ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ನೀರುಪಾಲು
children Drowns in canal: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಬಳಿ ಘಟನೆ ನಡೆದಿದೆ. ಸದ್ಯ ಇಬ್ಬರು ಬಾಲಕರ ಶವಗಳನ್ನು ಸ್ಥಳೀಯರು ಹಾಗೂ ಪೊಲೀಸರು ಹೊರಗಡೆ ತೆಗೆದಿದ್ದು, ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಧಾಕರ್ಗೆ ಇತ್ತೀಚೆಗೆ ಕುಟುಂಬಸ್ಥರು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದರು. ಈ ವಿಷಯ ತಿಳಿದ ಮಮತಾ, ಕೋಪಗೊಂಡು ತನ್ನನ್ನೇ ಮದುವೆಯಾಗಬೇಕು ಎಂದು ಒತ್ತಾಯಿಸಿದ್ದರು. ಅಷ್ಟೇ ಅಲ್ಲದೇ ತನ್ನನ್ನು ಬಿಟ್ಟು ಬೇರೆ ಮದುವೆಯಾದರೆ ತಾನು ಆತ್ಮಹತ್ಯೆ ಮಾಡಿಕೊಂಡು ಸುಧಾಕರ್ ಹಾಗೂ ಅವರ ಕುಟುಂಬವನ್ನು ಸಂಕಷ್ಟಕ್ಕೆ ಒಳಪಡಿಸುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ಅಪಘಾತದಲ್ಲಿ ಅಜ್ಜವಾರ ಗ್ರಾಮದ ಅಣ್ಣ ತಮ್ಮಂದಿರಾದ ನರಸಿಂಹಮೂರ್ತಿ, ನಂದೀಶ್, ಅರುಣ್, ಮನೋಜ್ ಎಂಬವರು ಮೃತಪಟ್ಟಿದ್ದಾರೆ. ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಬರುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದು, ಸದ್ಯ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಟಿಪ್ಪರ್ ವಶಕ್ಕೆ ಪಡೆದು, ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಮೈಸೂರು ಅರಮನೆ ಹೀಲಿಯಂ ಬ್ಲಾಸ್ಟ್ (Mysuru Blast Case) ಪ್ರಕರಣವನ್ನ ಎನ್ಐಎಗೆ ವಹಿಸಲು ಚಿಂತನೆ ನಡೆಸಲಾಗಿದೆ. ಘಟನೆಯಲ್ಲಿ ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ವಿಶ್ವವಿಖ್ಯಾತ ಅರಮನೆ ಎದುರೇ ಸಿಲಿಂಡರ್ ಬ್ಲಾಸ್ಟ್ ಆಗಲು ಕಾರಣ ಏನು ಎಂಬುದರ ಬಗ್ಗೆ ತನಿಖೆ ಕೇಂದ್ರೀಕರಿಸಿದೆ. ಹೊಸ ವರ್ಷಾಚರಣೆ ಸಮೀಪವಿರುವಾಗ ಸ್ಪೋಟ ಸಂಭವಿಸಿದ್ದು ಆತಂಕಕ್ಕೆ ಕಾರಣವಾಗಿದೆ.
ದಾಸರಹಳ್ಳಿಯಲ್ಲಿ ಗೌರಿಬಿದನೂರು ಮೂಲದ ಕುಟುಂಬ ವಾಸವಿತ್ತು. ಮೃತ ಹರೀಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಮೀನು ನೋಡಿಕೊಂಡು ವಾಪಸ್ ಆಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದ ಗೌರಮ್ಮ, ಮೈತ್ರಿ, ಸಿರಿ ಹಾಗೂ ವಂದನಾಗೆ ಗಂಭೀರವಾದ ಗಾಯಗಳಾಗಿದ್ದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಲಂಡನ್ನಾದ್ಯಂತ 11 ಲೈವ್ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಲಂಡನ್ ಇಂಟರ್ನ್ಯಾ ಷನಲ್ ಆರ್ಟ್ಸ್ ಫೆಸ್ಟಿವಲ್ (LIAF) ನ 14 ನೇ ಆವೃತ್ತಿಯು 2025ರಲ್ಲಿ ಹೈಬ್ರಿಡ್ ಉತ್ಸವವಾಗಿ ಮರಳುತ್ತದೆ ಮತ್ತು ಭಾರತದ ಬೆಂಗಳೂರಿನಿಂದ UK ಯ ಪ್ರೇಕ್ಷಕರಿಗೆ ನಾಲ್ಕು ವಿಶೇಷ ಸಂಗೀತ ಕಚೇರಿಗಳನ್ನು ಸ್ಟ್ರೀಮ್ ಮಾಡುತ್ತದೆ.
Nandi Hills: ಹೊಸ ವರ್ಷದ ಸಂಭ್ರಮದಿಂದ ಅನಾಹುತ ಆಗುವ ಸಾಧ್ಯತೆ ಹಿನ್ನೆಲೆ ಹೊಸ ವರ್ಷಕ್ಕೆ ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಈ ಬಗ್ಗೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಈ ಕುರಿತು ಮಾತನಾಡಿದ್ದು, ಡಿಸೆಂಬರ್ 31-12-25 ಮಧ್ಯಾಹ್ನದಿಂದ 01- 01- 26 ಮಧ್ಯಾಹ್ನದವರೆಗೂ ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧೀಸಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಮಂತ್ರಿಗಳ ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ದಾಖಲೆ ಬಿಡುಗಡೆ ಮಾಡಿ ಕಾಂಗ್ರೆಸ್ಸಿಗರ ಭ್ರಷ್ಟಾಚಾರದ ವಿರುದ್ದ ಬಿಜೆಪಿ ಹೋರಾಟ ನಡೆಸಿದೆ, ಇದೀಗ ಕಂದಾಯ ಸಚಿವರು ಕೆರೆ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ತೋಟ ಮಾಡಿ ಕೊಂಡಿರುವ ಬಗ್ಗೆ ದಾಖಲೆ ಬಿಡುಗಡೆಗೊಳಿಸಿ ಬಿಜೆಪಿ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾಗಿದೆ.
ಅಪರೂಪದ ಮತ್ತು ಆಕ್ರಮಣಕಾರಿ ರಕ್ತ ಕ್ಯಾನ್ಸರ್ ಆಗಿರುವ ಅಕ್ಯೂಟ್ ಪ್ರೊಮೈಲೋಸೈಟಿಕ್ ಲ್ಯೂಕೇಮಿಯಾ (ಎಪಿಎಲ್) ಸಮಸ್ಯೆ ಬಾಧಿಸುತ್ತಿತ್ತು. ಇದು ಎಷ್ಟು ಅಪಾಯಕಾರಿ ಎಂದರೆ ಅಕ್ಯೂಟ್ ಮೈಲಾಯ್ಡ್ ಲ್ಯೂಕೇಮಿಯಾ ಪ್ರಕರಣಗಳಲ್ಲಿ ಹತ್ತರಲ್ಲಿ ಒಂದು ಭಾಗದಷ್ಟು ಮಾತ್ರ ಈ ಕ್ಯಾನ್ಸರ್ ಕಾಣಿಸಿಕೊಳ್ಳುತ್ತದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಗಿಡ್ನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಮಧ್ಯಾ ಹ್ನದ ಬಿಸಿ ಊಟ ತಯಾರಿಸಲು ಬಳಸುವಂತಹ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿ, ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟವನ್ನು ನಿಯಮಿತವಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ ಸುಚಿ ಮತ್ತು ರುಚಿಯಾಗಿ ನೀಡಲು ಮತ್ತು ಸುಚಿತ್ವಕ್ಕೆ ಹೆಚ್ಚಿನ ಆಧ್ಯತೆ ನೀಡಲು ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಿದರು
ವಿಶ್ವ ಮಾನವ ಸಂದೇಶ ಸಾರುವ ನಾಟಕಗಳು ದೇಶಾದ್ಯಂತ ಎಲ್ಲರಿಗೂ ತಲುಪಬೇಕೆಂಬ ಉದ್ದೇಶ ದಿಂದ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಮಕ್ಕಳ ಸಂಸ್ಥೆ 'ರಂಗ ಕಹಳೆ'ಯು ಪ್ರತಿ ವರ್ಷ ಮಕ್ಕಳ ನಾಟಕೋ ತ್ಸವವೂ ಸೇರಿದಂತೆ ಕುವೆಂಪು ನಾಟಕೋತ್ಸವವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಈಗಾಗಲೇ, ಕರ್ನಾ ಟಕದ 19 ಜಿಲ್ಲೆ ಸೇರಿದಂತೆ ಮುಂಬಯಿ, ದೆಹಲಿ, ಮಧ್ಯಪ್ರದೇಶ, ಮೇಘಾಲಯ, ಕಾಸರಗೋಡಿನಲ್ಲೂ ಉತ್ಸವಗಳು ಜರುಗಿವೆ.
Chikkaballapur Road Accident: ರಾಜ್ಯದ ಪಾಲಿಗೆ ಡಿ.25ರ ದಿನ ಕರಾಳ ಗುರುವಾರವಾಗಿದೆ. ಚಿತ್ರದುರ್ಗದ ಬಸ್ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದರು. ಬಳಿಕ ಮೈಸೂರು ಅರಮನೆ ಬಳಿ ನೈಟ್ರೋಜನ್ ಸಿಲಿಂಡರ್ ಸ್ಫೋಟವಾಗಿ ಒಬ್ಬರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿ ಟಿಪ್ಪರ್ ಡಿಕ್ಕಿಯಾಗಿ ನಾಲ್ವರು ಬೈಕ್ ಸವಾರರು ಮೃತಪಟ್ಟಿದ್ದಾರೆ.
ಭೂಮಿಯ ವ್ಯಾಸ ಇದ್ದಷ್ಟೇ ಇದೆ. ಆದರೆ ಮನುಷ್ಯನ ಹವ್ಯಾಸಗಳು ಮಾತ್ರ ಬೆಳೆಯುತ್ತಲೆ ಇವೆ. ದೈಹಿಕವಾಗಿ ನಾವೆಷ್ಟೇ ಸದೃಢವಾಗಿದ್ದರೂ ಮನಸ್ಸು ದೃಢವಾಗಿರದಿದ್ದರೆ ಯಾವ ಪ್ರಯೋಜನವು ಇಲ್ಲ. ಬೆಳೆಯುವ ಯುವ ಜನಾಂಗದಲ್ಲಿ ಕರ್ತವ್ಯಶೀಲತೆ ಮತ್ತು ಪ್ರಾಮಾಣಿಕತೆ ಬೆಳೆದು ಬರುವ ಅವಶ್ಯಕತೆಯಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದ್ದಾರೆ.
Nitrogen cylinder explodes in Mysuru: ಮೈಸೂರು ಅರಮನೆ ಬಳಿ ಬೀದಿ ಬದಿ ವ್ಯಾಪಾರಿ, ಸೈಕಲ್ನಲ್ಲಿ ಬಲೂನ್ ಮಾರುತ್ತಿದ್ದರು. ಈ ವೇಳೆ ಬಲೂನ್ಗೆ ಗಾಳಿ ತುಂಬುವಾಗ ದುರಂತ ನಡೆದಿದೆ. ಸ್ಥಳಕ್ಕೆ ಕಮಿಷನರ್ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಫೋಟದಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
BESCOM News: ಸೋಲದೇವನಹಳ್ಳಿ ಸಬ್ಸ್ಟೇಷನ್ನಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್- 9ಉಪ ವಿಭಾಗದ ಹಲವೆಡೆ ಡಿ.27 ಮತ್ತು 28 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ
ಮೇ 2023 ರಿಂದ 2025ರ ವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ಈಗಾಗಲೇ ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸುವಂತೆ ಇಂದಿನ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
DK Shivakumar: ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ದೆಹಲಿಯಲ್ಲಿ ಹೇಳಿಕೆ ನೀಡಿದ್ದರ ಬಗ್ಗೆ ಮಾಧ್ಯಮದವರು ಕೇಳಿದಾಗ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ‘ನಾನು ಲೈಫ್ ಟೈಮ್ ಕಾರ್ಯಕರ್ತ. ನಾನು ಒಬ್ಬ ವರ್ಕರ್. ಅಧ್ಯಕ್ಷನಾದಾಗಲೂ ಪಕ್ಷದ ಬಾವುಟ ಕಟ್ಟಿದ್ದೇನೆ. ಕಾರ್ಯಕರ್ತನಾದಾಗಲೂ ಬಾವುಟ ಕಟ್ಟಿದ್ದೇನೆ, ಪೋಸ್ಟರ್ ಅಂಟಿಸಿದ್ದೇನೆ, ಕಸ ಗುಡಿಸಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕೋ ಎಲ್ಲವನ್ನೂ ಮಾಡಿದ್ದೇನೆ’ ಎಂದು ಹೇಳಿದ್ದಾರೆ.
Honor Killing in Chikkaballapur: ಪ್ರೀತಿಸಿ ಮದುವೆಯಾದ ದಂಪತಿಗೆ ಜನಸಿದ್ದ ಗಂಡು ಮಗು ಡಿಸೆಂಬರ್ 21 ರಂದು ಮೃತಪಟ್ಟಿತ್ತು. ಮಗು ಮೃತಪಟ್ಟಾಗ ಅಜ್ಜಿ ಬಳಿಯೇ ಇತ್ತು. ಹೀಗಾಗಿ ತನ್ನ ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿದೆ ಎಂದು 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಅನುಮಾನ ವ್ಯಕ್ತಪಡಿಸಿ, ಚೇಳೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾಳೆ.
ಈ ವಿಧೇಯಕ ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯ ಹೇಳುವುದನ್ನೂ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ