ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
BJP Karnataka: ಪಕ್ಷದ ಶಿಸ್ತು ಉಲ್ಲಂಘನೆ; ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್‌ ನೋಟಿಸ್‌

ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್‌ ನೋಟಿಸ್‌

BJP Karnataka: ಸಾರ್ವಜನಿಕ ವೇದಿಕೆಗಳಲ್ಲಿ ಪಕ್ಷದ ಅಂತರಿಕ ವಿಚಾರಗಳನ್ನು ಬಹಿರಂಗವಾಗಿ ಮತ್ತು ಅನಗತ್ಯವಾಗಿ ಹೇಳಿಕೆ ನೀಡಿದ್ದೀರಿ. ಈ ನಿಟ್ಟಿನಲ್ಲಿ ನಿಮ್ಮ ವಿರುದ್ಧ ಯಾಕೆ ಕ್ರಮಕೈಗೊಳ್ಳಬಾರದು ಎಂದು ವಿವರಣೆ ನೀಡುವಂತೆ ರಾಜ್ಯದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖ‌ರ್ ಸೇರಿ ಐವರಿಗೆ ಬಿಜೆಪಿಯ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿದೆ.

BAD Movie: ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ‘BAD’ ಚಿತ್ರ ಮಾ.28ಕ್ಕೆ ಬಿಡುಗಡೆ

ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ ‘BAD’ ಚಿತ್ರ ಮಾ.28ಕ್ಕೆ ಬಿಡುಗಡೆ

BAD Movie: ಪಿ.ಸಿ. ಶೇಖರ್ ನಿರ್ದೇಶನದ, ಎಸ್.ಆರ್. ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼBADʼ ಚಿತ್ರ ಈ ವಾರ ಮಾರ್ಚ್ 28 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

The Devil Movie: ರಾಜಸ್ಥಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ʼದಿ ಡೆವಿಲ್ʼ ಚಿತ್ರದ ಶೂಟಿಂಗ್

ರಾಜಸ್ಥಾನದಲ್ಲಿ ದರ್ಶನ್ ಅಭಿನಯದ ʼದಿ ಡೆವಿಲ್ʼ ಚಿತ್ರದ ಶೂಟಿಂಗ್

The Devil Movie: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ʼದಿ ಡೆವಿಲ್ʼ ಚಿತ್ರದ ಚಿತ್ರೀಕರಣ ರಾಜಸ್ಥಾನದಲ್ಲಿ ಬಿರುಸಿನಿಂದ ಸಾಗಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿಅದ್ಧೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ.

Manada Kadalu Movie: ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ʼಮನದ ಕಡಲುʼ ಚಿತ್ರ ಮಾ.28ಕ್ಕೆ ರಿಲೀಸ್‌

ಯೋಗರಾಜ್ ಭಟ್ ನಿರ್ದೇಶನದ ʼಮನದ ಕಡಲುʼ ಚಿತ್ರ ಮಾ.28ಕ್ಕೆ ರಿಲೀಸ್‌

Manada Kadalu Movie: ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ʼಮನದ ಕಡಲುʼ ಚಿತ್ರ ಈ ವಾರ ರಾಜ್ಯಾದ್ಯಂತ (ಮಾರ್ಚ್ 28) ಬಿಡುಗಡೆಯಾಗುತ್ತಿದೆ. ಈ ಚಿತ್ರದ ನಾಯಕನಾಗಿ ಸುಮುಖ ಅಭಿನಯಿಸಿದ್ದಾರೆ. ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮಣ್ಣಿನ ಮಕ್ಕಳಾಗಲಿ-ಮೊಬೈಲ್ ಮಕ್ಕಳಾಗೋದು ಬೇಡ: ಕೆ.ವಿ.ಪ್ರಭಾಕರ್ ಕರೆ

ಮಣ್ಣಿನ ಮಕ್ಕಳಾಗಲಿ-ಮೊಬೈಲ್ ಮಕ್ಕಳಾಗೋದು ಬೇಡ: ಕೆ.ವಿ.ಪ್ರಭಾಕರ್ ಕರೆ

ಈಗಿನ ಮಕ್ಕಳಿಗೆ ರಾಜ್ಯದ ಮುಖ್ಯಮಂತ್ರಿ ಯಾರು, ದೇಶದ ಪ್ರಧಾನಮಂತ್ರಿ ಯಾರು ಅಂತ ಕೇಳಿದರೆ ಗೊತ್ತಿರುವುದಿಲ್ಲ. ಇವೆಲ್ಲಾ ಮಣ್ಣಿನ ಮಕ್ಕಳಿಗೂ, ಮೊಬೈಲ್ ಮಕ್ಕಳಿಗೂ ಇರುವ ವ್ಯತ್ಯಾಸ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

Book Release: ಲೇಖಕ ಎಂ.ಜಯಪ್ರಕಾಶ್ ಅವರ ʼನಾ ಕಂಡಂತೆʼ ಪುಸ್ತಕ ಬಿಡುಗಡೆ

ಲೇಖಕ ಎಂ.ಜಯಪ್ರಕಾಶ್ ಅವರ ʼನಾ ಕಂಡಂತೆʼ ಪುಸ್ತಕ ಬಿಡುಗಡೆ

Book release: ಲೇಖಕ ಎಂ. ಜಯಪ್ರಕಾಶ್ ಅವರ ಹೊಸ ಕೃತಿ ʼನಾ ಕಂಡಂತೆʼ ಪುಸ್ತಕ ಇತ್ತೀಚೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮೀಡಿಯಾ ಕೇಂದ್ರದಲ್ಲಿ ಬಿಡುಗಡೆಗೊಂಡಿತು. ಲೇಖಕರು ತಮ್ಮ ಬರವಣಿಗೆಯ ಹಿನ್ನೆಲೆ, ಘಟನೆಗಳಿಗೆ ಸಂಬಂಧಿಸಿದ ತಮ್ಮ ಅನುಭವಗಳು ಮತ್ತು ಆ ಘಟನೆಗಳಿಂದ ತಾವು ಕಂಡುಕೊಂಡ ಒಳನೋಟಗಳನ್ನು ಹಂಚಿಕೊಂಡರು.

Celebrity women's kabaddi league: ಸೆಲೆಬ್ರಿಟಿ ಮಹಿಳಾ ಕಬಡ್ಡಿ ಲೀಗ್‌ನ ಪವರ್ ಪ್ಯಾಕ್ಡ್ ಗೀತೆ ರಿಲೀಸ್

ಸೆಲೆಬ್ರಿಟಿ ಮಹಿಳಾ ಕಬಡ್ಡಿ ಲೀಗ್‌ನ ಪವರ್ ಪ್ಯಾಕ್ಡ್ ಗೀತೆ ರಿಲೀಸ್

Celebrity women's kabaddi league ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್‌ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ ಅವರು ʼಸೆಲೆಬ್ರಿಟಿ ವುಮೆನ್ಸ್ ಕಬಡ್ಡಿ ಲೀಗ್ʼ (Celebrity Womens Kabbadi League) ಆಯೋಜಿಸಿದ್ದಾರೆ.

Basavaraj Horatti: ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್​ ಹೊರಟ್ಟಿ

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಬಸವರಾಜ್​ ಹೊರಟ್ಟಿ

Basavaraj Horatti: ವೈರಲ್‌ ಆಗಿದ್ದ ರಾಜೀನಾಮೆ ಪತ್ರ ನನ್ನದೇ. ಅದನ್ನು ನಾನೇ ಬರೆದದ್ದು ನಿಜವಾದರೂ ಸಹಿ ಹಾಕಿರಲಿಲ್ಲ. ಹಲವರು ನನಗೆ ಫೋನ್‌ ಮಾಡಿ ರಾಜೀನಾಮೆ ನೀಡಬೇಡಿ ಎಂದು ಹೇಳಿದ್ದಾರೆ. ಹೀಗಾಗಿ ರಾಜೀನಾಮೆ ನಿರ್ಧಾರವನ್ನು ಕೈಬಿಟ್ಟಿದ್ದೇನೆ ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ತಿಳಿಸಿದ್ದಾರೆ.

Karnataka Weather: ನಾಳೆ ಉತ್ತರ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ನಾಳೆ ಉತ್ತರ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

Karnataka Weather: ಮಾ.26ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮತ್ತು ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

BESCOM: ಸ್ಮಾರ್ಟ್ ಮೀಟರ್ ಖರೀದಿ ದರ ವೈಜ್ಞಾನಿಕ: ಡಾ.ಎನ್‌.ಶಿವಶಂಕರ್‌

ಸ್ಮಾರ್ಟ್ ಮೀಟರ್ ಖರೀದಿ ದರ ವೈಜ್ಞಾನಿಕ: ಡಾ.ಎನ್‌.ಶಿವಶಂಕರ್‌

BESCOM: ಬೆಸ್ಕಾಂ ವ್ಯಾಪ್ತಿಯಲ್ಲಿನ ಹೊಸ ವಿದ್ಯುತ್‌ ಸ್ಥಾಪನಗಳಲ್ಲಿ ಅಳವಡಿಸಲಾಗುತ್ತಿರುವ ಸ್ಮಾರ್ಟ್‌ ಮೀಟರ್ ದರ ವೈಜ್ಞಾನಿಕವಾಗಿದ್ದು, ಅದರ ಪೂರೈಕೆದಾರರ ಜತೆಗಿನ ಟೆಂಡರ್ ಪ್ರಕ್ರಿಯೆಯೂ ಪಾರದರ್ಶಕವಾಗಿ ನಡೆದಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್‌. ಶಿವಶಂಕರ್‌ ಹೇಳಿದ್ದಾರೆ.

PES Medical college: ಪಿಇಎಸ್ ವೈದ್ಯಕೀಯ ಕಾಲೇಜಿನಲ್ಲಿ 48 ವರ್ಷದ ಮಹಿಳೆಗೆ ಅಪರೂಪದ ಸಂಧಿವಾತ ಶಸ್ತ್ರ ಚಿಕಿತ್ಸೆ

ಪಿಇಎಸ್ ಮೆಡಿಕಲ್ ಕಾಲೇಜಿನಲ್ಲಿ ಮಹಿಳೆಗೆ ಅಪರೂಪದ ಸಂಧಿವಾತ ಶಸ್ತ್ರ ಚಿಕಿತ್ಸೆ

PES Medical college: MRSA ಸೆಪ್ಟಿಕ್ ಸಂಧಿವಾತದಿಂದ ಬಳಲುತ್ತಿದ್ದ 48 ವರ್ಷದ ಬಂಗಾಳಿ ಮಹಿಳೆಯ ಮೊಣಕಾಲಿನ ಕೀಲು ಸಂಪೂರ್ಣವಾಗಿ ನಾಶವಾಗಿತ್ತು. ಅದನ್ನು ಪಿಇಎಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮೂಳೆಚಿಕಿತ್ಸಾ ವಿಭಾಗವು ಪುನಃಸ್ಥಾಪಿಸಿದೆ.

Thayi Kastur Gandhi Movie: ಬರಗೂರು ರಾಮಚಂದ್ರಪ್ಪ ನಿರ್ದೇಶನದ `ತಾಯಿ ಕಸ್ತೂರ್ ಗಾಂಧಿʼ ಚಿತ್ರ ಮಾ.28ರಂದು ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆ

`ತಾಯಿ ಕಸ್ತೂರ್ ಗಾಂಧಿʼ ಚಿತ್ರ ಮಾ.28ರಂದು OTTಯಲ್ಲಿ ರಿಲೀಸ್‌

Thayi Kastur Gandhi Movie: ಬರಗೂರು ರಾಮಚಂದ್ರಪ್ಪ ಅವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ `ತಾಯಿ ಕಸ್ತೂರ್ ಗಾಂಧಿʼ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ. ಬರಗೂರರ ಕಾದಂಬರಿಯನ್ನು ಆಧರಿಸಿ ಈ ಚಿತ್ರವು ನಿರ್ಮಾಣಗೊಂಡಿದೆ. ಈ ಕುರಿತ ವಿವರ ಇಲ್ಲಿದೆ.

World TB Day: ಕ್ಷಯ ರೋಗ ತಡೆಯುವ ನಿಟ್ಟಿನಲ್ಲಿ ರಾಜ್ಯದ 16 ಜಿಲ್ಲೆಗಳಲ್ಲಿ ಬಿಸಿಜಿ ಲಸಿಕಾ ಕಾರ್ಯಕ್ರಮ ಜಾರಿ: ದಿ‌ನೇಶ್ ಗುಂಡೂರಾವ್

ಬಿಸಿಜಿ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ದಿ‌ನೇಶ್ ಗುಂಡೂರಾವ್ ಚಾಲನೆ

World TB Day: ರಾಜ್ಯದಲ್ಲಿ 16 ಜಿಲ್ಲೆಗಳಲ್ಲಿ ಬಿಸಿಜಿ ಲಸಿಕೆ ಹಾಕುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಕ್ಷಯ ರೋಗ ಬರದಂತೆ ತಡೆಯುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

KN Rajanna: ಬ್ಲೂ ಜೀನ್ಸ್ ಹುಡುಗಿ ಹನಿ ಟ್ರ್ಯಾಪ್ ಮಾಡಲು ಬಂದಿದ್ದಳು: ಸಚಿವ ಕೆ.ಎನ್‌.ರಾಜಣ್ಣ

ಬ್ಲೂ ಜೀನ್ಸ್ ಹುಡುಗಿ ಹನಿ ಟ್ರ್ಯಾಪ್ ಮಾಡಲು ಬಂದಿದ್ದಳು: ಸಚಿವ ರಾಜಣ್ಣ

KN Rajanna: ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ಈ ನಿಟ್ಟಿನಲ್ಲಿ ಇಂದು ಗೃಹ ಸಚಿವರಿಗೆ ಲಿಖಿತವಾಗಿ ದೂರು ನೀಡುತ್ತಿದ್ದೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

Cheating case: ಪೂಜೆ ಹೆಸರಲ್ಲಿ 1 ಕೋಟಿ ವಂಚನೆ; ಜ್ಯೋತಿಷಿ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್‌

ಪೂಜೆ ಹೆಸರಲ್ಲಿ 1 ಕೋಟಿ ವಂಚನೆ; ಜ್ಯೋತಿಷಿ ಸೇರಿ ಇಬ್ಬರ ವಿರುದ್ಧ ಎಫ್‌ಐಆರ್‌

Cheating case: ಬೆಂಗಳೂರು ನಗರದ ಸುಬ್ರಹ್ಮಣ್ಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೂಜೆ ಹೆಸರಲ್ಲಿ ವಿವಾಹಿತ ಮಹಿಳೆಯಿಂದ 1 ಕೋಟಿಗೂ ಅಧಿಕ ನಗದು, 100 ಗ್ರಾಂಗೂ ಅಧಿಕ ಚಿನ್ನ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದಾಗ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಜ್ಯೋತಿಷಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

John Doe order: ಧರ್ಮಸ್ಥಳದ ವಿರುದ್ಧ ಮಾನಹಾನಿ ಮಾಡದಂತೆ ಆದೇಶ; ಏನಿದು ಜಾನ್‌ ಡೋ ಆ‌ರ್ಡರ್  ಅಂದ್ರೆ?

ಧರ್ಮಸ್ಥಳದ ವಿರುದ್ಧ ಮಾನಹಾನಿ ಮಾಡದಂತೆ ಆದೇಶ; ಏನಿದು ಜಾನ್‌ ಡೋ ಆರ್ಡರ್?

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಕೋರ್ಟ್‌ ಜಾನ್‌ ಡೋ ಆದೇಶದ ಮೂಲಕ ಸೂಚಿಸಿದೆ. ಏನಿದು ಜಾನ್‌ ಡೋ ಆದೇಶ? ವಿವರ ಇಲ್ಲಿದೆ.

Smart meters: ಸ್ಮಾರ್ಟ್ ಮೀಟರ್ ಹೆಸರಲ್ಲಿ ಮಹಾ ಸುಲಿಗೆ; ಗ್ರಾಹಕ ವಿರೋಧಿ ನೀತಿ ಕೈಬಿಡಲು ಆಗ್ರಹ

ಸ್ಮಾರ್ಟ್ ಮೀಟರ್ ಹೆಸರಲ್ಲಿ ಸುಲಿಗೆ; ವಿದ್ಯುತ್‌ ಗುತ್ತಿಗೆದಾರರ ಸಂಘ ಆರೋಪ

Smart meters: ಸ್ಮಾರ್ಟ್ ಮೀಟರ್‌ ಕಡ್ಡಾಯ ಯೋಜನೆಯುವ ಗ್ರಾಹಕ ವಿರೋಧಿಯಾಗಿದ್ದು, ಈ ಯೋಜನೆಯನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘ ಆಗ್ರಹಿಸಿದೆ. 6 ಸಾವಿರ ಕೋಟಿಗೂ ಅಧಿಕ ಮೊತ್ತದ ಬೃಹತ್ ಹಗರಣ ಜಾರಿಗೆ ತರಲು ಸರ್ಕಾರ/ಎಸ್ಕಾಂಗಳು ನಿಯಮಗಳನ್ನು ಗಾಳಿಗೆ ತೂರಿವೆ ಎಂಬ ಆರೋಪ ಕೇಳಿಬಂದಿದೆ.

FPV virus: ರಾಜ್ಯಕ್ಕೆ ಕಾಲಿಟ್ಟ ಮತ್ತೊಂದು ಮಾರಕ ವೈರಸ್‌, ಬೆಕ್ಕು ಸಾಕುವವರೇ ಹುಷಾರ್!

ರಾಜ್ಯಕ್ಕೆ ಕಾಲಿಟ್ಟ ಮತ್ತೊಂದು ಮಾರಕ ವೈರಸ್‌, ಬೆಕ್ಕು ಸಾಕುವವರೇ ಹುಷಾರ್!

ರಾಯಚೂರಿನಲ್ಲಿ ಮೊದಲಾಗಿ ಕಂಡುಬಂದಿರುವ ಈ ವೈರಸ್‌ ಹಕ್ಕಿಜ್ವರದಂತೆಯೇ ರಾಜ್ಯದ ಇತರ ಕಡೆಗಳಿಗೆ ಹಬ್ಬುವ ಸೂಚನೆ ತೋರಿಸಿದೆ. ಹೀಗಾಗಿ ಮನೆಗಳಲ್ಲಿ ಬೆಕ್ಕು ಸಾಕುತ್ತಿರುವವರು ಸಾಕಷ್ಟು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಸೋಂಕಿನಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಬೆಕ್ಕುಗಳು ಸಾವನ್ನಪ್ಪುತ್ತಿವೆ.

ಸಂತರು, ಯೋಗಿಗಳಿಂದ ದೈನಂದಿನ ಬದುಕಿನಲ್ಲಿ ಯೋಗದ ಮಹತ್ವ ಮತ್ತು ಯೋಗ ತತ್ವಗಳ ಬೋಧನೆ

ಯೋಗ ಕೇವಲ ಆಸನವಲ್ಲ, ಮಾನಸಿಕ ಸ್ಥಿಮಿತ ಕೂಡ ಯೋಗ

ಶಂಕರಭಗವತ್ಪಾದರು ಪತಂಗದ ಯೋಗ ಶಾಸ್ತ್ರವನ್ನೂ ಸಹ ಬೋಧಿಸಿದ್ದು, ಇದು ಆಧುನಿಕ ಬದುಕಿಗೂ ಪೂರಕ ವಾಗಿದೆ. ಧರ್ಮದ ಪುನರುತ್ಥಾನಕ್ಕೆ ಯೋಗ ಅತ್ಯಂತ ಅಗತ್ಯವಾಗಿದೆ. ಭಾರ ತೀಯ ಸಂಸ್ಕೃ ತಿಯ ಮೇಲೆ ಇದು ಗಾಢವಾದ ಪ್ರಭಾವ ಬೀರಿದೆ. ಯೋಗ ಶಾಸ್ತ್ರದಿಂದ ಜೀವನದ ಶಾರೀರಿಕ ಆರೋಗ್ಯವಷ್ಟೇ ಅಲ್ಲದೇ ತನ್ಮೂಲಕ ಭಗವಂತನ್ನು ಏಕಾಗ್ರ ಚಿತ್ತದಿಂದ ಧ್ಯಾನಿಸಲು ಮತ್ತು ಏಕಾತ್ಮ ಭಾವನೆಯನ್ನು ಹೊಂದಲು ಇದು ಪ್ರಮುಖ ಸಾಧನವಾಗಿದೆ.

Bomb Hoax: ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಬಾಂಬ್ ಬೆದರಿಕೆ ಕರೆ ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಪೊಲೀಸರು ಮೆಟಲ್‌ ಡಿಟೆಕ್ಟರ್ ಮೂಲಕ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಬೆಂಗಳೂರು ನಡುವಿನ ಎಲ್ಲ ರೈಲು ನಿಲ್ದಾಣಗಳಲ್ಲೂ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ.

Dharmastala: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ

ಧರ್ಮಸ್ಥಳ ಧರ್ಮಾಧಿಕಾರಿ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಕೋರ್ಟ್ ಸೂಚನೆ

Dharmastala: ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ ಜಾನ್ ಡೋ (ಅಶೋಕಕುಮಾರ್) ಆದೇಶ ಹೊರಡಿಸಿದೆ. ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಮಾಧ್ಯಮಗಳ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಹಾಗೂ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಸೂಚಿಸಿದೆ.

KRS Dam: ನಿಗೂಢವಾಗಿ ತೆರೆದ ಕೆಆರ್‌ಎಸ್‌ ಡ್ಯಾಂ ಗೇಟ್‌, 2000 ಕ್ಯೂಸೆಕ್‌ ನೀರು ಪೋಲು

ನಿಗೂಢವಾಗಿ ತೆರೆದ ಕೆಆರ್‌ಎಸ್‌ ಡ್ಯಾಂ ಗೇಟ್‌, 2000 ಕ್ಯೂಸೆಕ್‌ ನೀರು ಪೋಲು

ಎರಡು ಕಾರಣಗಳಿಂದ ಡ್ಯಾಂನ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಡ್ಯಾಂನ ಗೇಟ್​ನ ಮೋಟಾರ್​ ರಿವರ್ಸ್​ ಆಗಿದ್ದರಿಂದ ಗೇಟ್​ ತೆರೆದಿರಬಹುದು, ಅಥವಾ ನಮ್ಮದೇ ಸಿಬ್ಬಂದಿ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಗೇಟ್​ ಯಾವ ಕಾರಣಕ್ಕೆ ತೆರೆದಿದೆ ಎಂಬುವುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.

Gruha Lakshmi Scheme: ಗೃಹಲಕ್ಷ್ಮಿ ಎರಡು ತಿಂಗಳ ಹಣ ಒಂದೇ ಸಲ ಜಮೆ: ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಎರಡು ತಿಂಗಳ ಹಣ ಒಂದೇ ಸಲ ಜಮೆ: ಲಕ್ಷ್ಮಿ ಹೆಬ್ಬಾಳ್ಕರ್

ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭವಿಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

Mekedatu Project: ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ: ತಮಿಳುನಾಡು

ಮೇಕೆದಾಟು ಯೋಜನೆ ತಡೆಯಲು ಅಗತ್ಯ ಬಿದ್ದರೆ ಕೋರ್ಟಿಗೆ: ತಮಿಳುನಾಡು

ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಕರ್ನಾಟಕವು 67.16 ಟಿಎಂಸಿ ಸಾಮರ್ಥ್ಯದ ಜಲಾಶಯವನ್ನು ನಿರ್ಮಿಸಲು ಪ್ರಸ್ತಾಪಿಸಿದೆ. ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕೇಂದ್ರ ಸರಕಾರವನ್ನು ವಿರೋಧಿಸುವ ಒಕ್ಕೂಟ ಸ್ಥಾಪನೆಗಾಗಿ ತಮಿಳು ನಾಡಿಗೆ ಭೇಟಿ ನೀಡಿ ಬಂದಿದ್ದಾರೆ. ಅಲ್ಲಿನ ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಿದ್ದಾರೆ. ಆದರೆ ಮೇಕೆದಾಟು ಯೋಜನೆಗೆ ಆ ರಾಜ್ಯವನ್ನು ಒಲಿಸಲು ಸಾಧ್ಯವಾಗಿಲ್ಲ.