ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Raichur News: ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಕಾಲುವೆಯಲ್ಲಿ ಮುಳುಗಿ ಇಬ್ಬರು ರೈತ ಮಹಿಳೆಯರು ಸಾವು

ಗದ್ದೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ. ಕೂಲಿ ಕೆಲಸ ಮುಗಿಸಿ ಕೈಕಾಲು ತೊಳೆದುಕೊಂಡು ಮನೆಗೆ ಹೋಗಲು ಕಾಲುವೆ ಬಳಿ ಬಂದಿದ್ದರು. ಲಿಂಗಸುಗೂರು ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮಹಿಳೆಯರ ಶವ ಹೊರತೆಗೆದಿದ್ದಾರೆ. ಸದ್ಯ ಇಬ್ಬರು ಮಹಿಳೆಯರ ಮೃತದೇಹವನ್ನು ಲಿಂಗಸುಗೂರು ತಾಲೂಕಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

Vaikunta Ekadasi : ವೈಕುಂಠ ಏಕಾದಶಿಗೆ ಮನೆಯಲ್ಲೇ ಬಾಲಾಜಿಯ ದರ್ಶನ, ಯುವ ಉದ್ಯಮಿಯ ವಿಶಿಷ್ಟ ಸೇವೆ!

ವೈಕುಂಠ ಏಕಾದಶಿಗೆ ಮನೆಯಲ್ಲೇ ಬಾಲಾಜಿಯ ದರ್ಶನ, ಯುವ ಉದ್ಯಮಿಯ ವಿಶಿಷ್ಟ ಸೇವೆ!

ಬೆಂಗಳೂರಿನ ಯುವ ಉದ್ಯಮಿ ದೀಪಕ್‌ ಅವರು ತಿರುಪತಿಯ ವೆಂಕಟೇಶ್ವರ ಸ್ವಾಮಿಯ ಭಕ್ತರು. ಕಳೆದ 9 ವರ್ಷಗಳಿಂದ ಪ್ರತಿ ತಿಂಗಳೂ ತಿರುಮಲ ಬೆಟ್ಟವನ್ನು ಹತ್ತಿ ಬಾಲಾಜಿಯ ದರ್ಶನ ಪಡೆಯುತ್ತಾರೆ. ಬೆಂಗಳೂರಿನ ಜಯನಗರದಲ್ಲಿರುವ ಫ್ಲ್ಯಾಟ್‌ನಲ್ಲಿ ವೆಂಕಟೇಶ್ವರ ಸ್ವಾಮಿಯ ಪ್ರತಿಕೃತಿಯ ವಿಶೇಷ ಅಲಂಕಾರವನ್ನು ಮಾಡಿ, ಮಕ್ಕಳಿಗೆ , ಭಕ್ತರಿಗೆ ಆಧ್ಯಾತ್ಮಿಕ, ಸಂಸ್ಕೃತಿಯನ್ನು ಪರಿಚಯಿಸುತ್ತಾರೆ.

Murder Case: ಇನ್‌ಸ್ಟಗ್ರಾಮ್‌ನಲ್ಲಿ ಯುವತಿಗೆ ಮೆಸೇಜ್‌ ಮಾಡಿ ಕಿರುಕುಳ, ಯುವಕನ ಹತ್ಯೆ

ಇನ್‌ಸ್ಟಗ್ರಾಮ್‌ನಲ್ಲಿ ಯುವತಿಗೆ ಮೆಸೇಜ್‌ ಮಾಡಿ ಕಿರುಕುಳ, ಯುವಕನ ಹತ್ಯೆ

ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೆ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, ‘ಎಂಗೇಜ್ಮೆಂಟ್ ಆಗಿದೆ, ಮೆಸೇಜ್ ಮಾಡಬೇಡ’ ಎಂದು ಯುವತಿ ಮಂಜುನಾಥ್‌ಗೆ ತಿಳಿಸಿದ್ದಳು. ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ.

ಮೈಸೂರಿಗೆ ವರ್ಷವಿಡೀ ಕಾಡಿದ ವನ್ಯಜೀವಿ ಉಪದ್ರವ!

ಮೈಸೂರಿಗೆ ವರ್ಷವಿಡೀ ಕಾಡಿದ ವನ್ಯಜೀವಿ ಉಪದ್ರವ!

ನಿರೀಕ್ಷೆ ಮೀರಿ ಹೆಚ್ಚಿದ ಆನೆ, ಹುಲಿ ಹಾಗೂ ಚಿರತೆಗಳ ಸಂತತಿ ಯಿಂದ ಕಾಡಂಚಿನ ಗ್ರಾಮಗಳಲ್ಲಿ ನೆಮ್ಮದಿ ದೂರಾಗಿದೆ. ಆಳುವ ಮಂದಿಗೆ ಗ್ರಾಮದ ಜನರ ಗೋಳು ನರಿ ಕೂಗು ಗಿರಿ ಮುಟ್ಟಿತೇ ಎಂಬಂತಾ ಗಿದೆ. ಆದರೂ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ಇದ್ದಲ್ಲಿಯೇ ಬದುಕು ಕಟ್ಟಿಕೊಳ್ಳುವ ಗ್ರಾಮೀಣ ಜನರ ಬದುಕಿನ ಮೇಲೆ ಕಾಡುಪ್ರಾಣಿಗಳ ಸವಾರಿ ನಡೆದೇ ಇದೆ.

New Year 2026: ಹೊಸ ವರ್ಷದ ಹಿಂದಿನ ದಿನ ನಮ್ಮ ಮೆಟ್ರೋದಲ್ಲಿ 8.93 ಲಕ್ಷ ಪ್ರಯಾಣಿಕರ ಸಂಚಾರ, ₹3.08 ಕೋಟಿ ಆದಾಯ

ಒಂದೇ ದಿನ ನಮ್ಮ ಮೆಟ್ರೋದಲ್ಲಿ 8.93 ಲಕ್ಷ ಜನ ಸಂಚಾರ, ₹3.08 ಕೋಟಿ ಆದಾಯ

2025ರ ಡಿ.31ರಂದು ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 3:10ರವರೆಗೆ ಮೆಟ್ರೋ ರೈಲುಗಳು (Namma Metro) ಸಂಚರಿಸಿದ್ದು, ಈ ಅವಧಿಯಲ್ಲಿ ಬರೋಬ್ಬರಿ 8,93,903 ಜನರು ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಒಂದೇ ದಿನದಲ್ಲಿ ನೇರಳೆ, ಹಸಿರು ಹಾಗೂ ಹಳದಿ ಮೂರು ಮಾರ್ಗ ಒಟ್ಟಾಗಿ ಬರೋಬ್ಬರಿ 3,08 ಕೋಟಿ ರೂ. ಆದಾಯ ಬಿಎಂಆರ್‌ಸಿಎಲ್‌ಗೆ ಹರಿದುಬಂದಿದೆ.

ಹೊನ್ನೇಸರದ ಪಿಎಂಶ್ರೀ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 22 ಜನ ಶಿಕ್ಷಕರು !

ಹೊನ್ನೇಸರದ ಪಿಎಂಶ್ರೀ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 22 ಜನ ಶಿಕ್ಷಕರು !

ಹಳ್ಳಿಯ ಈ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಬರೋಬ್ಬರಿ 22 ಶಿಕ್ಷಕರು ಕರ್ತವ್ಯ ಮಾಡುತ್ತಿದ್ದಾರೆ. ಆ 22 ಶಿಕ್ಷಕರ ಪೈಕಿ 19 ಜನರು ಮಹಿಳಾ ಶಿಕ್ಷಕರು ಎನ್ನುವುದು ಮತ್ತೊಂದು ವಿಶೇಷ. ಹೀಗೆ 19 ಶಿಕ್ಷಕಿಯರನ್ನು ಮೂರು ಪುರುಷ ಶಿಕ್ಷಕರನ್ನು ಹೊಂದಿರುವ ಅಪರೂಪದ ಶಾಲೆಯೇ ಹೆಗ್ಗೋಡಿನ ಹೊನ್ನೇಸರ ಪಿಎಂಶ್ರೀ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆ.

ಗ್ರಾಮೀಣ ನಾಟಕಗಳ ಪ್ರಚಾರಕ್ಕೂ ಎಐ ಬಳಕೆ

ಗ್ರಾಮೀಣ ನಾಟಕಗಳ ಪ್ರಚಾರಕ್ಕೂ ಎಐ ಬಳಕೆ

ಬಾದಾಮಿಯ ಬನಶಂಕರಿ ಜಾತ್ರೆಯಲ್ಲಿ ಪ್ರದರ್ಶನ ಕಾಣುತ್ತಿರುವ ಗುಳೇದಗುಡ್ಡದ ಸಂಗಮೇಶ್ವರ ನಾಟ್ಯ ಸಂಘದಿಂದ ಪಕ್ಕದ ಮನಿ ಚಂದ್ರಿ, ನೋಡಾಕ ನೀ ಸುಂದ್ರಿ ನಾಟಕ ಹಾಗೂ ಕೆಬಿಆರ್‌ ಡ್ರಾಮಾ ಕಂಪನಿ ಯ ಗಿಚ್ಚ ಗಿಲಿಗಲಿ ನಾಯಕಿ ಸೇರಿದಂತೆ ವಿವಿಧ ಅನೇಕ ಕಂಪನಿಗಳು ಎಐ ತಂತ್ರಜ್ಞಾನಗಳನ್ನು ಬಳಸಿ ಪ್ರಚಾರ ಕೈಗೊಂಡಿದ್ದು, ಇದಕ್ಕೆ ಲಕ್ಷಗಟ್ಟಲೇ ಜನರು ವೀಕ್ಷಣೆ ಮಾಡಿದ್ದಾರೆ. ಎಐ ಪ್ರಚಾರದ ವಿಡಿಯೊ ವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ದಿನದಿಂದ ಇಲ್ಲಿಯವರೆಗೆ 24 ಲಕ್ಷಕ್ಕಿಂತ ಹೆಚ್ಚಿನ ಜನರು ವಿಡಿಯೊ ವೀಕ್ಷಿಸಿದ್ದಾರೆ.

IPS Transfer: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 68 ಐಪಿಎಸ್‌ ಅಧಿಕಾರಿಗಳಿಗೆ ವರ್ಗ, ಬಡ್ತಿ

ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 68 ಐಪಿಎಸ್‌ ಅಧಿಕಾರಿಗಳಿಗೆ ವರ್ಗ, ಬಡ್ತಿ

ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಾಟೇರಿಯಾ, ವಾಣಿಜ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ದೀಪಕ್ ಜೈನ್, ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಡಾ. ಏಕ್‍ರೂಪ್ ಕೌರ್, ಬಿಎಂಆರ್‍ಸಿಎಲ್‍ನ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್ ಜೆ. ಸೇರಿದಂತೆ 68 ಮಂದಿ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.

Assault Case: ಕುಡಿದ ಮತ್ತಿನಲ್ಲಿ ಗಲಾಟೆ, ನಗರದಲ್ಲಿ ಕ್ಯಾಬ್‌ ಚಾಲಕನ ಮೇಲೆ ಅಮಾನುಷ ಹಲ್ಲೆ

ಕುಡಿದ ಮತ್ತಿನಲ್ಲಿ ಗಲಾಟೆ, ನಗರದಲ್ಲಿ ಕ್ಯಾಬ್‌ ಚಾಲಕನ ಮೇಲೆ ಅಮಾನುಷ ಹಲ್ಲೆ

ಹೊಸ ವರ್ಷ ಆಚರಣೆ ವೇಳೆ ಕುಡಿದ ಮತ್ತಿನಲ್ಲಿ ಓಡಾಡುತ್ತಿದ್ದ ಯುವಕರ ಗುಂಪೊಂದು, ಕಾರ್ಪೋರೇಷನ್ ಸರ್ಕಲ್ ಬಳಿ ನಿಂತಿದ್ದ ಕಾರಿಗೆ ಹಿಂದಿನಿಂದ ಬಂದು ಟಚ್ ಮಾಡಿದೆ. ಈ ವೇಳೆ ಕಾರಿನ ಚಾಲಕ ಕೆಳಗೆ ಇಳಿದು, ಏಕೆ ಕಾರಿಗೆ ಡಿಕ್ಕಿ ಹೊಡೆದಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಪ್ರಶ್ನೆಗೆ ಉತ್ತರ ನೀಡುವ ಬದಲು ಯುವಕರ ಗುಂಪು ಚಾಲಕನ ಮೇಲೆ ಹಿಂದಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿ ಹಲ್ಲೆ ನಡೆಸಿದೆ.

Nitte Vinaya Hegde: ನಿಟ್ಟೆ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ನ್ಯಾ. ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ

ನಿಟ್ಟೆ ಶಿಕ್ಷಣ ಸಂಸ್ಥೆ ಸ್ಥಾಪಕ, ಸಂತೋಷ್ ಹೆಗ್ಡೆ ಸೋದರ ವಿನಯ್ ಹೆಗ್ಡೆ ನಿಧನ

ಇಂದು ಮುಂಜಾನೆ ನಿಧನರಾದ ನಿಟ್ಟೆ ವಿನಯ ಹೆಗ್ಡೆ ಅವರು ಕರಾವಳಿ ಕರ್ನಾಟಕದ ಶೈಕ್ಷಣಿಕ ಮತ್ತು ಕೈಗಾರಿಕಾ ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದೂರದೃಷ್ಟಿಯ ನಾಯಕರಾಗಿದ್ದರು. ರಾಜ್ಯದ ಹಲವು ಸಮಿತಿಗಳಲ್ಲಿ ಮತ್ತು ಕೈಗಾರಿಕಾ ಒಕ್ಕೂಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಲವು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.

ಭತ್ತದ ನಾಡು ಗಂಗಾವತಿ ಜೋಡು ರಥೋತ್ಸವಕ್ಕೆ ಚಾಲನೆ

ಭತ್ತದ ನಾಡು ಗಂಗಾವತಿ ಜೋಡು ರಥೋತ್ಸವಕ್ಕೆ ಚಾಲನೆ

ಶ್ರೀ ಚನ್ನಬಸವ ಶಿವಯೋಗಿಗಳ 80ನೇ ಮಹಾ ರಥೋತ್ಸವಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಿದ್ಧತೆ ಮಾಡಿಕೊಂಡಿದೆ. ಬರುವ ಭಕ್ತರಿಗೆ ಉಪಹಾರ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆ ಶ್ರೀಮಠದ ಪಕ್ಕದಲ್ಲಿನ ಸಿಬಿಎಸ್ ಕಲ್ಯಾಣ ಮಂಟಪದಲ್ಲಿ ದಾಸೋಹ ಮಂಟಪ ಸಿದ್ಧಗೊಂಡಿದೆ. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.

LPG price hike: ಹೊಸ ವರ್ಷದ ಮೊದಲ ದಿನವೇ ಅಡುಗೆ ಅನಿಲ ಸಿಲಿಂಡರ್‌ ಬೆಲೆ ಏರಿಕೆ!

ಹೊಸ ವರ್ಷದ ಮೊದಲ ದಿನವೇ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ!

ಜನವರಿ 2025 ರಿಂದ ಡಿಸೆಂಬರ್ 2025 ರವರೆಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಿದ್ದವು. ಬೆಂಗಳೂರು, ದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಂತಹ ಮಹಾನಗರಗಳಲ್ಲಿ ಪ್ರತಿ ಸಿಲಿಂಡರ್‌ಗೆ ಸರಾಸರಿ ₹238 ರಷ್ಟು ಬೆಲೆಗಳು ಕುಸಿದಿದ್ದವು. ಇದೀಗ ಮತ್ತೆ ಏರಿಕೆ ಮಾಡಲಾಗಿದೆ.

New year 2026: ನಗರದಾದ್ಯಂತ ಸಂಭ್ರಮಾಚರಣೆ, ಕೆಲ ಯುವಕರ ಪುಂಡಾಟ, ಅನುಚಿತ ವರ್ತನೆ

ನಗರದಾದ್ಯಂತ ಸಂಭ್ರಮಾಚರಣೆ, ಕೆಲ ಯುವಕರ ಪುಂಡಾಟ, ಅನುಚಿತ ವರ್ತನೆ

ಬೆಂಗಳೂರಿನ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲದಲ್ಲಿ ಸಂಭ್ರಮಾಚರಣೆ ನಡೆದಿದ್ದು, ಯುವಜನತೆ ಕೇಕ್ ಕತ್ತರಿಸಿ ಹೊಸ ವರ್ಷವನ್ನು ಸ್ವಾಗತಿಸಿದರು. ಈ ಮಧ್ಯೆ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಅಹಿತಕರ ಘಟನೆಯೊಂದು ನಡೆದಿದೆ. ಕುಡಿದ ಮತ್ತಿನಲ್ಲಿ ಓರ್ವ ವ್ಯಕ್ತಿ ಮಹಿಳಾ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿರುವಂತಹ ಘಟನೆ ನಡೆದಿದೆ. ಸದ್ಯ ಆತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

New year celebrations: ಅದ್ಧೂರಿಯಾಗಿ ಹೊಸ ವರ್ಷ ಸ್ವಾಗತಿಸಿದ ಬೆಂಗಳೂರಿಗರು; ರಂಗೇರಿದ ಪಾರ್ಟಿ, ಪಟಾಕಿ ಸಿಡಿಸಿ ಸಂಭ್ರಮ

ಅದ್ಧೂರಿಯಾಗಿ ಹೊಸ ವರ್ಷ ಸ್ವಾಗತಿಸಿದ ಬೆಂಗಳೂರಿಗರು; ಪಟಾಕಿ ಸಿಡಿಸಿ ಸಂಭ್ರಮ

New Year 2026: ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಜನರು ಸಂಭ್ರಮದಿಂದ 2026ರ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಬುಧವಾರ ರಾತ್ರಿ ಪಬ್‌, ಬಾರ್‌ಗಳು ಜನರಿಂದ ತುಂಬಿ ತುಳುಕಿದವು. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

IAS, IPS Officers Transfer: ರಾಜ್ಯದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; 19 ಐಎಎಸ್‌, 20 ಐಪಿಎಸ್​ ಅಧಿಕಾರಿಗಳ ವರ್ಗಾವಣೆ, ಹಲವರಿಗೆ ಬಡ್ತಿ

ರಾಜ್ಯದ 19 ಐಎಎಸ್‌, 20 ಐಪಿಎಸ್​ ಅಧಿಕಾರಿಗಳ ವರ್ಗಾವಣೆ, ಹಲವರಿಗೆ ಬಡ್ತಿ

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ತುಮಕೂರು ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಪಿ.ಎನ್., ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿದ್ದ ಮೀನಾ ನಾಗರಾಜ್ ಸೇರಿ ಐವರು ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಇನ್ನು ಯಾವೆಲ್ಲಾ ಅಧಿಕಾರಿಗಳು ವರ್ಗಾವಣೆ ಆಗಿದ್ದಾರೆ ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.

Muralidhar Halappa: ​ಪತ್ರಕರ್ತರ ಪ್ರಶ್ನೆಗೆ ಹಾಲಪ್ಪ ಸ್ಪಷ್ಟನೆ; ಜ. 4ಕ್ಕೆ ಬೃಹತ್ ‘ಜನಧ್ವನಿ’ ಪ್ರತಿಭಟನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರದ ಅಡ್ಡಿ: ಮುರಳೀಧರ ಹಾಲಪ್ಪ ಆಕ್ರೋಶ

ರಾಜ್ಯ ಸರ್ಕಾರವೇ ಅರಣ್ಯ ನಿಯಮ ಉಲ್ಲಂಘಿಸಿರುವುದು ಮತ್ತು ಭೈರಗೊಂಡ್ಲು ಜಲಾಶಯ ನಿರ್ಮಿ ಸಲು ರೈತರ ಮನ ವೊಲಿಸುವಲ್ಲಿ ವಿಫಲವಾಗಿರುವುದು ವಿಳಂಬಕ್ಕೆ ಕಾರಣವಲ್ಲವೇ?" ಎಂದು ಪ್ರಶ್ನಿಸಿ ದರು. ಇದಕ್ಕೆ ಉತ್ತರಿಸಿದ ಹಾಲಪ್ಪ, "ಬೃಹತ್ ಯೋಜನೆಗಳಲ್ಲಿ ಸಣ್ಣಪುಟ್ಟ ತಾಂತ್ರಿಕ ಬದಲಾವಣೆ ಸಹಜ. ಅರಣ್ಯ ನಿಯಮ ಉಲ್ಲಂಘನೆ ಎಂಬುದು ಕೇಂದ್ರದ ನೆಪವಷ್ಟೇ. ಈಗಾಗಲೇ 111 ಹೆಕ್ಟೇರ್ ಅರಣ್ಯ ಭೂಮಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಲಾಗಿದೆ

ಚಿಕ್ಕನಾಯಕನಹಳ್ಳಿಯಲ್ಲಿ ಒತ್ತುವರಿ ಮಳಿಗೆಗಳಿಗೆ ನಿಯಮ ಬಾಹಿರ ವಿದ್ಯುತ್ ಸಂಪರ್ಕ; ಕ್ರಮಕ್ಕೆ ಆಗ್ರಹ

ಚಿಕ್ಕನಾಯಕನಹಳ್ಳಿಯಲ್ಲಿ ಮಳಿಗೆಗಳಿಗೆ ನಿಯಮ ಬಾಹಿರ ವಿದ್ಯುತ್ ಸಂಪರ್ಕ

Chikkanayakanahalli News: ಚಿಕ್ಕನಾಯಕನಹಳ್ಳಿಯಲ್ಲಿ ಅಂಚೆ ಕಚೇರಿ ಪಕ್ಕದ ಜಾಗವು ಸರ್ಕಾರಿ ಸ್ವತ್ತಾಗಿದ್ದು, ಅದನ್ನು ಒತ್ತುವರಿ ಮಾಡಿ ಮಳಿಗೆ ನಿರ್ಮಿಸಲಾಗಿದೆ. ಇವುಗಳಿಗೆ ಯಾವುದೇ ಟ್ರೇಡ್ ಲೈಸನ್ಸ್ ಅಥವಾ ಅಧಿಕೃತ ದಾಖಲೆಗಳಿಲ್ಲ. ಹೀಗಿದ್ದರೂ ಬೆಸ್ಕಾಂ ಅಧಿಕಾರಿಗಳು ಯಾವ ಆಧಾರದ ಮೇಲೆ ಮೀಟರ್ ಅಳವಡಿಸಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಆರೋಪಿಸಿದ್ದಾರೆ.

Karwar News: ಬಸ್‌ನಲ್ಲಿ ಯುವತಿ ಎದೆಗೆ ಕೈ ಹಾಕಿದ ಯುವಕ; ಕಾಮುಕನಿಗೆ ಬಿತ್ತು ಧರ್ಮದೇಟು

ಬಸ್‌ನಲ್ಲಿ ಯುವತಿ ಎದೆಗೆ ಕೈ ಹಾಕಿದ ಯುವಕ; ಕಾಮುಕನಿಗೆ ಧರ್ಮದೇಟು

ಕಾರವಾರದಿಂದ ಅಂಕೋಲಾಗೆ ಬಸ್‌ನಲ್ಲಿ ತೆರಳುತ್ತಿದ್ದ ಯುವತಿಗೆ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಸೀಟ್‌ನಲ್ಲಿ ನಿದ್ರಿಸುತ್ತಿದ್ದ ಯುವತಿ ಎದೆಯ ಮೇಲೆ ಕೈ ಹಾಕಿದ್ದಾನೆ. ಇದರಿಂದ ಆರೋಪಿಯನ್ನು ಯುವತಿ ತರಾಟೆಗೆ ತೆಗೆದುಕೊಂಡಿದ್ದಾಳೆ. ಈ ವೇಳೆ ಪ್ರಯಾಣಿಕರಿಂದ ಯುವಕನಿಗೆ ಧರ್ಮದೇಟು ಬಿದ್ದಿದೆ.

MLC Ramesh Babu: ​ಬೆಂಗಳೂರಿನಲ್ಲಿ ಸ್ಪರ್ಧೆಗೆ ಕ್ಷೇತ್ರ ಹುಡುಕಾಟ: ರಾಜಕೀಯ ಭವಿಷ್ಯ ಬಿಚ್ಚಿಟ್ಟ ಎಂಎಲ್‌ಸಿ

ಚಿಕ್ಕನಾಯಕನಹಳ್ಳಿಗೆ ಜಿಟಿಟಿಸಿ, ಐಟಿಐ ಮಂಜೂರಾತಿಗೆ ರಮೇಶಬಾಬು ಆಗ್ರಹ

"ತಾಲ್ಲೂಕಿನಲ್ಲಿ ಪ್ರತಿಭಾವಂತ ಯುವಜನರಿದ್ದಾರೆ, ಆದರೆ ಅವರಿಗೆ ಸ್ಥಳೀಯವಾಗಿ ಉನ್ನತ ತಾಂತ್ರಿಕ ತರಬೇತಿ ಸಿಗುತ್ತಿಲ್ಲ. ಈ ಕೊರತೆ ನೀಗಿಸಲು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (GTTC) ಸ್ಥಾಪನೆ ಅತ್ಯಗತ್ಯ. ಬಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜು ಮಂಜೂರು ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಸಚಿವರು ಹಾಗೂ ಇಲಾಖೆಗೆ ಪತ್ರ ಬರೆದು ಒತ್ತಡ ಹೇರಲಾಗಿದೆ,"

Chikkanayakanahalli News: ಒತ್ತುವರಿ ಮಳಿಗೆಗಳಿಗೆ ವಿದ್ಯುತ್ ಭಾಗ್ಯ: ಚಂದ್ರಶೇಖರ್ ಗರಂ

ಒತ್ತುವರಿ ಮಳಿಗೆಗಳಿಗೆ ವಿದ್ಯುತ್ ಭಾಗ್ಯ: ಚಂದ್ರಶೇಖರ್ ಗರಂ

ಬೆಸ್ಕಾಂ ಎಇಇ ಗವಿರಂಗಯ್ಯ ಪ್ರತಿಕ್ರಿಯಿಸಿ ನಮಗೆ ಜಾಗ ಒತ್ತುವರಿಯಾಗಿದೆಯೇ ಎಂದು ಪರಿಶೀಲಿಸುವ ಅಧಿಕಾರವಿಲ್ಲ. ಕಂದಾಯ ಇಲಾಖೆ ಅಥವಾ ಪುರಸಭೆ ಪತ್ರ ನೀಡಿದರೆ ತಕ್ಷಣ ಸಂಪರ್ಕ ಕಡಿತಗೊಳಿಸು ತ್ತೇವೆ ಎಂದು ಹಾರಿಕೆ ಉತ್ತರ ನೀಡಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಚಂದ್ರಶೇಖರ್ ಅಕ್ರಮ ಸಂಪರ್ಕಗಳನ್ನು ಕೂಡಲೇ ಕಡಿತಗೊಳಿಸುವಂತೆ ಎಚ್ಚರಿಕೆ ನೀಡಿದರು.

ಕರ್ನಾಟಕದಲ್ಲಿ ಮಿನಿ ಬಾಂಗ್ಲಾದೇಶವನ್ನು ನಿರ್ಮಿಸುತ್ತಿದ್ದಾರೆ: ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ

ಕರ್ನಾಟಕದಲ್ಲಿ ಮಿನಿ ಬಾಂಗ್ಲಾದೇಶ ನಿರ್ಮಾಣವಾಗಿದೆ; ಆರ್. ಅಶೋಕ್ ಕಿಡಿ

R Ashok: ಯಲಹಂಕದ ಕೋಗಿಲು ಬಡಾವಣೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಈ ಸರ್ಕಾರ ಬಂದ ಬಳಿಕ ಕರ್ನಾಟಕವು ಮಿನಿ ಬಾಂಗ್ಲಾದೇಶೀಯರ ತಾಣ ಆಗುತ್ತಿದೆ. ಇವರು ಯಾರು? ಎಲ್ಲಿಂದ ಬಂದರು? ಗೂಗಲ್ ಮ್ಯಾಪ್‍ನಡಿ ಇಲ್ಲಿ ಒಂದು ವರ್ಷದ ಹಿಂದೆ ಮನೆಗಳಿರಲಿಲ್ಲ. ಈಗ ಮನೆಗಳಿವೆ. ಇವರೆಲ್ಲ ಬಂದು ಆರು ತಿಂಗಳಾಗಿಲ್ಲ. ಇವರಿಗೆಲ್ಲ ವಿದ್ಯುತ್ ಸಂಪರ್ಕ ಕೊಟ್ಟದ್ದು ಹೇಗೆ ಎಂದು ಪ್ರಶ್ನಿಸಿದ್ದಾರೆ.

Karnataka Covid Scam: ಕೋವಿಡ್ ಹಗರಣ; ರಾಜ್ಯ ಸರ್ಕಾರಕ್ಕೆ ಅಂತಿಮ‌ ವರದಿ ಸಲ್ಲಿಸಿದ ನ್ಯಾ. ಮೈಕೆಲ್ ಡಿ ಕುನ್ಹಾ

ಕೋವಿಡ್ ಹಗರಣ ಕುರಿತು ರಾಜ್ಯ ಸರ್ಕಾರಕ್ಕೆ ಅಂತಿಮ‌ ವರದಿ ಸಲ್ಲಿಕೆ

ಕೋವಿಡ್ 19 ಸಂದರ್ಭದಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ತನಿಖೆಗೆ 2023ರ ಆಗಸ್ಟ್‌ನಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಾಜ್ಯ ಸರ್ಕಾರ ರಚಿಸಿತ್ತು. ಇದೀಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ.

ವಿಬಿ ಜಿ ರಾಮ್‌ ಜಿ ಯೋಜನೆ ಅನುಷ್ಠಾನ ಬೇಡ; ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

ವಿಬಿ ಜಿ ರಾಮ್‌ ಜಿ ಯೋಜನೆ ಅನುಷ್ಠಾನ ಬೇಡ; ಪ್ರಧಾನಿಗೆ ಸಿಎಂ ಪತ್ರ

ಹೊಸ ನಿಯಮಗಳು ಉದ್ಯೋಗ ಖಾತ್ರಿ ಯೋಜನೆಯ ಮೂಲ ಆಶಯಕ್ಕೆ ವಿರುದ್ಧವಾಗಿದ್ದು, ಕೆಲಸದ ಹಕ್ಕನ್ನು ಕಸಿಯಲಿದೆ. ಗ್ರಾಮೀಣ ಭಾಗದಲ್ಲಿ ಸಂಪನ್ಮೂಲ ಸೃಷ್ಟಿಯ ಆಶಯವನ್ನು ಬದಲಾಯಿಸಿ, ಗುತ್ತಿಗೆದಾರರ ಕೇಂದ್ರಿತ ಮಾದರಿಯಾಗಿಸಲು ದಾರಿ ಮಾಡಿಕೊಡುವ ಅಪಾಯವಿದೆ ಎಂದು ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಹೊಸ ವರ್ಷಾಚರಣೆಗೆ ಪೊಲೀಸ್ ಹದ್ದಿನ ಕಣ್ಣು; ಕಲಬುರಗಿ ನಗರದಾದ್ಯಂತ 850 ಸಿಬ್ಬಂದಿ ನಿಯೋಜನೆ

ಹೊಸ ವರ್ಷಾಚರಣೆ; ಕಲಬುರಗಿ ನಗರದಾದ್ಯಂತ 850 ಸಿಬ್ಬಂದಿ ನಿಯೋಜನೆ

Kalaburagi News: ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಕಲಬುರಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.

Loading...