ಗಮನ ಸೆಳೆಯುತ್ತಿವೆ ಗಣೇಶ್ ಮೂರ್ತಿಗಳು
ಬೈಲಹೊಂಗಲದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಮನೆಗಳಲ್ಲಿ ಪ್ರತಿಷ್ಠಾಪಿಸಲು ಸಿದ್ಧವಾಗಿರುವ ವೈವಿಧ್ಯಮಯ ಗಣೇಶ ಮೂರ್ತಿಗಳು ಹಬ್ಬದ ಕಳೆ ಹೆಚ್ಚಿಸಿವೆ. ನಗರದ ಕಲಾವಿದ ಆನಂದ ಬಡಿಗೇರ ಅವರ ಕಲಾಕುಂಚದಲ್ಲಿ ಮೂಡಿಬಂದಿರುವ ಈ ವಿಶಿಷ್ಟ ಗಣೇಶ ಮೂರ್ತಿಗಳು ಕಲಾಭಿಮಾನಿಗಳು ಹಾಗೂ ಭಕ್ತರನ್ನು ಆಕರ್ಷಿಸುತ್ತಿವೆ.