ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಸಮಾಜ ಸುಧಾರಣೆಯೇ ಡಿ.ದೇವರಾಜ ಅರಸು : ತಹಶೀಲ್ದಾರ್ ಆರತಿ.ಬಿ

ಸಮಾಜ ಸುಧಾರಣೆಯೇ ಡಿ.ದೇವರಾಜ ಅರಸು

ರಾಜ್ಯದಲ್ಲಿ ಸಾಮಾಜಿಕ ಕ್ರಾಂತಿ ಹಾಗೂ ಶೋಷಿತ ಸಮುದಾಯಗಳಿಗೆ ರಾಜಕೀಯ ಮತ್ತು ಸಾಮಾಜಿಕ ಶಕ್ತಿ ತುಂಬಿದ ನಾಯಕರಾದ ದೇವರಾಜ ಅರಸು ಪರಿಣಾಮಕಾರಿಯಾಗಿ ಜಾರಿಗೊಳಿಸಿದ ಭೂ ಸುಧಾರಣಾ ಕಾಯಿದೆ ಬಡ ರೈತರಿಗೆ ಭೂಮಿ ಸಿಕ್ಕಿ ಬದುಕು ಕಟ್ಟಿಕೊಂಡರು. ಜೀತ ಪದ್ಧತಿ ನಿರ್ಮೂಲನೆ ಕಠಿಣವಾಗಿ ಜಾರಿಗೆ ತಂದರು.

Gudibande News: ದೇವರಾಜ ಅರಸು ಅವರ ಆದರ್ಶ ಪಾಲನೆಯೇ ಜಯಂತಿ ಆಚರಣೆಗೆ ಸಾರ್ಥಕತೆ: ಪರಿಮಳ

ಅರಸು ಅವರ ಆದರ್ಶ ಪಾಲನೆಯೇ ಜಯಂತಿ ಆಚರಣೆಗೆ ಸಾರ್ಥಕತೆ

ಮಹನೀಯರ ಜಯಂತಿ ಆಚರಿಸುವುದಷ್ಟೇ ಸಾಲದು. ಅವರು ತೋರಿದ ಆದರ್ಶ ಹಾಗೂ ಸಮಾಜ ಮುಖಿ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗೆ ನಿಜವಾದ ಸಾರ್ಥಕತೆ ದೊರೆಯುತ್ತದೆ ಎಂದು ನ್ಯೂ ವಿಷನ್ ಇಂಗ್ಲೀಷ್ ಶಾಲೆಯ ಮುಖ್ಯಸ್ಥೆ ಪರಿಮಳ ಹೇಳಿದರು.

SIR: ಮತದಾರರ ಹಕ್ಕು–ಆಕ್ಷೇಪಣೆಗಳ ವಿಲೇವಾರಿಯಲ್ಲಿ ಪಾರದರ್ಶಕತೆ ಕಡ್ಡಾಯ: ಜಿಲ್ಲಾಧಿಕಾರಿ

ಮತದಾರರ ಹಕ್ಕು–ಆಕ್ಷೇಪಣೆಗಳ ವಿಲೇವಾರಿಯಲ್ಲಿ ಪಾರದರ್ಶಕತೆ ಕಡ್ಡಾಯ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಹಿನ್ನೆಲೆಯಲ್ಲಿ ಕರಡು ಮತದಾರರ ಪಟ್ಟಿಗೆ ಸಲ್ಲಿಕೆ ಯಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಯಮಾನುಸಾರ, ನಿಷ್ಪಕ್ಷಪಾತವಾಗಿ ಹಾಗೂ ಸಮರ್ಪಕ ವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಪ್ರಭು ಅವರು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಸೂಚಿಸಿದರು.

ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ: ಊಟ, ಸ್ವಚ್ಛತೆ ಪರಿಶೀಲಿಸಿದ ತಹಸೀಲ್ದಾರ್

ವಿದ್ಯಾರ್ಥಿನಿಲಯಕ್ಕೆ ದಿಢೀರ್ ಭೇಟಿ: ಊಟ, ಸ್ವಚ್ಛತೆ ಪರಿಶೀಲನೆ

ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ಅವರು, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಪ್ರತಿನಿತ್ಯ ನಿಗದಿತ ಸಮಯವನ್ನು ಅಧ್ಯಯನಕ್ಕೆ ಮೀಸಲಿಡಬೇಕು. ಐಎಎಸ್, ಕೆಎಎಸ್ ಸೇರಿದಂತೆ ಸ್ಪರ್ಧಾ ತ್ಮಕ ಪರೀಕ್ಷೆಗಳಿಗೆ ಈಗಿನಿಂದಲೇ ಸಿದ್ಧತೆ ನಡೆಸಿ, ಸ್ಪಷ್ಟ ಗುರಿ ಹಾಗೂ ಶ್ರದ್ಧೆಯಿಂದ ಮುನ್ನಡೆಯಬೇಕು ಎಂದು ಕಿವಿಮಾತು ಹೇಳಿದರು

ಸಂಪತ್ತು, ಅಧಿಕಾರ ಸಮಾನ ಹಂಚಿಕೆಯಾದಾಗ ದೇಶದ ನೈಜ ಉದ್ಧಾರ: ಎಲ್.ಎನ್.ಮುಕುಂದರಾಜ್

ಸಂಪತ್ತು, ಅಧಿಕಾರ ಸಮಾನ ಹಂಚಿಕೆಯಾದಾಗ ದೇಶದ ನೈಜ ಉದ್ಧಾರ

ಸಂವಿಧಾನ ನೀಡಿರುವ ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಅರಿತು ಪ್ರತಿಯೊ ಬ್ಬರೂ ನಡೆದುಕೊಳ್ಳಬೇಕು. ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರಂತಹ ಮಹನೀಯರು ರೂಪಿಸಿದ ಸಂವಿಧಾನದ ಶಕ್ತಿಯಿಂದಾಗಿ ಇಂದು ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳು ದೊರೆತಿವೆ.

ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಒದಗಿಸಲು ಒಪ್ಪಂದ

ಡ್ರಿವನ್ ಸಂಸ್ಥೆಯು ವಾಣಿಜ್ಯ ವಾಹನ ಸಮೂಹ ನಿರ್ವಾಹಕರ ಪ್ರತಿಯೊಂದು ಅಗತ್ಯಕ್ಕೂ ತಕ್ಕಂತೆ ವಿಶೇಷ ಆಪರೇಟಿಂಗ್ ಲೀಸ್ ಪರಿಹಾರಗಳನ್ನು ರೂಪಿಸಿ ಒದಗಿಸುತ್ತದೆ. ಹಣಕಾಸು ನೆರವು, ವಾಹನಗಳ ನಿಯೋಜನೆ ಮತ್ತು ಚಾರ್ಜಿಂಗ್ ಮೂಲಸೌಕರ್ಯಗಳಲ್ಲಿ ದೀರ್ಘಕಾಲದಿಂದಲೂ ಎದುರಾಗು ತ್ತಿದ್ದ ಪ್ರಮುಖ ಅಂತರಗಳನ್ನು ಯಶಸ್ವಿಯಾಗಿ ನೀಗಿಸುವ ಮೂಲಕ, ವಿದ್ಯುತ್ ವಾಹನಗಳ ಬಳಕೆಯನ್ನು ಅತ್ಯಂತ ಸರಳ ಹಾಗೂ ಹೆಚ್ಚು ಪ್ರಾಯೋಗಿಕವಾಗಿಸುತ್ತಿದೆ.

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು: 'ಡನ್ & ಬ್ರಾಡ್‌ಸ್ಟ್ರೀಟ್' ವರದಿಯಲ್ಲಿ ಅಚ್ಚರಿಯ ಮಾಹಿತಿ!

ಮೆಟ್ರೋ ನಗರಗಳನ್ನು ಹಿಂದಿಕ್ಕಿ ಬೆಳೆಯುತ್ತಿವೆ ಸಣ್ಣ ನಗರಗಳು

ಭಾರತದ ಆರ್ಥಿಕ ಬೆಳವಣಿಗೆ ಎಂದರೆ ಕೇವಲ ಮುಂಬೈ, ದೆಹಲಿ, ಬೆಂಗಳೂರಿ ನಂತಹ ದೊಡ್ಡ ಮೆಟ್ರೋ ನಗರಗಳು ಮಾತ್ರ ಅಂತ ನೀವು ಅಂದುಕೊಂಡಿದ್ದರೆ, ಆ ಲೆಕ್ಕಾಚಾರ ಬದಲಿಸಿಕೊಳ್ಳುವ ಸಮಯ ಬಂದಿದೆ. ದೇಶದ ಸಣ್ಣ ಮತ್ತು ಉದಯೋನ್ಮುಖ ನಗರಗಳೂ ಇದೀಗ ಆರ್ಥಿಕತೆಯಲ್ಲಿ ದೊಡ್ಡ ಕೊಡುಗೆ ನೀಡುತ್ತಿವೆ ಅಂತ ವರದಿಯೊಂದು ಹೇಳಿದೆ.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕದ ರೈಲು ನಿಲ್ದಾಣಗಳಲ್ಲಿ ಫಂಗಸ್ ಬಂದ, ಅವಧಿ ಮೀರಿದ ಆಹಾರ ಮಾರಾಟ

ಪ್ರಯಾಣಿಕರೇ ಎಚ್ಚರ; ರೈಲು ನಿಲ್ದಾಣದ ಆಹಾರ ಸುರಕ್ಷಿತವಲ್ಲ

ಫಂಗಸ್ ಬೆಳೆದಿರುವ, ಬಣ್ಣ ಬಳಸಿರುವ, ಅವಧಿ ಮೀರಿದ ಆಹಾರ ಉತ್ಪನ್ನಗಳನ್ನು ರೈಲು ನಿಲ್ದಾಣಗಳಲ್ಲಿ ಮಾರಾಟ ಮಾಡುತ್ತಿರುವುದನ್ನು ಕರ್ನಾಟಕದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಪತ್ತೆ ಮಾಡಿದೆ. ರಾಜ್ಯದ ಒಟ್ಟು 36 ರೈಲು ನಿಲ್ದಾಣಗಳಲ್ಲಿ ಗುರುವಾರ ನಡೆಸಿರುವ ತಪಾಸಣೆ ವೇಳೆ ಈ ಅಂಶಗಳು ಕಂಡು ಬಂದಿವೆ.

ಹುಟ್ಟಿನಿಂದಲೇ ಇದ್ದ ಹೃದಯ ಸಂಬಂಧಿ ಕಾಯಿಲೆಯಿಂದ ಪೇಸ್‌ಮೇಕರ್ ಅಳವಡಿಸಿಕೊಂಡಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ

ಹುಟ್ಟಿನಿಂದಲೇ ಇದ್ದ ಹೃದಯ ಸಂಬಂಧಿ ಕಾಯಿಲೆ: ಗರ್ಭಿಣಿಗೆ ಯಶಸ್ವಿ ಹೆರಿಗೆ

ಮೊದಲ ಬಾರಿಗೆ ತಾಯಿಯಾಗುತ್ತಿದ್ದ ಯುವತಿ ಹುಟ್ಟಿನಿಂದಲೇ ಹೃದಯ ಸಂಬಂಧಿ ಕಾಯಿಲೆ ಯಿಂದ ಬಳಲುತ್ತಿದ್ದರು. ಬಾಲ್ಯದಲ್ಲೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರಿಗೆ, ಹೃದಯ ಬಡಿತದ ಸಮಸ್ಯೆಯಿಂದಾಗಿ ಶಾಶ್ವತ ಪೇಸ್‌ಮೇಕರ್ ಅಳವಡಿಸಲಾಗಿತ್ತು. ಗರ್ಭಧಾರಣೆಯ ವೇಳೆ ಗರ್ಭಕೋಶ ದಲ್ಲಿ ‘ಪ್ಲಾಸೆಂಟಲ್ ಲ್ಯಾಕುನೆ’ ಎಂಬ ಅಸಹಜತೆ ಪತ್ತೆಯಾಗಿದ್ದು, ಹೆರಿಗೆಯ ವೇಳೆ ತೀವ್ರ ರಕ್ತಸ್ರಾವ ವಾಗುವ ಅಪಾಯವಿತ್ತು.

ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ: 25 ಕಲಾವಿದರಿಗೆ ವಾರ್ಷಿಕ, 7 ಮಂದಿಗೆ ದತ್ತಿನಿಧಿ ಪ್ರಶಸ್ತಿ

25 ಕಲಾವಿದರಿಗೆ ವಾರ್ಷಿಕ, 7 ಮಂದಿಗೆ ದತ್ತಿನಿಧಿ ಪ್ರಶಸ್ತಿ

ಕರ್ನಾಟಕ ನಾಟಕ ಅಕಾಡೆಮಿಯು 2026-27ನೇ ಸಾಲಿನ ಜೀವಮಾನ ಸಾಧನೆ ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿನಿಧಿ ಪುರಸ್ಕಾರಗಳನ್ನು ಗುರುವಾರ ಪ್ರಕಟಿ ಸಿದೆ. ರಂಗಭೂಮಿ ಕ್ಷೇತ್ರಕ್ಕೆ ಸಲ್ಲಿಸಿರುವ ದೀರ್ಘ ಕಾಲದ ಸೇವೆ ಗುರುತಿಸಿ ಹಿರಿಯ ನಟ ಡಾ.ಮುಖ್ಯ ಮಂತ್ರಿ ಚಂದ್ರು ಅವರಿಗೆ ಜೀವಮಾನ ಸಾಧನೆ ಗೌರವ ಪ್ರಶಸ್ತಿ ಘೋಷಿಸಲಾಗಿದೆ.

60ರ ಗಡಿ ದಾಟಿದ ಅಭಿಮನ್ಯುವಿಗೆ ವಿಶ್ರಾಂತಿ

60ರ ಗಡಿ ದಾಟಿದ ಅಭಿಮನ್ಯುವಿಗೆ ವಿಶ್ರಾಂತಿ

ಅಂಬಾರಿ ಹೊತ್ತ ದಸರೆಯ ರಾಜನಾಗಿ, ಕಾಡಾನೆಗಳ ಸೆರೆ ಕಾರ್ಯಾಚರಣೆಯ ‘ಎಕೆ-47’ ಆಗಿ, ನರಹಂತಕ ಹುಲಿಗಳ ಸೆರೆ ಕಾರ್ಯಾಚರಣೆಯ ಧೈರ್ಯ ಶಾಲಿ ಗಜರಾಜನಾಗಿ ಮತ್ತು ಸಂಕಷ್ಟದಲ್ಲಿರುವ ಆನೆಗಳ ಅಪತ್ಬಾಂಧವನಾಗಿ ಅಭಿಮನ್ಯು ಹಲವು ಪಾತ್ರಗಳನ್ನು ನಿರ್ವಹಿಸಿದ್ದಾನೆ. ಇದೀಗ ವಯಸ್ಸು ಆತನಿಗೆ ವಿಶ್ರಾಂತಿ ನೀಡಿದೆ.

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ಕೋರಿದ ತನಿಖಾ ಸಂಸ್ಥೆ: ನಾಗೇಂದ್ರಗೆ ಸಿಬಿಐ ತನಿಖೆಯ ಉರುಳು ?

ನಾಗೇಂದ್ರಗೆ ಸಿಬಿಐ ತನಿಖೆಯ ಉರುಳು ?

ಸಚಿನ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ನಿರಂತರ ಧರಣಿಯ ನಡುವೆಯೇ, ನಾಗೇಂದ್ರ ಅವರಿಗೆ ಸಿಬಿಐ ‘ಪ್ರಾಸಿಕ್ಯೂ ಷನ್’ ಶಾಕ್ ನೀಡಿದೆ. ಭಾರೀ ವಿವಾದಕ್ಕೆ ಕಾರಣವಾಗಿರುವ ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಕಷ್ಟ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಯಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ನಾಗೇಂದ್ರ ಅವರನ್ನು ವಿಚಾರಣೆ ಗೊಳಪಡಿಸಲು ಹಾಗೂ ಕಾನೂನು ಕ್ರಮ ಮುಂದುವರಿಸಲು ರಾಜ್ಯಪಾಲರ ಅನುಮತಿ ಕೋರಿ ಪತ್ರ ಬರೆದಿದೆ ಎನ್ನಲಾಗಿದೆ

ದಕ್ಷಿಣಕ್ಕೆ ಶಿಕ್ಷೆ ಬೇಡ: ಡಿಕೆಶಿ ಗುಡುಗು

ದಕ್ಷಿಣಕ್ಕೆ ಶಿಕ್ಷೆ ಬೇಡ: ಡಿಕೆಶಿ ಗುಡುಗು

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠ ವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಽಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ ನ್ಯಾಯ ಯುತವಾಗಿ ಅನುದಾನ ನೀಡಿ. ದಕ್ಷಿಣ ಭಾರತಕ್ಕೆ ಸಲ್ಲಬೇಕಾದ ನ್ಯಾಯಯುತ ಪಾಲನ್ನು ನೀಡಿ ಎಂದು ಶಿವಕುಮಾರ್ ಅವರು ಒತ್ತಾಯಿಸಿದರು.

Varamahalakshmi festival: ವರಮಹಾಲಕ್ಷ್ಮೀ ಹಬ್ಬಕ್ಕೆ ಭಕ್ತರ ಖರೀದಿ ಸಂಭ್ರಮ; ಹೂವು, ಹಣ್ಣು-ಹಂಪಲುಗಳಿಗೆ ಭರ್ಜರಿ ಬೇಡಿಕೆ

ಬರದ ನಡುವೆಯೂ ಲಕ್ಷ್ಮೀ ಕೃಪೆಯ ನಿರೀಕ್ಷೆ

ಮಳೆ ಕೊರತೆಯಿಂದ ಹೂವಿನ ಇಳುವರಿ ಕುಸಿದಿರುವುದು ಹಾಗೂ ಹಬ್ಬದ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಿರುವುದರಿಂದ ದರ ಗಗನಮುಖಿಯಾಗಿದೆ. ವಾರದ ಹಿಂದೆ ಕೆ.ಜಿ.ಗೆ ರೂಪಾಯಿ 150ರಿಂದ 200 ರಷ್ಟಿದ್ದ ಮಲ್ಲಿಗೆ ಇದೀಗ ರೂಪಾಯಿ 1000ಕ್ಕೂ ಹೆಚ್ಚು ಮಾರಾಟವಾಗುತ್ತಿದೆ. ರೂಪಾಯಿ 400ರಿಂದ 500ರಷ್ಟಿದ್ದ ಕನಕಾಂಬರ ರೂಪಾಯಿ 2500ರಿಂದ 3000ಕ್ಕೆ ತಲುಪಿದೆ.

ಕೃತ್ಯಕ್ಕೆ ಬಳಸಿದ 5 ಗೂಡ್ಸ್ ವಾಹನ ಹಾಗೂ ನಾಲ್ಕು ಜನ ಆರೋಪಿಗಳ ವಶಕ್ಕೆ ಪಡೆದ ರಾಮದುರ್ಗ ಪೊಲೀಸರು

ಅಕ್ರಮ ಗೋಮಾಂಸ ಅಡ್ಡೆ ಮೇಲೆ ಹಿಂದೂ ಕಾರ್ಯಕರ್ತರು ದಾಳಿ

ಗೋಹತ್ಯೆ ನಿಷೇಧ ಕಾಯ್ದೆ ಗಾಳಿಗೆ ತೂರಿ ಹೋಗಿದ್ದು, ಅಕ್ರಮ ಕಸಾಯಿಖಾನೆಯೊಂದರ ಮೇಲೆ ಹಿಂದೂ ಕಾರ್ಯಕರ್ತರು ಮತ್ತು ಸಾರ್ವಜನಿಕರು ಬುಧವಾರ ದಿಢೀರ್ ದಾಳಿ ನಡೆಸಿದ್ದಾರೆ. ಕಾನೂನು ಬಾಹಿರವಾಗಿ ಜಿವಂತ ಹಸುಗಳನ್ನು ಹಾಗೂ ಎತ್ತುಗಳನ್ನು ಕಟಾವು ಮಾಡುತ್ತಿದ್ದ ವೇಳೆ ಪೊಲೀಸರ ಸಹಾಯದಿಂದ ಮಾಲೀಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಕಾನೂನು ಕ್ರಮಕ್ಕಾಗಿ ಪೊಲೀಸರಿಗೆ ಒಪ್ಪಿಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ಪ್ರೊ. ಶರದ್ ಜೋಶಿ ನೇತೃತ್ವದ ನೀರಾವರಿ ತಜ್ಞರ ತಂಡದಿಂದ ಆಲಮಟ್ಟಿ ಜಲಾಶಯದ ಸುರಕ್ಷತೆ ಪರಿಶೀಲನೆ

ನೀರಾವರಿ ತಜ್ಞರ ತಂಡದಿಂದ ಆಲಮಟ್ಟಿ ಜಲಾಶಯದ ಸುರಕ್ಷತೆ ಪರಿಶೀಲನೆ

Almatti Reservoir: ಪ್ರೊ. ಶರದ್ ಜೋಶಿ ನೇತೃತ್ವದ ಎಂಟು ಜನ ನೀರಾವರಿ ತಜ್ಞರ ತಂಡ ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ಆಲಮಟ್ಟಿ ಜಲಾಶಯದ ಸಮಗ್ರ ಸುರಕ್ಷತಾ ಪರಿಶೀಲನೆ ನಡೆಸಿತು. ಈ ಕುರಿತ ವಿವರ ಇಲ್ಲಿದೆ.

D Devraj Urs: ದೇವರಾಜ ಅರಸು ಹಿಂದುಳಿದ ವರ್ಗಗಳ ಚಾಂಪಿಯನ್: ಎನ್. ಆಂಜಿನಪ್ಪ

ದೇವರಾಜ ಅರಸು ಹಿಂದುಳಿದ ವರ್ಗಗಳ ಚಾಂಪಿಯನ್: ಎನ್. ಆಂಜಿನಪ್ಪ

ಹಿಂದುಳಿದ ವರ್ಗಗಳಲ್ಲಿಯೂ ಬಡತನ, ಅನಕ್ಷರತೆ ಹಾಗೂ ಸಾಮಾಜಿಕ ಹಿಂದುಳಿದಿರುವಿಕೆ ಇತ್ತು. ಇಂತಹ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅರಸು ಅವರು ಶಿಕ್ಷಣ, ಉದ್ಯೋಗ ಹಾಗೂ ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಿದರು. ಅವರ ದೂರದೃಷ್ಟಿಯ ಆಡಳಿತ ದಿಂದ ಹಿಂದುಳಿದ ವರ್ಗಗಳ ಬದುಕಿನಲ್ಲಿ ಮಹತ್ವದ ಬದಲಾವಣೆಗಳಾದವು

ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಭಾರತೀ ಶ್ರೀ

ಆಹಾರದ ರಸಗಳಿಗೂ ಭಾವಕ್ಕೂ ನಿಕಟ ಸಂಬಂಧ: ರಾಘವೇಶ್ವರ ಭಾರತೀ ಶ್ರೀ

Sri Raghaveshwara Bharathi Swamiji: ರಾತ್ರಿಯ ನಿದ್ದೆಯು ಮಧುರವಾಗಬೇಕಾದರೆ ಊಟ ಮಾಡಿ ಸುಮಾರು ಒಂದೂವರೆ ಗಂಟೆಗೆ ನಿದ್ರೆಯನ್ನು ಮಾಡಬೇಕು. ರಾತ್ರಿಯನ್ನು ಕಫ, ಪಿತ್ತ, ವಾತ ಎಂದು ವಿಭಾಗ ಮಾಡಲಾಗಿದ್ದು, ಕಫ ಕಾಲದಲ್ಲಿ ನಿದ್ದೆಗೆ ಹೋದಾಗ ನಿದ್ದೆಯ ಪೂರ್ಣ ಪ್ರಯೋಜನವನ್ನು ಪಡೆಯಲು ಸಾಧ್ಯ. ತಡ ರಾತ್ರಿ ಪಿತ್ತ, ವಾತ ಸಮಯಗಳಲ್ಲಿ ಮಲಗಿದರೆ ನಿದ್ದೆಯ ನಿಜವಾದ ಪ್ರಯೋಜನ ಸಿಗದು ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ತಿಪಟೂರಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಸಚಿವ ಬಿ.ಸಿ.ನಾಗೇಶ್‌ ಅಂತ್ಯ ಸಂಸ್ಕಾರ

ಮಾಜಿ ಸಚಿವ ಬಿ.ಸಿ.ನಾಗೇಶ್‌ ಪಂಚಭೂತಗಳಲ್ಲಿ ಲೀನ

ತುಮಕೂರು ಜಿಲ್ಲೆ ತಿಪಟೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್‌ ಅವರ ಅಂತ್ಯಕ್ರಿಯೆ ಗುರುವಾರ ನಡೆಯಿತು. ಈ ವೇಳೆ ವಿವಿಧ ರಾಜಕೀಯ ನಾಯಕರು, ಗಣ್ಯರು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.

Hassan News: ಪ್ರೀತಿಸಿ ಮದುವೆಯಾಗಿದ್ದಕ್ಕೆ ಅತ್ತೆ ಮನೆಯವರಿಂದ ಕಿರುಕುಳ; 2 ವರ್ಷದ ಮಗುವನ್ನು ಕೊಂದು ಮಹಿಳೆ ಆತ್ಮಹತ್ಯೆ!

ಹಾಸನದಲ್ಲಿ ಘೋರ ಘಟನೆ; 2 ವರ್ಷದ ಮಗುವನ್ನು ಕೊಂದು ಮಹಿಳೆ ಆತ್ಮಹತ್ಯೆ!

ಹಾಸನ ಜಿಲ್ಲೆಯ ಆಲೂರಿನ ಹೌಸಿಂಗ್ ಬೋರ್ಡ್‌ನಲ್ಲಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಅತ್ತೆ ಮನೆಯವರಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಮಗನನ್ನು ಕೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ತೆ ಮತ್ತು ಮಗಳ ಕಿರುಕುಳದಿಂದ ತನ್ನ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಆರೋಪಿಸಿದ್ದಾರೆ.

B Nagendra: ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ ಬಿ. ನಾಗೇಂದ್ರಗೆ ತುಸು ರಿಲೀಫ್‌; ಹೈಕೋರ್ಟ್‌ ಮಹತ್ವದ ಆದೇಶ

ಸಚಿವ ಬಿ. ನಾಗೇಂದ್ರಗೆ ರಿಲೀಫ್‌; ಹೈಕೋರ್ಟ್‌ ಮಹತ್ವದ ಆದೇಶ

ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ ನಾಗೇಂದ್ರ ಅವರಿಗೆ ಕೊಂಚ ನಿರಾಳತೆ ಸಿಕ್ಕಿದೆ. ಮೇಲೆ ರಾಜ್ಯ ಬಿಟ್ಟು ತೆರಳದಂತೆ ವಿಧಿಸಿದ್ದ ಷರತ್ತನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿದ್ದು, ವಿಚಾರಣಾ ನ್ಯಾಯಾಲಯದ ಅನುಮತಿ ಪಡೆಯದೆ ವಿದೇಶಕ್ಕೆ ಹೋಗುವಂತಿಲ್ಲ ಎಂದು ಆದೇಶಿಸಿದೆ.

Yezdi Roadster Red Wolf: ಅಮೆಜಾನ್, ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ ಹೊಸ 'ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್' ಬೈಕ್‌; ಬೆಲೆ ಎಷ್ಟು?

ಹೊಸ 'ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್' ಬೈಕ್‌ನ ವಿಶೇಷತೆಗಳೇನು?

Yezdi Bikes: ಜಾವಾ-ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ ಹೊಚ್ಚ ಹೊಸ 'ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್' ಬೈಕ್ ಅನ್ನು ಮನೆಯಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ಬುಕ್‌ ಮಾಡುವ ಅವಕಾಶವನ್ನು ಗ್ರಾಹಕರಿಗೆ ಕಲ್ಪಿಸಿದೆ. ಶೋರೂಂಗಳಿಗೆ ಹೋಗದೆ, ಜನಪ್ರಿಯ ಇ-ಕಾಮರ್ಸ್‌ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಬೈಕ್‌ ಬುಕ್ ಮಾಡಬಹುದಾಗಿದೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

Pension Income Limit: ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌; ಆದಾಯ ಮಿತಿ 1.2 ಲಕ್ಷಕ್ಕೆ ಹೆಚ್ಚಳ, ಅರ್ಹರಿಗೆ ಸೌಲಭ್ಯ ಮುಂದುವರಿಸಲು ಆದೇಶ

ಪಿಂಚಣಿದಾರರಿಗೆ ಗುಡ್‌ನ್ಯೂಸ್‌; ಆದಾಯ ಮಿತಿ 1.2 ಲಕ್ಷಕ್ಕೆ ಹೆಚ್ಚಳ

ಫಲಾನುಭವಿಗಳ ಮರು ಪರಿಶೀಲನೆ ನಂತರ 32,000 ರಿಂದ 1,20,000 ರೂ. ಒಳಗಿನ ವಾರ್ಷಿಕ ಆದಾಯ ಮಿತಿ ಹೊಂದಿರುವ ಅರ್ಹ ಫಲಾನುಭವಿಗಳ ಪಿಂಚಣಿಗಳನ್ನು ಮುಂದಿನ ಆದೇಶದವರೆಗೆ ಮುಂದುವರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಕಂದಾಯ ಸಚಿವ ಡಾ.ಜಿ.ಪರಮೇಶ್ವರ್‌ ಮಾಹಿತಿ ನೀಡಿದ್ದಾರೆ.

ಮಾಜಿ ಸಚಿವ ಬಿ.ಸಿ. ನಾಗೇಶ್ ಪಾರ್ಥೀವ ಶರೀರದ ಅಂತಿಮ ರಥಯಾತ್ರೆ ಸಾಗುತ್ತಿದ್ದಂತೆ ಆಜಾನ್ ಕೂಗದೆ ಸೌಹಾರ್ದತೆ ಮೆರೆದ ಮುಸ್ಲಿಮರು

ತಿಪಟೂರಿನಲ್ಲಿ ಸೌಹಾರ್ದತೆ ಮೆರೆದ ಮುಸ್ಲಿಮರು

BC Nagesh: ಅನಾರೋಗ್ಯದ ಹಿನ್ನೆಲೆಯಲ್ಲಿ ಆಗಸ್ಟ್‌ 18ರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದ ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ ಅವರ ಪಾರ್ಥೀವ ಶರೀರದ ಮೆರವಣಿಗೆ ವೇಳೆ ತಿಪಟೂರಿನಲ್ಲಿ ಮುಸ್ಲಿಮರು ಆಜಾನ್ ಕೂಗದೆ ಗೌರವ ಸಲ್ಲಿಸಿದರು.

Loading...