ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Chikkaballapur News: ನಗರಸಭೆ ವತಿಯಿಂದ ಸವಲತ್ತುಗಳ ವಿತರಣೆ ಮಾಡಿದ ಶಾಸಕ ಪುಟ್ಟಸ್ವಾಮಿಗೌಡ

ನಗರಸಭೆ ವತಿಯಿಂದ ಸವಲತ್ತುಗಳ ವಿತರಣೆ ಮಾಡಿದ ಶಾಸಕ ಪುಟ್ಟಸ್ವಾಮಿಗೌಡ

ಶಾಸಕರಾದ ಕೆಎಚ್ ಪುಟ್ಟಸ್ವಾಮಿ ಗೌಡರು ಶಾಸಕರಾಗುವ ಮುಂಚಿನಿಂದಲೂ ತಾಲೂಕಿನಲ್ಲಿ ಸಮಾಜ ಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿದ್ದರು,ಶಾಸಕರಾದ ನಂತರವೂ ಅವರು ತಮ್ಮ ಸಮಾಜ ಮುಖಿ ಕೆಲಸಗಳನ್ನು ಮುಂದುವರಿಸಿಕೊAಡು ಬರುವ ಜೊತೆಗೆ ಸರ್ಕಾರದಿಂದ ಹೆಚ್ಚಿನ ರೀತಿ ಸವಲತ್ತುಗಳನ್ನು ತರುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ

Shivamogga News: ಗಣೇಶ ಮೂರ್ತಿಗೆ ಒದ್ದು, ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದ ಅನ್ಯಕೋಮಿನ ವ್ಯಕ್ತಿ!

ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದ ಅನ್ಯಕೋಮಿನ ವ್ಯಕ್ತಿ!

Shivamogga News: ಶಿವಮೊಗ್ಗದಲ್ಲಿ ನಾಗರ ವಿಗ್ರಹವನ್ನು ಕಿತ್ತು ಚರಂಡಿಗೆ ಎಸೆದು ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್‌ ಭದ್ರತೆ ನಿಯೋಜಿಸಲಾಗಿದೆ.

Actor Darshan: ಮೈಸೂರಿನ ಮನೆಯಲ್ಲಿ ಚಾಮುಂಡಿ ಪೂಜೆ ನೆರವೇರಿಸಿದ ನಟ ದರ್ಶನ್‌

ಮೈಸೂರಿನ ಮನೆಯಲ್ಲಿ ಚಾಮುಂಡಿ ಪೂಜೆ ನೆರವೇರಿಸಿದ ನಟ ದರ್ಶನ್‌

Actor Darshan: ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಹಬ್ಬ ಮಾಡುವ ನಟ ದರ್ಶನ್ ಅವರು, ಮೈಸೂರಿನ ಸಿದ್ಧಾರ್ಥ ಲೇಔಟ್‌ನಲ್ಲಿ ನಿವಾಸದಲ್ಲಿ ತಾಯಿ ಮೀನಾ ತೂಗುದೀಪ, ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರನೊಂದಿಗೆ ಪೂಜೆ ನೆರವೇರಿಸಿದ್ದಾರೆ. ಅಲ್ಲದೇ ಚಾಮುಂಡಿ ಬೆಟ್ಟಕ್ಕೂ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.

SIRA (Tumkur) News: ಕಾಡುಗೊಲ್ಲ ಸಮುದಾಯ ಆರ್ಥಿಕವಾಗಿ ಸದೃಢರನ್ನಾಗಿಸಲು ಸರ್ಕಾರ ಬದ್ಧ: ಟಿಬಿ ಜಯಚಂದ್ರ

ಕಾಡುಗೊಲ್ಲ ಸಮುದಾಯ ಆರ್ಥಿಕವಾಗಿ ಸದೃಢರನ್ನಾಗಿಸಲು ಸರ್ಕಾರ ಬದ್ಧ

ಕಾಡುಗೊಲ್ಲ ಸಮುದಾಯದ ಮುಖಂಡರು ಹಾಗೂ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಸುದರ್ಶನ್ ಮಾತನಾಡಿ ಸ್ಥಳೀಯ ಶಾಸಕರ ಸಹಕಾರದಿಂದ ಕಾಡುಗೊಲ್ಲ ಅಭಿವೃದ್ಧಿ ನಿಗಮದ ನೊಂದಣಿ ಮಾಡಿಸುವ ನಿಟ್ಟಿನಲ್ಲಿ ನಿಗಮದ ರೂಪುರೇ಼ಷೆಯನ್ನು ಅಂತಿಮಗೊಳಿಸಿದ್ದು ಕಾರ್ಯಗತ ವಾಗಲು ಸಹಕಾರಿಯಾಯಿತು

Jockey 42 Movie: ನಟ ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಗುಡ್‌ನ್ಯೂಸ್ ಕೊಟ್ಟ ನಿರ್ದೇಶಕ ಗುರುತೇಜ್ ಶೆಟ್ಟಿ

ನಟ ಕಿರಣ್ ರಾಜ್ ಹುಟ್ಟುಹಬ್ಬಕ್ಕೆ ಗುಡ್‌ನ್ಯೂಸ್ ಕೊಟ್ಟ ನಿರ್ದೇಶಕ

Jockey 42 Movie: ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದಯೋನ್ಮುಖ ನಟ ಕಿರಣ್ ರಾಜ್, ಕಾಂಬಿನೇಷನ್ ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಅದುವೇ ʼಜಾಕಿ 42ʼ ಮೂಲಕ. ‘ಜಾಕಿ 42’ ಚಿತ್ರಕ್ಕಾಗಿಯೇ ನಾಯಕ ನಟ ಕಿರಣ್ ರಾಜ್, ಥೈಲ್ಯಾಂಡ್‌ಗೆ ಹಾರ್ಸ್ ರೈಡಿಂಗ್ ಜಾಕಿ ಟ್ರೈನಿಂಗ್ ತೆಗೆದುಕೊಂಡು ಬಂದಿರುವುದು ವಿಶೇಷವಾಗಿದೆ.

BIS-certified helmets: ದ್ವಿಚಕ್ರ ವಾಹನ ಸವಾರರಿಗೆ BIS ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ ಕಡ್ಡಾಯ

ವಾಹನ ಸವಾರರಿಗೆ BIS ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ ಕಡ್ಡಾಯ

Pralhad Joshi: ದೇಶದಲ್ಲಿ 21 ಕೋಟಿಗೂ ಹೆಚ್ಚು ದ್ವಿಚಕ್ರ ವಾಹನಗಳಿದ್ದು, ಸವಾರರ ಸುರಕ್ಷತೆ ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಮೋಟಾರು ವಾಹನ ಕಾಯ್ದೆ, 1988ರಡಿ ಹೆಲ್ಮೆಟ್ ಕಡ್ಡಾಯವಾಗಿದ್ದು, ಅದರ ಗುಣಮಟ್ಟಕ್ಕೂ ಆದ್ಯತೆ ಕೊಡಬೇಕಿದೆ. ಹಾಗಾಗಿ 2021ರಿಂದ ಗುಣಮಟ್ಟ ನಿಯಂತ್ರಣ ಆದೇಶ ಜಾರಿಯಲ್ಲಿದೆ. ಕಳಪೆ ಗುಣಮಟ್ಟದ ಹೆಲ್ಮೆಟ್‌ಗೆ ಅವಕಾಶವಿಲ್ಲ. ಎಲ್ಲಾ ದ್ವಿಚಕ್ರ ವಾಹನ ಸವಾರರಿಗೆ BIS ಮಾನದಂಡದಂತೆ (IS 4151:2015) ಪ್ರಮಾಣೀಕರಿಸಿದ ISI ಗುರುತುಳ್ಳ ಹೆಲ್ಮೆಟ್‌ಗಳನ್ನು ಗ್ರಾಹಕ ವ್ಯವಹಾರಗಳ ಇಲಾಖೆ ಕಡ್ಡಾಯಗೊಳಿಸುತ್ತದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Karnataka Rains: ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್;‌ ಜುಲೈ 9ರವರೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ಭಾರಿ ಮಳೆ; ಜುಲೈ 9ರವರೆಗೆ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Laxmi Hebbalkar: ಯಜಮಾನಿಯರಿಗೆ ಗುಡ್‌ನ್ಯೂಸ್‌: ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಶೀಘ್ರದಲ್ಲೇ ಗೃಹಲಕ್ಷ್ಮಿ ಸಂಘಗಳ ರಚನೆ

ಮಹಿಳೆಯರಿಗೆ ಆರ್ಥಿಕ ಬಲ ತುಂಬಲು ಶೀಘ್ರದಲ್ಲೇ ಗೃಹಲಕ್ಷ್ಮಿ ಸಂಘಗಳ ರಚನೆ

Laxmi Hebbalkar: ರಾಜ್ಯದಲ್ಲಿ 30 ರಿಂದ 40 ಲಕ್ಷ ಗೃಹಲಕ್ಷ್ಮಿ ಸಂಘಗಳನ್ನು ರಚಿಸುವ ಯೋಜನೆಯಿದ್ದು, ಈ ಮೂಲಕ ಯಜಮಾನಿಯರಿಗೆ ಆರ್ಥಿಕವಾಗಿ ಬಲ ತುಂಬಲು ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Swapna Mantapa Movie: ಸಾಹಿತಿ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನಮಂಟಪ‌ʼ ಚಿತ್ರ ಜು.25ಕ್ಕೆ ರಿಲೀಸ್

ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನಮಂಟಪ‌ʼ ಚಿತ್ರ ಜು.25ಕ್ಕೆ ರಿಲೀಸ್

Swapna Mantapa Movie: ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ನಿರ್ದೇಶಿಸಿರುವ ‘ಸ್ವಪ್ನಮಂಟಪʼ ಕನ್ನಡ ಚಿತ್ರವು ಇದೇ ಜು. 25ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವು ಅನೇಕ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ಚಿತ್ರದ ನಾಯಕ-ನಾಯಕಿಯಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ.

Rashmika Mandanna: ರಶ್ಮಿಕಾ ಮಂದಣ್ಣ ಗೊತ್ತಿಲ್ಲದೇ ಹೇಳಿರಬೇಕು, ಕ್ಷಮಿಸಿಬಿಡೋಣ: ನಟಿ ಹರ್ಷಿಕಾ ಪೂಣಚ್ಚ

ರಶ್ಮಿಕಾ ಮಂದಣ್ಣ ಗೊತ್ತಿಲ್ಲದೇ ಹೇಳಿರಬೇಕು, ಕ್ಷಮಿಸಿಬಿಡೋಣ: ಹರ್ಷಿಕಾ

Harshika Poonacha: ನನಗೆ ಕನ್ನಡ ಬರಲ್ಲ, ನಾನು ಹೈದರಾಬಾದ್‌ನವಳು ಎಂಬ ಹೇಳಿಕೆಗಳ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ರಶ್ಮಿಕಾ ಮಂದಣ್ಣ ಇದೀಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ರಶ್ಮಿಕಾ ಹೇಳಿಕೆ ಬಗ್ಗೆ ನಟಿ ಹರ್ಷಿಕಾ ಪೂಣಚ್ಚ ಪ್ರತಿಕ್ರಿಯಿಸಿ, ಈ ಹೇಳಿಕೆಯನ್ನ ಕ್ಷಮಿಸಿಬಿಡೋಣ. ರಶ್ಮಿಕಾ ಮಂದಣ್ಣ ಬಗ್ಗೆ ನೆಗೆಟಿವ್ ಮಾತಾಡೋದು ಬೇಡ. ನಾನಂತೂ ರಶ್ಮಿಕಾ ಅವರ ಬಗ್ಗೆ ನೆಗೆಟಿವ್ ಮಾತನಾಡಲ್ಲ ಎಂದು ಹೇಳಿದ್ದಾರೆ.

Ramayana First Look Teaser: ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ʼರಾಮಾಯಣʼ ಫಸ್ಟ್‌ ಲುಕ್‌ ಟೀಸರ್‌ ಅನಾವರಣ; ಯಶ್‌ ಫ್ಯಾನ್ಸ್‌ ಫುಲ್ ಫಿದಾ!

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ʼರಾಮಾಯಣʼ ಫಸ್ಟ್‌ ಲುಕ್‌ ಅನಾವರಣ

Ramayana First Look Teaser: ಜುಲೈ 3 ರಂದು ಭಾರತದ ಮುಂಬೈ, ದೆಹಲಿ, ಬೆಂಗಳೂರು ಸೇರಿ ಒಂಬತ್ತು ನಗರಗಳಲ್ಲಿ ಏಕಕಾಲದಲ್ಲಿ ರಾಮಾಯಣ: ದಿ ಇಂಟ್ರೊಡಕ್ಷನ್ ಫಸ್ಟ್‌ ಗ್ಲಿಂಪ್ಸ್‌ ಅನಾವರಣಗೊಳಿಸಲಾಗಿತ್ತು. ಇದಾದ ಬಳಿಕ ಜುಲೈ 4 ರಂದು, ನ್ಯೂಯಾರ್ಕ್‌ನ ಪ್ರಸಿದ್ಧ ಟೈಮ್ಸ್ ಸ್ಕ್ವೇರ್‌ನ ಡಿಜಿಟಲ್ ಬಿಲ್‌ಬೋರ್ಡ್‌ನಲ್ಲಿ ʼರಾಮಾಯಣʼ ಫಸ್ಟ್‌ ಲುಕ್‌ ಟೀಸರ್ ಪ್ರದರ್ಶನಗೊಂಡಿದೆ.

Santosh Jarkiholi: ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ; ಪ್ರಕರಣ ದಾಖಲು

ಜಾತ್ರೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ

Santosh Jarkiholi: ಗೋಕಾಕ್ ಪಟ್ಟಣದಲ್ಲಿ ಶ್ರೀ ಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ವೇಳೆ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಜಾತ್ರೆಯಲ್ಲಿ ಸಾವಿರಾರು ಜನರ ನಡುವೆ ಹಾಗೂ ಪೊಲೀಸರ ಸಮ್ಮುಖದಲ್ಲೇ ಫೈರಿಂಗ್ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದೆ.

Drugs Case: ಶಿರಸಿಯಲ್ಲಿ ಅಕ್ರಮ ಗಾಂಜಾ ಸಾಗಾಟ; ಇಬ್ಬರು ಯುವಕರ ಬಂಧನ

ಶಿರಸಿಯಲ್ಲಿ ಅಕ್ರಮ ಗಾಂಜಾ ಸಾಗಾಟ :ಇಬ್ಬರ ಬಂಧನ

ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಶಿರಸಿ ಗ್ರಾಮೀಣ ಪೊಲೀಸರು ಶನಿವಾರ ಬೆಳಗಿನ ಜಾವ 3:00 ಗಂಟೆಗೆ ಬಂಧಿಸಿದ್ದಾರೆ. ಆರೋಪಿಗಳನ್ನು ವಿಕ್ರಮ್ ರಾಮಕೃಷ್ಣ ಭಟ್ (28) ಹಾಗೂ ಕಶ್ಯಪ್ ಮಂಜುನಾಥ ಹೆಗಡೆ (27) ಎಂದು ಗುರುತಿಸಲಾಗಿದ್ದು, ಇನ್ನೋವಾ ಕಾರ್‌ನಲ್ಲಿ ಅಕ್ರಮವಾಗಿ ಮಾದಕ ವಸ್ತುವನ್ನು ಶಿರಸಿ ಕಡೆಗೆ ಸಾಗಿಸುತ್ತಿದ್ದರು

HD Kumaraswamy: ಐದೇ ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಪ್ರಧಾನಿ ಒಪ್ಪಿಗೆ ಕೊಡಿಸುತ್ತೇನೆ ಎಂದ ಎಚ್‌ಡಿಕೆ

ಐದೇ ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿಸುತ್ತೇನೆ ಎಂದ ಎಚ್‌ಡಿಕೆ

HD Kumaraswamy: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತನ್ನ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದೇ ನಿಮಿಷದಲ್ಲಿ ಈ ಯೋಜನೆಗೆ ಪ್ರಧಾನಮಂತ್ರಿಗಳ ಒಪ್ಪಿಗೆ ಕೊಡಿಸುತ್ತೇನೆ. ಚುನಾವಣೆ ಸಂದರ್ಭದಲ್ಲಿ ಹೇಳಿದ್ದ ನನ್ನ ಈ ಮಾತಿಗೆ ನಾನು ಈಗಲೂ ಬದ್ಧವಾಗಿದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

Mangaluru News: ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!

ಹಿಂದೂ ಮುಖಂಡನ ಮೊಬೈಲ್‌ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ!

Mangaluru News: ಅಪಘಾತವೆಸಗಿದ ಖಾಸಗಿ ಬಸ್‌ಗೆ ಕಲ್ಲು ತೂರಿದ ಪ್ರಕರಣದಲ್ಲಿ ಹಿಂದು ಮುಖಂಡನನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸಿದ್ದರು. ಈ ವೇಳೆ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ.

Stabbing case: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ; ಚಿಕಿತ್ಸೆ ಫಲಿಸದೇ ಯುವತಿ ಸಾವು

ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದ ಪ್ರೇಮಿ; ಯುವತಿ ಸಾವು

Stabbing case: ಪಾರ್ಕ್ ಮುಂಭಾಗದಲ್ಲಿಯುವತಿ ಜತೆ ಮಾತನಾಡುತ್ತಿದ್ದ ಸಂದರ್ಭ ಪ್ರೀತಿಸುವಂತೆ ಯುವಕ ಒತ್ತಡ ಹೇರಿದ್ದಾನೆ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆಯಲ್ಲಿಆಕೆಗೆ ಚಾಕುವಿನಿಂದ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯುವತಿ ಮೃತಪಟ್ಟಿದ್ದಾಳೆ. ಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tejaswi Surya: ಮುದ್ದಾದ ಅತಿಥಿಯನ್ನು ಮನೆಗೆ ಕರೆತಂದ ತೇಜಸ್ವಿ ಸೂರ್ಯ-ಶಿವಶ್ರೀ ದಂಪತಿ

ಮುದ್ದಾದ ಅತಿಥಿಯನ್ನು ಮನೆಗೆ ಕರೆತಂದ ತೇಜಸ್ವಿ ಸೂರ್ಯ-ಶಿವಶ್ರೀ ದಂಪತಿ

Tejaswi Surya: ʼಶುಭ ಆಷಾಢ ಶುಕ್ರವಾರದಂದು, ನಮ್ಮ ಕುಟುಂಬಕ್ಕೆ ಹೊಸ ಸದಸ್ಯರನ್ನು ಸ್ವಾಗತಿಸಿದ್ದೇವೆ. ನಾವು ಆಕೆಯನ್ನು ಗೌರಿ, ಲಕ್ಷ್ಮಿ, ರಾಧೆ ಸೇರಿದಂತೆ ಎಲ್ಲಾ ಹೆಸರುಗಳಿಂದ ಕರೆಯುತ್ತಿದ್ದೇವೆ. ಮನೆಗೆ ಆಗಮಿಸಿರುವ ಹೊಸ ಅತಿಥಿ ತುಂಬಾ ದೈವಿಕಳು. ಆಕೆ ಹಾಡುಗಳನ್ನು ಇಷ್ಟಪಡುತ್ತಾಳೆʼ ಎಂದು ತೇಜಸ್ವಿ ಸೂರ್ಯ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

Physical Abuse: ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

ಅತ್ಯಾಚಾರ, ವಂಚನೆ ಪ್ರಕರಣ: ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್

Physical Abuse: ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ ಆರೋಪಿ, ಆಕೆಯ ಜತೆ ದೈಹಿಕ ಸಂಪರ್ಕ ಬೆಳೆಸಿದ್ದ. ಬಳಿಕ ಗರ್ಭಿಣಿಯಾದ ವಿಚಾರ ತಿಳಿದು ಮದುವೆಯಾಗಲು ನಿರಾಕರಿಸಿದ್ದ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ಕೃಷ್ಣ ರಾವ್ ವಿರುದ್ಧ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಇದೀಗ ಸಿಕ್ಕಿಬಿದ್ದಿದ್ದಾನೆ.

Siganduru Bridge: ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಸಿಗಂದೂರಿನಲ್ಲಿ ಜುಲೈ 14ರಂದು ಲೋಕಾರ್ಪಣೆ

ದೇಶದ 2ನೇ ಅತಿದೊಡ್ಡ ತೂಗು ಸೇತುವೆ ಸಿಗಂದೂರಿನಲ್ಲಿ ಜುಲೈ 14ರಂದು ಲೋಕಾರ್ಪಣೆ

Siganduru Bridge: ಶಿವಮೊಗ್ಗೆ ಜಿಲ್ಲೆ ಸಾಗರ ತಾಲೂಕಿನ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವೆ ನಿರ್ಮಿಸಲಾದ ಈ ಸೇತುವೆಯು ಉದ್ಘಾಟನೆಗೊಂಡ ಬಳಿಕ, ಭಾರತದ 2ನೇ ಅತಿ ಉದ್ದದ ಕೇಬಲ್ ಸೇತುವೆ ಎಂಬ ಹಿರಿಮೆಗೂ ಪಾತ್ರವಾಗಲಿದೆ. ಇದು 2.44 ಕಿ.ಮೀ ಉದ್ದವಿದ್ದು, 16 ಮೀಟರ್ ಅಗಲವಿದೆ. 17 - ಪಿಲ್ಲರ್‌ಗಳನ್ನು ಒಳಗೊಂಡಿದೆ. 2018ರ ಫೆಬ್ರವರಿಯಲ್ಲಿ ಈ ಸೇತುವೆ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗಿತ್ತು.

Assault Case: ಮಾಡೆಲ್‌ ಮೇಲೆ ಖಾಸಗಿ ಬಸ್‌ ಸಿಬ್ಬಂದಿ ಹಲ್ಲೆ, ಬೆಲೆಬಾಳುವ ಸ್ವತ್ತುಗಳ ಸುಲಿಗೆ

ಮಾಡೆಲ್‌ ಮೇಲೆ ಖಾಸಗಿ ಬಸ್‌ ಸಿಬ್ಬಂದಿ ಹಲ್ಲೆ, ಬೆಲೆಬಾಳುವ ಸ್ವತ್ತು ಸುಲಿಗೆ

‌Assault Case: ತನ್ನ ದುಬಾರಿ ಬೆಲೆಯ ಶೂ, ಏರ್ ಬಡ್ಸ್‌, 44 ಸಾವಿರ ರೂ ಬೆಲೆ ಸನ್ ಗ್ಲಾಸ್, 1.85 ಲಕ್ಷ ರೂ ಬೆಲೆಯ ಪ್ಲಾಟಿನಂ ಪೆಂಡೆಂಟ್ ಇರುವ ಸಿಲ್ವರ್ ಚೈನ್, ಪಾಸ್‌ಪೋರ್ಟ್, 45 ಸಾವಿರ ರೂ ಬೆಲೆಯ ವಾಚ್, 40 ಸಾವಿರ ರೂ ಮೌಲ್ಯದ ಪ್ಲಾಟಿನಂ ರಿಂಗ್ ಹಾಗೂ ಪರ್ಸ್​ನಲ್ಲಿದ್ದ 10 ಸಾವಿರ ರೂ. ಹಣ ಕೂಡ ಕದ್ದಿರುವುದಾಗಿ ಮಾಡೆಲ್ ಧ್ರುವ್ ನಾಯ್ಕ್ ಆರೋಪಿಸಿದ್ದಾರೆ.

Road Accident: ಬೆಂಗಳೂರು, ಚಿತ್ರದುರ್ಗದಲ್ಲಿ ರಸ್ತೆ ಅಪಘಾತ: ಬಸ್‌ ಡಿಕ್ಕಿಯಾಗಿ ಇಬ್ಬರು ಬೈಕ್‌ ಸವಾರರ ಸಾವು

ಬೆಂಗಳೂರು, ಚಿತ್ರದುರ್ಗದಲ್ಲಿ ಬಸ್‌ ಡಿಕ್ಕಿಯಾಗಿ ಇಬ್ಬರು ಬೈಕ್‌ ಸವಾರರ ಸಾವು

Road Accident: ಬೆಂಗಳೂರಿನ ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಬಸ್ಸಿಗೆ ವೇಗವಾಗಿ ಬಂದ ಬೈಕ್‌ ಡಿಕ್ಕಿಯಾಗಿದೆ. ಚಿತ್ರದುರ್ಗದಲ್ಲಿ ಬೈಕ್‌ಗೆ ಡಿಕ್ಕಿಯಾದ ಬಳಿಕ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಎರಡೂ ಘಟನೆಗಳಲ್ಲಿ ಬೈಕ್‌ ಸವಾರರು ಮೃತಪಟ್ಟಿದ್ದಾರೆ.

Air India: ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್‌, ಬೆಂಗಳೂರು- ದಿಲ್ಲಿ ವಿಮಾನ ವಿಳಂಬ

ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್‌, ಬೆಂಗಳೂರು- ದಿಲ್ಲಿ ವಿಮಾನ ವಿಳಂಬ

Air India: ಬೆಂಗಳೂರಿನಿಂದ ದೆಹಲಿಗೆ AI2414 ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕುಸಿದು ಬಿದ್ದರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಬದಲು ಬೇರೆ ಪೈಲಟ್‌ ನಿಯೋಜನೆ ಮಾಡಿದ ನಂತರ ವಿಮಾನ ಹಾರಾಟ ನಡೆಸಲಾಯಿತು.

Karnataka High Court: ಲಿಂಗಾಯತರಲ್ಲಿರುವ ಜಂಗಮರು ಬೇಡ- ಬುಡ್ಗ ಜಂಗಮರಲ್ಲ: ಹೈಕೋರ್ಟ್

ಲಿಂಗಾಯತರಲ್ಲಿರುವ ಜಂಗಮರು ಬೇಡ- ಬುಡ್ಗ ಜಂಗಮರಲ್ಲ: ಹೈಕೋರ್ಟ್

karnataka high court: ವೀರಶೈವರಲ್ಲಿನ ಜಂಗಮರು ಪೂಜಿಸುವ ವರ್ಗದವರು ಮತ್ತು ಅವರು ಸಸ್ಯಾಹಾರಿಗಳು. ಆದರೆ, ಬೇಡ ಜಂಗಮರು ಸಮಾಜದಲ್ಲಿ ತಳವರ್ಗದ ಜಾತಿಗೆ ಸೇರಿದವರು ಮತ್ತು ಅವರನ್ನು ಅಸ್ಪೃಶ್ಯರೆಂದು ಪರಿಗಣಿಸಲಾಗುತ್ತದೆ ಎಂದು ಪೀಠ ತನ್ನ ಆದೇಶದಲ್ಲಿ ವಿವರಿಸಿದೆ.

Kamal Hassan: ಕಮಲ ಹಾಸನ್‌ಗೆ ಇನ್ನೊಂದು ಶಾಕ್‌, ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ಕೋರ್ಟ್‌ ನಿರ್ಬಂಧ

ಕಮಲ ಹಾಸನ್‌ಗೆ ಶಾಕ್‌, ಕನ್ನಡದ ಬಗ್ಗೆ ಹೇಳಿಕೆ ನೀಡದಂತೆ ಕೋರ್ಟ್‌ ನಿರ್ಬಂಧ

‌Kamal Hassan: ಕಮಲ ಹಾಸನ್ ಕನ್ನಡ ಭಾಷೆಯ ಮೇಲೆ ಭಾಷಾಶಾಸ್ತ್ರಜ್ಞರ ಶ್ರೇಷ್ಠತೆ ಪ್ರತಿಪಾದಿಸುವ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ನೀಡುವುದು, ಬರೆಯುವುದು, ಪ್ರಕಟಿಸುವುದು ಅಥವಾ ವಿತರಿಸುವುದನ್ನು ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್ ನಿರ್ಬಂಧಿಸಿದೆ.