ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Dr M C Sudhakar: ಗೌರವದಿಂದಲೇ ಹೇಳುತ್ತಿದ್ದೇನೆ : ಜಸ್ಟೀನ್ ಗೋಪಾಲಗೌಡರೇ ಸಕ್ರಿಯ ರಾಜಕಾರಣಕ್ಕೆ ಬಂದು ನನ್ನ ವಿರುದ್ಧ ಆರೋಪ ಮಾಡಿ : ಡಾ.ಎಂ.ಸಿ.ಸುಧಾಕರ್ ಕಿಡಿ

ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡದೆ ಉದ್ಯೋಗ ಮೇಳ ಆಯೋಜಿಸಿದರೆ ಉಪಯೋಗವಿಲ್ಲ

ಚಿಂತಾಮಣಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲವು ಘಟನಾವಳಿಗೆ ಗೋಪಾಲಗೌಡರು ಪ್ರಚೋದನೆ ಕೊಡುವ ಕೆಲಸ ಮಾಡುತ್ತಿದ್ದಾರೆ.ಉನ್ನತ ಶಿಕ್ಷಣ ಇಲಾಖೆಯಲ್ಲಿ ನಾನೆಷ್ಟು ಉದ್ಯೋಗ ಕೊಡಿಸಿದ್ದೇನೆ ಎಂಬ ಬಗ್ಗೆ ಮಾತನಾಡಿದ್ದಾರೆ. ನನ್ನ ಇಲಾಖೆಯಲ್ಲಿ ನಾನು ಏನು ಮಾಡುತ್ತಿದ್ದೇನೆ. ಉದ್ಯೋಗ ಲಭ್ಯತೆಗೆ ಮಕ್ಕಳಿಗೆ ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ. ಇವರಿಗೆ ನಾನು ಉತ್ತರ ಕೊಡುವ ಅವಶ್ಯಕತೆ ಯಿಲ್ಲ

Chikkaballapur News: ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಪೋಸ್ಟರ್: ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ವಾಗ್ವಾದ

ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರ ವಾಗ್ವಾದ

ಅವಹೇಳನಕಾರಿ ಪೋಸ್ಟರ್‌ಗಳನ್ನು ನಗರದ ಹಲವೆಡೆ ಅಂಟಿಸುವುದು ಹಾಗೂ ಸಾಗಿಸುತ್ತಿರುವುದರ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ನಗರ ಸಭಾ ಅಧ್ಯಕ್ಷ ಎ.ಗಜೇಂದ್ರ ಸೇರಿದಂತೆ ಹಲವರು ಸ್ಥಳಕ್ಕೆ ಆಗಮಿಸಿದ್ದಾರೆ. ವಾಹನದಲ್ಲಿದ್ದ ಪೋಸ್ಟರ್‌ಗಳನ್ನು ಕಂಡು ಸಂಸದರ ವಿರುದ್ಧ ಅವಹೇಳನಕಾರಿಯಾಗಿ ಪ್ರಚಾರ ಕೈಗೊಳ್ಳುತ್ತಿರು ವುದು ಏಕೆ? ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.

MLA Subbareddy: ಗುಡಿಬಂಡೆ: ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಒತ್ತು: ಶಾಸಕ ಸುಬ್ಬಾರೆಡ್ಡಿ

ಗುಡಿಬಂಡೆ: ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಒತ್ತು

ಇಂದು ಚಿಕ್ಕಬಳ್ಳಾಪುರದ ಪೇರೆಸಂದ್ರ ಕ್ರಾಸ್ ಬಳಿಯಿಂದ ಸಾದಲಿ, ಸೋಮೇಶ್ವರ ಮಾರ್ಗ ಗುಂಡಿ ಗಳಿಂದ ಕೂಡಿದ್ದು, ಜನರು ಸಂಚರಿಸಲು ಕಷ್ಟಕರವಾಗಿತ್ತು. ಈ ಭಾಗದ ಜನರು ಸುಮಾರು ದಿನಗಳಿಂದ ರಸ್ತೆ ದುರಸ್ಥಿಗಾಗಿ ಮನವಿ ಮಾಡಿದ್ದರು. ಅದರಂತೆ ಇದೀಗ ಸುಮಾರು 5 ಕೋಟಿ ವೆಚ್ಚದಲ್ಲಿ ಈ ರಸ್ತೆ ಅಭಿವೃದ್ದಿ ಕಾಮಗಾರಿ ನಡೆಯಲಿದೆ

Dr M C Sudhakar: ಸಾರ್ವಜನಿಕರ ಸಹಕಾರವಿದ್ದಲ್ಲಿ ಮಾತ್ರ ಸ್ವಚ್ಛ ಚಿಂತಾಮಣಿಯ ಕನಸು ನನಸಾಗುತ್ತದೆ

ಹಿರಿಯ ನಾಗರೀಕರ ವಿವಿಧ ಸ್ಪರ್ಧೆಗಳಿಗೆ ಸಚಿವ ಡಾ.ಎಂ.ಸಿ.ಸುಧಾಕ‌ರ್ ಚಾಲನೆ

ಹಿರಿಯ ನಾಗರೀಕರಿಗೆ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ನಗರದ ಝಾನ್ಸಿ ರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್ ಅಭಿಮಾನ ಬಳಗದಿಂದ ಹಿರಿಯ ನಾಗರೀಕರಿಗೆ ವಿವಿಧ ಸ್ಪರ್ಧೆಗೆ ಹಸಿರು ಬಾವುಟವನ್ನು ಹಾರಿಸುವುದರ ಮೂಲಕ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಚಾಲನೆ ನೀಡಿದರು.

Monsoon Session: ರಾಜ್ಯ ಸರ್ಕಾರ ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ: ಬಿ.ವೈ.ವಿಜಯೇಂದ್ರ

ರಾಜ್ಯ ಸರ್ಕಾರ ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ: ಬಿ.ವೈ.ವಿಜಯೇಂದ್ರ

BY Vijayendra: ಸದನ 15- 20 ದಿನ ನಡೆಯಬೇಕಿತ್ತು. 8-9 ದಿನಗಳಿಗೆ ಸೀಮಿತ ಮಾಡಿದ್ದಾರೆ. ಸರಕಾರವು ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ. ರೈತರ ಸಮಸ್ಯೆಯನ್ನು ವಿಶೇಷವಾಗಿ ತೆಗೆದುಕೊಳ್ಳುತ್ತೇವೆ. ಸಿದ್ದರಾಮಯ್ಯನವರ ಸರಕಾರವು ಉತ್ತರ ಕರ್ನಾಟಕಕ್ಕೆ ಯಾವ ರೀತಿ ಅನ್ಯಾಯ ಮಾಡುತ್ತಿದೆ ಎಂಬ ಕುರಿತು ಚರ್ಚೆ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

Raichur Rains: ರಾಯಚೂರಿನಲ್ಲಿ ಸಿಡಿಲು ಬಡಿದು ಗರ್ಭಿಣಿ ಸಾವು

ರಾಯಚೂರಿನಲ್ಲಿ ಸಿಡಿಲು ಬಡಿದು ಗರ್ಭಿಣಿ ಸಾವು

Raichur Rains: ರಾಜ್ಯದ ವಿವಿಧೆಡೆ ಭಾನುವಾರ ವ್ಯಾಪಕ ಮಳೆಯಾಗಿದೆ. ಈ ನಡುವೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ಸಿಡಿಲಿಗೆ ಗರ್ಭಿಣಿ ಬಲಿಯಾಗಿದ್ದಾಳೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅನಾಹುತ ನಡೆದಿದೆ. ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Rahul Gandhi: ಮತಗಳ್ಳತನ ಆರೋಪ; ದಾಖಲೆ ನೀಡುವಂತೆ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್‌

ಮತಗಳ್ಳತನ ಆರೋಪ; ರಾಹುಲ್‌ ಗಾಂಧಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್‌

Electoral Fraud: ಪತ್ರಿಕಾಗೋಷ್ಠಿಯಲ್ಲಿ ನೀವು ತೋರಿಸಿರುವ ದಾಖಲೆಗಳು, ಭಾರತ ಚುನಾವಣಾ ಆಯೋಗದ ದಾಖಲೆಗಳಿಂದ ಬಂದಿವೆ ಎಂದು ನೀವು ಹೇಳಿದ್ದೀರಿ. ಯಾರಾದರೂ ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ನೀವು ತೀರ್ಮಾನಿಸಿರುವ ಸಂಬಂಧಿತ ದಾಖಲೆಗಳನ್ನು ಒದಗಿಸುವಂತೆ ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗ ಸೂಚಿಸಿದೆ.

Vishnuvardhan Memorial: ವಿಷ್ಣು ಸ್ಮಾರಕಕ್ಕಾಗಿ ಅಭಿಮಾನ್ ಸ್ಟುಡಿಯೊ ಭೂಸ್ವಾಧೀನ ಮಾಡಿಕೊಳ್ಳಿ; ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ

ವಿಷ್ಣು ಸ್ಮಾರಕಕ್ಕಾಗಿ ಅಭಿಮಾನ್ ಸ್ಟುಡಿಯೊ ಭೂಸ್ವಾಧೀನಕ್ಕೆ ಮನವಿ

Vishnuvardhan Memorial: ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಆವರಣದಲ್ಲಿದ್ದ ಡಾ. ವಿಷ್ಣುವರ್ಧನ್ ಅವರ ಸ್ಮಾರಕ, ಕನ್ನಡಾಭಿಮಾನಿಗಳ ಹೃದಯದಲ್ಲಿ ಭಾವನಾತ್ಮಕ ಪ್ರೇರಣೆಯ ಕೇಂದ್ರವಾಗಿದೆ. ಆ ಭೂಮಿಯನ್ನು ತಕ್ಷಣವೇ ಸ್ವಾಧೀನಪಡಿಸಿಕೊಳ್ಳಬೇಕು ಹಾಗೂ ಭೂ ಮಾಲೀಕರಿಗೆ ಸರ್ಕಾರದ ನಿಯಮಾನುಸಾರ ನ್ಯಾಯಸಮ್ಮತ ಪರಿಹಾರಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

Namma Metro: ಬೆಂಗಳೂರು ಅಭಿವೃದ್ಧಿಗೆ 1.50 ಲಕ್ಷ ಕೋಟಿ ಅನುದಾನ ನೀಡಿ; ಪ್ರಧಾನಿ ಮೋದಿಗೆ ಮನವಿ ಪತ್ರ ಸಲ್ಲಿಸಿದ ಡಿಕೆಶಿ

ಬೆಂಗಳೂರು ಅಭಿವೃದ್ಧಿಗೆ 1.50 ಲಕ್ಷ ಕೋಟಿ ನೀಡಿ; ಪ್ರಧಾನಿಗೆ ಡಿಕೆಶಿ ಮನವಿ

DK Shivakumar: ಬೆಂಗಳೂರು ನಗರದಲ್ಲಿ ಟನಲ್ ರಸ್ತೆ, ಆರ್ಟಿಲರಿ ರಸ್ತೆಗಳ ಬಳಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ, ಪೆಪಿಫೆರಲ್ ವರ್ತುಲ ರಸ್ತೆ, ಘನತ್ಯಾಜ ವಿಲೇವಾರಿ ಸೇರಿದಂತೆ ಇತರೇ ಮೂಲಸೌಕರ್ಯಗಳ ಅಭಿವೃದ್ಧಿಗೆ 1.50 ಲಕ್ಷ‌ ಕೋಟಿ ರೂ. ನೀಡಲು ಪ್ರಧಾನಿ ಮೋದಿ ಅವರಿಗೆ ಡಿಸಿಎಂ ಡಿಕೆಶಿ ಮನವಿ ಮಾಡಿದ್ದಾರೆ.

Namma Metro Yellow Line: ಮೆಟ್ರೋ ಡಬಲ್ ಡೆಕ್ಕರ್ ಫ್ಲೈಓವರ್ ನೋಡಿ ಪ್ರಧಾನಿ ಸಂತಸಗೊಂಡರು: ಡಿಕೆಶಿ

ಮೆಟ್ರೋ ಡಬಲ್ ಡೆಕ್ಕರ್ ನೋಡಿ ಪ್ರಧಾನಿ ಸಂತಸಗೊಂಡರು: ಡಿಕೆಶಿ

DK Shivakumar: ನಾವು ಕರ್ನಾಟಕದ ಅಭಿವೃದ್ಧಿಗೆ ಕೆಲಸ ಮಾಡುತ್ತಿದ್ದೇವೆ, ರಾಜಕೀಯಕ್ಕಾಗಿ ಕೆಲಸ ಮಾಡುತ್ತಿಲ್ಲ. ಉದಾಹರಣೆಗೆ ಶಕ್ತಿ ಯೋಜನೆಯಡಿ ಕೇವಲ ಕಾಂಗ್ರೆಸ್‌ಗೆ ಮತ ಹಾಕಿದ ಮಹಿಳೆಯರು ಮಾತ್ರ ಪ್ರಯಾಣ ಮಾಡುತ್ತಿಲ್ಲ. ಎಲ್ಲರೂ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಐದು ಗ್ಯಾರಂಟಿಗಳು ಸಮಾಜದ ಎಲ್ಲಾ ವರ್ಗದವರನ್ನು ತಲುಪಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

B Sarojadevi: ಹಿರಿಯ ನಟಿ ಬಿ. ಸರೋಜಾದೇವಿಗೆ ಕನ್ನಡ ಚಿತ್ರರಂಗದಿಂದ ಭಾವಪೂರ್ಣ ಶ್ರದ್ಧಾಂಜಲಿ

ಹಿರಿಯ ನಟಿ ಬಿ. ಸರೋಜಾದೇವಿಗೆ ಕನ್ನಡ ಚಿತ್ರರಂಗದಿಂದ ಭಾವಪೂರ್ಣ ಶ್ರದ್ಧಾಂಜಲಿ

B Sarojadevi: ಬೆಂಗಳೂರಿನಲ್ಲಿ ರಾಕ್‌ಲೈನ್ ವೆಂಕಟೇಶ್ ಅವರ ಮುಂದಾಳತ್ವದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘ, ಕಲಾವಿದರ ಸಂಘ ಮುಂತಾದ ಚಿತ್ರರಂಗದ ಸಂಘಟನೆಗಳಿಂದ ಪದ್ಮಭೂಷಣ ಡಾಕ್ಟರ್ ಬಿ. ಸರೋಜಾದೇವಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

Namma Metro: ಮೆಟ್ರೋಗೆ ರಾಜ್ಯ ಸರ್ಕಾರ ಶೇ. 87.37 ಹಣ ನೀಡುತ್ತಿದೆ, ಕೇಂದ್ರದ ಪಾಲು ಶೇ.12.63 ಮಾತ್ರ: ಸಿಎಂ

ಮೆಟ್ರೋಗೆ ರಾಜ್ಯ ಸರ್ಕಾರವೇ ಶೇ. 87.37 ಹಣ ನೀಡುತ್ತಿದೆ: ಸಿಎಂ

CM Siddaramaiah: ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾಗಳು 50:50 ಅನುಪಾತದಲ್ಲಿ ಹೂಡಿಕೆ ಮಾಡಬೇಕೆಂದು ಒಪ್ಪಂದವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಈಕ್ವಿಟಿಯ ಹೊರತಾಗಿ ಸಾಲದ ರೂಪದಲ್ಲಿ ಬಂದ ಹಣವನ್ನು ಬಡ್ಡಿ ಸಮೇತ ರಾಜ್ಯ ಸಕಾರ ಹಾಗೂ ಮೆಟ್ರೋ ಸಂಸ್ಥೆಗಳು ತೀರಿಸಬೇಕಾಗಿದೆ. ಇದರಿಂದ ರಾಜ್ಯದ ಮೇಲೆ, ನಮ್ಮ ಮೇಲೆ ಶೇ.87.37 ರಷ್ಟು ಭಾರವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Narendra Modi: ಕೆಟ್ಟ ರಸ್ತೆಗಳು, ಟ್ರಾಫಿಕ್‌ ಸಮಸ್ಯೆ; ಪ್ರಧಾನಿ ಮೋದಿಗೆ ಬೆಂಗಳೂರಿನ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌!

ಪ್ರಧಾನಿ ಮೋದಿಗೆ ಬೆಂಗಳೂರಿನ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌!

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿದ ಹಿನ್ನೆಲೆಯಲ್ಲಿ ನಗರದ 5 ವರ್ಷದ ಬಾಲಕಿ ಪ್ರಧಾನಿಗೆ ಪತ್ರ ಬರೆದಿದ್ದಾಳೆ. ರಾಜಧಾನಿಯಲ್ಲಿನ ರಸ್ತೆಗಳ ದುಸ್ಥಿತಿ ಹಾಗೂ ಸಂಚಾರ ದಟ್ಟಣೆ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದಾಳೆ. ಈ ಸಮಸ್ಯೆಗಳ ಪರಿಹರಿಸಲು ಸಹಾಯ ಮಾಡಬೇಕು ಎಂದು ಬಾಲಕಿ ಕೋರಿದ್ದಾಳೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

Job Mela: ಜೆ.ಕೆ.ಕೃಷ್ಣಾರೆಡ್ಡಿ ಆಯೋಜನೆಯ ಬೃಹತ್ ಉದ್ಯೋಗ ಮೇಳಕ್ಕೆ ಹರಿದು ಬಂದ ನಿರುದ್ಯೋಗಿ ಜನಸಾಗರ

ಬೃಹತ್ ಉದ್ಯೋಗ ಮೇಳಕ್ಕೆ ಹರಿದು ಬಂದ ನಿರುದ್ಯೋಗಿ ಜನಸಾಗರ

ಉದ್ಯೋಗವಿಲ್ಲದೆ ನಿರುದ್ಯೋಗಿಳಾಗಿರುವ ಯವಕರಿಗೆ ಉದ್ಯೋಗ ಕಲ್ಪಿಸಿಕೊಡಬೇಕೆಂಬ ಸದ್ದುದ್ದೇಶ ದಿಂದ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ದಿ ಅವರು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡು ಸಾವಿರಾರು ಜನ ಯುವಕರಿಗೆ ಉದ್ಯೋಗ ಕೋಡಿಸಲು ಮುಂದಾಗಿರುವುದು ಶ್ಲಾಘನೀಯವಾಗಿದೆ. ಅದರೆ  ಉನ್ನತ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಡಾ.ಎಂ.ಸಿ ಸುಧಾಕರ್ ಉದ್ಯೋಗ ಮೇಳದ  ಬಗ್ಗೆ ಲಘುವಾಗಿ ಮಾತನಾಡುವುದು ಖಂಡನೀಯವಾಗಿದೆ.

PM Narendra Modi: ಮೇಕ್ ಇನ್ ಇಂಡಿಯಾಗೆ ಕರ್ನಾಟಕದ ಕೊಡುಗೆ ದೊಡ್ಡದು: ಪ್ರಧಾನಿ ಮೋದಿ ಮೆಚ್ಚುಗೆ

ಮೇಕ್ ಇನ್ ಇಂಡಿಯಾಗೆ ಕರ್ನಾಟಕದ ಕೊಡುಗೆ ದೊಡ್ಡದು: ಪ್ರಧಾನಿ ಮೋದಿ

Namma Metro Yellow Line: ಬೆಂಗಳೂರಿನಲ್ಲಿ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಮೆಟ್ರೋ ಯೆಲ್ಲೋ ಲೈನ್ ಆರಂಭವಾಗಿದೆ. ಇದರಿಂದ ಲಕ್ಷಾಂತರ ಜನರಿಗೆ ನೆರವಾಗಲಿದೆ. ಇನ್ನು 3ನೇ ಹಂತ ಪೂರ್ಣಗೊಂಡಾಗ 25 ಲಕ್ಷ ಜನರು ಮೆಟ್ರೊದಲ್ಲಿ ಪ್ರಯಾಣಿಸಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

Shravana Shanivara: ಮೂರನೇ ಶ್ರಾವಣ ಶನಿವಾರ ತಾಲ್ಲೂಕಿನ ವಿವಿಧ ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಮೂರನೇ ಶ್ರಾವಣ ಶನಿವಾರ: ದೇವಾಲಯಗಳಿಗೆ ಹರಿದು ಬಂದ ಭಕ್ತ ಸಾಗರ

ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಪ್ರಧಾನ ಅರ್ಚಕ ಅಶ್ವತ್ಥನಾರಾಯಣ ಸ್ವಾಮಿ ಅವರ ನೇತೃತ್ವದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ಗೆ ವಿಶೇಷ ಅಲಂಕಾರ ಮತ್ತು ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಗಿತ್ತು. ಸ್ವಾಮಿಗೆ  ಮುಂಜಾನೆ ಮೂಲ ವಿಗ್ರಹಕ್ಕೆ ಮಧು ಮತ್ತು ಪಂಚಾಮೃತ ಅಭಿಷೇಕದ ನಂತರ ಪುಷ್ಪಾಲಂಕಾರದೊಂದಿಗೆ ವಿಶೇಷವಾಗಿ ಪುಷ್ಪಗಳಿಂದ ಅಲಂಕಾರ ಬಳಿಕ ಮಹಾಮಂಗಳಾರತಿ ನೆರವೇರಿಸಲಾಯಿತು.

ಇಬ್ಬನಿಯ ನಡುವೆ ಭಾರೀ ಯಶಸ್ಸು ಕಂಡ ದಿವ್ಯಶ್ರೀ ನಂದಿ ಹಿಲ್ಸ್ ಮಾನ್ಸೂನ್ ರನ್ ಓಟ

ಭಾರೀ ಯಶಸ್ಸು ಕಂಡ ದಿವ್ಯಶ್ರೀ ನಂದಿ ಹಿಲ್ಸ್ ಮಾನ್ಸೂನ್ ರನ್ ಓಟ

ನಂದಿಬೆಟ್ಟವನ್ನು ವಾಹನಗಳ ಮೂಲಕ ಕ್ರಮಿಸುವುದೇ ಕಠಿಣವಾಗಿರುವ ಸಂದರ್ಭದಲ್ಲಿ ಕಡಿದಾದ ದಾರಿ ಸವೆಸುತ್ತಾ,ಇಳಿಜಾರಿನಲ್ಲಿ ಇಳಿಯುತ್ತಾ ನೂರಾರು ತಿರುವುಗಳ ರಸ್ತೆಯಲ್ಲಿ ಓಡುವ ಮೂಲಕ ಸಾವಿರಾರು ಮಂದಿ ಓಟಗಾರರು ಬೆಟ್ಟದ ಜೈವಿಕ ಅನುಭವಕ್ಕೆ ದೇಹಕ್ಕೆ ಆವಾಹಿಸಿ ಕೊಂಡ ಪರಿ ವರ್ಣನಾತೀತವಾಗಿತ್ತು.

ಕಾರು ಚಾಲಕ ಎಂ.ಬಾಬು ಆತ್ಮಹತ್ಯೆ : ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆ.11ರಂದು ದಲಿತ ಸಂಘಟನೆಗಳಿಂದ ಪ್ರತಿಭಟನೆ

ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಆ.11ರಂದು ಪ್ರತಿಭಟನೆ

ಎಫ್‌ಐಆರ್‌ನಲ್ಲಿ ಪ್ರಭಾವಿ ಮುಖಂಡರ ಹೆಸರಿದೆ ಎಂಬ ಕಾರಣಕ್ಕೆ ಬಂಧಿಸಲು ಪೊಲೀಸರು ಮುಂದಾ ಗುತ್ತಿಲ್ಲ ಎಂಬ ಅನುಮಾನವಿದೆ. ಎರಡು ದಿನದೊಳಗೆ ಬಂಧಿಸದಿದ್ದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ  ಮಾಡುತ್ತೇವೆ. ಆಗಲೂ ನಿರ್ಲಕ್ಷ್ಯ ವಹಿಸಿದರೆ ಚಿಕ್ಕಬಳ್ಳಾಪುರ ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಹೆಚ್ಚುತ್ತಿರುವ ಹೃದಯಾಘಾತ ಸಂಘದ ಆಶ್ರಯದಲ್ಲಿ ತಜ್ಞರ ಜತೆ ಪತ್ರಕರ್ತರ ಸಂವಾದ

ಹೆಚ್ಚುತ್ತಿರುವ ಹೃದಯಾಘಾತ: ತಜ್ಞರ ಜತೆ ಪತ್ರಕರ್ತರ ಸಂವಾದ

ಯುವಕರು ಮತ್ತು ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘವು ಹುಣ್ಣಿಮೆ ಅಂಗವಾಗಿ ತಜ್ಞವೈದ್ಯರು ಮತ್ತು ಮತ್ರಕರ್ತರ ಜತೆ ಮುಖಾಮುಖಿ ಸಂವಾದ ಏರ್ಪಡಿಸಿ ಈ ಬಗ್ಗೆ ಸಾಕಷ್ಟು ಖಚಿತ ಮಾಹಿತಿಯನ್ನು ಪಡೆದು ಕೊಳ್ಳುವಲ್ಲಿ ಯಶಸ್ವಿಯಾದರು.

ಗ್ಯಾರಂಟಿ ಯೋಜನೆಗಳ ಮೀರಿ; ಗ್ಯಾರಂಟಿ ಸುಧಾರಣೆಗಳು ಮತ್ತು ಪ್ರಗತಿಪರ ನೀತಿಗಳ ಅಗತ್ಯ: ಕಾಗಜ್ ಫೌಂಡೇಶನ್ ಟ್ರಸ್ಟಿ ಕವಿತಾ ರೆಡ್ಡಿ

ಗ್ಯಾರಂಟಿ ಸುಧಾರಣೆಗಳು ಮತ್ತು ಪ್ರಗತಿಪರ ನೀತಿಗಳ ಅಗತ್ಯವಿದೆ

ತಮಿಳುನಾಡಿಗಿಂತ ಭಿನ್ನವಾಗಿ ಕರ್ನಾಟಕವು ಹೆಚ್ಚಾಗಿ ಬೆಂಗಳೂರಿನ ಮೇಲೆ ಗಮನ ಕೇಂದ್ರೀಕರಿಸಿದೆ ಮತ್ತು ರಾಜ್ಯದಾದ್ಯಂತ ಅನೇಕ ಕ್ರಿಯಾತ್ಮಕ ಕೈಗಾರಿಕಾ ವಲಯಗಳನ್ನು ರಚಿಸುವಲ್ಲಿ ನಿರಂತರವಾಗಿ ವಿಫಲವಾಗಿದೆ, ಇದರಿಂದಾಗಿ ಜನರು ಬೆಂಗಳೂರಿಗೆ ವಲಸೆ ಹೋಗು ವಂತೆ ಮಾಡಿದೆ, ಇದು ಕರ್ನಾಟಕದ ಯುವಜನರಿಗೆ ಕಡಿಮೆ ಆಕರ್ಷಕವಾಗುತ್ತಿದೆ

Namma Metro: ನೂತನ ಹಳದಿ ಮಾರ್ಗ ನಮ್ಮ ಮೆಟ್ರೋ ಟಿಕೆಟ್‌ ದರಗಳು ಎಷ್ಟಿವೆ?

ನೂತನ ಹಳದಿ ಮಾರ್ಗ ನಮ್ಮ ಮೆಟ್ರೋ ಟಿಕೆಟ್‌ ದರಗಳು ಎಷ್ಟಿವೆ?

Yellow Line: ಸದ್ಯ ಪ್ರತಿ 20 ರಿಂದ 25 ನಿಮಿಷಗಳ ಅಂತರದಲ್ಲಿ ಒಂದು ಮೆಟ್ರೋ ಸಂಚಾರ ಇರಲಿದೆ. ನಿತ್ಯ 20-30 ಸಾವಿರ ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚಾರ ಮಾಡಲಿದ್ದಾರೆ. 2026ರ ವೇಳೆಗೆ 12 ರೈಲುಗಳು ಹಳದಿ ಮಾರ್ಗಕ್ಕೆ ಸೇರ್ಪಡೆ ಆಗಲಿದೆ. ಆ ಮೂಲಕ ಹಳದಿ ಮಾರ್ಗದಲ್ಲಿ 15 ಮೆಟ್ರೋಗಳು ಓಡಾಡಲಿವೆ.

Namma Metro Phase 3: ನಮ್ಮ ಮೆಟ್ರೋ 3ನೇ ಹಂತದ ಕಾಮಗಾರಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ನಮ್ಮ ಮೆಟ್ರೋ 3ನೇ ಹಂತಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Prime Minister Modi: ಪ್ರಧಾನಮಂತ್ರಿ ಮೋದಿ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಸಭಾಂಗಣದಲ್ಲಿ ಬೆಂಗಳೂರು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. 15,610 ಕೋಟಿ ವೆಚ್ಚದಲ್ಲಿ ಮೆಟ್ರೋ 3ನೇ ಹಂತದ ಯೋಜನೆ ನಿರ್ಮಾಣ ಮಾಡಲಾಗುತ್ತಿದ್ದು, 44 ಕಿಮೀ ಉದ್ದದ ಕಿತ್ತಳೆ ಮಾರ್ಗದಲ್ಲಿ 31 ಎಲಿವೇಟೆಡ್‌ ನಿಲ್ದಾಣಗಳು ಇರಲಿವೆ.

PM Narendra Modi: ಬೆಂಗಳೂರಿನ ಆತ್ಮದಲ್ಲಿ ತಂತ್ರಜ್ಞಾನ ಇದೆ... ಆಪರೇಷನ್‌ ಸಿಂದೂರ್‌ನಲ್ಲೂ ಮಹತ್ವದ ಪಾತ್ರ: ಪ್ರಧಾನಿ ಮೋದಿ

ಬೆಂಗಳೂರು ನವ ಭಾರತದ ಚಿಹ್ನೆ- ಹಾಡಿ ಹೊಗಳಿದ ಪ್ರಧಾನಿ ಮೋದಿ

PM Modi in Bengalore : ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಇಂದು ನಮ್ಮ ಮೆಟ್ರೋದ ಯೆಲ್ಲೋ ಲೈನ್‌ ಮತ್ತು ವಂದೇ ಭಾರತ್‌ ರೈಲಿಗೆ ಚಾಲನೆ ನೀಡಿದ್ದಾರೆ. ಇದಾದ ಬಳಿಕ ಅವರು ಮೆಟ್ರೋ ೩ನೇ ಹಂತದ ಕಾಮಗಾರಿಗೆ ಅವರು ಅಡಿಗಲ್ಲು ಹಾಕಿದ್ದಾರೆ. ಈ ವೇಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Dharmasthala Case: ಧರ್ಮಸ್ಥಳ ಗಲಾಟೆಗೆ ಸಂಬಂಧಿಸಿ 6 ಮಂದಿಯ ಬಂಧನ, ಜಾಮೀನು

ಧರ್ಮಸ್ಥಳ ಗಲಾಟೆಗೆ ಸಂಬಂಧಿಸಿ 6 ಮಂದಿಯ ಬಂಧನ, ಜಾಮೀನು

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಡೆದಿದ್ದ ಎರಡು ಗುಂಪುಗಳ ನಡುವಿನ ಗಲಾಟೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಆರು ಜನರನ್ನು ಬಂಧಿಸಿದ್ದಾರೆ. ಇವರಿಗೆ ಜಾಮೀನು ದೊರೆತಿದ್ದು, ಆ.11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ನ್ಯಾಯಾಧೀಶರು ಆದೇಶಿಸಿದ್ದಾರೆ.

Loading...