್ಚಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Karnataka Budget 2026: ಅಮರ್ಥ್ಯಸೇನ್‌ ಅಶಯ ಬಿಂಬಿಸಿದ ರಾಜ್ಯ ಬಜೆಟ್‌; 11 ಜಿ ಮಾದರಿ ಎಂದರೇನು?

ರಾಜ್ಯ ಸರ್ಕಾರ ಮುಂದಿಟ್ಟ 11 ಜಿ ಮಾದರಿ ಎಂದರೇನು?

Karnataka Budget: ಸಿದ್ದರಾಮಯ್ಯದಾಖಲೆತ 17ನೇ ಬಜೆಟ್‌ ಮಂಡಿಸಿದ್ದಾರೆ. ಜನಕಲ್ಯಾಣ ಸಹಿತ ಅಭಿವೃದ್ಧಿಪರ ಮುಂಗಡ ಪತ್ರ ಇದಾಗಿದೆ ಎಂದು ಸರ್ಕಾರ ಹೇಳಿದೆ. ಜತೆಗೆ ಬಜೆಟ್‌ನಲ್ಲಿ ಅವರು ಕರ್ನಾಟಕದ್ದೇ 11 ಜಿ ಮಾದರಿ ಪರಿಚಯಿಸಿದ್ದಾರೆ. ಅವು ಯಾವುವು ಎನ್ನುವ ವಿವರ ಇಲ್ಲಿದೆ.

Karnataka Budget: ರಾಜ್ಯಕ್ಕೆ 2026-27ರಲ್ಲಿ ಅಂದಾಜು ಸಾಲ 1.32 ಲಕ್ಷ ಕೋಟಿ ರುಪಾಯಿ; ಎಲ್ಲಿಂದ?

ರಾಜ್ಯಕ್ಕೆ 2026-27ರಲ್ಲಿ ಅಂದಾಜು ಸಾಲ 1.32 ಲಕ್ಷ ಕೋಟಿ ರುಪಾಯಿ

Karnataka Budget 2026-27: ರಾಜ್ಯ ಸರಕಾರ 2026-27ರಲ್ಲಿ ಒಟ್ಟು 1,32,190 ಕೋಟಿ ರುಪಾಯಿ ಸಾಲ ಪಡೆಯಲು ಉದ್ದೇಶಿಸಿದೆ. ಹಾಗಾದರೆ ಈ ಸಾಲ ಎಲ್ಲಿಂದ ಸಿಗಲಿದೆ ಮತ್ತು ಬರುವ ಆದಾಯದಲ್ಲಿ ಸಾಲದ ಮರು ಪಾವತಿಗೆ ಎಷ್ಟು ಖರ್ಚಾಗಲಿದೆ? ಇಲ್ಲಿದೆ ವಿವರ.

Karnataka Budget 2026: ಕರ್ನಾಟಕದ ಪಾಲಿಗೆ ಮತ್ತೊಂದು ಪೊಳ್ಳು ಭರವಸೆಯ ಬಜೆಟ್: ವಿಜಯೇಂದ್ರ ಕಿಡಿ

ಕರ್ನಾಟಕದ ಪಾಲಿಗೆ ಮತ್ತೊಂದು ಪೊಳ್ಳು ಭರವಸೆಯ ಬಜೆಟ್: ಬಿವೈವಿ

BY Vijayendra: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 17ನೇ ಬಜೆಟ್ ಕರ್ನಾಟಕವನ್ನು ಅಭಿವೃದ್ಧಿಯ ಹಾದಿಯಿಂದ ಮತ್ತಷ್ಟು ದೂರಕ್ಕೆ ತಳ್ಳಿ, 'ಸಾಲದ ಸುಳಿ' ಗೆ ಸಿಲುಕಿಸುತ್ತಿರುವ ಕರಾಳ ಅಧ್ಯಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

Karnataka Budget 2026: ನಗರಾಭಿವೃದ್ಧಿ ಇಲಾಖೆಗೆ ಭರಪೂರ ಅನುದಾನ; ಈ ಬಜೆಟ್‌ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು?

ನಗರಾಭಿವೃದ್ಧಿ ಇಲಾಖೆಗೆ ಭರಪೂರ ಅನುದಾನ; ಬೆಂಗಳೂರಿಗೆ ಸಿಕ್ಕಿದ್ದೇನು?

ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಭರ್ಜರಿ ಅನುದಾನ ನೀಡಲಾಗಿದೆ. ನಮ್ಮ ಸಿಲಿಕಾನ್‌ ಸಿಟಿ ಬೆಂಗಳೂರಿನ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಲು 2026-27ರ ಬಜೆಟ್‌ನಲ್ಲಿ ನಮ್ಮ ಸರ್ಕಾರವು ಮಹತ್ವದ ಯೋಜನೆಗಳನ್ನು ಹಮ್ಮಿಕೊಂಡಿದೆ. ರಸ್ತೆಗಳ ಸುಧಾರಣೆ, ಮೆಟ್ರೋ ವಿಸ್ತರಣೆ ಮತ್ತು ನಾಗರಿಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Karnataka Budget 2026: ಎರಡು ಹಜ್‌ ಭವನ ಸೇರಿದಂತೆ ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಧಮಾಕಾ

ಎರಡು ಹಜ್‌ ಭವನ ಸೇರಿದಂತೆ ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಧಮಾಕಾ

ವಕ್ಫ್ ಸಂಸ್ಥೆಗಳಲ್ಲಿನ 31 ಮಹಿಳಾ ಪಿಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಮತ್ತು ಸವಣೂರಿನಲ್ಲಿ ಹೊಸ ಮಹಿಳಾ ಪಿಯು ಕಾಲೇಜನ್ನು ಪ್ರಾರಂಭಿಸಲಾಗುವುದು. ವಾಣಿಜ್ಯ ಉದ್ದೇಶಕ್ಕೆ ಬೇಡಿಕೆ ಇರುವ ಪ್ರದೇಶಗಳಲ್ಲಿ ವಕ್ಫ್ ಆಸ್ತಿಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

Karnataka Budget 2026: ಬನ್ನೇರುಘಟ್ಟದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ

ಬನ್ನೇರುಘಟ್ಟದಲ್ಲಿ ಐದು ಕೋಟಿ ರೂ. ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ

ಹೆಸರಘಟ್ಟ ಹುಲ್ಲುಗಾವಲಿನ ಒಟ್ಟು 5,676 ಎಕರೆ ವಿಸ್ತೀರ್ಣದ ಪ್ರದೇಶವನ್ನು ʻಗ್ರೇಟರ್ ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲುʼ ಎಂದು ಘೋಷಿಸಿದ್ದು, ಈ ಪ್ರದೇಶದ ಆವಾಸಸ್ಥಾನ ಸಂರಕ್ಷಣೆ ಮತ್ತು ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು. ಬೆಂಗಳೂರು ಹೊರವಲಯದ ವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಚಿರತೆಗಳನ್ನು ಸೆರೆಹಿಡಿಯಲ್ಪಟ್ಟ ಸಂದರ್ಭಗಳಲ್ಲಿ ಅವುಗಳ ಪುನರ್ವಸತಿಗಾಗಿ ಬನ್ನೇರುಘಟ್ಟದಲ್ಲಿ ಐದು ಕೋಟಿ ರೂ.ಗಳ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರವನ್ನು ಸ್ಥಾಪಿಸಲಾಗುವುದು.

Karnataka Budget 2026: ರಾಷ್ಟ್ರಕವಿ ಜಿಎಸ್‌ ಶಿವರುದ್ರಪ್ಪ ಜನ್ಮಶತಮಾನೋತ್ಸವಕ್ಕೆ 2 ಕೋಟಿ ರೂ.

ರಾಷ್ಟ್ರಕವಿ ಜಿಎಸ್‌ ಶಿವರುದ್ರಪ್ಪ ಜನ್ಮಶತಮಾನೋತ್ಸವಕ್ಕೆ 2 ಕೋಟಿ ರೂ.

ರಾಜ್ಯದ ವಿವಿಧ ಕಲಾ ಪ್ರಕಾರಗಳನ್ನು ಒಂದೆಡೆ ಸೇರಿಸಿ ʻಬೆಂಗಳೂರು ಹಬ್ಬʼ ಸಂಯೋಜಕರ ಸಹಯೋಗದೊಂದಿಗೆ ಪ್ರತಿ ವರ್ಷ ರಂಗಭೂಮಿ, ಲಲಿತಕಲೆ, ಚಿತ್ರಕಲೆ, ಶಿಲ್ಪಕಲೆ ಇತ್ಯಾದಿ ಕಲಾಪ್ರಕಾರಗಳ ಕಾರ್ಯಕ್ರಮಗಳನ್ನು ಆಯೋಜಿಸಲು ಐದು ಕೋಟಿ ರೂ.ಗಳನ್ನು ನೀಡಲು ಹಾಗೂ ಎಲ್ಲಾ ಜಾನಪದ ಹಾಗೂ ಬುಡಕಟ್ಟು ಕಲಾವಿದರು, ವಿದ್ವಾಂಸರು ಹಾಗೂ ಜಾನಪದ ವಾದ್ಯಗಾರರನ್ನು ಒಳಗೊಂಡ ಸಮಾವೇಶಗಳನ್ನು ʻಜಾನಪದ ಸಂಗಮ’ ಶೀರ್ಷಿಕೆಯಲ್ಲಿ ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲು ಸರಕಾರ ಮುಂದಾಗಿದೆ.

Loading...