ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Heart Attack: ಕೋವಿಡ್‌ ಬಂದು ಹೋದವರಲ್ಲಿ ಹೃದಯಾಘಾತ ಸಾಧ್ಯತೆ: ತಜ್ಞರ ಸಮಿತಿ ವರದಿಯಲ್ಲಿದೆ ಆಘಾತಕರ ಅಂಶ!

ಕೋವಿಡ್‌ ಬಂದು ಹೋದವರಲ್ಲಿ ಹೃದಯಾಘಾತ ಸಾಧ್ಯತೆ: ತಜ್ಞರ ಸಮಿತಿ ವರದಿ

Heart Attack: ಸಮಿತಿ ಅಧ್ಯಯನ ನಡೆಸಿ ಸಿದ್ಧಪಡಿಸಿರುವ ವರದಿಯಲ್ಲಿ ಹಲವು ಮಹತ್ವದ ವಿಚಾರಗಳು ಅಡಕವಾಗಿವೆ. ಕೋವಿಡ್‌ ಸೋಂಕಿನಿಂದ ಗುಣಮುಖರಾದವರಿಗೆ ಕೊಂಚ ಹೃದಯ ಸಮಸ್ಯೆ ಕಾಡುತ್ತಿದೆ. ಹೃದಯಾಘಾತಕ್ಕೆ ಕೊರೋನಾ ಲಸಿಕೆ ಕಾರಣವಲ್ಲ. ಆದರೆ, ಕೊರೋನಾ ವೈರಸ್ ಕೊಂಚ ಪ್ರಮಾಣದಲ್ಲಿ ಸಮಸ್ಯೆ ಉಂಟು ಮಾಡುತ್ತಿದೆ ಎಂದು ವರದಿಯಲ್ಲಿದೆ.

ಎತ್ತಿನಹೊಳೆ ನೀರು ಲಭ್ಯತೆ ವಿಚಾರ : ಸರಕಾರ ರಾಜ್ಯದ ಜನತೆಯ ಮುಂದೆ ಬೆತ್ತಲಾಗಿದೆ : ಆರ್.ಆಂಜನೇಯರೆಡ್ಡಿ

ಸರಕಾರ ರಾಜ್ಯದ ಜನತೆಯ ಮುಂದೆ ಬೆತ್ತಲಾಗಿದೆ: ಆರ್.ಆಂಜನೇಯರೆಡ್ಡಿ

ನೀವು ಪಿಕ್ನಿಕ್ ಗೆ ಬಂದಿದ್ದಿರಾ. ತ್ಯಾಜ್ಯ ನೀರನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ನಿಯಮ ಗಳಿವೆ. ೩ನೇ ಹಂತದ ಶುದ್ಧೀಕರಣ ಬೇಕಿದೆ ಜಲವಿಜ್ಞಾನಿಗಳೇ ಹೇಳುತ್ತಾರೆ.ಇದನ್ನೆಲ್ಲಾ ಪರಿಶೀಲಿಸದೆ ಮೂರನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ ಎಂದು ಉಸ್ತುವಾರಿ ಸಚಿವರೇ ಹೇಳುವ ಮೂಲಕ ನಮ್ಮ ಜಿಲ್ಲೆಗಳ ಪಾಲಿಗೆ ಸರ್ಕಾರ ಸತ್ತಿದೆ ಎಂಬುದನ್ನು ತೋರಿಸಿದ್ದಾರೆ.

Guarantee Scheme: ಗ್ಯಾರಂಟಿಗಳನ್ನು ಶೇ.100ರಷ್ಟು ಅರ್ಹರಿಗೆ ತಲುಪಿಸಲು ಬದ್ದ: ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್

ಗ್ಯಾರಂಟಿಗಳನ್ನು ಶೇ. ೧೦೦ ರಷ್ಟು ಅರ್ಹರಿಗೆ ತಲುಪಿಸಲು ಬದ್ದ

ಗ್ಯಾರಂಟಿ ಯೋಜನೆಗಳನ್ನು ಶೇ. ೧೦೦ ರಷ್ಟು ಪ್ರಮಾಣದಲ್ಲಿ ಅರ್ಹರಿಗೆ ತಲುಪಿಸಲು ಪ್ರಾಧಿಕಾರ ಕಂಕಣ ಬದ್ದವಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ವ್ಯಾಪಕ ಪ್ರಚಾರ ಮಾಡಲು ಈಗಾಗಲೇ ಸಂಚಾರ ವಾಹನದ ಮೂಲಕ ಯೋಜನೆಗಳ ಕುರಿತು ಜಿಲ್ಲಾದ್ಯಂತ ಜಾಗೃತಿ ಮೂಡಿಸಲಾಗಿದೆ.

DK Shivakumar: ಬೆಂಗಳೂರು ಟನಲ್ ರಸ್ತೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿ.ಕೆ.ಶಿವಕುಮಾರ್

ಬೆಂಗಳೂರು ಟನಲ್ ರಸ್ತೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಕೆಶಿ

DK Shivakumar: ಬೆಂಗಳೂರಿನಲ್ಲಿ ಮೊದಲ ಹಂತದ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಂದಿನ‌ 4-5 ದಿನಗಳಲ್ಲಿ ಅಂತಿಮಗೊಳ್ಳಲಿದೆ. ಹೆಬ್ಬಾಳ ಜಂಕ್ಷನ್‌ನಿಂದ ಸಿಲ್ಕ್ ಬೋರ್ಡ್‌ವರೆಗೆ ಸುಮಾರು 40 ಕಿ.ಮೀ ಮತ್ತು 23 ಕಿ.ಮೀ ಉದ್ದದ ಮೈಸೂರು ರಸ್ತೆಯಿಂದ ಕೆ.ಆರ್.ಪುರದವರೆಗೆ ಟ್ವಿನ್ ಟನಲ್ ರಸ್ತೆ ನಿರ್ಮಾಣಕ್ಕೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ತಾಪಮಾನ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ : ನ್ಯಾ.ನೇರಳೆ ವೀರಭದ್ರಯ್ಯ ಭವಾನಿ ಕಳವಳ

ತಾಪಮಾನ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ

ವಾತಾವರಣದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ಆತಂಕಕಾರಿ ವಿಚಾರ. ನಿಷೇಧಿತ ಪ್ಲಾಸ್ಟಿಕ್ ಬಳಕೆ, ಜಲಮೂಲಗಳ ಕಲುಷಿತಗೊಳಿಸುವುದು, ಅರಣ್ಯ ನಾಶದಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಹಸಿರನ್ನು ಉಳಿಸಿ, ಬೆಳೆಸುವುದು, ಮಾಲಿನ್ಯವನ್ನು ತಡೆಗಟ್ಟಿ ಪರಿಸರ ಸಮತೋಲನ ಕಾಪಾಡುವುದು ಭೂಮಿ ಮೇಲಿರುವ ಪ್ರತಿ ಜೀವಿಯ ಸುಸ್ಥಿರ ಜೀವನಕ್ಕೆ ನೆರವಾಗಲಿದೆ

Ranya Rao: ಚಿನ್ನ ಸ್ಮಗ್ಲಿಂಗ್‌ ಕೇಸ್:‌ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ನಟಿ ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Actress Ranya Rao:‌ ನಟಿ ರನ್ಯಾ ರಾವ್‌ಗೆ ಸೇರಿದ ಬೆಂಗಳೂರಿನ ವಿಕ್ಟೋರಿಯಾ ಲೇಔಟ್‌ನಲ್ಲಿರುವ ಮನೆ, ಅರ್ಕಾವತಿ ಲೇಔಟ್‌ನಲ್ಲಿರುವ ನಿವೇಶನ, ತುಮಕೂರಿನಲ್ಲಿರುವ ಕೈಗಾರಿಕಾ ನಿವೇಶನ, ಆನೇಕಲ್ ತಾಲೂಕಿನಲ್ಲಿರುವ ಕೃಷಿ ಜಮೀನನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿಕೊಂಡಿದೆ.

ಬೆಳೆ ವಿಮೆ ಮಾಡಿಸಲು ಅವಕಾಶ

ಬೆಳೆ ವಿಮೆ ಮಾಡಿಸಲು ಅವಕಾಶ

ದಾಳಿಂಬೆ ಬೆಳಗೆ ವಿಮಾ ಮೊತ್ತವಾಗಿ ೧,೨೭,೦೦೦ ರೂ. ಗಳನ್ನು ನಿಗದಿಪಡಿಸಲಾಗಿದೆ. ಪ್ರತಿ ಹೆಕ್ಟೆರ್ ಗೆ ರೈತರು ಪಾವತಿಸಬೇಕಾದ ಮೊತ್ತ ೬,೩೫೦ ರೂ.ಗಳು ಆಗಿದೆ. ಅಂದರೆ ಪ್ರತಿ ಎಕರೆಗೆ ರೈತರು ಪಾವತಿಸ ಬೇಕಾದ ಮೊತ್ತ-೨,೫೪೦ ರೂ. ಗಳನ್ನು ಪಾವತಿಸಬೇಕಾಗಿದೆ. ಬೆಳೆ ವಿಮೆ ಪ್ರಕ್ರಿಯೆ ನಿರ್ವಹಣೆಗೆ ಜಿಲ್ಲೆ ಯಲ್ಲಿ ಟಾಟಾ ಎಐಜಿ ಜನರಲ್ ಇನ್ಸುರೆನ್ಸ್ ಕಂಪನಿ ಆಯ್ಕೆಯಾಗಿದೆ. ಬೆಳೆ ವಿಮೆಯನ್ನು ಜುಲೈ ೩೧ ರ ವರೆಗೆ ಪಾವತಿಸಬಹುದು.

Pralhad Joshi: ಪ್ರಧಾನಿ ಮೋದಿ ವಿರೋಧಿಸುವ ಭರದಲ್ಲಿ ದೇಶದ ಸಾಧನೆಗೆ ಅಪಮಾನ; ಸಿಎಂ ಕ್ಷಮೆಯಾಚನೆಗೆ ಜೋಶಿ ಆಗ್ರಹ

ಸಿಎಂ ಕ್ಷಮೆಯಾಚನೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi: ಕೋವಿಡ್‌ ವ್ಯಾಕ್ಸಿನ್‌ಗೂ, ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಬೇಕು ಮತ್ತು ಈ ಕೂಡಲೇ ವಿಜ್ಞಾನಿಗಳ, ದೇಶದ ಜನರ ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

Chikkaballapur News: 14ನೇ ಸಚಿವ ಸಂಪುಟದ ತೀರ್ಮಾನಗಳಿಗೆ ಅಂತಿಮ ಗಡುವು ನೀಡಿ : ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ

14ನೇ ಸಚಿವ ಸಂಪುಟದ ತೀರ್ಮಾನಗಳಿಗೆ ಅಂತಿಮ ಗಡುವು ನೀಡಿ

ಶಾಶ್ವತ ನೀರಾವರಿಗೆ ಸಂಬಂಧಪಟ್ಟಂತೆ ನಂದಿಬೆಟ್ಟದ ಸಚಿವ ಸಂಪುಟದ ಸಭೆಯ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿದ್ದವು. ಆದರೆ ಆನಿರೀಕ್ಷೆಗಳೆಲ್ಲಾ ಹುಸಿಯಾಗಿವೆ. 2025ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಆಗಿರುವ ವಿಚಾರಗಳಿಗೆ ಮಾತ್ರ ಆಡಳಿತಾತ್ಮಕ ಅನುಮೋದನೆಯನ್ನು ಈ ಸಭೆಯಲ್ಲಿ ಪಡೆಯಲಾಗಿದೆ.ಇದು ಜಿಲ್ಲೆಗೆ ಮಾಡಿರುವ ದ್ರೋಹ ಎಂದು ಬೇಸರಿಸಿದರು.

Karnataka Rains: ಕದ್ರಾ-ಕೊಡಸಳ್ಳಿ ಮಾರ್ಗದಲ್ಲಿ ಗುಡ್ಡ ಕುಸಿತ; ರಸ್ತೆ ಸಂಚಾರ ಸ್ಥಗಿತ

ಕದ್ರಾ-ಕೊಡಸಳ್ಳಿ ಮಾರ್ಗದಲ್ಲಿ ಗುಡ್ಡ ಕುಸಿತ; ರಸ್ತೆ ಸಂಚಾರ ಸ್ಥಗಿತ

Karnataka Rains: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕಳೆದ ಗುರುವಾರ ರಾತ್ರಿಯಿಂದ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಕದ್ರಾದಿಂದ ಕೊಡಸಳ್ಳಿಗೆ ಸಾಗುವ ಮಾರ್ಗ ಮಧ್ಯದಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದೆ. ಈ ಕುರಿತ ವಿವರ ಇಲ್ಲಿದೆ.

Body Found: 10 ದಿನ ಹಿಂದೆ ನಾಪತ್ತೆಯಾಗಿದ್ದ ಫಾರೆಸ್ಟ್‌ ಗಾರ್ಡ್‌ ಶವ ಬೆತ್ತಲೆಯಾಗಿ ಪತ್ತೆ

10 ದಿನ ಹಿಂದೆ ನಾಪತ್ತೆಯಾದ ಫಾರೆಸ್ಟ್‌ ಗಾರ್ಡ್‌ ಶವ ಬೆತ್ತಲೆಯಾಗಿ ಪತ್ತೆ

Body Found: ನೀಲಗಿರಿ ಪ್ಲಾಂಟೇಶನಿನಲ್ಲಿ ಜೂನ್ 24ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಶರತ್‌ಗಾಗಿ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ, ಪೊಲೀಸರು ನೀಲಗಿರಿ ಪ್ಲಾಂಟೇಶನ್, ಅರಣ್ಯದಲ್ಲಿ ಹುಡುಕಾಟ ನಡೆಸಿದ್ದರು. ಹುಡುಕಾಟದ ವೇಳೆ ಶರತ್ ಬೈಕ್ ಒಂದು ಕಡೆ ಸಿಕ್ಕಿದ್ದು, ಬಟ್ಟೆ ಹಾಗೂ ಪರ್ಸ್ ಒಂದೊಂದು ದಿಕ್ಕಿನಲ್ಲಿ ಪತ್ತೆಯಾಗಿತ್ತು.

Pralhad Joshi: ಆರೆಸ್ಸೆಸ್‌ ಬ್ಯಾನ್‌, ಕಾಂಗ್ರೆಸ್‌ಗೆ ಅಧಿಕಾರ ಎಲ್ಲಾ ಹಗಲುಗನಸು ಎಂದ ಪ್ರಲ್ಹಾದ್‌ ಜೋಶಿ

ಆರೆಸ್ಸೆಸ್‌ ಬ್ಯಾನ್‌, ಕಾಂಗ್ರೆಸ್‌ಗೆ ಅಧಿಕಾರ ಎಲ್ಲಾ ಹಗಲುಗನಸು ಎಂದ ಜೋಶಿ

Pralhad Joshi: ದೇಶದಲ್ಲಿ ಇನ್ನು ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ದೂರದ ಮಾತು. ʼನಾವು ಅಧಿಕಾರಕ್ಕೆ ಬಂದರೆ ಬ್ಯಾನ್‌ʼ ಎಂದಿದ್ದಾರೆ. ಪ್ರಿಯಾಂಕ್‌ ಖರ್ಗೆ ಹೀಗೇ ಹಗಲುಗನಸು ಕಾಣುತ್ತಲೇ ಇರಲಿ. ಕಾಂಗ್ರೆಸ್‌ ಅತಿ ದೊಡ್ಡ ವಿರೋಧ ಪಕ್ಷವಾಗಿದ್ದೇ ನಿಮ್ಮ ಪುಣ್ಯ. ಭವಿಷ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿರುಗೇಟು ನೀಡಿದ್ದಾರೆ.

Laxmi Hebbalkar:  ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ, ಪರಿಶೀಲನೆ

ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ಹೆಬ್ಬಾಳ್ಕರ್ ದಿಢೀರ್ ಭೇಟಿ

Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಶುಕ್ರವಾರ ಬೀದರ್‌ ಜಿಲ್ಲೆಯ ಚಿಟ್ಟಾವಾಡಿಯಲ್ಲಿರುವ ಅಂಗನವಾಡಿ ಕೇಂದ್ರ ಹಾಗೂ ಮೈಲೂರದಲ್ಲಿರುವ ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

CM Siddaramaih: ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಹಿಂಬಾಕಿ ಪಾವತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಸಾರಿಗೆ ಸಿಬ್ಬಂದಿ ವೇತನ ಹಿಂಬಾಕಿ ಪಾವತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

CM Siddaramaiah: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಸಿಎಂರನ್ನು ಭೇಟಿಯಾಗಿದ್ದರು. ದಿನಾಂಕ 01.01.2024ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಬೇಕು. ದಿನಾಂಕ 01.01.2024ರಿಂದ ಇಂದಿನವರೆಗಿನ ಹಿಂಬಾಕಿಯನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

Praveen Nettaru murder case: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಬಂಧನ

Praveen Nettaru murder case: ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದ. ಹೀಗಾಗಿ, ಎನ್​ಐಎ ಅಧಿಕಾರಿಗಳು ಅಬ್ದುಲ್ ರಹಿಮಾನ್ ಸೇರಿದಂತೆ ಆರು ಮಂದಿಯ ಸುಳಿವು ಕೊಟ್ಟರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದರು.

Tigers Death: ಹುಲಿಗಳ ಸಾವು, 4 ಅಧಿಕಾರಿಗಳ ಅಮಾನತಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು

ಹುಲಿಗಳ ಸಾವು, 4 ಅಧಿಕಾರಿಗಳ ಅಮಾನತಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಶಿಫಾರಸು

Tigers Death: ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿದ್ದರೂ, ಜೂನ್ ತಿಂಗಳವರೆಗೆ ವೇತನ ಪಾವತಿಸದಿರುವುದು ಡಿಸಿಎಫ್ ಚಕ್ರಪಾಣಿ ಅವರ ಮೂಲಭೂತ ಕರ್ತವ್ಯ ಲೋಪವಾಗಿದ್ದು, ಇದು ಗಸ್ತು ಕಾರ್ಯಕ್ಕೆ ಹಿನ್ನಡೆ ಉಂಟು ಮಾಡಿದೆ. ಈ ಸಂಬಂಧ ಡಿಸಿಎಫ್ ಚಕ್ರಪಾಣಿ ಅಮಾನತಿಗೆ ಶಿಫಾರಸು ಮಾಡಿ, ಇಲಾಖಾ ವಿಚಾರಣೆ ಮಾಡಲು ಶಿಫಾರಸು ಮಾಡಿದ್ದಾರೆ.

N Ravikumar: ಸಿಎಸ್‌ಗೆ ಅವಹೇಳನ: ಎಂಎಲ್‌ಸಿ ಎನ್ ರವಿಕುಮಾರ್‌ಗೆ ಹೈಕೋರ್ಟ್ ರಿಲೀಫ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ

ಸಿಎಸ್‌ಗೆ ಅವಹೇಳನ: ಎಂಎಲ್‌ಸಿ ಎನ್ ರವಿಕುಮಾರ್‌ಗೆ ಹೈಕೋರ್ಟ್ ರಿಲೀಫ್

N Ravikumar: ಸಿಎಸ್ ಶಾಲಿನಿ ರಜನೀಶ್ ವಿರುದ್ಧದ ಅವಹೇಳನಕಾರಿ ಮಾತಿನ ಪ್ರಕರಣ ಸಂಬಂಧ ಹೈಕೋರ್ಟ್‌ಗೆ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಜುಲೈ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ.

DK Shivakumar: ಚಾಮುಂಡಿ ಬೆಟ್ಟಕ್ಕೆ ಭೇಟಿ; ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ ಎಂದ ಡಿಕೆಶಿ

ನನಗೆ ಏನು ಬೇಕೋ ಅದನ್ನು ಪ್ರಾರ್ಥನೆ ಮಾಡಿದ್ದೇನೆ ಎಂದ ಡಿಕೆಶಿ

DK Shivakumar: ಯಾವುದೇ ಕೆಲಸ ಪ್ರಾರಂಭ ಮಾಡಬೇಕಾದರೂ ತಾಯಿಯ ಆಶೀರ್ವಾದ ಕೇಳುತ್ತೇನೆ. ಆದ ಕಾರಣ ಕುಟುಂಬ ಸಮೇತವಾಗಿ ಬಂದು ಈ ರಾಜ್ಯಕ್ಕೆ, ನಿಮಗೆ ಹಾಗೂ ನಮಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Laxmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ, ಪಾರದರ್ಶಕವಾಗಲು ಕ್ರಮ ಕೈಗೊಳ್ಳಿ: ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

ನೇಮಕಾತಿ ವೇಳೆ ಸಮಸ್ಯೆಗಳು ಕಂಡುಬಂದಲ್ಲಿ, ತಕ್ಷಣವೇ ಪರಿಹರಿಸಿ: ಹೆಬ್ಬಾಳ್ಕರ್

Laxmi Hebbalkar: ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕ್ರಮ ಕೈಗೊಳ್ಳಬೇಕು. ಗರಿಷ್ಠ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

Bengaluru Murder Case: ಕೆಲಸದಾಕೆ ಜತೆ ಅಕ್ರಮ ಸಂಬಂಧ; ಗಂಡನನ್ನು‌ ಕೊಂದು, ಬಾತ್‌ರೂಮ್‌ನಲ್ಲಿ ಬಿದ್ದು ಸಾವು ಎಂದು ಕತೆ ಕಟ್ಟಿದ ಪತ್ನಿ!

ಮನೆ ಕೆಲಸದಾಕೆ ಜತೆ ಅಕ್ರಮ ಸಂಬಂಧ; ಗಂಡನನ್ನು‌ ಕೊಲೆಗೈದ ಪತ್ನಿ!

Bengaluru Murder Case: ಮನೆಗೆಲಸದವಳ ಜತೆ ಗಂಡ ಹೆಚ್ಚು ಸಲುಗೆಯಿಂದ ಇದ್ದ ಹಿನ್ನೆಲೆ ಸಾಕಷ್ಟು ಬಾರಿ ಗಂಡ- ಹೆಂಡತಿ ನಡುವೆ ಕಲಹ ಉಂಟಾಗಿತ್ತು. ಎರಡು ದಿನದ ಹಿಂದೆ ರಾತ್ರಿ ಇದೇ ಕಾರಣಕ್ಕೆ ಗಲಾಟೆ ಶುರುವಾಗಿದೆ. ಈ ವೇಳೆ ಗಂಡನ ಮುಖಕ್ಕೆ ಪತ್ನಿ ಬಲವಾಗಿ ಹೊಡೆದು ಕೊಂದಿದ್ದಾಳೆ.

Karnataka Rains: ಆರೆಂಜ್‌ ಅಲರ್ಟ್; ನಾಳೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

ಆರೆಂಜ್‌ ಅಲರ್ಟ್; ನಾಳೆ ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

Karnataka Weather: ಜುಲೈ 5ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

‌DK Shivakumar: ಡಿಕೆ ಶಿವಕುಮಾರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಕೇಸ್‌ಗೆ ಹೈಕೋರ್ಟ್‌ ತಡೆ

ಡಿಕೆ ಶಿವಕುಮಾರ್ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಕೇಸ್‌ಗೆ ಹೈಕೋರ್ಟ್‌ ತಡೆ

ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು.

Kolar News: ಮಾಜಿ ಸ್ಪೀಕರ್ ರಮೇಶ್ ಕುಮಾರ್ ತೋಟದಲ್ಲಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

Kolar News: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ದುರಂತ ನಡೆದಿದೆ. ತೋಟದಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಗೌನಿಪಲ್ಲಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Wildlife Sanctuary: ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮದಲ್ಲಿ 300 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮದಲ್ಲಿ 300 ಎಕರೆ ಒತ್ತುವರಿ ತೆರವು

Bukkapatna Chinkara Wildlife Sanctuary: ತುಮಕೂರು ಜಿಲ್ಲೆಯ ತಿಪಟೂರು ಉಪ ವಿಭಾಗದ ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮ ವ್ಯಾಪ್ತಿಯ ಮುತ್ತುಗದಹಳ್ಳಿ ಮೀಸಲು ಅರಣ್ಯದಲ್ಲಿ 300 ಎಕರೆ ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.