ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Kodi Mutt Swamiji: ಕೋಡಿಮಠದ ಶ್ರೀಗಳ ಚಿನ್ನಾಭರಣ ಕಳ್ಳತನ; 7 ವರ್ಷದ ಬಳಿಕ ಆರೋಪಿ ಅರೆಸ್ಟ್

ಕೋಡಿಮಠದ ಶ್ರೀಗಳ ಚಿನ್ನಾಭರಣ ಕಳ್ಳತನ; 7 ವರ್ಷದ ಬಳಿಕ ಆರೋಪಿ ಅರೆಸ್ಟ್

Kodi Mutt Swamiji: ಉತ್ತರಾಖಂಡ್‌ನ ನೈನಿತಾಲ್ ಮೂಲದ ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. 2018ರಲ್ಲಿ ಕೋಡಿಮಠದ ಶ್ರೀಗಳು, ಬಾಗಲಕೋಟೆಯಿಂದ ಅರಸೀಕೆರೆಗೆ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಅವರ ಚಿನ್ನಾಭರಣ, ನಗದು ಕಳವಾಗಿತ್ತು. ಇದೀಗ ಆರೋಪಿ ಸಿಕ್ಕಿಬಿದ್ದಿದ್ದಾನೆ.

Moral Policing: ನೈತಿಕ ಪೊಲೀಸ್‌ಗಿರಿ; ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದ 6 ಮಂದಿ ಬಂಧನ

ನೈತಿಕ ಪೊಲೀಸ್‌ಗಿರಿ; ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ್ದ 6 ಮಂದಿ ಬಂಧನ

Moral Policing: ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಬೈಲಪ್ಪ ಎಂಬ ಯುವಕ, ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವತಿಗೆ ಬೈಕ್‌ನಲ್ಲಿ ಡ್ರಾಪ್ ನೀಡಿದ್ದ. ಇದನ್ನು ಕಂಡ ಅನ್ಯಕೋಮಿನ 15 ಯುವಕರು ಬೈಕ್ ಅಡ್ಡಗಟ್ಟಿ, ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೀಗ ಆರೋಪಿಗಳ ಪೈಕಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

Road Accident: ಮಂಗಳೂರಲ್ಲಿ ಘೋರ ಘಟನೆ; ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು!

Road Accident: ಮಂಗಳೂರು ನಗರದ ಹೊರವಲಯದ ಪಾವಂಜೆ ಬಳಿ ಘಟನೆ ನಡೆದಿದೆ. ಚೆನ್ನೈನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿ, ಸಹೋದರನ ಅಂತ್ಯ ಸಂಸ್ಕಾರಕ್ಕೆಂದು ಮನೆಗೆ ಬಂದಿದ್ದಳು. ತಂದೆ ಜತೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದಾಳೆ.

Bengaluru stampede: ಕಾಲ್ತುಳಿತ ಪ್ರಕರಣ; ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶ ಅನುಮೋದಿಸಿದ ಕೇಂದ್ರ

ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶ ಅನುಮೋದಿಸಿದ ಕೇಂದ್ರ

Bengaluru stampede: ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ, ಎಡಿಜಿಪಿ ಬಿ.ದಯಾನಂದ್ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ಅಮಾನತು ಸಂಬಂಧ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ಇತ್ತೀಚೆಗೆ ಸಮಗ್ರ ವರದಿ ಸಲ್ಲಿಸಿತ್ತು. ಅಮಾನತು ಆದೇಶವನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ.

Chikkamagaluru to Tirupati Train: ತಿಮ್ಮಪ್ಪನ ಭಕ್ತರಿಗೆ ಗುಡ್‌ ನ್ಯೂಸ್‌; ಚಿಕ್ಕಮಗಳೂರು-ತಿರುಪತಿ ನೂತನ ರೈಲು ಸಂಚಾರ ಆರಂಭ

ಚಿಕ್ಕಮಗಳೂರು-ತಿರುಪತಿ ನೂತನ ರೈಲು ಸಂಚಾರ ಆರಂಭ

Chikkamagaluru to Tirupati Train: ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಚಿಕ್ಕಮಗಳೂರಿ-ತಿರುಪತಿ ನೂತನ ರೈಲಿನಿಂದ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಅನುಕೂಲವಾಲಿದೆ.

DK Shivakumar: ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ- ಪವರ್ ಶೇರಿಂಗ್ ವಿಚಾರ ಚರ್ಚೆ ಇಲ್ಲ; ಡಿ.ಕೆ.ಶಿವಕುಮಾರ್

ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ: ಡಿಕೆಶಿ

DK Shivakumar: ಕೆಐಎಡಿಬಿ ವತಿಯಿಂದ ಶೇ.20ರಷ್ಟು ಅನುದಾನ ಸಣ್ಣ ಕೈಗಾರಿಕೆಗಳಿಗೆ ನೀಡಬೇಕು ಎಂಬ ಕಾನೂನಿದೆ. ಈ ವಿಚಾರವಾಗಿ ಎಂ.ಬಿ. ಪಾಟೀಲ್ ಅವರ ಬಳಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Mysuru Dasara 2025: ಸೆ. 22ರಂದು ಮೈಸೂರು ದಸರಾಗೆ ಚಾಲನೆ; ಈ ಬಾರಿ 11 ದಿನಗಳ ಕಾಲ ಉತ್ಸವ

ಸೆ. 22ರಂದು ಮೈಸೂರು ದಸರಾಗೆ ಚಾಲನೆ; ಈ ಬಾರಿ 11 ದಿನ ಉತ್ಸವ

CM Siddaramaiah: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಕುರಿತು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸೂಚನೆ ನೀಡಿದ್ದಾರೆ.

Junior Movie: ಜನಾರ್ದನ ರೆಡ್ಡಿ ಪುತ್ರ ಕಿರೀಟಿ ನಟನೆಯ ʼಜೂನಿಯರ್‌ʼ ಚಿತ್ರದ ಟೀಸರ್‌ ಔಟ್‌!

ಜನಾರ್ದನ ರೆಡ್ಡಿ ಪುತ್ರ ನಟಿಸಿರೋ ಚಿತ್ರದ ಟೀಸರ್‌ ಔಟ್‌!

Junior Movie: ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ಪುತ್ರ ಕಿರೀಟಿ ನಟನೆಯ ʼಜೂನಿಯರ್ʼ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ವಾರಾಹಿ ಚಲನ ಚಿತ್ರಂ ಯೂಟ್ಯೂಬ್‌ನಲ್ಲಿ ʼಜೂನಿಯರ್‌ʼ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ಮಾಸ್‌ ಜತೆಗೆ ಕ್ಲಾಸ್‌ ಅಂಶಗಳನ್ನು ಮಿಕ್ಸ್‌ ಮಾಡಿ ಟೀಸರ್‌ ಕಟ್‌ ಮಾಡಲಾಗಿದೆ. ಎಮೋಷನ್‌ ಫ್ಲಸ್‌ ಲವ್‌, ಆಕ್ಷನ್‌ ಎಲ್ಲವೂ ಟೀಸರ್‌ನಲ್ಲಿದೆ.

Tiger Death: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಹತ್ಯೆ: ವಿಷವಿಕ್ಕಿದ ಮೂವರ ಬಂಧನ

ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಹತ್ಯೆ: ವಿಷವಿಕ್ಕಿದ ಮೂವರ ಬಂಧನ

Tiger Death: ಹಸುವಿನ ಕಳೇಬರದಲ್ಲಿ ವಿಷ ಹಾಕಿ ಹುಲಿಗಳ ಸಾವಿಗೆ ಕಾರಣರಾದ ಕೋನಪ್ಪ ಬಿನ್ ಸೊಣ್ಣೆಗೌಡ, ಮಾದರಾಜು ಬಿನ್ ಶಿವಣ್ಣ ನಾಗರಾಜ ಬಿನ್ ಪೂಜಾರಿಗೌಡ ಇವರನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಲಾಗುತ್ತಿದೆ. ಇವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Engineering Conclave 2025: ದಯಾನಂದ ಸಾಗರ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಕಾನ್‌ಕ್ಲೇವ್‌ 2025

ದಯಾನಂದ ಸಾಗರ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಕಾನ್‌ಕ್ಲೇವ್‌ 2025

Engineering Conclave 2025: ಅಗತ್ಯ ಕೌಶಲ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಬೇಕಾದ ತರಬೇತಿ ನೀಡಲು ನಿರ್ಣಾಯಕ ಒಳನೋಟಗಳನ್ನು ಕಾಲೇಜು ಈ ಸಮಾವೇಶದ ಮೂಲಕ ಪಡೆದುಕೊಂಡಿತು. ಈ ಮೆಗಾ ಸಮಾವೇಶಕ್ಕಾಗಿ ಉನ್ನತ ದರ್ಜೆಯ ಕೈಗಾರಿಕೆಗಳು ಮತ್ತು ಸಂಶೋಧನಾ ಸಂಸ್ಥೆಗಳ ಸುಮಾರು ಮೂವತ್ತಕ್ಕೂ ಹೆಚ್ಚು ತಜ್ಞರು ಒಟ್ಟಾಗಿ ಸೇರಿದ್ದರು.

Crime News: ವಾಮಾಚಾರಕ್ಕಾಗಿ ಸಾಕಿದ ನಾಯಿ ಕತ್ತು ಕತ್ತರಿಸಿ ಅಪಾರ್ಟ್‌ಮೆಂಟ್‌ನಲ್ಲೇ ಬಚ್ಚಿಟ್ಟ ಮಹಿಳೆ!

ವಾಮಾಚಾರಕ್ಕಾಗಿ ಸಾಕಿದ ನಾಯಿ ಕೊಂದು ಅಪಾರ್ಟ್‌ಮೆಂಟ್‌ನಲ್ಲೇ ಬಚ್ಚಿಟ್ಟಳು!

ನಾಲ್ಕು ದಿನಗಳ ಹಿಂದೆಯೇ ಈ ಮಹಿಳೆ ತಾನೇ ಸಾಕಿದ ನಾಯಿಯನ್ನು ಹತ್ಯೆ ಮಾಡಿ ಬಚ್ಚಿಟ್ಟಿದ್ದಳು ಎನ್ನಲಾಗುತ್ತಿದೆ. ಮಹದೇವಪುರದ ಚಿನ್ನಪ್ಪ ಲೇಔಟ್ ಅಪಾರ್ಟ್​ಮೆಂಟ್​ ಒಂದರಲ್ಲಿ ವಾಸವಾಗಿದ್ದ ಮಹಿಳೆ, ನಾಯಿಯ ಕತ್ತು ಕೊಯ್ದು ಹತ್ಯೆಗೈದಿದ್ದಾರೆ. ಹತ್ಯೆ ನಂತರ ನಾಯಿಯನ್ನು ಬಟ್ಟೆಯಲ್ಲಿ ಸುತ್ತಿಟ್ಟಿದ್ದು ಇದೀಗ ಪ್ರಕರಣ ಬೆಳಕಿಗೆ ಬಂದಿದೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 28th June 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 55 ರೂ. ಇಳಿಕೆಯಾಗಿ 8,930 ರೂ.ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 60 ರೂ. ಕಡಿಮೆಯಾಗಿದ್ದು, 9,742 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 71,440 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 89,300 ರೂ. ಮತ್ತು 100 ಗ್ರಾಂಗೆ 8,93,000 ರೂ. ನೀಡಬೇಕಾಗುತ್ತದೆ.

Tigers death: ಮಲೆ ಮಹದೇಶ್ವರ ಹುಲಿಗಳ ಸಾವು, ತನಿಖೆಗೆ ಎಸ್‌ಐಟಿ ರಚಿಸಿದ ಕೇಂದ್ರ

ಮಲೆ ಮಹದೇಶ್ವರ ಹುಲಿಗಳ ಸಾವು, ತನಿಖೆಗೆ ಎಸ್‌ಐಟಿ ರಚಿಸಿದ ಕೇಂದ್ರ

Tiger Death: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಭವಿಸಿದ ಐದು ಹುಲಿಗಳ ಸಾವು ಕುರಿತು ತನಿಖೆ ನಡೆಸಲು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಇಬ್ಬರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಎಸ್‌ಐಟಿ ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಸಿ ಎರಡು ವಾರಗಳ ಅವಧಿಯಲ್ಲಿ ವರದಿಯನ್ನು ಸಲ್ಲಿಸಬೇಕಿದೆ.

Crime News: ಮದುವೆಯಾದ ಎರಡೇ ತಿಂಗಳಲ್ಲಿ ಅತ್ತೆ ಜೊತೆಗೆ ಓಡಿಹೋದ ಅಳಿಯ!

ಮದುವೆಯಾದ ಎರಡೇ ತಿಂಗಳಲ್ಲಿ ಅತ್ತೆ ಜೊತೆಗೆ ಓಡಿಹೋದ ಅಳಿಯ!

ಅತ್ತೆಗೆ ಅಳಿಯನ ಜೊತೆ ರೀಲ್ಸ್ ಮಾಡುವ ಖಯಾಲಿ ಶುರುವಾಗಿದೆ. ಬರಬರುತ್ತಾ ಇಬ್ಬರ ನಡುವೆ ಸಲುಗೆ ಬೆಳೆದು ಪರಸ್ಪರ ಹತ್ತಿರವಾಗಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೇ ತಮ್ಮ ಸರಸದ ದೃಶ್ಯಗಳನ್ನು ವಿಡಿಯೋ ಸಹ ಮಾಡಿದ್ದಾರೆ. ಮೊಬೈಲ್‌ನಲ್ಲಿ ಅಶ್ಲೀಲ ಫೋಟೋ, ವಿಡಿಯೋಗಳನ್ನು ನೋಡಿ ಮಗಳು ಶಾಕ್ ಆಗಿದ್ದಾಳೆ.

Cauvery Aarti: ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ; ಸರಕಾರಕ್ಕೆ ಹೈಕೋರ್ಟ್‌ ನೋಟೀಸ್‌

ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ; ಸರಕಾರಕ್ಕೆ ಹೈಕೋರ್ಟ್‌ ನೋಟೀಸ್‌

Cauvery Aarti : ಕಾಮಗಾರಿಗೆ ಅಗೆಯುವುದರಿಂದ ಡ್ಯಾಂಗೆ ಹಾನಿಯಾಗುವುದಿಲ್ಲವೇ? ಜಲಾಶಯದ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ? ಮನರಂಜನಾ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಕಾವೇರಿ ಪ್ರತಿಮೆ ಸ್ಥಾಪಿಸುವಾಗ ತಜ್ಞರ ಸಲಹೆ ಪಾಲಿಸಲಾಗಿದೆಯೇ ಎಂದು ಸರ್ಕಾರವನ್ನು ಹಾಗೂ ಕಾವೇರಿ ನೀರಾವರಿ ನಿಗಮವನ್ನು ಹೈಕೋರ್ಟ್ ಪ್ರಶ್ನಿಸಿದೆ.

Tigers Death: ಬಂಡಿಪುರದಲ್ಲಿ ಮತ್ತೊಂದು ಹುಲಿ ಶವ ಪತ್ತೆ

ಬಂಡಿಪುರದಲ್ಲಿ ಮತ್ತೊಂದು ಹುಲಿ ಶವ ಪತ್ತೆ

Tiger Death: ಬಂಡೀಪುರ ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಮತ್ತೊಂದು ಹುಲಿ ಅಸಹಜವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. 4ರಿಂದ 5 ವರ್ಷ ವಯಸ್ಸಿನ ಹೆಣ್ಣು ಹುಲಿ ಸಾವನ್ನಪ್ಪಿದ್ದು, ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಕಳೇಬರ ಪತ್ತೆಯಾಗಿದೆ. ಶನಿವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ.

PARVA Group Expo: ಇಂದು, ನಾಳೆ ಪರ್ವ ಗ್ರೂಪ್ ಎಕ್ಸ್‌‌ಪೋ

ಇಂದು, ನಾಳೆ ಪರ್ವ ಗ್ರೂಪ್ ಎಕ್ಸ್‌‌ಪೋ

ವಿಶ್ವದ ಅತಿ ಸುರಕ್ಷಿತ ತಾಣ ಎನಿಸಿರುವ ದುಬೈನಲ್ಲಿ ಹೂಡಿಕೆ ಮಾಡಬೇಕು ಎನ್ನುವ ಅನೇಕರ ಕನಸನ್ನು ನನಸು ಮಾಡಿಸಲು ಪರ್ವ ಗ್ರೂಪ್ ಮುಂದಾಗಿದೆ. ಇದರ ಭಾಗವಾಗಿ ಅತ್ಯಾಕರ್ಷಕ ಆಫರ್‌ಗಳೊಂದಿಗೆ ಎರಡು ದಿನದ ಎಕ್ಸ್‌‌ಪೋ ಬೆಂಗಳೂರಿನ ತಾಜ್‌ವೆಸ್ಟ್‌ ಎಂಡ್‌ನಲ್ಲಿ ಜೂನ್‌ 28, 29ರಂದು ಹಮ್ಮಿಕೊಳ್ಳಲಾಗಿದೆ.

Star Fashion 2025: ಕಾಂತಾರ ಬೆಡಗಿಯ ನಯಾ ಕೂಲ್‌ ಲುಕ್‌ಗೆ ಅಭಿಮಾನಿಗಳು ಫಿದಾ!

ಕಾಂತಾರ ಬೆಡಗಿಯ ನಯಾ ಕೂಲ್‌ ಲುಕ್‌ಗೆ ಅಭಿಮಾನಿಗಳು ಫಿದಾ!

Star Fashion 2025: ತೆಲುಗು ಸಿನಿಮಾವೊಂದರ ಬಿಡುಗಡೆ ಖುಷಿಯಲ್ಲಿರುವ ಕಾಂತಾರ ಬೆಡಗಿ ನಟಿ ಸಪ್ತಮಿ ಗೌಡರ ನಯಾ ಕೂಲ್‌ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇದ್ಯಾವ ಬಗೆಯ ಲುಕ್‌? ಹೇಗೆ ಕಾಣಿಸುತ್ತಿದ್ದಾರೆ? ಎಂಬುದರ ಬಗ್ಗೆ ಫ್ಯಾಷನ್‌ ವಿಮರ್ಶಕರು ವಿವರಿಸಿದ್ದಾರೆ.

Karnataka weather: ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ!

ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆ ಸಾಧ್ಯತೆ!

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

MLA S. N. Subbareddy: ನಾಡಪ್ರಭು ಕೆಂಪೇಗೌಡರು ಆಡಳಿತ ಕೌಶಲ್ಯ, ಸಾಮಾಜಿಕ ಸಾಮರಸ್ಯ , ಭವಿಷ್ಯದ ದೃಷ್ಟಿಕೋನದಲ್ಲಿ ಇಡೀ ಜಗತ್ತಿಗೆ ಮಾದರಿ:-ಶಾಸಕ ಎಸ್. ಎನ್.ಸುಬ್ಬಾರೆಡ್ಡಿ

ಕೆಂಪೇಗೌಡರ ದೂರದೃಷ್ಟಿತ್ವದಿಂದ ಬೆಂಗಳೂರು ಕೋಟ್ಯಾಂತರ ಜನರ ನೆಲೆ

ಎಲ್ಲ ಸಮುದಾಯಗಳಿಗೂ ಅನುಕೂಲವಾಗುವ 13 ಪೇಟೆಗಳಾದ ಬಳೇಪೇಟೆ,ತಿಗಳರ ಪೇಟೆ,ಕಾಟನ್ ಪೇಟೆ ಸೇರಿದಂತೆ ವಿವಿಧ ಪೇಟೆಗಳನ್ನು ಸ್ಥಾಪಿಸಿ,ವಾಣಿಜ್ಯ ವಹಿವಾಟುಗಳಿಗೆ ಅನುಕೂಲ ಮಾಡಿ ಕೊಟ್ಟಿ ದ್ದಾರೆ. ಕೆಂಪೇಗೌಡರ 108 ಅಡಿ ಪುತ್ಥಳಿಯನ್ನು ದೇವನಹಳ್ಳಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಸ್ಥಾಪಿಸುವ ಮೂಲಕ ರಾಜ್ಯ ಸರಕಾರ ವಿಶ್ವಮಾನ್ಯತೆ ನೀಡಿದೆ.

MLA SN Subbareddy: ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಾಂಪೌಂಡ್ ಗೋಡೆ ನಿರ್ಮಾಣಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ

ಗೋಡೆ ನಿರ್ಮಾಣಕ್ಕೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿ ಪೂಜೆ

ಪಟ್ಟಣದ ಒಂದೇ ವಾರ್ಡಿನ ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿನಿಲಯದ ಆವರಣದಲ್ಲಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯ ಕಾಂಪೌಂಡ್ ಗೋಡೆ ಹಾಗೂ ಅದರ ಮೇಲೆ ಭದ್ರತಾ ಗ್ರಿಲ್ ಹಾಕಿ ನಿರ್ಮಾಣ ಮಾಡಲು 62 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಿಳಿಸಿದರು

MLA Puttaswamy Gowda: ಕೆಂಪೇಗೌಡ ನಿರ್ಮಾಣದ ಬೆಂಗಳೂರು ತೆರಿಗೆಯಲ್ಲಿ ಪ್ರಥಮ ಸ್ಥಾನದಲ್ಲಿದೆ : ಶಾಸಕ ಪುಟ್ಟಸ್ವಾಮಿಗೌಡ ಬಣ್ಣನೆ

ಕೆಂಪೇಗೌಡ ನಿರ್ಮಾಣದ ಬೆಂಗಳೂರು ತೆರಿಗೆಯಲ್ಲಿ ಪ್ರಥಮ ಸ್ಥಾನದಲ್ಲಿದೆ

ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯಿಂದ ನಿರ್ಮಾಣವಾದ ಬೆಂಗಳೂರು ಇಂದು ವಿಶ್ವ ದಲ್ಲಿಯೇ ಬೃಹತ್ ಆರ್ಥಿಕ ಶಕ್ತಿಯಾಗಿ ಬೆಳೆದು ನಿಂತಿದೆ ಎಂದ ಅವರು ಶತಮಾನಗಳ ಹಿಂದೆಯೇ ಕೆಂಪೇಗೌಡರು ಬೆಂಗಳೂರನ್ನು ಸುಸಜ್ಜಿತವಾಗಿ ನಿರ್ಮಿಸಿ ಎಲ್ಲಾ ಜಾತಿ ಜನಾಂಗದವರಿಗೂ ಪ್ರಾತಿನಿಧ್ಯವನ್ನು ನೀಡಿದ್ದರು

Nadaprabhu Kempegowda: ಕೆಂಪೇಗೌಡರ ಕೀರ್ತಿಯನ್ನು ಮೀರಿ ಮೋದಿಯ 11 ವರ್ಷದ ಆಡಳಿತವಿದೆ: ಸೀಕಲ್ ರಾಮಚಂದ್ರಗೌಡ ಅಭಿಮತ

ಕೆಂಪೇಗೌಡರ ಕೀರ್ತಿಯನ್ನು ಮೀರಿ ಮೋದಿಯ 11 ವರ್ಷದ ಆಡಳಿತವಿದೆ

ಇದೇ ಮೊದಲ ಬಾರಿಗೆ ಬಿಜೆಪಿ ಕಚೇರಿಯಲ್ಲಿ ಕೆಂಪೇಗೌಡ ಜಯಂತಿ ಆಚರಿಸುತ್ತಿದ್ದೇವೆ. ದೂರಾ ಲೋಚನೆಯಲ್ಲಿ ಕಟ್ಟಿದ ಬೆಂಗಳೂರು ವಿಶ್ವದಲ್ಲಿ ಹೆಸರಾಗಿದೆ. ಜಯಂತಿ ಆಚರಣೆ ಮೂಲಕ ಮುಂದಿನ ಪೀಳಿಗೆಗೆ ನಾವು ಅವರ ಸಂದೇಶವನ್ನು ನೀಡಬೇಕು. ಬಿಜೆಪಿ ನಾಯಕರಿಗೆ ಜವಾಬ್ದಾರಿ ಇರಬೇಕು. 11 ವರ್ಷಗಳಲ್ಲಿ ಮೋದಿಜೀ ದೇಶಕ್ಕೆ ನೀಡಿರುವ ಕೊಡುಗೆ ಕೆಂಪೇಗೌಡರ ಇತಿಹಾಸ ವನ್ನು ಮೀರಿದೆ.

HD Kumaraswamy: ರೈತರ ಜತೆ ಸೌಜನ್ಯದಿಂದ ವರ್ತಿಸಿ: ಬ್ಯಾಂಕ್‌ಗಳಿಗೆ ಎಚ್.ಡಿ.ಕುಮಾರಸ್ವಾಮಿ ಸೂಚನೆ

ಬ್ಯಾಂಕ್‌ಗಳು ರೈತರ ಜತೆ ಸೌಜನ್ಯದಿಂದ ವರ್ತಿಸಬೇಕು: ಎಚ್.ಡಿ.ಕುಮಾರಸ್ವಾಮಿ

HD Kumaraswamy: ನಾನಾ ಉದ್ದೇಶಗಳಿಗೆ ರೈತರು ಪಡೆಯುವ ಸಾಲಗಳಿಗೆ ಬಡ್ಡಿ ಜಾಸ್ತಿ ಎನ್ನುವ ದೂರುಗಳು ಬರುತ್ತಿವೆ. ಈ ಹಿನ್ನಲೆಯಲ್ಲಿ ಅವರು ಏಕಕಾಲಕ್ಕೆ ತಮ್ಮ ಸಾಲವನ್ನು ಪಾವತಿ ಮಾಡಲು ಮುಂದಾಗುತ್ತಿದ್ದಾರೆ. ಅಂತಹ ರೈತರಿಗೆ ಬ್ಯಾಂಕುಗಳು ಸಹಕರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.